ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯುವನಿಧಿ ಯೋಜನೆಗೆ ಉದ್ಘಾಟನೆಗಾಗಿ ಮುಖ್ಯಮಂತ್ರಿಗಳೂ #ChiefMinister ಸೇರಿದಂತೆ ಸಚಿವ ಸಂಪುಟದ ಹಲವು ಸಚಿವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣಕ್ಕೆ #Airport ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಯುವನಿಧಿ #Yuvanidhi ಯೋಜನೆಯ ಹಣ ವರ್ಗಾವಣೆಗೆ ಫ್ರೀಡಂ ಪಾರ್ಕ್’ನಲ್ಲಿ ನಡೆಯುತ್ತಿರುವ ಬೃಹತ್ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುತ್ತಿದೆ.
ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ವಿಶೇಷ ವಿಮಾನದಲ್ಲಿ #Flight ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್ ಸೇರಿದಂತೆ ಹಲವು ಗಣ್ಯರು ಆಗಮಿಸುತ್ತಿದ್ದಾರೆ.
ಪ್ರಮುಖವಾಗಿ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ #Airport ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ವಿಮಾನ ನಿಲ್ದಾಣದ ಭದ್ರತೆಗಾಗಿ ಸುಮಾರು 300ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಶ್ವಾನ ದಳ, ಬಾಂಬ್ ನಿಷ್ಕಿöçಯ ದಳಗಳನ್ನೂ ನಿಯೋಜಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post