ಕಲ್ಪ ಮೀಡಿಯಾ ಹೌಸ್ | ಹಾಸನ |
ಮೈಸೂರು ದಸರಾದಲ್ಲಿ Mysore Dasara ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ Arjuna ಒಂಟಿ ಸಲಗದ ದಾಳಿಯಿಂದಾಗಿ ಸಾವನ್ನಪ್ಪಿದೆ.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ಸಂದರ್ಭದಲ್ಲಿ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಲಾಗುತ್ತಿದ್ದ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಾಳಿ ಮಾಡಿದ ಪರಿಣಾಮ ಅರ್ಜುನ ಮೃತಪಟ್ಟಿದೆ ಎನ್ನಲಾಗಿದೆ.
ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Also read: ಡ್ರೈವರ್ ಲಾಜಿಸ್ಟಿಕ್ಸ್ ಕರ್ನಾಟಕದಲ್ಲಿ 525 ಕೋಟಿ ರೂ. ಹೂಡಿಕೆ ಮಾಡಲು ಕಾರ್ಯಾಚರಣೆ ಆರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post