No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Monday, August 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ

ಶಿಲಾನ್ಯಾಸದ ಸಂದರ್ಭದಲ್ಲಿ ಅಯೋಧ್ಯೆಯ ಪುಣ್ಯ ಮಣ್ಣಿನ ನಿಕ್ಷೇಪ | ಪುನರ್ ನಿರ್ಮಾಣಕ್ಕೆ 1008 ದಿನಗಳ ಗುರಿ

kalpa News by kalpa News
February 27, 2026
in ಹೊಸನಗರ
0
ಪ್ರಧಾನ ಮಠದ ಪುನರ್ ನಿರ್ಮಾಣ ಸಹಸ್ರಮಾನದ ಕಾರ್ಯ: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೊಸನಗರ  |

ಶ್ರೀ ರಾಮಚಂದ್ರಾಪುರ ಮಠಕ್ಕೆ #Shri Ramachandrapura Mutt ಶಿಷ್ಯರೇ ಸಂಪತ್ತಾಗಿದ್ದು, ಪ್ರಧಾನ ಮಠದ ಶಿಲಾನ್ಯಾಸದ ಮೂಲಕ ಶರಾವತಿ ನದಿ ತೀರದಲ್ಲಿ ಸಹಸ್ರಮಾನದ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು #Raghaveshwara Shri ಹೇಳಿದರು.

ಹೊಸನಗರದ ಶ್ರಿರಾಮಚಂದ್ರಾಪುರ ಮಠದ ಶರಾವತಿ ತೀರದಲ್ಲಿ ಪ್ರಧಾನಮಠ ಪುನ ನಿರ್ಮಾಣ ಸಮಿತಿಯವರು ಏರ್ಪಡಿಸಿದ್ದ ನವ ನಿರ್ಮಾಣದ ರಾಮಸಾನ್ನಿಧ್ಯದ ಶಿಲಾನ್ಯಾಸ ಕಾರ್ಯಕ್ರದಲ್ಲಿ ಶಿಲಾನ್ಯಾಸ ನೆರವೇರಿಸಿ ನಂತರದ ಧರ್ಮಸಭೆಯ ದಿವ್ಯಸಾನ್ನಿಧ್ಯವಹಿಸಿ ಆಶೀರ್ವಚನ ನೀಡಿದರು.
ರಾಮಚಂದ್ರಾಪುರಮಠದ ಕುರಿತು ಹೊರ ಜಗತ್ತಿನಲ್ಲಿ ಇರುವ ಕಲ್ಪನೆಯೇ ಬೇರೆ. ಅದು ಹಣವಿರುವ ಅತ್ಯಂತ ಸಂಪದ್ಬರಿತ ಮಠ, ಇಲ್ಲಿ ಹಣದ ಕೊಪ್ಪರಿಗೆಯೇ ಇದೆ ಎಂದು ಹಲವಾರು ಭಾವಿಸಿದ್ದಾರೆ. ಆದರೆ ನಿಜವಾಗಿಯೂ ನಮ್ಮಲ್ಲಿ ಹಣದ ಕೊಪ್ಪರಿಗೆ ಇಲ್ಲ. ಎಲ್ಲ ಯೋಜನೆಗಳು ಶೂನ್ಯದಿಂದಲೇ ಆರಂಭಗೊಳ್ಳುತ್ತದೆ. ಆದರೆ ನಮಗೆ ಶಿಷ್ಯರೇ ಸಂಪತ್ತಾಗಿದ್ದು, ನಮ್ಮ ಶಿಷ್ಯರು ಗುರುವಿನ ಯಾವ ಆದೇಶವನ್ನು ಮೀರಿ ನಡೆದವರಲ್ಲ. ಸಂಕಷ್ಟವಿದ್ದಾಗಲೂ ಸಂಭ್ರಮವಿರುವಾಗಲೂ ಮಠದೊಂದಿಗೆ ಅವರ ಭಾವನಾತ್ಮಕವಾದ ಸಂಬಂಧವಿದೆ ಹಾಗಾಗಿಯೇ ಗುರುಗಳು ಎಂತಹ ಯೋಜನೆಗಳನ್ನು ಮುಂದಿಟ್ಟರೂ ನಮ್ಮ ಮಠ ಎಂಬ ಪ್ರೀತಿಯಿಂದ ಸ್ವೀಕರಿಸುತ್ತಾರೆ ಎಂದರು.

ಗೋಕರ್ಣದಲ್ಲಿ ಶಂಕರಾಚಾರ್ಯರು ಸಂಸ್ಥಾಪಿಸಿದ ಮಠವನ್ನು ಹೊಸನಗರದ ರಾಮಚಂದ್ರಾಪುರ ಮಠ ಶತಮಾನಗಳ ಮೊದಲು ತನ್ನತ್ತ ಎಳೆದುಕೊಂಡಿದೆ. ರಾಮನ ಬಾಣದಿಂದ ಹೊರಹೊಮ್ಮಿದ ಶರಾವತಿ ನದಿಯ ತೀರದಲ್ಲಿ ನಮ್ಮ ಪ್ರಧಾನ ಮಠ ನೆಲನಿಂತಿರುವುದು ವಿಶೇಷವಾಗಿದೆ. ಈ ಪುಣ್ಯ ನೆಲಕ್ಕೆ ವಿಶೇಷ ಮಹತ್ವವಿದೆ. ಹಾಗಾಗಿ ಸುಮ್ಮನೆ ಕಟ್ಟುವ ಕಟ್ಟಡವೂ ಗಟ್ಟಿಯಾಗುವುದು ಇಲ್ಲಿಯ ವಾಡಿಕೆ ಎಂದ ಅವರು ಇಂದಿನ ಶಿಲಾನ್ಯಾಸ ಸಹಸ್ರಮಾನದ ಇತಿಹಾಸಕ್ಕೆ ನಾಂದಿಯಾಗಲಿದೆ ಎಂದರು.

ಈಗಿರುವ ಮಠವನ್ನು ಗಮನಿಸಿದರೆ ಹಿಂದೆ ಯಾವುದೋ ಆಪತ್ಕಾಲದಲ್ಲಿ ಅದನ್ನು ನಿರ್ಮಿಸಿದಂತಿದೆ. ಅದನ್ನು ಸರಿಪಡಿಸುವ ಕಾರ್ಯಕ್ಕೆ ಇದೀಗ ಚಾಲನೆ ದೊರಕಿದ್ದು, ಅಯೋಧ್ಯೆಯ ಪುಣ್ಯ ಮಣ್ಣನ್ನು ಇಲ್ಲಿ ಶಿಲಾನ್ಯಾಸದ ಸಂದರ್ಭದಲ್ಲಿ ನಿಕ್ಷೇಪ ಮಾಡಲಾಗಿದೆ ಎಂದರು.
ಪ್ರಧಾನ ಮಠದ ಪುನರ್ನಿರ್ಮಾಣಕ್ಕೆ 1008 ದಿನಗಳ ಗುರಿಯನ್ನು ನೀಡಲಾಗಿದ್ದು, ಆನಂತರ 8 ದಿನಗಳ ವೈಭವದ ಕಾರ್ಯಕ್ರಮದ ಮೂಲಕ ಪ್ರಧಾನ ಮಠದ ಲೋಕಾರ್ಪಣೆ ನೆರವೇರಲಿದೆ. ಇದು ಈ ಹಿಂದೆ ಇಲ್ಲಿ ನಡೆದ ರಾಮಾಯಣ ಮಹಾಸತ್ರ ಹಾಗೂ ವಿಶ್ವ ಗೋಸಮ್ಮೇಳನದ ವೈಭವವನ್ನು ನೆನಪಿಸುವಂತಿರಲಿದೆ ಎಂದು ತಿಳಿಸಿದರು.

ಮಾಜಿ ಗೃಹ ಸಚಿವ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ನಮ್ಮ ಜೀವನದಲ್ಲಿ ನಿಜವಾದ ಪವಾಡಗಳನ್ನು ನೋಡುವಂತೆ ಮಾಡಿದ ಸ್ಥಳ ರಾಮಚಂದ್ರಾಪುರ ಮಠ ಹಾಗೂ ಇಲ್ಲಿನ ಗುರುಗಳು ಎಂದರು.

ಸಾಗರದ ಹಾಗೂ ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಗೋಸಂರರಕ್ಷಣೆಯಿಂದಲೇ ಹೆಸರು ಪಡೆದಿರುವ ನಮ್ಮ ಮಠ ಅಭಿವೃದ್ದಿಯಾಗಬೇಕು ಎನ್ನುವುದು ನಮ್ಮ ಕನಸು ಮನಸ್ಸು ಎಲ್ಲವೂ ಹೌದು. ಆ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಹಕಾರಕ್ಕೆ ನಾನು ಬದ್ದನಿದ್ದೇನೆ ಎಂದರು.

ಮಲೆನಾಡ ಪ್ರದೇಶಾಭಿವೃದ್ದಿ ಮಂಡಳಿಯ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ 2007-08 ರಲ್ಲಿ ಶ್ರೀಮಠದಲ್ಲಿ ನಡೆದಿದ್ದ, ದೇಶ ವಿದೇಶಗಳ ಲಕ್ಷಾಂತರ ಜನರು ಬಂದಿದ್ದ ರಾಮಾಯಣ ಮಹಾಸತ್ರ ಹಾಗೂ ವಿಶ್ವ ಗೋಸಮ್ಮೇಳನದ ನೆನಪನ್ನು ಹಂಚಿಕೊಂಡರು.
ಶಿಮುಲ್ ಅಧ್ಯಕ್ಷ ವಿದ್ಯಾಧರ ಗುರುಶಕ್ತಿ ಮಾತನಾಡಿ ಈ ಮಹಾನ್ ಕಾರ್ಯಕ್ಕೆ ತಮ್ಮ ಬೆಂಬಲವನ್ನು ತಿಳಿಸಿದರು.

ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್. ಗುರುಮೂರ್ತಿ, ಪ್ರಧಾನಮಠದ ಪುನ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷ ಪ್ರಭಾಕರ್‍ರಾವ್ ಕಾರಣಗಿರಿ, ಸಮಿತಿಯ ಕಾರ್ಯಾಧ್ಯಕ್ಷ ಗಣಪತಿ ಭಟ್ ಜಟ್ಟಿಮನೆ, ಶಾಸನ ತಂತ್ರದ ಅಧ್ಯಕ್ಷ ಮೋಹನಭಾಸ್ಕರ ಹೆಗಡೆ ಮುಂತಾದವರು ಉಪಸ್ಥಿತಿತರಿದ್ದರು. ನಾಡಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಶಿಷ್ಯ – ಭಕ್ತರು ಕಾರ್ಯಕ್ರಮಗಳಿಗೆ ಸಾಕ್ಷಿಯಾದರು.

ಇದಕ್ಕೂ ಮುನ್ನ ಬೆಳಗ್ಗೆ 9 ಗಂಟೆಗೆ ಶಿಲಾನ್ಯಾಸದ ಶಿಲೆಯ ಮೆರವಣಿಗೆ, ಗುರುನಿವಾಸ ನಿರ್ಮಾಣದ ಸ್ಥಳದಲ್ಲಿ ಶ್ರೀಗುರುಪಾದುಕಾ ಸ್ತೋತ್ರ ಸಮರ್ಪಣೆ, ಶ್ರೀರಾಮತಾರಕ ಜಪ, ಸಹಸ್ರಾಧಿಕ ಕುಂಕುಮಾರ್ಚನೆ, ಶತಾಧಿಕ ರುದ್ರಪಠಣಪೂರ್ವಕ ಅಭಿಷೇಕ, ಶಾರದಾಷ್ಟಕ ಪಠಣ, ಹಾಗೂ ವಿಶೇಷವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು, ಸಾಗರ, ಕಾಸರಗೋಡು ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಶಿಷ್ಯರಿಂದ ಮುಷ್ಟದ್ರವ್ಯ ಸಮರ್ಪಣೆ ನಡೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: HosanagaraKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaRaghaveshwara shriShimogaShivamoggaNewsShri Ramachandrapura Muttಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿಶ್ರೀ ರಾಮಚಂದ್ರಾಪುರ ಮಠಹೊಸನಗರ
Share265Tweet166Send
Aniruddha Vasishta S R

Aniruddha Vasishta S R

Editor-in-Chief

Previous Post

ವಿದ್ಯಾರ್ಥಿಗಳಿಗೆ ಸ್ಥಳೀಯ ಸಾಧಕರ ಪರಿಚಯ ಅತ್ಯಗತ್ಯ: ಡಾ. ಶ್ರೀನಿವಾಸ್ ಅಭಿಪ್ರಾಯ

Next Post

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

kalpa News

kalpa News

Next Post
40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌’ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

40 ಗ್ರೀನ್ ಹೈಡ್ರೋಜನ್ ಚಾಲಿತ ಹೆವಿ ಡ್ಯೂಟಿ ಟ್ರಕ್‌'ಗಳ ನಿಯೋಜನೆಗೆ ವಿ.ಒ. ಚಿದಂಬರನಾರ್ ಬಂದರು ಪ್ರಾಧಿಕಾರದ ಜೊತೆ ಎಂಓಯುಗೆ ಸಹಿ ಹಾಕಿದ ಟಾಟಾ ಮೋಟಾರ್ಸ್‌

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL