ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿರುಮಲ ತಿರುಪತಿ ದೇವಸ್ಥಾನಗಳು (TTD) ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಯಲಹಂಕ ಉಪನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಜುಲೈ 30ರಂದು ವಿಶೇಷ ‘ಹರಿನಾಮ ಸಂಕೀರ್ತನೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಗುರುವಾರ ಸಂಜೆ 6:30ಕ್ಕೆ ನಡೆಯಲಿರುವ ಈ ಭಕ್ತಿಗೀತೆ ಕಾರ್ಯಕ್ರಮದಲ್ಲಿ ಶ್ರೀ ರಾಮ್ ರಕ್ಷಿತ್ ಅವರು ಹರಿನಾಮ ಸಂಕೀರ್ತನೆ ಗಾಯನವನ್ನು ಪ್ರಸ್ತುತಪಡಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸಂಗೀತ ಸಹಕಾರವಾಗಿ ಹಾರ್ಮೋನಿಯಂ ವಾದನದಲ್ಲಿ ಶ್ರೀ ಭರತ್ ದರೋಜಿ, ತಬಲಾ ವಾದನದಲ್ಲಿ ಶ್ರೀ ಶರಣು ಗೋಗಿ ಹಾಗೂ ತಾಳದಲ್ಲಿ ಶ್ರೀ ಸುಧೀಂದ್ರ ಕುಲಕರ್ಣಿ ಅವರು ಭಾಗವಹಿಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ TTD ಹಿಂದೂ ಧರ್ಮ ಪ್ರಚಾರ ಪರಿಷತ್ ಸಂಚಾಲಕರಾದ ಡಾ. ಪಿ. ಭುಜಂಗರಾವ್ ಅವರು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











