No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2025
in Special Articles
0
HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಡಾ. ಮೈತ್ರೇಯಿ ಆದಿತ್ಯಪ್ರಸಾದ್  |

ಒಂದು ಕಾರ್ಯಕ್ರಮ ಆಗಿ ಬಹುದಿನಗಳೇ ಕಳೆದು ಹೋದರೂ ಅಲ್ಲಿನ ಹಾಡೊಂದು ಇನ್ನೂ ಕಿವಿಯಲ್ಲಿ ಅನುರಣನಗೊಳ್ಳುತ್ತಿದೆ ಎಂದೇ ಅದರ ಕುರಿತಾಗಿ ಬರೆಯಲಾರಂಭಿಸಿದೆ. ಆ ಹಾಡೇ ಹಸಿರು ಹಸಿರೆಂದರೆ ಹೆಸರಿಲ್ಲದ ಮರ ಎನ್ನುವ…. ಎಚ್.ಎಸ್. ವೆಂಕಟೇಶಮೂರ್ತಿ #HSVenkateshamurthy ಅವರ ಹಾಡು. ಅದನ್ನು ಹಾಡಿದ್ದು ನಮ್ಮನ್ನಗಲಿದ HSVಯವರಿಗೆ ಭಾವ ನಮನ ಸಲ್ಲಿಸಲು ಆಯೋಜಿತವಾದ ಕಾರ್ಯಕ್ರಮ. ಅದರದಲ್ಲಿ ಎಲ್ಲವೂ ವಿಶೇಷ ಅದೇನೆಂದರೆ ಪುಸ್ತಕಗಳನ್ನು ಮಾರುವ ಅಂಗಡಿಯೊಂದು ಅದನ್ನು ಸರಸ್ವತೀ ಮಂದಿರವಾಗುವಂತೆ ಮಾಡಿದ್ದು.

ನಗರದ ಪ್ರಸಿದ್ಧ ಪುಸ್ತಕದ ಅಂಗಡಿಗಳಲ್ಲಿ ಒಂದಾದ ದುರ್ಗಿಗುಡಿಯಲ್ಲಿನ “ಪ್ರಜ್ಞಾ ಬುಕ್ ಗ್ಯಾಲರಿ” ಈ ರೀತಿಯ ವಿಶಿಷ್ಟ ಕಾರ್ಯಕ್ರಮ ಆಯೋಜಿಸುವ ಮೂಲಕ ಜನಮನ ಸೆಳೆಯುತ್ತಿದೆ ಎಂದರೆ ತಪ್ಪೇನಿಲ್ಲ. ಅಂದಿನ ಕಾರ್ಯಕ್ರಮ ಅತ್ಯಂತ ಅಚ್ಚುಕಟ್ಟಾಗಿ ಆಯೋಜಿತವಾಗಿದ್ದೇ ಅಲ್ಲದೆ ಪ್ರೇಕ್ಷಕರ ಆಸನ ವ್ಯವಸ್ಥೆಯಿಂದ ಹಿಡಿದು ಧ್ವನಿವರ್ಧಕಗಳ ವ್ಯವಸ್ಥೆಯವರೆಗೆ ಎಲ್ಲವೂ ಸುಸೂತ್ರವಾಗಿತ್ತು.ಕೇವಲ ವ್ಯಾಪಾರವೇ ಅಲ್ಲದೆ ಸಾಹಿತ್ಯಾಸಕ್ತಿ ಮೂಡಿಸುವ ಕಾರ್ಯಕ್ರಮ ಕಳೆದ ಹಲವಾರು ತಿಂಗಳುಗಳಿಂದ ಪ್ರಜ್ಞಾ ಬುಕ್ ಗ್ಯಾಲರಿ ಆಯೋಜಿಸುತ್ತಾ ಬಂದಿದೆ. ಅದರಂತೆ ಅಂದು ಕನ್ನಡದ ಶ್ರೇಷ್ಠ ಕವಿಯಾದ ಶ್ರೀ ಎಚ್.ಎಸ್.ವಿ ಅವರಿಗೆ ಅವರ ಕುರಿತಾದ ವಿಷಯಗಳನ್ನು ತಿಳಿಯುತ್ತಲೇ ಅವರೇ ರಚಿಸಿದ ಹಾಡುಗಳನ್ನು ಪ್ರಸ್ತುತಪಡಿಸುವ ಕಾರ್ಯಕ್ರಮ ಅದಾಗಿತ್ತು. ಈ ಕಾರ್ಯಕ್ರಮದ ಇನ್ನೊಂದು ವಿಶೇಷತೆ ಎಂದರೆ ನಡೆಸಿಕೊಡುವವರಿಂದ ಹಿಡಿದು ಹಾಡುಗಳನ್ನು ಹಾಡುವವರೆಗೂ ಎಲ್ಲರೂ ಸಾಹಿತ್ಯ ಹಾಗೂ ಸಾಂಸ್ಕೃತಿಕ ವಿಚಾರಗಳಿಗೆ ತವರೂರಾದಂತಹ ಶಿವಮೊಗ್ಗದವರೇ ಆಗಿದ್ದರು.

HSV ಆಗಲಿದ 14ನೇ ದಿನಕ್ಕೆ ಆಯೋಜಿತವಾದ ಈ ಕಾರ್ಯಕ್ರಮ ಹಿಂದಿನ ಅವಿಭಜಿತ ಶಿವಮೊಗ್ಗ ಜಿಲ್ಲೆಯವರೇ ಆದ ಅವರಿಗೆ ಸಮರ್ಪಿಸಿದ, ಅದರಲ್ಲೂ ಮನೆಯವರೆಲ್ಲರೂ ಸೇರಿ ಮನೆಯ ಹಿರಿಯ ಸದಸ್ಯ ಅಗಲಿದಾಗ ಅವರ ಸದ್ಗುಣಗಳನ್ನು ಕೊಂಡಾಡುತ್ತಲೇ ಅವರಿಗಿಷ್ಟವಾದ ಆಹಾರಗಳನ್ನು ಬಂದಿರುವ ಇತರರಿಗೆ ಮಾಡಿ ಬಡಿಸಿ ಇಷ್ಟು ದಿನಗಳ ಕಾಲ ಜೊತೆಗಿದ್ದ ಜೀವಕ್ಕೆ ಸದ್ಗತಿ ದೊರೆಯಲೆಂದು ಮಾಡಿದ ವೈಕುಂಠ ಸಮಾರಾಧನೆಯ ಹಾಗೆಯೇ ಆದಂತಿತ್ತು.

ನಿಜವಾಗಿಯೂ ಅದೊಂದು ಅದ್ಭುತ ಕಾರ್ಯಕ್ರಮ ಶ್ರೀ ವಿನಯ್ ಶಿವಮೊಗ್ಗ ಅವರು ಸಾಕ್ಷಾತ್ ಸರಸ್ವತಿಯ ಪುತ್ರರಂತೆ HSV ಕುರಿತು ಅನೇಕ ವಿಷಯಗಳನ್ನು ಕಲೆ ಹಾಕಿ ನಮ್ಮೆದುರಿಗೆ ಪ್ರಸ್ತುತಪಡಿಸಿದರು. ಇದರಿಂದ HSV ಕುರಿತಾದ ಪ್ರೀತಿ ಗೌರವ ಹೆಮ್ಮೆ ಎಲ್ಲವೂ ಇಮ್ಮಡಿಗೊಳಿಸುವಂತೆ ಆಯಿತು. ಭಾವಗೀತೆ ಮತ್ತು ಸುಗಮ ಸಂಗೀತ ಕ್ಷೇತ್ರಗಳು ಅತ್ಯಂತ ಶ್ರೀಮಂತ ಗೊಳ್ಳಲು ಕೊಡುಗೆ ನೀಡಿದ ಮಹನೀಯರಲ್ಲಿ HSV ಕೂಡ ಒಬ್ಬರು. ಇವರ ಹಾಡು ಮನಸ್ಸಿಗೆ ಹಿತವಾಗುವಂತೆ ಆಗುತ್ತದೆ.
ನಾಟಕ, ಕಥೆ, ಕಾದಂಬರಿ, ವಿಮರ್ಶೆ, ಪ್ರಬಂಧ, ಅಂಕಣ, ಚಲನಚಿತ್ರ, ಭಾವಗೀತೆ, ಶಿಶು ಗೀತೆ ಹೀಗೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ತಮ್ಮ ಛಾಪನ್ನು ಮೂಡಿಸಿ ಕನ್ನಡ ಸಾಹಿತ್ಯ ಲೋಕವನ್ನು ಅಚ್ಚರಿಗೊಳಿಸಿದವರು. ಅನೇಕ ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾದವರು ಎಚ್.ಎಸ್.ವಿ. ಇಂತಹ ಮಹನೀಯರ ಕುರಿತಾಗಿ ವಿನಯಣ್ಣ ಹೇಳುವಾಗ ಅನೇಕ ಸಂಗತಿಗಳು ನಮಗೆ ತಿಳಿದೇ ಇರಲಿಲ್ಲವೇನೋ ಎನ್ನುವಂತಾಗಿತ್ತು. ಅವರಾಡಿದ ಬಹಳಷ್ಟು ಮಾತುಗಳು ವಿಶೇಷ ಎನಿಸಿದ್ದವು. ಅವುಗಳಲ್ಲಿ ಕೆಲವನ್ನು ಇಲ್ಲಿ ಹೇಳುವುದಾದರೆ ಅವರೊಬ್ಬ ಕ್ಯಾಸೆಟ್ ಕವಿ ಅಲ್ಲ ಅಸೆಟ್ ಕವಿ ಎಂದ ಜೋಗಿಯ ಮಾತೇ ಆಗಿರಬಹುದು…, ಲೋಕ ತಿರುಗಲು ನೀಡಿದ ಪಾಸ್ಪೋರ್ಟ್ ನಂತೆ ಇದ್ದ ಗೀತೆಯೇ ಲೋಕದ ಕಣ್ಣಿಗೆ ರಾಧೆಯು ಕೂಡ… ಇಲ್ಲಿ ಬರುವ ಮಹಾ ಪ್ರವಾಹ ಎಂದರೆ ರಾಧೆಯ ಪ್ರೀತಿಯ ಪ್ರವಾಹ ಎಂಬುದು…, ವೇದ ಉಪನಿಷತ್ ಗಳಲ್ಲಿನ ಅಧ್ಯಯನ ಸಾವನ್ನೂ ಸಲೀಸಾಗಿ ತೋರಿಸುವ ವ್ಯಕ್ತಿತ್ವ ಅವರದು… ಎಂಬುದು, ತಾಯಿ ಹಾಗೂ ಅಜ್ಜಿಯ ಮಮತೆಯ ಮಡಿಲಲ್ಲಿ ಅವರು ಬೆಳೆದಿದ್ದರಿಂದ ತಾನು ಮಾತೃಗೋತ್ರದವನೆಂದು ಪರಿಚಯಿಸಿಕೊಳ್ಳುತ್ತಿದ್ದರೆಂಬುದು… ಅವರ ಪದ್ಯಗಳಿಗೆ ಮಲೆನಾಡಿನ ಭಾಷೆ ಆದರೆ ಗದ್ಯಗಳಿಗೆ ಬಯಲು ಸೀಮೆಯ ಭಾಷೆ ಎಂಬುದು… ಅವರ ಕೃತಿಗಳಲ್ಲಿ ಮಣ್ಣಿನ ಸೊಗಡನ್ನು ಎತ್ತಿ ಹಿಡಿಯುವ ಶಕ್ತಿ ಇತ್ತೆಂಬುದು…, ಪ್ರೀತಿ ಮತ್ತು ಸತ್ಯಕ್ಕೆ ಮನಸೋತ ಕವಿ ಅವರಲ್ಲಿನ ಸಮನ್ವಯತೆ, ಭಾವ ಶುದ್ಧತೆ, ಪರಿಸರ ಪ್ರಜ್ಞೆಯ ಕವಿ, ಸಂಜೆಯಾಗುತ್ತಿದೆ ನಡೆ-ನಡೆ ಗೆಳೆಯ ಬೃಂದಾವನದ ಕಡೆ ಎನ್ನುವುದಂತು ತಮ್ಮದೇ ಚರಮಗೀತೆಯಂತೆ ಎಂದಿರುವುದು…, ಬುದ್ಧ ಚರಣದಲ್ಲಿ ಬರುವ ಸಾಲುಗಳನ್ನು ಓದಿದ್ದು, ಅಭಿಜಾತ ಪ್ರತಿಭೆ, ಕೇವಲ ಹಿರಿಯರಷ್ಟೇ ಅಲ್ಲ ಪುಟ್ಟ ಮಕ್ಕಳಿಗೂ ಒದಗಿ ಬರುವ ಕವಿ, ಅವರು ಇಂದಿನ ತರುಣರನ್ನು ತಲುಪಿದ್ದು ಹೇಗೆ, ಚಿತ್ರಗೀತೆಗಳಿಗೆ ನೀಡಿದ ಸಂಗೀತದ ಕುರಿತಾಗಿ ಹೀಗೆ ಹತ್ತು ಹಲವು ಸಂಗತಿಗಳು ಅನಾವರಣಗೊಂಡ ಬಗೆಯಂತೂ ಸಾಹಿತ್ಯಾಸಕ್ತರ ಮನ ಗೆದ್ದಿತು.ಅಂದು ಹಾಡಿದ ಹಾಡುಗಳಾದ ಇಷ್ಟು ಕಾಲ ಒಟ್ಟಿಗಿದ್ದು, ಲೋಕದ ಕಣ್ಣಿಗೆ ರಾಧೆಯು ಕೂಡ, ಬಾನಲ್ಲಿ ಓಡೋ ಮೇಘ, ಹುಚ್ಚು ಕೊಡಿ ಮನಸು, ತೂಗು ಮಂಚದಲ್ಲಿ ಕೂತು, ಮುಕ್ತ ಮುಕ್ತ ಇತ್ಯಾದಿ ಎಲ್ಲಾ ಹಾಡುಗಳು ಕೇಳುಗರನ್ನು ಮಂತ್ರಮುಗ್ಧರನ್ನಾಗಿಸಿತ್ತು. ಆ ನಿಟ್ಟಿನಲ್ಲಿ ನಮ್ಮ ಶಿವಮೊಗ್ಗದ ಪೃಥ್ವಿ ಗೌಡ, ಪಾರ್ಥ ಚಿರಂತನ್, ಸಂಗೀತ, ಸೋನಾಲಿಯೇ ಅಲ್ಲದೇ ವಿನಯಣ್ಣ ಸಹ ಹಾಡಿದ ಹಾಡುಗಳು HSV ಯವರ ಜನಪ್ರಿಯ ಗೀತೆಗಳೇ ಆದರೂ ನಮ್ಮೂರಿನ ಪ್ರತಿಭೆಗಳು ಹಾಡಿದ್ದರಿಂದ ಕೇಳಲು ಮುದ ಎನಿಸಿತು. ಸಂಗೀತದ ಅಬ್ಬರವಿಲ್ಲದೆ ಮನಮುಟ್ಟುವಂತೆ ಇದ್ದ ಹಾಡುಗಳು ಬಂದವರೆಲ್ಲರೂ ಭಾವಲೋಕದಲ್ಲಿ ಮಿಂದೇಳುವಂತೆ ಮಾಡಿತ್ತು.

ಹಾಗಾಗಿ ಈ ರೀತಿಯ ಕಾರ್ಯಕ್ರಮ ಆಯೋಜಿಸಿದ ಪ್ರಜ್ಞಾ ಬುಕ್ ಗ್ಯಾಲರಿ ಅವರಿಗೆ ವಿಶೇಷವಾದ ಅಭಿನಂದನಾ ಪೂರ್ವಕ ಕೃತಜ್ಞತೆಗಳು ಸಲ್ಲಲೇ ಬೇಕು. ಕಾರ್ಯಕ್ರಮ ಮುಗಿದ ಮೇಲೂ ಇನ್ನು ಇದೆಯೇನೋ ಎಂದು ಕುಳಿತು ಕೇಳೋಣ ಎನಿಸುವಂತೆ ಮಾಡಿದ ಎಲ್ಲ ಕಲಾವಿದರಿಗೂ ಅನಂತಾನಂತ ಧನ್ಯವಾದಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                                  

Tags: HSVKannada News WebsiteLatest News KannadaPoet H S Venkatesha MurthyPrajna Book GalleryShimogaShivamoggaSpecial Articleಎಚ್.ಎಸ್. ವೆಂಕಟೇಶಮೂರ್ತಿಡಾ. ಮೈತ್ರೇಯಿ ಆದಿತ್ಯಪ್ರಸಾದ್ಪ್ರಜ್ಞಾ ಬುಕ್ ಗ್ಯಾಲರಿಶಿವಮೊಗ್ಗ
Share196Tweet123Send
Previous Post

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

Next Post

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇನ್ಮುಂದೆ ಮಂಗಳೂರಿನಿಂದ ಮುಂಬೈಯನ್ನು ಕೇವಲ 12 ಗಂಟೆಗೆ ತಲುಪಬಹುದು

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL