ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ರಿಪ್ಪನ್ ಪೇಟೆ: ಸಮೀಪದ ಕೋಟೆ ತಾರಿಗಾ ಗ್ರಾಮದಲ್ಲಿ ಮಂಗಳವಾರ ಏಕಾಏಕಿ ಹೆಜ್ಜೇನು ದಾಳಿಗೆ ಸಿಲುಕಿ ವಿದ್ಯಾರ್ಥಿ ಸೇರಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಿಪ್ಪನ್ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿ ವಿದ್ಯಾರ್ಥಿ ಹೀರೆಮೈಥೆ ಗ್ರಾಮದ ಎಚ್.ಡಿ. ನರೇಂದ್ರ (15) ಬೆಳಿಗ್ಗೆ ಸೈಕಲ್ನಲ್ಲಿ ಬರುತ್ತಿದ್ದಾಗ ಹೆಜ್ಜೇನು ದಾಳಿಗೆ ಸಿಲುಕಿ ಕುಸಿದು ಬಿದ್ದಿದ್ದಾನೆ. ಅದೇ ಮಾರ್ಗವಾಗಿ ಬೈಕ್ನಲ್ಲಿ ಬಂದ ಹೀರೆಮೈಥೆ ಲಕ್ಷ್ಮಣ್ (50) ಎಂಬುವವರು ವಿದ್ಯಾರ್ಥಿಯ ರಕ್ಷಣೆಗೆ ಧಾವಿಸಿದಾಗ ಅವರಿಗೂ ಹೆಜ್ಜೇನು ಕಚ್ಚಿವೆ. ಕೋಟೆತಾರಿಗಾ ಗ್ರಾಮದ ಸುರೇಶ್ (46) ಎಂಬುವವರ ಮೇಲೂ ಹೆಜ್ಜೇನು ದಾಳಿ ಮಾಡಿವೆ ಎನ್ನಲಾಗಿದೆ.
ಗಂಭೀರವಾಗಿ ಗಾಸಿಗೊಂಡಿದ್ದ ವಿದ್ಯಾರ್ಥಿಯನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ ಇಬ್ಬರು ರಿಪ್ಪನ್ಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಹೋರರೋಗಿಗಳಾಗಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post