ಕಲ್ಪ ಮೀಡಿಯಾ ಹೌಸ್ | ಹಾಸನ |
ಜಿಲ್ಲಾಧಿಕಾರಿ ಲತಾ ಕುಮಾರಿ #DC Latha Kumari ಅವರು ಇಂದು ಧರ್ಮ ದರ್ಶನದ ಸರತಿ ಸಾಲಿನಲ್ಲಿ ಸಾಗಿ ಶ್ರೀ ಹಾಸನಾಂಬ ದೇವಿ #Shri Hasanamba Devi ದರ್ಶನ ಪಡೆದರು.
ಸರತಿ ಸಾಲಿನಲ್ಲಿ ಸಾಗುತ್ತಿದ್ದ ಜಿಲ್ಲಾಧಿಕಾರಿಗಳು ಕೆಲವು ಕಡೆಗಳಲ್ಲಿ ಕಬ್ಬಿಣದ ರಾಡುಗಳು ಕಾಲಿಗೆ ತಗಲುತ್ತಿದುದನ್ನು ಗಮನಿಸಿ ಅವುಗಳಿಗೆ ಬಟ್ಟೆ ಕಟ್ಟಿ ಸರಿಪಡಿಸಲು ಸೂಚಿಸಿರಲ್ಲದೆ, ಸ್ಥಳದಲ್ಲಿಯೇ ಸರಿಪಡಿಸಿದರು. ಸಾರ್ವಜನಿಕರು ತಿಂಡಿ ತಿನಿಸುಗಳನ್ನು ತಿಂದು ಅಲ್ಲಲ್ಲಿಯೇ ಹಾಕಿದ್ದ ಖಾಲಿ ಪ್ಲಾಸ್ಟಿಕ್ ಕವರ್ಗಳು, ಕುಡಿಯುವ ನೀರಿನ ಬಾಟಲ್ ಮತ್ತು ಹಣ್ಣಿನ ಸಿಪ್ಪೆಯನ್ನು ಸ್ವಚ್ಛಗೊಳಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ದೇವಿ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಬೆ.10.30 ಗಂಟೆಗೆ ಕುಟುಂಬ ಸಮೇತರಾಗಿ, ವಿವಿಧ ಹಿರಿಯ ಅಧಿಕಾರಿಗಳ ಜೊತೆಗೆ ಧರ್ಮ ದರ್ಶನವನ್ನು ಆರಂಭಿಸಿದೆವು. ಆ ಸಂದರ್ಭದಲ್ಲಿ ಮುಖ್ಯವಾಗಿ ಕಂಡು ಬಂದಂತಹ ನೂನ್ಯತೆಗಳೆಂದರೆ ಬ್ಯಾರಿಕೇಡ್ ಕಂಬಿಗಳು ಕಾಲಿಗೆ ತಾಗುತ್ತಿತ್ತು, ಈ ಹಿಂದೆ ಅದನ್ನು ಸರಿಪಡಿಸಲು ಪ್ರಯತ್ನ ಮಾಡಲಾಗಿತ್ತು ಆದರೂ ಕೆಲವು ಕಡೆ ಕಬ್ಬಿಣದ ರಾಡಿಗೆ ಸುತ್ತಿದ್ದ ಬಟ್ಟೆ ಕಳಚಿಹೋಗಿ ಕಾಲಿಗೆ ತಾಕುತ್ತಿರುವುದನ್ನು ಗಮನಿಸಿ ಸರಿಪಡಿಸಲಾಯಿತು ಎಂದು ತಿಳಿಸಿದರು.

ದೇವಿ ದರ್ಶನದ ಸಂದರ್ಭದಲ್ಲಿ ತಾವು ಜಿಲ್ಲಾಧಿಕಾರಿ ಎನ್ನುವುದನ್ನು ತಿಳಿಯದೆ ನಮ್ಮನ್ನು ಸಹ ಮುಂದೆ ತಳ್ಳಿದರು. ನಮಗೂ ಒಂದು ಸೆಕೆಂಡ್ ದರ್ಶನ ದೊರೆಯಿತು. 2-3 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ಬಂದು ದರ್ಶನ ಪಡೆಯುವವರಿಗೆ ಇದರಿಂದ ಸ್ವಲ್ಪ ಅಸಮಾಧಾನ ಉಂಟಾಗುತ್ತದೆ ಎಂಬುದು ಅರಿವಾಯಿತು. ಈಗಾಗಲೇ ಸಚಿವರು ಕೂಡಾ ಕನಿಷ್ಠ 5 ಸೆಕೆಂಡಾದರೂ ದರ್ಶನಕ್ಕೆ ಸಮಯವನ್ನು ನೀಡಬೇಕು ಎಂದು ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.

ಸಾಮಾನ್ಯ ಭಕ್ತರ ಕಷ್ಟಗಳು ಅವರ ಅವಶ್ಯಕತೆಗಳು ಏನು ಎಂದು ತಿಳಿಯಬೇಕೆಂದರೆ ಅವರ ಜೊತೆಯಲ್ಲಿ ನಿಂತಾಗ ಮಾತ್ರ ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post