ಕಲ್ಪ ಮೀಡಿಯಾ ಹೌಸ್ | ಹಾಸನ |
ಈ ಬಾರಿಯ ಪರಿಷತ್ ಚುನಾವಣೆಗೆ ಬಾರಿ ಕುತೂಹಲ ಮೂಡಿಸಿದ ಹಾಸನ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮೊಮ್ಮಗ ಸೂರಜ್ ರೇವಣ್ಣ ಭರ್ಜರಿ ಜಯ ದಾಖಲಿಸುವ ಮೂಲಕ ಇದೇ ಮೊದಲ ಬಾರಿಗೆ ವಿಧಾನ ಪರಿಷತ್ ಪ್ರವೇಶಿಸಿದ್ದಾರೆ.
ದೇವೇಗೌಡ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಪುತ್ರ ಸೂರಜ್ ಚುನಾವಣಾ ಕಣಕ್ಕಿಳಿದ ನಂತರ ಇಲ್ಲಿನ ಚುನಾವಣೆ ಕಾವು ಪಡೆದುಕೊಂಡಿತ್ತು. ಅಲ್ಲದೆ, ಪ್ರತಿಷ್ಠೆಯ ಕಣವಾಗಿಯೂ ಮಾರ್ಪಟ್ಟಿತ್ತು. ವಿಶೇಷವೆಂದರೆ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಒಂದು ಸಾವಿರಕ್ಕೂ ಅಧಿಕ ಸಂಖ್ಯೆಯ ಮುನ್ನಡೆ ಕಾಯ್ದುಕೊಂಡಿದ್ದರು. ಅಂತಿಮವಾಗಿ 2281 ಮತಗಳನ್ನು ಪಡೆಯುವ ಮೂಲಕ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮೊದಲ ಚುನಾವಣೆಯಲ್ಲೇ ಗೆದ್ದು ಬೀಗಿರುವ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ವಿಧಾನಸೌಧದ ಅಂಗಳಕ್ಕೆ ಕಾಲಿಡುತ್ತಿದೆ.
ತುಮಕೂರಿನಲ್ಲಿ ದೇವೇಗೌಡರಿಗೆ ಭಾರೀ ಮುಖಭಂಗ:
ಇನ್ನೂ ತುಮಕೂರು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರ ಪುತ್ರ ರಾಜೇಂದ್ರ ಭರ್ಜರಿ ಗೆಲುವು ಸಾಧಿಸಿದ್ದು, ಈ ಮೂಲಕ ದೇವೇಗೌಡರಿಗೆ ಭಾರೀ ಹಿನ್ನೆಡೆಯಾಗಿದೆ.
ಪ್ರತಿಷ್ಠೆಯ ಕ್ಷೇತ್ರವನ್ನಾಗಿ ಪರಿಗಣಿಸಿದ್ದ ದೇವೇಗೌಡರು, ಶತಾಯಗತಾಯ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳೇಬೇಕೆಂಬ ಹಟದಿಂದ ಭಾರೀ ಪ್ರಚಾರ ನಡೆಸಿದ್ದರು.
ಇಡಿಯ ಕ್ಷೇತ್ರದಾದ್ಯಂತ ಪ್ರವಾಸ ಮಾಡಿದ್ದ ಅವರು, ತಮ್ಮ ಅಭ್ಯರ್ಥಿಯ ಗೆಲುವು ಖಚಿತ ಎಂದಿದ್ದರು. ಆದರೆ, ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಮೂಲಕ ದೇವೇಗೌಡರಿಗೆ ಭಾರೀ ಮುಖಭಂಗವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post