No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Wednesday, June 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇವರು ನೀವು ಈವರೆಗೂ ನೋಡಿರದ ನಮ್ಮ ಶಿವಮೊಗ್ಗದ ಅಪರೂಪದ ಪ್ರೇರಣಾದಾಯಿ ಶಿಕ್ಷಕ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2024
in Special Articles
0
ಇವರು ನೀವು ಈವರೆಗೂ ನೋಡಿರದ ನಮ್ಮ ಶಿವಮೊಗ್ಗದ ಅಪರೂಪದ ಪ್ರೇರಣಾದಾಯಿ ಶಿಕ್ಷಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ಮೈತ್ರೇಯಿ ಆದಿತ್ಯಪ್ರಸಾದ್  |

ಯೇ ಪ್ರಿಯಾಣಿ ಚ ಭಾಷಂತೇ ಪ್ರಯಚ್ಛಂತಿ ಚ ಸತ್ಕೃತಮ್ l
ಶ್ರೀಮಂತೋ ವಂದ್ಯಚರಣಾ ದೇವಾಸ್ತೇ ನರವಿಗ್ರಹಾಃ ll
ಯಾರು ಪ್ರಿಯವಾದದ್ದನ್ನು ಮಾತಾಡುತ್ತಾರೋ ಸತ್ಕಾರ್ಯವನ್ನು ಮಾಡುತ್ತಾರೋ ಅವರು ಶ್ರೀಮಂತರು, ಗೌರವಾನ್ವಿತರು, ವಂದನೀಯರು ಹಾಗೂ ಮನುಷ್ಯರೂಪದ ದೇವರು ಎನ್ನುವ ಸುಭಾಷಿತದಂತೆ ಇರುವಂತಹ ವ್ಯಕ್ತಿಗಳು ವಿರಳ. ಆ ಸಾಲಿನಲ್ಲಿ ನನಗೆ ಕಂಡು ಬಂದ ವ್ಯಕ್ತಿಯೊಬ್ಬರ ಪರಿಚಯ ಇಂದು ಮಾಡಿಕೊಡುವುದು ಸೂಕ್ತ ಎನಿಸಿ, ಈ ಲೇಖನ ಬರೆಯಲಾರಂಭಿಸಿದೆ.

ಬಾಲ್ಯದಿಂದಲೇ ಓದಿನಲ್ಲಿ ಆಸಕ್ತಿ ಮತ್ತು ಪರಿಸರದ ಕುರಿತಾದ ಕುತೂಹಲ ಇದಕ್ಕೆ ತಾವು ಜನಿಸಿದ ಪ್ರದೇಶವೂ ಕಾರಣವಾಗಿತ್ತು. ಕುದುರೆಮುಖ ಎಂಬ ಪ್ರದೇಶವೇ ಹಾಗೆ ಅದು ಕಬ್ಬಿಣದ ಅದಿರಿನ ನಿಕ್ಷೇಪ ಹಾಗೂ ವನ್ಯಜೀವಿಗಳು ಮತ್ತು ಜೀವ ವೈವಿಧ್ಯಕ್ಕೆ ಹೆಸರುವಾಸಿಯಾಗಿದೆ. ಅಲ್ಲಿಯೇ ಇದ್ದುದರಿಂದ ಸಹಜವಾಗಿಯೇ ಪ್ರಕೃತಿಯಲ್ಲಿ ಪ್ರೇಮ ಮತ್ತು ಪಕ್ಷಿಗಳ ಕುರಿತಾದ ಆಸಕ್ತಿ ಮೂಡಿತೆಂದರೆ ಆಶ್ಚರ್ಯವೇನಿಲ್ಲ.
ನಂತರ ತನ್ನ ಉನ್ನತ ಅಧ್ಯಯನ ನಡೆಸಿದ್ದು ಭೌತಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದು ಅದರಲ್ಲಿ ಅತಿಯಾದ ಪ್ರೀತಿ ಬೆಳೆಸಿಕೊಂಡ ಮೇಲೆ ಉಪನ್ಯಾಸಕರಾಗಿ ತಮ್ಮ ವೃತ್ತಿಯನ್ನು ಆಯ್ಕೆ ಮಾಡಿಕೊಂಡರು. ನಿರಂತರ ಅಧ್ಯಯನದ ಆಸಕ್ತಿಯನ್ನು ಹೊಂದಿ ತಮ್ಮ ವೃತ್ತಿಯಲ್ಲಿ ಸಾಕಷ್ಟು ಪರಿಣತಿ ಪಡೆದ ಮೇಲೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಹ ಅತ್ಯುತ್ತಮ ಮಾರ್ಗದರ್ಶಕರಾದರು. ವಿದ್ಯಾರ್ಥಿಗಳ ನೆಚ್ಚಿನ ಉಪನ್ಯಾಸಕರೂ ಆದರು.

ಬರಿ ಇಷ್ಟೇ ಅವರ ಗುಣಗಳಾಗಿದ್ದಿದ್ದರೆ ಈ ಲೇಖನ ಬರೆಯುವ ಕಾರಣವೇ ಇರುತ್ತಿರಲಿಲ್ಲ. ಆದರೆ ಅವರ ಕುರಿತಾಗಿ ಹೇಳ ಹೊರಟರೆ ಅದು ಮುಗಿಯುವುದೇ ಇಲ್ಲ ಆದರೂ ನಾನು ಗುರುತಿಸಿದಷ್ಟು ಹೇಳುವುದಾದರೆ, ತಾನು ಸ್ವತಃ ಮಗುವಿನ ಮುಗ್ಧ ಮನಸ್ಸನ್ನು ಹೊಂದಿ, ಶಿಸ್ತಿನ ಸಿಪಾಯಿಯಂತೆ ಕಾರ್ಯನಿರ್ವಹಿಸುವವರು. ಒಂದರ್ಥದಲ್ಲಿ ಕಾಯಕಯೋಗಿ ಎಂದರೂ ತಪ್ಪಾಗಲಾರದು. ಶಿಸ್ತಿನ ಸಿಪಾಯಿಯಾದ ಅವರ ಕಾರ್ಯನಿಷ್ಠೆಯನ್ನು ಎಂಥವರಾದರೂ ಮೆಚ್ಚದೇ ಇರಲಾರರು. ಏನೇ ಕೆಲಸವನ್ನು ನೀಡಿದರೂ ಅದನ್ನು ಪೂರ್ಣವಾಗಿ ಅಚ್ಚುಕಟ್ಟಾಗಿ ನಿರ್ವಹಣೆ ಮಾಡುವ ಸ್ವಭಾವ ಅವರದು.
ಇದೆಲ್ಲಕ್ಕಿಂತ ಮಿಗಿಲಾಗಿ ಇನ್ನೊಂದು ವಿಶಿಷ್ಟವಾದ ಗುಣವೆಂದರೆ ಪ್ರತಿಫಲದ ಅಪೇಕ್ಷೆ ಇಲ್ಲದೆ ಕೆಲಸ ಮಾಡುವ ವ್ಯಕ್ತಿ. ಅಬ್ಬಾ! ಈ ಕಾಲದಲ್ಲಿಯೂ ಇಂಥವರು ಇದ್ದಾರಾ ಎಂದು ಆಶ್ಚರ್ಯ ಪಡುವ ಗುಣ ಸ್ವಭಾವ ಇವರದು. ಒಮ್ಮೆ ತಾವು ಉದ್ಯೋಗ ಮಾಡುವ ಸ್ಥಳದಲ್ಲಿ ಸಂಬಳ ಹೆಚ್ಚು ಮಾಡಿದರೆಂದು ಗಾಬರಿಯಾಗಿ ಓಡಿ ಹೋಗಿ ನನಗೆ ಸಂಬಳ ಹೆಚ್ಚಾಯಿತು ದಯಮಾಡಿ ಕಡಿಮೆ ಮಾಡಿ ಎಂದು ಹೇಳಿದ ಮಹಾನುಭಾವ.

ಮೇಲಿನವುಗಳೆಲ್ಲ ಒಂದೆಡೆಯಾದರೆ ಆ ವ್ಯಕ್ತಿ ಒಬ್ಬ ಉತ್ತಮ ಪರಿಸರ ಪ್ರೇಮಿ. ಮಳೆ, ಹವಾಮಾನ, ಮರ, ಪಕ್ಷಿ ಇವುಗಳ ಕುರಿತಾಗಿ ಏನನ್ನು ಕೇಳಿದರೂ ಸಮಗ್ರವಾಗಿ ತಿಳಿಸಬಲ್ಲ ತಜ್ಞ. ರಸ್ತೆ ಬದಿಯಲ್ಲಿ ನೆಟ್ಟ ಗಿಡಗಳನ್ನು ಮಗುವಂತೆ ಆರೈಕೆ ಮಾಡುವ ಮಹನೀಯ. ತಾನು ಪ್ರತಿನಿತ್ಯ ಮನೆಗೆ ನಡೆದೇ ಸಾಗುವ ಅವರು ಗಿಡಗಳಿಗೆ ನೀರೆರೆದು ಹೋಗುತ್ತಿದ್ದರು. ಕೆರೆಯಲ್ಲಿ ನೀರು ಕಡಿಮೆಯಾದಾಗ ಟ್ಯಾಂಕರ್ ಗೆ ಹಣ ಕೊಟ್ಟು ನೀರು ಹಾಕಿಸುತ್ತಿದ್ದರು. ಒಮ್ಮೆ ಕಾಲೇಜಿನಲ್ಲಿ ಒಂದು ವಿಶಿಷ್ಟವಾದ ಮರವನ್ನು ಕಾರಣಾಂತರದಿಂದ ಕಡಿದಾಗ ಬಹು ನೊಂದುಕೊಂಡಿದ್ದು ಅವರ ಪರಿಸರ ಪ್ರೇಮಕ್ಕೆ ಸಾಕ್ಷಿ.

ಅವರೊಬ್ಬ ಉತ್ತಮ ಬಾಣಸಿಗರೆಂಬುದಕ್ಕೆ ಹಬ್ಬ ಬಂದಾಗ ವಾರದ ಮೊದಲೇ ವಿವಿಧ ರೀತಿಯ ತಿಂಡಿಗಳನ್ನು ಮಾಡಿ, ಹಬ್ಬ ಮುಗಿದ ಮೇಲೆ ಕಾಲೇಜಿಗೆ ಅದನ್ನು ಹಂಚುವ ಅವರ ಸಂಭ್ರಮ ನಿಜಕ್ಕೂ ಶ್ಲಾಘನೀಯ. ಮನೆಗೆಲಸದಲ್ಲಿಯೂ ಸಹ ಪ್ರಾವಿಣ್ಯತೆ ಹೊಂದಿರುವುದು ಅವರ ವಿಶೇಷತೆಗಳಲ್ಲಿ ಒಂದು.
ಬೋರ್ಡ್ ಮೇಲೆ ಅಕ್ಷರ ಮೂಡಿಸುತ್ತಿದ್ದರೆ ಅಳಿಸಲು ಮನಸೇ ಬರುವುದಿಲ್ಲವೆಂಬಷ್ಟು ಮುದ್ದಾಗಿ ಬರೆಯುವ ಬರಹಗಾರ. ಚುರುಕುತನದ, ಅಸೂಯಾ ವ್ಯಕ್ತಿತ್ವವನ್ನು ಹೊಂದಿರದ ಇವರು ಗೀತೆಯಲ್ಲಿ ಕೃಷ್ಣ ಹೇಳುವಂತಹ ಸ್ಥಿತಪ್ರಜ್ಞನಂತೆಯೇ ಬದುಕುತ್ತಿರುವವರು. ಹೊಗಳಿಕೆಗೆ ಏರದ, ತೆಗಳಿಕೆಗೆ ಇಳಿಯದ ಇವರು ನನಗೆ ಕಂಡದ್ದು ದೇವಮಾನವನಂತೆಯೇ ವಂದನೀಯರು.

ಇಷ್ಟೆಲ್ಲಾ ಸದ್ಗುಣಗಳ ಗಣಿ ಯಾರೆಂದರೆ ಪೇಸ್ ಕಾಲೇಜಿನಲ್ಲಿ ಭೌತಶಾಸ್ತ್ರ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ನಮ್ಮ ಶ್ರೀ ರೋನಿ ಡಿ. ಬೆರ್ಟಾ. ಒಬ್ಬ ಆದರ್ಶ ಶಿಕ್ಷಕರಾದ ಇವರು ಹಾಗೂ ಇವರ ಜೀವನ ಎಲ್ಲರಿಗೂ ಪ್ರೇರಣಾದಾಯಿ. ಎಲೆ ಮರೆ ಕಾಯಿಯಂತೆ ಇರುವ ಇವರು ಶಿಕ್ಷಕ ದಿನಾಚರಣೆಯ ಈ ಸಂದರ್ಭದಲ್ಲಿ ಸ್ಮರಣೀಯರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada News WebsiteLatest News KannadaLocal NewsMalnad NewsMythreyi PrasadTeachers dayಡಾ. ಮೈತ್ರೇಯಿ ಆದಿತ್ಯಪ್ರಸಾದ್ವನ್ಯಜೀವಿಶಿವಮೊಗ್ಗ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ರೇಡಿಯೋ ಶಿವಮೊಗ್ಗ ಎಫ್‌ಎಂನಲ್ಲಿ ನಟ ಪ್ರಮೋದ್ ಶೆಟ್ಟಿ ಸಂವಾದ | ಸೆ.6ರಂದು ಪ್ರಸಾರ

Next Post

ಶಿಕಾರಿಪುರ | ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಮಗು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ | ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಮಗು ಸಾವು

ಶಿಕಾರಿಪುರ | ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಮಗು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

`ಬೂತ್ ವಾಸ್ತವ್ಯ’ | ಬೊಮ್ಮನಕಟ್ಟೆ ಬೂತ್ ಅಧ್ಯಕ್ಷೆ ಶಾಂತಮ್ಮ ನಿವಾಸದಲ್ಲಿ ಶಾಸಕ ಚನ್ನಬಸಪ್ಪ ವಾಸ್ತವ್ಯ

June 16, 2026
ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

ಐಎಲ್‍ಐಎಫ್ ಅಧ್ಯಕ್ಷರಾಗಿ ವಿಶ್ವಾಸ್ ಯಲಬುರ್ಗಿ, ಉಪಾಧ್ಯಕ್ಷರಾಗಿ ಹೊಯ್ಸಳ ಆಯ್ಕೆ

June 16, 2026
ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

ವಿಐಎಸ್‍ಎಲ್, ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಒತ್ತಾಯಿಸಿ ಜೂ.20ರಂದು ಪ್ರತಿಭಟನೆ

June 16, 2026
Shivamogga Mahanagara Palike

ಮಹಾನಗರ ಪಾಲಿಕೆ ಆಯುಕ್ತರ ಜೊತೆ ನಾಳೆ ಮುಖಾಮುಖಿ

June 16, 2026
Blood Donation Camp Successfully Organised at Mysuru Division

ಸಮಾಜದ ಒಳಿತಿಗಾಗಿ ರಕ್ತದಾನ ಅತ್ಯವಶ್ಯ: ಮುದಿತ್ ಮಿತ್ತಲ್ 

June 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL