ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಕೊಡಗು: ಸತತ ಮಳೆಯಿಂದಾಗಿ ಭಾಗಮಂಡಲದಲ್ಲಿ ಭಾರೀ ಭೂಕುಸಿತ ಉಂಟಾಗಿದ್ದು, ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಾಣಾಚಾರ್ ಕುಟುಂಬ ಭೂಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಈ ಕುರಿತಂತೆ ಶಾಸಕ ಕೆ.ಜಿ. ಬೋಪಯ್ಯ ಶಂಕೆ ವ್ಯಕ್ತಪಡಿಸಿದ್ದು, ನಾರಾಯಾಣಾಚಾರ್, ಪತ್ನಿ ಶಾಂತ, ಸಹೋದರ ಸಹಾಯಕ ಅರ್ಚಕರಾದ ಪವನ್, ರವಿಕಿರಣ್ ನಾಪತ್ತೆಯಾಗಿದ್ದಾರೆ.
ಇನ್ನು, ಭಾರೀ ಮಳೆ, ಮಂಜಿನ ಹಿನ್ನೆಲೆಯಿಂದಾಗಿ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಭಾಗಮಂಡಲದಲ್ಲಿ ಕಾವೇರಿ ಪ್ರವಾಹದಿಂದಾಗಿ ಜೆಸಿಬಿ ಸೇರಿದಂತೆ ವಾಹನಗಳೇ ಅತ್ತ ಕಡೆ ಸಾಗಲಾಗದೇ ರಕ್ಷಣಾ ಕಾರ್ಯಾಚರಣೆ ನಡೆಸಲಾಗದ ಸ್ಥಿತಿ ಉಂಟಾಗಿದೆ.
ನಿನ್ನೆ ಸಂಜೆ ನಾರಾಯಾಣಾಚಾರ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಬನ್ನಿ ಸ್ವಾಮಿ ಎಂದು ಮನವೊಲಿಸಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ಕಾವೇರಿ ಸನ್ನಿಧಿಯಲ್ಲಿಯೇ ಇರುವುದಾಗಿ ಹಠಹಿಡಿದು ಅಲ್ಲಿಯೇ ನೆಲಸಿದ್ದರು ಎಂದು ವರದಿಯಾಗಿದೆ.
ಭೂಕುಸಿತ 6-7 ಕಿಮೀ ದೂರಕ್ಕೂ ವ್ಯಾಪಿಸಿರುವುದರಿಂದಾಗಿ ಹುಡುಕಾಟಕ್ಕೆ ಸಮಾರೋಪಾದಿಯಿಂದ ಕಾರ್ಯಾಚರಣೆ ಅಗತ್ಯವಾಗಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಅನೀಸ್ ಕಣ್ಣಣಿ ಜಾಯ್, ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ,ಶಾಸಕರಾದ ಕೆ.ಜಿ.ಬೋಪಯ್ಯ, ಸುನೀಲ್ ಸುಬ್ರಹ್ಮಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಳೆ ಉಸ್ತುವಾರಿ ಸಚಿವರ ಭೇಟಿ
ವಸತಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಆ.7 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಪ್ರವಾಹ ಹಾಗೂ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ಮತ್ತು ಪರಿಶೀಲನೆ ಮಾಡಲಿದ್ದಾರೆ. ನಂತರ ಜಿಲ್ಲೆಯಲ್ಲಿ ಕೈಗೊಂಡ ಪ್ರಕೃತಿ ವಿಕೋಪ ನಿರ್ವಹಣೆ ಹಾಗೂ ಪರಿಹಾರ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.
ಬಳಿಕ ಕೊರೊನಾ(ಕೋವಿಡ್-19) ನಿರ್ವಹಣೆ ಬಗ್ಗೆ ಕೊಡಗು ಜಿಲ್ಲೆಯಲ್ಲಿ ಕೈಗೊಂಡ ಮುಂಜಾಗ್ರತಾ ಕ್ರಮಗಳು ಸೇರಿದಂತೆ ಸ್ವಚ್ಚತೆ ಹಾಗೂ ಸಾರ್ವಜನಿಕ ಆರೋಗ್ಯ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಎಸ್.ಬಿ. ನರೇಂದ್ರ ತಿಳಿಸಿದ್ದಾರೆ.
ಪರಿಹಾರ ಕೇಂದ್ರ
ಕೊಡಗು ಜಿಲ್ಲೆಯಲ್ಲಿ ಕಳೆದ 03 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲೆಯ ಮೂರು ಭಾಗಗಳಲ್ಲಿ 03 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 20 ಕುಟುಂಬದ 48 ಜನರಿಗೆ ಆಶ್ರಯ ನೀಡಲಾಗಿದೆ.
ಕೆ.ವಿ.ಜಿ ಕಾಲೇಜು ಭಾಗಮಂಡಲ- ಒಟ್ಟು 01 ಕುಟುಂಬ 03 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕರಡಿಗೋಡು – 17 ಕುಟುಂಬ 40 ಜನರು. ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ, ವಿರಾಜಪೇಟೆ – 02 ಕುಟುಂಬ 05 ಜನರು. ಪರಿಹಾರ ಕೇಂದ್ರಗಳಲ್ಲಿ ಆಹಾರ ಸೇರಿದಂತೆ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಕಳೆದ 03 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜಿಲ್ಲೆಯ ಮೂರು ಭಾಗಗಳಲ್ಲಿ 03 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 20 ಕುಟುಂಬದ 48 ಜನರಿಗೆ ಆಶ್ರಯ ನೀಡಲಾಗಿದೆ. ವಿವರ ಕೆಳಕಂಡಂತಿದೆ.
ಕೆ.ವಿ.ಜಿ ಕಾಲೇಜು ಭಾಗಮಂಡಲ – ಒಟ್ಟು 01 ಕುಟುಂಬ 03 ಜನರು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕರಡಿಗೋಡು – 17 ಕುಟುಂಬ 40 ಜನರು, ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಚಿಕ್ಕಪೇಟೆ, ವಿರಾಜಪೇಟೆ – 02 ಕುಟುಂಬ 05 ಜನರು, ಪರಿಹಾರ ಕೇಂದ್ರಗಳಲ್ಲಿ ಆಹಾರ ಸೇರಿದಂತೆ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post