ಕಲ್ಪ ಮೀಡಿಯಾ ಹೌಸ್ | ಬೆಂಗಳೂರು/ಚಿತ್ತಾಪುರ |
RSS ವಿರುದ್ಧ ಮುಗಿಬಿದ್ದಿರುವ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಚಿತ್ತಾಪುರ ಕ್ಷೇತ್ರದಲ್ಲಿ RSS ಪಥ ಸಂಚಲನ ನಡೆಸಲು ಹೈಕೋರ್ಟ್ ಅನುಮತಿ ನೀಡಿದೆ.
ನವೆಂಬರ್ 2 ರಂದು ನಗರದಲ್ಲಿ RSS ಪಥ ಸಂಚಲನ ನಡೆಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ, ಅರ್ಜಿದಾರರ ಮನವಿಯನ್ನು ಪುರಸ್ಕರಿಸುವಂತೆ ಸೂಚನೆ ನೀಡಿದೆ.
ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಚಿತ್ತಾಪುರದಲ್ಲಿ RSS, ಭಾನುವಾರ ಬೃಹತ್ ಪಥಸಂಚಲನ ನಡೆಸಲು ಮುಂದಾಗುವ ಮೂಲಕ, ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿತ್ತು.
ಹೈಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಗೆ ಹಿನ್ನಡೆ ಉಂಟಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news







Discussion about this post