ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಇಂದು ರಾತ್ರಿ ಏಕಾಏಕಿ ಭಾರೀ ಶಬ್ದವೊಂದು ಕೇಳಿಬಂದಿದ್ದು, ಭೂಮಿ ನಡುಗಿದ ಅನುಭವವಾಗಿದೆ.
ಶಿವಮೊಗ್ಗ ನಗರ, ಗ್ರಾಮಾಂತರ ಪ್ರದೇಶ, ಶಿಕಾರಿಪುರ, ಹೊಸನಗರ, ಆಯನೂರು ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಭೂಮಿ ನಡುಗಿದ ಅನುಭವವಾಗಿದ್ದು, ಭಾರೀ ಆತಂಕಕ್ಕೆ ಕಾರಣವಾಗಿದೆ.
ಭೂಕಂಪನ ಸಂಭವಿಸಿದೆಯೇ ಎಂಬ ಆತಂಕ ಸೃಷ್ಠಿಯಾಗಿದ್ದು, ಭಾರೀ ಶಬ್ದ ಬಂದಿದ್ದು ಎಲ್ಲಿಂದ ಎಂಬ ಪ್ರಶ್ನೆ ಉದ್ಬವಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post