ಕಲ್ಪ ಮೀಡಿಯಾ ಹೌಸ್ | ಮೈಸೂರು |
ಸೆ.23 ಹಾಗೂ 24ರಂದು ಮೈಸೂರು – ಶಿವಮೊಗ್ಗ ನಡುವಿನ ಎಕ್ಸ್’ಪ್ರೆಸ್ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.
ಮಂದಗೆರೆ ರೈಲ್ವೆ ಯಾರ್ಡ್’ನಲ್ಲಿ ಸುರಕ್ಷತಾ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಸಂಚರಿಸುವ 16225 ಸಂಖ್ಯೆಯ ಮೈಸೂರು – ಶಿವಮೊಗ್ಗ ನಡುವಿನ ಎಕ್ಸ್’ಪ್ರೆಸ್ ರೈಲು ಸಂಚಾರದಲ್ಲಿ ಸೆ.23 ಹಾಗೂ ಸೆ.24ರಂದು ಸುಮಾರು 100 ನಿಮಿಷಗಳ ಕಾಲ ತಡವಾಗಿ ಚಲಿಸಲಿದೆ ಎಂದು ತಿಳಿಸಿದೆ.
ಅಂದರೆ, ಎರಡೂ ದಿನಗಳ ಕಾಲ ಈ ರೈಲು ಮೈಸೂರಿನಿಂದ ಶಿವಮೊಗ್ಗಕ್ಕೆ ಸುಮಾರು ಒಂದೂವರೆ ಗಂಟೆಗೂ ಅಧಿಕ ಕಾಲ ತಡವಾಗಿ ಚಲಿಸಲಿದೆ.
ಹುಬ್ಬಳ್ಳಿ-ಕೊಲ್ಲಂ ನಡುವೆ ವಿಶೇಷ ರೈಲು
ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರೆಯ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಹುಬ್ಬಳ್ಳಿ ಮತ್ತು ಕೊಲ್ಲಂ ನಡುವೆ 14 ಟ್ರಿಪ್ ವಿಶೇಷ ಎಕ್ಸ್’ಪ್ರೆಸ್ ರೈಲನ್ನು ಓಡಿಸಲಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದೆ.
ರೈಲು ಸಂಖ್ಯೆ 07313 ಹುಬ್ಬಳ್ಳಿ – ಕೊಲ್ಲಂ ವಿಶೇಷ ಎಕ್ಸ್’ಪ್ರೆಸ್ ರೈಲು ಸೆಪ್ಟೆಂಬರ್ 28, 2025 ರಿಂದ ಡಿಸೆಂಬರ್ 28, 2025 ರವರೆಗೆ ಪ್ರತಿ ಭಾನುವಾರ ಸಂಜೆ 3:15ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮರುದಿನ ಮಧ್ಯಾಹ್ನ 12:55 ಕ್ಕೆ ಕೊಲ್ಲಂ ತಲುಪಲಿದೆ.
ವಾಪಸು, ರೈಲು ಸಂಖ್ಯೆ 07314 ಕೊಲ್ಲಂ – ಹುಬ್ಬಳ್ಳಿ ವಿಶೇಷ ಎಕ್ಸ್’ಪ್ರೆಸ್ ರೈಲು ಸೆಪ್ಟೆಂಬರ್ 29, 2025 ರಿಂದ ಡಿಸೆಂಬರ್ 29, 2025 ರವರೆಗೆ ಪ್ರತಿ ಸೋಮವಾರ ಸಂಜೆ 5:00ಕ್ಕೆ ಕೊಲ್ಲಂನಿAದ ಹೊರಟು, ಮರುದಿನ ಸಂಜೆ 6:30ಕ್ಕೆ ಹುಬ್ಬಳ್ಳಿ ಆಗಮಿಸಲಿದೆ.
ಯಾವೆಲ್ಲಾ ಬೋಗಿ ಇರಲಿವೆ?
ಈ ವಿಶೇಷ ರೈಲು ಒಟ್ಟು 22 ಬೋಗಿಗಳನ್ನು ಒಳಗೊಂಡಿದ್ದು, ಇದರಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 12 ಸ್ಲೀಪರ್ ಕ್ಲಾಸ್, 05 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 02 ಸೆಕೆಂಡ್ ಕ್ಲಾಸ್ ಲಗೇಜ್-ಕಮ್-ಬ್ರೇಕ್ ವ್ಯಾನ್’ಗಳು ಇರಲಿವೆ.ಎಲ್ಲೆಲ್ಲಿ ನಿಲುಗಡೆ ಇರಲಿದೆ?
ಈ ವಿಶೇಷ ರೈಲು, ಹಾವೇರಿ, ದಾವಣಗೆರೆ, ಬೀರೂರು, ಅರಸೀಕೆರೆ, ತುಮಕೂರು, ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಬಂಗಾರಪೇಟೆ, ಸೇಲಂ, ಈರೋಡ್, ತಿರುಪ್ಪೂರು, ಪೊದನೂರು, ಪಾಲಕ್ಕಾಡ್, ತ್ರಿಶೂರ್, ಆಲುವಾ, ಎರ್ನಾಕುಲಂ ಟೌನ್, ಕೊಟ್ಟಾಯಂ, ಚಂಗನಸ್ಸೇರಿ, ತಿರುವಲ್ಲ, ಚೆಂಗನ್ನೂರು, ಮಾವೆಲಿಕರ, ಕಾಯಂಕುಲಂ, ಕರುನಾಗಪಳ್ಳಿ ಮತ್ತು ಸಂಸ್ಥಾನಕೋಟ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ದಸರಾ ಹಬ್ಬ ಮತ್ತು ಶಬರಿಮಲೆ ಯಾತ್ರಾ ಅವಧಿಯಲ್ಲಿ ಪ್ರಯಾಣಿಕರಿಗೆ ಅನುಕೂಲಕರ ಪ್ರಯಾಣ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ವಿಶೇಷ ರೈಲು ಸೇವೆ ಆರಂಭಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post