ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪದ ಹೇಳಿಕೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ವರದಿಯಾಗಿದೆ.
ಈ ಕುರಿತಂತೆ ಸದನದಲ್ಲಿಯೇ ಸೂಚನೆ ನೀಡಿರುವ ಗೃಹ ಸಚಿವರು, ಮುಖ್ಯಮಂತ್ರಿಗಳ ವಿರುದ್ಧ ತಿಮರೋಡಿ ಹೇಳಿಕೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಗಂಭೀರವಾಗಿ ಪರಿಗಣಿಸಿದ ಸರ್ಕಾರ ಆತನ ವಿರುದ್ಧ ಒಂದೇ ದಿನದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲು ಮುಂದಾಗಿದೆ.
ಕೂಡಲೇ ಮಹೇಶ್ ಶೆಟ್ಟಿ ತಿಮ್ಮರೋಡಿಯ ಮೇಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಿಮರೋಡಿ ವಿರುದ್ಧ ಎಫ್’ಐಆರ್ ದಾಖಲಿಸಿ, ಬಂಧಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ಏನಿದು ಪ್ರಕರಣ?
ಇತ್ತೀಚೆಗೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ಮಹೇಶ್ ಶೆಟ್ಟಿ ತಿಮರೋಡಿ, ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ತಿಮರೋಡಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ, ಅವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದೆ. ಗೃಹ ಸಚಿವರು ನೀಡಿರುವ ಸೂಚನೆಯ ಮೇರೆಗೆ, ಪೊಲೀಸರು ತಿಮರೋಡಿ ವಿರುದ್ಧ ಎಫ್’ಐಆರ್ ದಾಖಲಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಬಂಧನವಾಗುವ ಸಾಧ್ಯತೆಯಿದೆ.
ಇನ್ನು, ಗೃಹ ಸಚಿವರ ಸೂಚನೆ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾಗಿರುವ ಪೊಲೀಸರು, ತಿಮರೋಡಿ ಹಿನ್ನೆಲೆಯನ್ನು ಕೆದಕಲು ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ತಿಮರೋಡಿ ಹಿಂದಿನ ಹೇಳಿಕೆಗಳು ಮತ್ತು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದ್ದು, ಕಾನೂನು ಪ್ರಕಾರ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ಬಿಎನ್’ಎಸ್ ಕಾಯ್ದೆಯಡಿ (ಭಾರತೀಯ ನ್ಯಾಯ ಸಂಹಿತೆ) ತಿಮರೋಡಿ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post