ಕಲ್ಪ ಮೀಡಿಯಾ ಹೌಸ್ | ಹರಿಯಾಣ |
ವೈಷ್ಣೋದೇವಿ #Vaishnodevi ಯಾತ್ರೆಗೆ ಹೊರಟಿದ್ದ ಮಿನಿ ಬಸ್’ಗೆ ಟ್ರಕ್’ವೊಂದು ಡಿಕ್ಕಿ ಹೊಡೆದ ಪರಿಣಾಮ ಏಳು ಭಕ್ತರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹರಿಯಾಣದ ಅಂಬಾಲಾ-ದೆಹಲಿ-ಜಮ್ಮು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ನಸುಕಿನಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಾವನ್ನಪ್ಪಿದವರೆಲ್ಲಾ ಒಂದೇ ಕುಟುಂಬದವರು ಎಂದು ವರದಿಯಾಗಿದೆ.
Also read: ವಿ. ಎಸ್. ಆಚಾರ್ಯ ಅವರ ಪುತ್ಥಳಿಗೆ ಡಾ. ಧನಂಜಯ ಸರ್ಜಿ ಮಾಲಾರ್ಪಣೆ
ಅಪಘಾತದ ನಂತರ ಚಾಲಕ ಕುಡಿದು ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಅಪಘಾತದಲ್ಲಿ ಬದುಕುಳಿದವರು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ನಿದ್ರೆಯಲ್ಲಿದ್ದರು ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post