No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Monday, June 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹಿಮಾಲಯ ಶಿಖರವನ್ನೇ ಮೀರಿದ ಸಾಧನೆ ದೇಶದ ಹೆಮ್ಮೆಯ ಹಿಮದಾಸ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 26, 2019
in Special Articles
0
ಹಿಮಾಲಯ ಶಿಖರವನ್ನೇ ಮೀರಿದ ಸಾಧನೆ ದೇಶದ ಹೆಮ್ಮೆಯ ಹಿಮದಾಸ್
Share on FacebookShare on TwitterShare on WhatsApp

ಮೊದಲ ಬಾರಿಗೆ ಅನ್ನಿಸುತ್ತಿದೆ ಲೇಖನಿಯಲ್ಲಿ ಬಂಗಾರದ ಶಾಯಿ ಇದ್ದಿದ್ದರೆ ಎಷ್ಟು ಚೆನ್ನಾಗಿ ಇರುತ್ತಿತ್ತು ಎಂದು. ಯಾರ ಬಗ್ಗೆ ಹೀಗೆ ಅನ್ನಿಸಲು ಸಾಧ್ಯ? ಹಿಮಾ ದಾಸ್..!

ಭಾರತದ ಹೆಮ್ಮೆಯ ಪುತ್ರಿ. ಹೆಸರಿನಿಂದ ಹಿಮಾಲಯ ಮತ್ತು ಹಿಮಾಲಯ ಶಿಖರವನ್ನು ಮೀರಿದ ಸಾಧನೆಗಳು. ಬರೀ ಒಂದು ತಿಂಗಳಲ್ಲಿ ಅಥ್ಲೆಟಿಕ್‌ನಲ್ಲಿ ಐದು ಚಿನ್ನದ ಪದಕಗಳನ್ನು ಪಡೆಯುವವರು ಈಗ ಭಾರತದಲ್ಲಿ ಇದ್ದಾರೆ. ಅಸ್ಸಾಂ ರಾಜ್ಯದ ಪ್ರವಾಸಕ್ಕೆ ಅರ್ಧದಷ್ಟು ಸಂಬಳವನ್ನು ನೀಡಿದ ತನ್ನ ರಾಯಭಾರಿ ಸ್ಥಾನದ ಘನತೆ ಮೆರೆದವರು. ಯಾವ ಊರಿನಲ್ಲಿ ಕಾಲಿಗೆ ಒಳ್ಳೆಯ ಶೂಗಳಿಲ್ಲದೆ ಓಡಿದ್ದರೋ ಅದೇ ಮನೆಯ ಅಂಗಳದಲ್ಲಿ ಇಂದು ವಿಶ್ವವಿಖ್ಯಾತ ಶೂ ತಯಾರಿಕಾ ಕಂಪೆನಿ ಒಪ್ಪಂದಕ್ಕಾಗಿ ನಿಂತಿದೆ. ಸಾಧನೆ ಎಂದರೆ ಇದು ಅಲ್ಲವೇ?!

ಭಾರತಕ್ಕೆ ಅಥ್ಲೆಟಿಕ್ಸ್‌ನಲ್ಲಿ ಮೊದಲು ಸ್ವರ್ಣ ಪದಕ ಗೆದ್ದ ಮಹಿಳೆ ಹಿಮಾ ದಾಸ್. ಅಯ್ಯೋ ದೀಪಾವಳಿಗೆ ಪಟಾಕಿ ಸುಡಬೇಡಿ ನನಗೆ ಅಸ್ತಮಾ ಇದೆ ಎನ್ನುತ್ತ ತನ್ನ ಮದುವೆಯಲ್ಲಿ ಲಕ್ಷಾಂತರ ಪಟಾಕಿ ಸಿಡಿಸಿದ ಅಸ್ಸಾಮ್ ರಾಜ್ಯದ ರಾಯಭಾರಿ ದೂರದ ದೇಶದಲ್ಲಿ ಅಸ್ತಮಾ ರಹಿತ ಸಿಗರೇಟು ಸೇದುತ್ತ ಕೂತಿದ್ದಾಳೆ. ಅವಳನ್ನು ರಾಯಭಾರಿ ಸ್ಥಾನದಿಂದ ಕಿತ್ತು ಎಸೆಯುವುದು ಒಳಿತು. ಈಗ ಬೇರೆ ದೇಶದ ನಾಗರೀಕನನ್ನು ಮದುವೆಯಾದ ಅವಳು ಭಾರತದ ಪ್ರಜೆಯಾಗಿರಲು ಸಾಧ್ಯವಿಲ್ಲ. ಭಾರತದ ಪ್ರಧಾನಿಯವರನ್ನು ಭೇಟಿಯಾಗಲು ತುಂಡುಡುಗೆಯಲ್ಲಿ ಬರುವ ಈ ಅಂತಾರಾಷ್ಟ್ರೀಯ ನಾಯಕಿ ಮತೀಯ ದೇಶಗಳಿಗೆ ಭೇಟಿ ನೀಡುವಾಗ ಅವಳ ಪರಿಯನ್ನು ನೀವು ಗಮನಿಸಿರಬಹುದು.

ಭಾರತ ತಂಡ ಕ್ರಿಕೆಟ್ ವಿಶ್ವಕಪ್‌ನಲ್ಲಿ ಸೋತದ್ದನ್ನು ತಿಂಗಳುಗಟ್ಟಲೆ ಚರ್ಚಿಸುವ ಮಾಧ್ಯಮಗಳು ಮತ್ತು ಭಾರತೀಯರು ಇಂತಹ ಮಿಂಚಿನ ಪ್ರತಿಭೆಗಳ ಹಿನ್ನೆಲೆಯ ಅರಿಯಲು ಹೋಗುವುದೇ ಇಲ್ಲ. ಪ್ರತಿ ವರ್ಷ ಇಂತಹ ಅನೇಕ ಎಲೆ ಮರೆಯ ಸಾಧಕರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದರೂ ಅಂತಹವರಿಗೆ ಜನ ಬೆಂಬಲ ಸಿಗುವುದು ದುರ್ಲಭ. ಪ್ರತಿ ಸೆಕೆಂಡಿಗೆ ಲಕ್ಷ ಲಕ್ಷ ಎಣಿಸುವ ಕ್ರಿಕೆಟ್ ಆಟಗಾರರಿಗೆ ಪ್ರೋತ್ಸಾಹಿಸಲು ದೇಶ ಬಿಟ್ಟು ದೇಶಕ್ಕೆ ತೆರಳುವ ಅಭಿಮಾನಿಗಳಿದ್ದಾರೆ. ಆದರೆ ಕೇವಲ ಹತ್ತೊಂಬತ್ತು ವರ್ಷದ ಹಿಮಾ ಐದು ಚಿನ್ನದ ಪದಕಗಳನ್ನು ಒಮ್ಮೆಲೇ ಬಗಲಿಗೆ ಹಾಕಿಕೊಂಡರೂ ಅರ್ಧದಷ್ಟು ಭಾರತೀಯರಿಗೆ ಅವರ ಹೆಸರು ತಿಳಿದಿಲ್ಲ.

ಧಿಂಗ್ ಎಕ್ಸ್‌ಪ್ರೆಸ್ ಖ್ಯಾತಿಯ ಹಿಮಾ ದಾಸ್ ಅಂತಹ ಗಟ್ಟಿ ಹಿನ್ನೆಲೆಯಿಂದ ಬಂದವರೇನು ಅಲ್ಲ. ಅಸ್ಸಾಮ್ ರಾಜ್ಯದ ನಾಗಾಂವ್‌ನ ಧಿಂಗ್‌ನಲ್ಲಿ ಜನವರಿ 9, 2000 ರಲ್ಲಿ ಜನಿಸಿದ ಇವರು ಅಕ್ಕಿಯನ್ನು ಮಾರಿ ಜೀವನ ಸಾಗಿಸುತ್ತಿದ್ದ ಸಾಮಾನ್ಯ ಕೃಷಿ ಕುಟುಂಬದಿಂದ ಬಂದವರು. ಆ ಕುಟುಂಬದ ಐದು ಜನ ಮಕ್ಕಳಲ್ಲಿ ಕೊನೆಯವರಾದ ಇವರು ಪ್ರೌಢಶಾಲೆಯ ತನಕವೂ ಫುಟ್‌ಬಾಲ್ ಅನ್ನು ಧ್ಯಾನಿಸುತ್ತಿದ್ದವರು. ಈಗಲೂ ಭಾರತದ ಪೂರ್ವ ರಾಜ್ಯಗಳಲ್ಲಿ ಫುಟ್‌ಬಾಲ್‌ ಆರಾಧಕರು ಜಾಸ್ತಿ. ಆದರೆ ಫುಟ್‌ಬಾಲ್‌ನಲ್ಲಿ ಪರಿಣತಿ ಹೊಂದುವ ಯಾವ ಸೌಕರ್ಯವೂ ಅವರ ಬಳಿ ಇರಲಿಲ್ಲ. ಅದೃಷ್ಟವಶಾತ್ ಅವರ ಓಟವನ್ನು ಗಮನಿಸಿದ ಶಿಕ್ಷಕ ಓಟಗಾರ್ತಿಯಾಗಲು ಸೂಚಿಸಿದರು. ನಂತರ ಹಿಂತಿರುಗಿ ನೋಡಿದ್ದೇ ಇಲ್ಲ.

ಇವರ ಬಗ್ಗೆ ಹೇಳಲು ಎಷ್ಟು ಖುಷಿ ಎನ್ನಿಸುತ್ತದೆ ಎಂದರೆ ಹಿಮಾ ದಾಸ್ ಇನ್ನೂ ಹನ್ನೆರಡನೆಯ ತರಗತಿಗೆ ಕಾಲಿಟ್ಟಿರಲಿಲ್ಲ ಆಗಲೇ ಅವರು ಅರ್ಜುನ ಪ್ರಶಸ್ತಿ ಪಡೆದಿದ್ದರು! ಅವರೀಗ ಅಸ್ಸಾಮ್‌ ರಾಜ್ಯದ ಕ್ರೀಡಾ ರಾಯಭಾರಿ, ಯುನಿಸೆಫ್‌ನ ಮೊದಲ ಯುವ ರಾಯಭಾರಿ. ಸೆಪ್ಟೆಂಬರ್ 2018 ರಲ್ಲಿ ಅಡಿಡಾಸ್ ಶೂ ಕಂಪನಿ ಅವರೊಡನೆ ಒಪ್ಪಂದ ಮಾಡಿಕೊಳ್ಳಲು ಬಂದು ನಿಂತಿತ್ತು. ಅವರ ಸಾಧನೆಗಳ ಬಗ್ಗೆ ಕೇಳಿದರೆ ರೋಮಾಂಚನಕಾರಿ ಅನ್ನಿಸುತ್ತದೆ. ಅವರ ವಯಸ್ಸು ಹತ್ತೊಂಬತ್ತು! ಆಲೋಚಿಸಿ, ಇವರನ್ನು ಸರಿಯಾಗಿ ಬೆಳೆಸಿದರೆ ಸಾಧನೆಗಳನ್ನು ಎಣಿಸಲು ಸಮಯ ಸಾಲುವುದಿಲ್ಲವೇನೋ..?!

-ಸಚಿನ್ ಪಾರ್ಶ್ವನಾಥ್

Tags: AssamAthleticsDhing ExpressGold MedalHima DasSpecial ArticleSportsಅಥ್ಲೆಟಿಕ್ಸ್‌ಅಸ್ಸಾಮ್ಚಿನ್ನದ ಪದಕಧಿಂಗ್ ಎಕ್ಸ್‌ಪ್ರೆಸ್ಪ್ರೌಢಶಾಲೆಹಿಮಾ ದಾಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಲ್ಕನೆಯ ಬಾರಿ ಸಿಎಂ ಆಗಿ ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ

Next Post

ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

ಅಡೆತಡೆಯಿಲ್ಲದ ಈ ಮಹಾಮಾರಿಗೆ ಕಡಿವಾಣ ಹಾಕುವವರು ಯಾರು?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Two Brunt in Mysore Pub Tragedy

ಮೈಸೂರಿನ ಪಬ್‌ನಲ್ಲಿ ಭೀಕರ ಅಗ್ನಿ ಅವಘಡ | ಇಬ್ಬರು ಸಜೀವ ದಹನ, ಏಳು ಮಂದಿಗೆ ಗಂಭೀರ ಗಾಯ

June 15, 2026
Chamarajanagara: Nalvadi Krishnaraja Wodeyar

ನಾಲ್ವಡಿ ಕೃಷ್ಣರಾಜ ಒಡೆಯರ್ ಆಡಳಿತ ಪ್ರತಿಯೊಬ್ಬರಿಗೂ ಆದರ್ಶ: ಸುರೇಶ್ ಋಗ್ವೇದಿ

June 15, 2026
‘Smart Surface’ Technology Introduced at IIS

ಏಷ್ಯಾದಲ್ಲೇ ಮೊದಲು | IISನಲ್ಲಿ ‘ಸ್ಮಾರ್ಟ್ ಸರ್ಫೇಸ್’ ತಂತ್ರಜ್ಞಾನ | ಭಾರತೀಯ ಕ್ರೀಡಾ ತರಬೇತಿಯಲ್ಲಿ ಡಿಜಿಟಲ್ ಕ್ರಾಂತಿ

June 15, 2026
Linkedin fund for Skill development

ಕರ್ನಾಟಕದ 25,000 ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಲಿಂಕ್ಡ್‌ ಇನ್ 1.5 ಕೋಟಿ ರೂ. ಅನುದಾನ

June 15, 2026
Indira Lankesh

ಪತ್ರಕರ್ತ ಪಿ.ಲಂಕೇಶ್ ಪತ್ನಿ, ಹಿರಿಯ ಲೇಖಕಿ ‘ಇಂದಿರಾ ಲಂಕೇಶ್’ ಇನ್ನಿಲ್ಲ

June 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL