No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥರ ಚಾತುರ್ಮಾಸ್ಯ

ಜುಲೈ 11 ಶ್ರೀಗಳ ಪುರಪ್ರವೇಶ, 12ರಂದು ವ್ರತ ಸಂಕಲ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2023
in ಶಿವಮೊಗ್ಗ
0
ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠಾಧೀಶ ಶ್ರೀ ಸತ್ಯಾತ್ಮ ತೀರ್ಥರ ಚಾತುರ್ಮಾಸ್ಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಹೊಳೆಹೊನ್ನೂರು |

ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀಮದುತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥ ಶ್ರೀಪಾದಂಗಳವರು ತಮ್ಮ 28ನೇ ಚಾತುರ್ಮಾಸ್ಯ ವ್ರತವನ್ನು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕ್ಷೇತ್ರದಲ್ಲಿ ಕೈಗೊಳ್ಳಲಿದ್ದಾರೆ.

ಈ ಹಿನ್ನೆಲೆಯಲ್ಲಿ ಶ್ರೀಪಾದಂಗಳವರು ಜು.11ರ ಮಂಗಳವಾರ ಸಂಜೆ 5 ಗಂಟೆಗೆ ಹೊಳೆಹೊನ್ನೂರು ಪುರಪ್ರವೇಶ ಮಾಡಲಿದ್ದಾರೆ. ಹೊಳೆಹೊನ್ನೂರು ಸರ್ಕಲ್‌ನಿಂದ ಶ್ರೀಮನ್ ಮೂಲಸೀತಾ ರಾಮಚಂದ್ರ ದೇವರು ಹಾಗೂ ಶ್ರೀಗಳನ್ನು ಪೂರ್ಣಕುಂಭದೊಂದಿಗೆ ಅದ್ಧೂರಿಯಾಗಿ ಬರ ಮಾಡಿಕೊಳ್ಳಲಾಗುವುದು. ಬಳಿಕ ಶ್ರೀಪಾದರು ಬೃಂದಾವನದಲ್ಲಿ ಸನ್ನಿಹಿತರಾಗಿರುವ ತಮ್ಮ ಪರಂಪರೆಯ ಪೂರ್ವಗುರುಗಳಾದ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರ ಮೂಲ ಬೃಂದಾವನದ ದರ್ಶನಾಶೀರ್ವಾದ ಪಡೆಯಲಿದ್ದಾರೆ.
ಆನಂತರ ವಿದ್ವತ್ ಸಭಾ ಕಾರ್ಯಕ್ರಮವಿದೆ. ಜು.12ರಂದು ಶ್ರೀ ಸತ್ಯಧರ್ಮ ತೀರ್ಥರ ಅನುಗ್ರಹದೊಂದಿಗೆ ಶ್ರೀ ಸತ್ಯಾತ್ಮ ತೀರ್ಥರು ಚಾತುರ್ಮಾಸ್ಯ ವ್ರತ ಸಂಕಲ್ಪ ಮಾಡಲಿದ್ದಾರೆ.

ಈ ಬಾರಿ 80 ದಿನ ಚಾತುರ್ಮಾಸ್ಯ..!
ಈ ಸಂವತ್ಸರದಲ್ಲಿ ಶ್ರಾವಣ ಮಾಸ ಅಧಿಕ ಮಾಸ ಬಂದಿರುವುದರಿಂದ ಚಾತುರ್ಮಾಸ್ಯದ ಅವಧಿಯೂ ವಿಸ್ತಾರವಾಗಿದೆ. ಸಾಮಾನ್ಯವಾಗಿ 52 ದಿನಗಳ ಕಾಲ ನಡೆಯುವ ಚಾತುಮಾಸ್ಯ ಅಧಿಕ ಮಾಸದ ಕಾರಣದಿಂದ 80 ದಿನಗಳ ಕಾಲ ನಡೆಯಲಿದೆ. ಅಧಿಕ ಮಾಸದಲ್ಲಿ ಮಾಡುವ ಧಾರ್ಮಿಕ ಕೆಲಸಗಳು ವಿಶೇಷ ಪುಣ್ಯ ನೀಡಲಿದೆ ಎಂಬ ನಂಬಿಕೆ ಇದೆ. ಹೀಗಾಗಿ ಅಧಿಕ ಮಾಸದ ಸಂದರ್ಭದಲ್ಲಿ ಶ್ರೀಗಳು ಈ ಭಾಗದಲ್ಲಿ ವ್ರತ ಕೈಗೊಂಡಿರುವುದು ಭಕ್ತರ ಸಂತಸವನ್ನು ಇಮ್ಮಡಿಗೊಳಿಸಿದೆ ಮತ್ತು ಗುರುಗಳ ಸೇವೆಗೆ ವಿಶೇಷ ಅವಕಾಶವೂ ದೊರಕಿದಂತಾಗಿದೆ.

Also read: Every startup should have only one leader, not multiple leaders

ಉತ್ತರಾದಿ ಮಠಾಧೀಶರ ಈ ಚಾತುರ್ಮಾಸ್ಯ ಕಾರ್ಯಕ್ರಮ ಜು.12ರಿಂದ ಸೆ.29ರವರೆಗೆ ಹೊಳೆಹೊನ್ನೂರಿನಲ್ಲಿ ನಡೆಯಲಿದೆ. 80 ದಿನಗಳ ಈ ಅದ್ಧೂರಿಯ ಕಾರ್ಯಕ್ರಮದಲ್ಲಿ ನಾಡಿನ ವಿವಿಧೆಡೆಯಿಂದ ಸಹಸ್ರಾರು ಭಕ್ತರು ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿದಿನ ಶ್ರೀಗಳಿಂದ ಸಂಸ್ಥಾನ ದೇವರ ಪೂಜೆ, ವಿವಿಧ ವಿದ್ವಾಂಸರಿಂದ ಪ್ರವಚನ, ಹಬ್ಬ ಹರಿದಿನಗಳಂದು ವಿಶೇಷ ಕಾರ್ಯಕ್ರಮಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು, ಭಜನಾ ಮಂಡಳಿಗಳಿಂದ ಭಜನೆ, ಲೋಕಕಲ್ಯಾಣಾರ್ಥ ಹೋಮ ಹವನಾದಿಗಳು ನಡೆಯಲಿವೆ. ನಿತ್ಯವೂ ನಡೆಯುವ ವಿದ್ವತ್ ಸಭೆಯ ಕೊನೆಯಲ್ಲಿ ಶ್ರೀ ಸತ್ಯಾತ್ಮ ತೀರ್ಥರು ಅನುಗ್ರಹ ಸಂದೇಶ ನೀಡಲಿದ್ದಾರೆ.
ಚಾತುರ್ಮಾಸ್ಯ ಸಂಬಂಧ ಮಾಹಿತಿಗಾಗಿ ಶ್ರೀನಿವಾಸಾಚಾರ್ಯ ನವರತ್ನ 94810 64750, ಪುರುಷೋತ್ತಮಾಚಾರ್ಯ ನವರತ್ನ – 94837 21572, ರಘೂತ್ತಮಾಚಾರ್ಯ ಸೊಂಡೂರ್ 87624 -06466 ಇವರನ್ನು ಸಂಪರ್ಕಿಸಲು ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.

ಶ್ರೀ ಸತ್ಯಧರ್ಮರ ಕುರಿತು
ಹೊಳೆಹೊನ್ನೂರಿನಲ್ಲಿ ಉತ್ತರಾದಿ ಮಠದ ಪರಂಪರೆಯ 28ನೇ ಯತಿಗಳಾದ ಶ್ರೀ ಸತ್ಯಧರ್ಮ ತೀರ್ಥ ಶ್ರೀಪಾದಂಗಳವರ ಮೂಲ ಬೃಂದಾವನವಿದೆ. ಶ್ರೀ ಸತ್ಯಧರ್ಮರು ಪುರಾಣ ರಾಜರೆನಿಸಿದ ಶ್ರೀಮದ್ ಭಾಗವತ, ರಾಮಾಯಣ, ಮಹಾಭಾರತಗಳಿಗೆ ಅತ್ಯದ್ಭುತವಾಗಿ ಅವರೂಪದ ಶೈಲಿಯಲ್ಲಿ ವ್ಯಾಖ್ಯಾನ ರಚಿಸಿ ವಿದ್ವತ್ ಪ್ರಪಂಚಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಹಾಗೂ ಅನೇಕ ರಸಭರಿತವಾದ ಸುಭಾಷಿತಗಳನ್ನು ರಚಿಸಿ ಜನಸಾಮಾನ್ಯರನ್ನೂ ಅನುಗ್ರಹಿಸಿದ್ದಾರೆ. ಅವರ ಬೃಂದಾವನದ ಎದುರು ಗಂಗಾಧರನ ಪ್ರಾದುರ್ಭಾವವಾಗಿದ್ದು ಅವರ ಮಹಿಮೆಗೆ ಸಾಕ್ಷಿಯಾಗಿದೆ. ಇಂದಿಗೂ ಗಂಗಾಧರನ ದರುಶನವನ್ನು ಪಡೆಯಬಹುದಾಗಿದೆ.
ಶ್ರೀ ಸತ್ಯಾತ್ಮ ತೀರ್ಥರ ಕುರಿತು
ಶ್ರೀ ಸತ್ಯಪ್ರಮೋದ ತೀರ್ಥ ಶ್ರೀಪಾದಂಗಳವರಿಂದ ಸನ್ಯಾಸಾಶ್ರಮ ಪಡೆದ ಶ್ರೀ ಸತ್ಯಾತ್ಮ ತೀರ್ಥರು ಉತ್ತರಾದಿ ಮಠದ 41ನೇ ಯತಿಗಳು. ಬಾಲಯತಿಗಳಾಗಿ ಸನ್ಯಾಸ ಸ್ವೀಕರಿಸಿದ ಶ್ರೀಗಳು ತಮ್ಮ ಅದ್ಭುತ ಪ್ರವಚನ, ಅಪರಿಮಿತ ಪಾಂಡಿತ್ಯ, ತಪಸ್ಸು ಮತ್ತು ಆಶ್ರಮ ಧರ್ಮದ ಪಾಲನೆಯ ವಿಷಯದಲ್ಲಿ ದೇಶ ವಿದೇಶಗಳಲ್ಲಿ ಖ್ಯಾತರಾಗಿದ್ದಾರೆ. ಕೋಟ್ಯಂತರ ಅನುಯಾಯಿಗಳನ್ನು ಹೊಂದಿದ್ದಾರೆ.
ಶ್ರೀಗಳು ಕೇವಲ ೨೨ನೇ ವಯಸ್ಸಿನಲ್ಲಿ ಸನ್ಯಾಸ ಪಡೆದು ವೈರಾಗ್ಯ ಶಿಖಾಮಣಿಗಳೆನಿಸಿದ್ದಾರೆ. ನಿತ್ಯ ಪೂಜೆ ಮತ್ತು ಪಾಠ, ಪ್ರವಚನವನ್ನು ಶ್ರೀಮಠದ ಆನೂಚಾನ ಪರಂಪರೆಯಂತೆ ಮುಂದುವರೆಸಿದ್ದಾರೆ. ಶ್ರೀಮನ್ನ್ಯಾಯಸುಧಾ ಪಾಠ ಮತ್ತು ಮಂಗಳ ಮಹೋತ್ಸವಕ್ಕೆ ಹೊಸ ದಿಕ್ಕನ್ನೇ ನೀಡಿದ್ದಾರೆ. ಸಹಸ್ರಾರು ಯುವಕರು ಇವರ ಪ್ರವಚನಗಳಿಂದ ಪ್ರಭಾವಿತರಾಗಿ ಸನ್ಮಾರ್ಗದತ್ತ ಪರಿವರ್ತನೆಯಾಗಿದ್ದಾರೆ.

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: HolehonnuruKannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಹೊಳೆಹೊನ್ನೂರು
Share201Tweet123Send
Previous Post

Every startup should have only one leader, not multiple leaders

Next Post

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL