No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಹೊನ್ನಾವರದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ವೈಭವ ಹೇಗಿದೆ ಗೊತ್ತಾ?

ಬಿ. ಜಯಶ್ರೀಯವರಿಗೆ ಶ್ರೀ ಕೆರೆಮನೆ ಶಿವಾರಾಮ ಹೆಗಡೆ ಪ್ರಶಸ್ತಿ ಪ್ರದಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 7, 2021
in ಉತ್ತರ ಕನ್ನಡ
0
ಹೊನ್ನಾವರದ ಗುಣವಂತೆಯಲ್ಲಿ ಕೆರೆಮನೆ ಶಂಭು ಹೆಗಡೆ ನಾಟ್ಯೋತ್ಸವ ವೈಭವ ಹೇಗಿದೆ ಗೊತ್ತಾ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಹೊನ್ನಾವರ  |

ತಾಲೂಕಿನ ಗುಣವಂತೆಯಲ್ಲಿ ಪ್ರತಿವರ್ಷ ವಿಶಿಷ್ಠವಾಗಿ ಆಚರಿಸಿಕೊಂಡು ಬರುತ್ತಿರುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ನಡೆಯುತ್ತಿದೆ.

ನಾಟ್ಯೋತ್ಸವದ ದ್ವಾದಶ ಸಮಾರಂಭ ಕೆರೆಮನೆ ಬಯಲು ರಂಗಮಂದಿರದಲ್ಲಿ ವಿದ್ಯುಕ್ತವಾಗಿ ಯಕ್ಷ ಗಣಪತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು. ಸಾನಿಧ್ಯ ವಹಿಸಿದ್ದ ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು, ಎಡನೀರು ಇವರಿಗೆ ಫಲ ಸಮರ್ಪಿಸಲಾಯಿತು. ಕಾರ್ಯಾಧ್ಯಕ್ಷರಾದ ಲಕ್ಷ್ಮಿನಾರಾಯಣ ಕಾಶಿಯವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.

ಅಗಲಿದ ಕಲಾಚೇತನ ಕಲಾವಿದರನ್ನು ಸ್ಮರಿಸಿ ಮೌನಚರಣೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹಿರಿಯ ಕಲಾವಿದರಾದ ತಿಮ್ಮಣ್ಣ ಯಾಜಿ ಮಣ್ಣಿಗೆ, ನಾರಾಯಣ ಹಾಸ್ಯಗಾರ, ಕರ್ಕಿ ಹಾಗೂ ಪ್ರೊ. ಎಂ.ಎ. ಹೆಗಡೆಯವರ ಕಲಾಪಥವನ್ನು ಸ್ಮರಿಸಿ ಸಮರ್ಪಣೆ ಮಾಡಲಾಯಿತು. ನಾಟ್ಯೋತ್ಸವ ಕಾರ್ಯಕ್ರಮದ ಆಶಯ ಮತ್ತು ಶ್ರೀ ಇಡಗುಂಜಿ ಯಕ್ಷಗಾನ ಮಂಡಳಿಯ ಘರಾಣೆಯ ಆಶಯವನ್ನು ಯಕ್ಷಗಾನ ಅಕಾಡೆಮಿಯ ಸದಸ್ಯರಾದ ದಿವಾಕರ ಹೆಗಡೆಯವರು ಸಮರ್ಪಕವಾಗಿ ಮಂಡಿಸಿದರು.

ಶ್ರೀ ಸಚ್ಚಿದಾನಂದ ಭಾರತೀ ಮಹಾಸ್ವಾಮಿಗಳು ಕಲಾಜ್ಯೋತಿಯನ್ನು ಪ್ರಜ್ವಲಿಸುದರ ಮೂಲಕ ನಾಟ್ಯೋತ್ಸವವನ್ನು ಉದ್ಘಾಟಿಸಲಾಯಿತು. ಹಿರಿಯ ಪತ್ರಕರ್ತರಾದ ಎಂ.ಕೆ. ಭಾಸ್ಕರ ರಾವ್ ರವರು ಪದ್ಮಶ್ರೀ ಡಾ. ಬಿ. ಜಯಶ್ರೀ, ಬೆಂಗಳೂರು ಇವರ ಕಲಾಪಥವನ್ನು, ಕಲಾವಂತಿಕೆಯ ವಿಸ್ತಾರವನ್ನು ಸಭೆಗೆ ತಿಳಿಸಿ ಅಭಿನಂದಿಸಿದರು.

ಅಪ್ರತಿಮ ಕಲಾಮೇರು ಪ್ರತಿಭೆ ಶ್ರೀ ಕೆರೆಮನೆ ಶಿವಾರಾಮ ಹೆಗಡೆ ಪ್ರಶಸ್ತಿಯನ್ನು ಪದ್ಮಶ್ರೀ ರಂಗಭೂಮಿ ಕಲಾವಿದೆಯಾದ, ರಾಜ್ಯಸಭಾ ಮಾಜಿ ಸದಸ್ಯರಾದ ಡಾ.ಬಿ. ಜಯಶ್ರೀಯವರಿಗೆ ಪ್ರಧಾನ ಮಾಡಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಬಿ. ಜಯಶ್ರೀಯವರು, ಶಂಭು ಹೆಗಡೆಯವರ ಸಂಗಡ ಅಮೆರಿಕಾದ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಿ ಆ ವೇದಿಕೆಯಲ್ಲಿ ಅಕಸ್ಮಾತ್ ಯಕ್ಷಗಾನ ಸ್ತ್ರೀ ವೇಷ ಮಾಡಿದ ನೆನಪು ಮಾಡಿಕೊಂಡರು. ರಂಗಭೂಮಿಯ ಕಲಾವಿದೆಯಾದ ನನಗೆ ಯಕ್ಷಗಾನ ರಂಗಭೂಮಿಯ ಶ್ರೇಷ್ಠ ಕಲಾವಿದರಾದ ಕೆರೆಮನೆ ಶ್ರೀಶಿವರಾಮ ಹೆಗಡೆಯವರ ಹೆಸರಿನಲ್ಲಿ ನೀಡುವ ಪ್ರಶಸ್ತಿಯನ್ನು ಪಡೆದು ಧನ್ಯನಾಗಿದ್ದೇನೆ ಎಂದರು.

ನಾಟ್ಯೋತ್ಸವದಲ್ಲಿ ನೀಡುವ ಈ ಪ್ರಶಸ್ತಿ ಕಲಾ ವಿಸ್ತಾರದ ಸಂಕೇತವಾಗಿದೆ. ಇದನ್ನು ಪಡೆದ ನನಗೆ ರಂಗ ವಿಸ್ತಾರದ ಜವಾಬ್ಧಾರಿ ಹೆಚ್ಚಿದೆ ಎಂದರು.

ನಾಟ್ಯೋತ್ಸವ ಸನ್ಮಾನವನ್ನು ಯಕ್ಷಗಾನ ಕಲಾವಿದರಾದ ರಾಜೀವ ಶೆಟ್ಟಿ, ಹೊಸಂಗಡಿ, ದಯಾನಂದ ಬಳೆಗಾರ, ನಾಗೂರು, ಸಂಘಟಾಕರಾದ ಸೂರ್ಯನಾರಾಯಣ ಪಂಜಾಜೆ, ಮತ್ತು ಮರಣೋತ್ತರವಾಗಿ ಗುಂಡಿಬೈಲು ಸುಬ್ರಾಯ ಭಟ್, ಮತ್ತು ಕೃಷ್ಣ ಭಂಡಾರಿಯವರಿಗೆ ನೀಡಿ ಪುರಸ್ಕರಿಸಲಾಯಿತು.

ಶ್ರೀ ಸಚ್ಚಿದಾನಂದ ಭಾರತೀ ಸ್ವಾಮಿಗಳು ಮಾತನಾಡಿ, ಯಕ್ಷಗಾನ ಕ್ಷೇತ್ರವನ್ನು ಪ್ರಪಂಚಕ್ಕೆ ಗುರುತಿಸಿ ಕಲಾ ವಿಸ್ತಾರವನ್ನು ಮಾಡಿದ ಹಲವರಲ್ಲಿ ಶಂಭು ಹೆಗಡೆಯವರು ಒಬ್ಬರು ಎಂದರು. ಸಂಸ್ಕೃತಿಯನ್ನು ಬೆಳೆಸುವುದರಲ್ಲಿ ಕಲಾ ವಿನಿಮಯ ಅವಶ್ಯಕವಾಗಿದೆ. ಈ ಕಾರ್ಯ ನಾಟ್ಯೋತ್ಸವ ಜಾಬ್ಧಾರಿಯುತವಾಗಿ ಮಾಡುತ್ತಿದೆ ಎಂದರು.

ಕಲೆಯಿಂದ ಕಲಾವಿದನ ವಿಸ್ತಾರವೇ ಹೊರತು ಕಲಾವಿದನಿಂದ ಕಲೆ ಅಲ್ಲಾ ಎಂದು ಅಭಿಪ್ರಾಯ ಪಟ್ಟು, ಸಮಷ್ಠಿ ರೂಪದಲ್ಲಿ ಎಲ್ಲಾ ಕಲಾ ಪ್ರಕಾರಗಳನ್ನು ಬೆಳೆಸಿ ಭಾರತದ ಸಂಸ್ಕೃತಿಯನ್ನು ವಿಸ್ತರಿಸಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜೀವ ಶೆಟ್ಟಿ, ಯಕ್ಷಗಾನಕ್ಕೆ ಭಾವ ಪ್ರಪಂಚವನ್ನು ನೀಡಿದ ಮೇಳವೆಂದರೆ ಇಡಗುಂಜಿ ಯಕ್ಷಗಾನ ಮೇಳ ಎಂದು ಅಭಿಪ್ರಾಯಪಟ್ಟರು.

ಸಾಧನೆಯು ಸಾಧಕರ ಸ್ವತ್ತೆ ಹೊರತು ಸೋಮಾರಿಯ ಸ್ವತ್ತಲ್ಲ ಎಂದರು. ಸೂರ್ಯನಾರಾಯಣ ಪಂಜಾಜೆ ಅವರು ಮಾತನಾಡುತ್ತಾ ಪ್ರೇಕ್ಷಕ, ಕಲಾಇದ ಮತ್ತು ಸಂಘಟಕ ಕಲೆಯ ಮುಖ್ಯ ಭಾಗವತರು, ಸಂಘಟಕನಿಗೆ ಉಂಟಾಗುವ ಸಂಕಟದ ವ್ಯಾಪ್ತಿಯನ್ನ ಮಂಡಿಸಿದರು.
ಮಂಡಳಿ ನಡೆಸಿದ ಯಕ್ಷಗಾನ ಭಾಗವತಿಕೆ ಅಧ್ಯಯನ ಮತ್ತು ಸಂಶೋಧನೆಯಲ್ಲಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಡಾ.ಎಚ್.ಎಸ್. ಪ್ರಕಾಶರವರು ಮಾತನಾಡಿ, ರಂಗಭೂಮಿಯಲ್ಲಿ ನಟನ ಸಾಮರ್ಥ್ಯವು ಮುಖ್ಯವಾಗಿದ್ದು, ಆತನ ಕಲಾ ಪ್ರದರ್ಶನದ ಅಭಿವ್ಯಕ್ತಿ, ಅನುಭೂತಿ ಮತ್ತು ಪಾತ್ರದ ಜೀವಂತಿಕೆ ಮುಖ್ಯವಾಗಿರುತ್ತದೆ ಎಂದರು.

ಡಾ.ಎಂ. ಪ್ರಭಾಕರ ಜೋಶಿ ಮಾತನಾಡಿ, ಚೈನೀಸ್ ಅಪೇರಾ ಎಂಬ ಕಲಾ ಪ್ರಕಾರ ಹೊನ್ನಾವರದ ಬುದ್ಧ ಧರ್ಮದ ಅನುಯಾಯದವರಿಂದ ಮುಂದುವರಿದಿದೆ ಎಂಬ ವಿಷಯ ಅಧ್ಯಯನಕ್ಕೆ ಒಳಪಡಬೇಕು ಎಂದರು.

ಕುಡಿಯುವ ನೀರಿನ ಘಟಕವನ್ನು ಕಲಾಮಂದಿರಕ್ಕೆ ನೀಡಿದ ಶಂಕರ ಐತಾಳರವರನ ಸನ್ಮಾನಿಸಲಾಯಿತು. ಶಿವಾನಂದ ಹೆಗಡೆಯವರು ವಂದಿಸಿ, ನಾಗರಾಜ ಹೆಗಡೆ ಕಾರ್ಯಕ್ರಮವನ್ನು ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: HonnavaraKannada NewsKannada News LiveKannada News OnlineKannada News WebsiteKannada WebsiteKeremane Shambu HegdeLatest News KannadaNews in KannadaNews KannadaUttara KannadaYakshaganaಕೆರೆಮನೆ ಶಂಭು ಹೆಗಡೆಯಕ್ಷಗಾನಹೊನ್ನಾವರ
Share197Tweet123Send
Previous Post

ಭದ್ರಾವತಿ ರಾಯರ ಮಠದಲ್ಲಿ ಲಕ್ಷದೀಪೋತ್ಸವದ ಸಂಭ್ರಮ

Next Post

ಸಾಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಮಾಲು ಸಹಿತ ಜಿಂಕೆ ಬೇಟೆಗಾರನ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಮಾಲು ಸಹಿತ ಜಿಂಕೆ ಬೇಟೆಗಾರನ ಬಂಧನ

ಸಾಗರ ಅರಣ್ಯಾಧಿಕಾರಿಗಳ ಕಾರ್ಯಾಚರಣೆ: ಮಾಲು ಸಹಿತ ಜಿಂಕೆ ಬೇಟೆಗಾರನ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

June 2, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL