ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚೆನ್ನೈ: ತಮಿಳುನಾಡಿನ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು 8 ಮಂದಿ ಸಜೀವ ದಹನವಾಗಿದ್ದು, 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ರಾಜ್ಯದ ವಿರುದು ನಗರದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಪೋಟ ಸಂಭವಿಸಿದ್ದು, ಪರಿಣಾಮವಾಗಿ ಕಾರ್ಖಾನೆಯಾದ್ಯಂತ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ 8 ಮಂದಿ ಸಜೀವವಾಗಿ ದಹನಗೊಂಡಿದ್ದು, ಹಲವು ಮಂದಿ ಸ್ಥಳದಿಂದ ಪಾರಾಗಿದ್ದಾರೆ.
ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post