ಕಲ್ಪ ಮೀಡಿಯಾ ಹೌಸ್ | ಹಾಸನ |
ಹಾಸನಾಂಬ ದೇಗುಲದಲ್ಲಿ ದರ್ಶನಕ್ಕೆ ಸಾಲಿನಲ್ಲಿ ಜನರು ನಿಂತಿದ್ದ ವೇಳೆ ಕರೆಂಟ್ ಶಾಕ್ ಆಘಾತ ಸಂಭವಿಸಿದ್ದು, 17 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH | Karnataka | A stampede situation ensued at Hasanamba Temple in Hassan after a few people reportedly experienced electric shock when an electric wire there broke. Injured were sent to hospital. pic.twitter.com/PhOMEuZPLl
— ANI (@ANI) November 10, 2023
ಸಾರ್ವಜನಿಕರಿಗೆ ದರ್ಶನಕ್ಕಾಗಿ ಬ್ಯಾರಿಕೇಟ್’ಗಳನ್ನು ಹಾಕಲಾಗಿತ್ತು. ನೂರಾರು ಮಂದಿ ಸರತಿ ಸಾಲಿನಲ್ಲಿ ನಿಂತಿದ್ದು, ಏಕಾಏಕಿ ವಿದ್ಯುತ್ ಶಾಕ್ ಹೊಡೆದ ಅನುಭವವಾಗಿದೆ ಎಂದು ಹೇಳಲಾಗಿದೆ.
ವಿದ್ಯುತ್ ಶಾಕ್ ಅನುಭವವಾಗುತ್ತಿದ್ದಂತೆಯೇ ಸರತಿಯಲ್ಲಿದ್ದ ಭಕ್ತರು ಏಕಾಏಕಿ ಓಡಲು ಆರಂಭಿಸಿದ್ದಾರೆ. ತತಕ್ಷಣವೇ ಭಕ್ತರನ್ನು ಬ್ಯಾರಿಕೇಟ್’ಗಳಿಂದ ಹೊರಕ್ಕೆ ಸ್ಥಳಾಂತರ ಮಾಡಲಾಯಿತು. ಘಟನೆಯಲ್ಲಿ ಅಸ್ವಸ್ಥಗೊಂಡ 17 ಜನರನ್ನು ತತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
Also read: ಕಾಂತರಾಜು ವರದಿಯಿಂದ ಯಾವುದೇ ಸಮುದಾಯಕ್ಕೆ ಅನ್ಯಾಯ ಆಗಲ್ಲ: ಸಚಿವ ತಂಗಡಗಿ
ವಿದ್ಯುತ್ ಶಾಕ್ ಅನುಭವ ಆಗಿದೆ ಎಂದು ಹೇಳಲಾಗಿದ್ದರೂ, ಯಾವುದೇ ಕಾಲ್ತುಳಿತ ಸಂಭವಿಸಿಲ್ಲ. ಇದು ಕೇವಲ ಗದ್ದಲವಾಗಿದೆ ಎಂದು ವರದಿಯಾಗಿದೆ.
ಭಕ್ತರು ನಿಜವಾಗಿಯೂ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. ಈ ಸಂಬAಧ ಚೆಸ್ಕಾಂ ಅಧಿಕಾರಿಗಳು ವಸ್ತುಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ. ಗದ್ದಲದಲ್ಲಿ ಕೆಲ ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ಕೆಲವೇ ನಿಮಿಷಗಳಲ್ಲಿ ಪರಿಸ್ಥಿತಿ ಸಹಜವಾಗಿದ್ದು, ಭಕ್ತರಿಗೆ ಎಂದಿನಂತೆ ಅವಕಾಶ ಕಲ್ಪಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post