ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಶಿವಮೊಗ್ಗ |
ರಾಜ್ಯದಾದ್ಯಂತ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ದಟ್ಟವಾಗಿದ್ದು, ಹಲವು ಕಡೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ಪ್ರಕಟಿಸಿದ್ದು, ನ.12ರ ಇಂದಿನಿಂದ 15ರವರೆಗೂ ರಾಜ್ಯ ರಾಜಧಾನಿ ಬೆಂಗಳೂರು, ತುಮಕೂರು, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಮಗಳೂರು, ಮೈಸೂರು, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ರಾಜ್ಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ರಾಜ್ಯದ ಹಲವು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ವರದಿಯಾಗಿದೆ.
ಮಲೆನಾಡಿನಾದ್ಯಂತ ತಂಡಿ ವಾತಾವರಣ
ಇನ್ನು, ಒಂದೆಡೆ ಭಾರೀ ಮಳೆಯ ಮುನ್ಸೂಚನೆ ನೀಡಿರುವ ಬೆನ್ನಲ್ಲೇ, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದಲ್ಲಿ ನಿನ್ನೆಯಿಂದಲೇ ತೀವ್ರ ತಂಡಿ ವಾತಾವರಣ ಆವರಿಸಿದೆ.
ನಿನ್ನೆಯಿಂದಲೇ ಶಿವಮೊಗ್ಗ, ಭದ್ರಾವತಿ ಸೇರಿ ಹಲವು ಪ್ರದೇಶಗಳಲ್ಲಿ ಮೋಡ ಮುಸುಕಿದ ಹಾಗೂ ತಂಡಿ ವಾತಾವರಣ ಆವರಿಸಿದ್ದು, ಅಲ್ಪ ಪ್ರಮಾಣದಲ್ಲಿ ಮಳೆ ಜಿನುಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post