ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ |
ವಿಜಯನಗರ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್.ಪಿ ಅವರು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯ ಮರಬ್ಬಿಹಾಳ್ ಗ್ರಾಮದಲ್ಲಿ ಆ.20ರಂದು ಗ್ರಾಮವಾಸ್ತವ್ಯ ನಡೆಸಿ ಗ್ರಾಮಸ್ಥರ ದೂರು-ದುಮ್ಮಾನ ಆಲಿಸಲಿದ್ದಾರೆ. ಇದಕ್ಕಾಗಿ ಎಲ್ಲ ಸಿದ್ಧತೆಗಳು ಭರದಿಂದ ಸಾಗಿವೆ. ಜಿಲ್ಲಾಧಿಕಾರಿಗಳಿಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಥ್ ನೀಡಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಎನ್. ಮಹೇಶ್ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅನೇಕ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಿದ್ದಾರೆ ಮತ್ತು ಉಳಿದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹರಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಿದ್ದಾರೆ. ಗ್ರಾಮಸ್ಥರು ತಮ್ಮ ದೂರು-ದುಮ್ಮಾನ ಹಾಗೂ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳಿಗೆ ಹೇಳಿಕೊಳ್ಳಲು ಈ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಜ್ಜಾಗಿದ್ದಾರೆ.
ಜಿಲ್ಲಾಧಿಕಾರಿಗಳು ಬನ್ನಿಗೋಳ ಗ್ರಾಮದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದು, ತಾಲೂಕು ಮಟ್ಟದಲ್ಲಿ ಸಹಾಯಕ ಆಯುಕ್ತರು ಹಾಗೂ ತಹಸೀಲ್ದಾರರು ಸಹ ಒಂದೊಂದು ಊರುಗಳನ್ನು ಗುರುತಿಸಿ ಆ ಗ್ರಾಮಗಳಲ್ಲಿ ಗ್ರಾಮವಾಸ್ತವ್ಯ ನಡೆಸುವ ಮೂಲಕ ಜನರ ಸಮಸ್ಯೆಗಳಿಗೆ ದನಿಯಾಗುವ ಕೆಲಸ ಮಾಡಲಿದ್ದಾರೆ.
ವಿವಿಧೆಡೆ ಗ್ರಾಮ ವಾಸ್ತವ್ಯದ ವಿವರ
ಆ.20ರಂದು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಹೋಬಳಿಯ ಮರಬ್ಬಿಹಾಳ್ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಮತ್ತು ಹಗರಿಬೊಮ್ಮನಹಳ್ಳಿ ತಹಶೀಲ್ದಾರರು, ಹೂವಿನಹಡಗಲಿ ತಾಲೂಕಿನ ಹಿರೇಹಡಗಲಿ ಹೋಬಳಿಯ ಹಿರೇಹಡಗಲಿ ಗ್ರಾಮದಲ್ಲಿ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಆಲೂರು ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಹೋಬಳಿಯ ಜಿ.ನಾಗಲಾಪುರ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಹರಪನಹಳ್ಳಿ ತಾಲೂಕಿನ ಕಸಬಾ ಹೋಬಳಿಯ ಅಡಿವಿಹಳ್ಳಿ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕೊಟ್ಟೂರು ತಾಲೂಕಿನ ಕೊಟ್ಟೂರು ಹೋಬಳಿಯ ಕಾಳಾಪುರ ಗ್ರಾಮದಲ್ಲಿ ತಾಲೂಕಿನ ತಹಸೀಲ್ದಾರರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಮ ವ್ಯಾಸ್ತವ್ಯ ಮಾಡಲಿದ್ದಾರೆ.
ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿಗಳು, ತಹಸೀಲ್ದಾರರು ಹಾಗೂ ಅಧಿಕಾರಿಗಳು ಬೆಳಗ್ಗೆ 10ರಿಂದ ಸಂಜೆ 05ರವರೆಗೆ ಜನರ ಅಹವಾಲುಗಳನ್ನು ಆಲಿಸಲಿದ್ದಾರೆ. ನಂತರ ಗ್ರಾಮೀಣ ಪ್ರತಿಭೆ ಹಾಗೂ ಕಲೆಗೆ ಪೆÇ್ರೀತ್ಸಾಹಿಸುವಂತೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.
ಗ್ರಾಮ ವಾಸ್ತವ್ಯದಲ್ಲಿ ಕೈಗೊಳ್ಳಲಾಗುವ ಕ್ರಮಗಳಿವು
ಗ್ರಾಮವಾಸ್ತವ್ಯದ ಸಂದರ್ಭದಲ್ಲಿ ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು, ಪಹಣಿ ಕಾಲಂ 3 ಮತ್ತುಆಕಾರ ಬಂದ್ ತಾಳೆ ಹೊಂದಿರುವ ಬಗ್ಗೆ ಖಚಿತಪಡಿಸಿಕೊಳ್ಳುವುದು. ಎಲ್ಲಾ ಪಹಣಿಗಳಲ್ಲಿಯೂ ಕೂಡ ಕಾಲಂ 3 ಮತ್ತು ಕಾಲಂ 9 ತಾಳೆ ಆಗುತ್ತವೆಯೋ ಅಥವಾ ಇಲ್ಲವೋ ಎಂಬ ಬಗ್ಗೆ ಖಚಿತ ಪಡಿಕೊಳ್ಳುವುದು ಮತ್ತು ಲೋಪಗಳು ಕಂಡುಬಂದಿರುವ ಪ್ರಕರಣಗಳನ್ನು ಗುರುತಿಸಿ ವಿಲೇ ಮಾಡಲು ಆದೇಶ ಹೊರಡಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವುದು.
ಗ್ರಾಮದಲ್ಲಿನ ಪಹಣಿಗಳನ್ನು ಪರಿಶೀಲಿಸಿ ಪೌತಿ ಪ್ರಕರಣಗಳನ್ನು ಗುರುತಿಸಿ ನೈಜ ವಾರಸುದಾರರ ಹೆಸರುಗಳಿಗೆ ಖಾತೆ ಬದಲಾವಣೆ ಮಾಡುವ ಬಗ್ಗೆ ಪೌತಿ ಆದೇಶಗಳನ್ನು ಸಿದ್ದತೆಯಲ್ಲಿಟ್ಟುಕೊಳ್ಳವುದು. ಗ್ರಾಮದ ಎಲ್ಲಾ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ಸೌಲಭ್ಯ ದೊರೆಯುತ್ತಿರುವ ಬಗ್ಗೆ ಖಚಿತಪಡಿಸಿಕೊಂಡು ಪಿಂಚಣಿ ಸೌಲಭ್ಯ ಪಡೆಯದೇ ಇರುವವರಿಂದ ಸಂಬಂದಿಸಿದ ದಾಖಲೆಗಳನ್ನು ಸಂಗ್ರಹಿಸಿ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಜಿಲ್ಲಾಧಿಕಾರಿಗಳ ಸಮಕ್ಷಮ ಆದೇಶ ನೀಡಲುಕ್ರಮ ಕೈಗೊಳ್ಳಲಾಗುವುದು.
Also read: ಗಮನಿಸಿ! ಆ.19ರಂದು ಹಸೂಡಿ, ಹೊಳೆಬೆನವಳ್ಳಿ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ
ಗ್ರಾಮದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಸ್ಮಶಾನ ಭೂಮಿ ಇದೆಯೋ ಅಥವಾ ಇಲ್ಲವೇ ಎಂಬ ಬಗ್ಗೆ ಪರಿಶೀಲಿಸುವುದು. ಒಂದು ವೇಳೆ ಸ್ಮಶಾನಕ್ಕೆ ಜಮೀನು ಅಗತ್ಯವಿದ್ದಲ್ಲಿ ಮೊದಲಿಗೆ ಸರಕಾರಿ ಜಮೀನು ಗುರುತಿಸುವುದು. ಸರಕಾರಿ ಜಮೀನು ಲಭ್ಯವಿಲ್ಲದೇ ಇದ್ದಲ್ಲಿ ಖಾಸಗಿ ಜಮೀನನ್ನು ಗುರುತಿಸಿ ಮಂಜೂರಿಗೆ ಪ್ರಸ್ತಾವನೆ ಸಲ್ಲಿಸಲು ಕ್ರಮಕೈಗೊಳ್ಳುವುದು.
ಗ್ರಾಮದಲ್ಲಿ ಆಶ್ರಯ ಯೋಜನೆ ಅವಶ್ಯಕತೆ ಇದ್ದಲ್ಲಿ ಲಭ್ಯ ಜಮೀನು ಗುರುತಿಸಿ ಕಾಯ್ದಿರಿಸಲು ಕ್ರಮವಹಿಸಿ ಪ್ರಸ್ತಾವನೆ ಸಲ್ಲಿಸುವುದು.
ಗ್ರಾಮದಲ್ಲಿ ಸರಕಾರಿ ಜಮೀನು ಹಾಗೂ ಸಾರ್ವಜನಿಕ ಉದ್ದೇಶಗಳಿಗೆ ಕಾಯ್ದಿರಿಸಲಾಗಿರುವ ಜಮೀನುಗಳು ಅಕ್ರಮವಾಗಿ ಒತ್ತುವರಿಯಾಗಿದ್ದಲ್ಲಿ ಅಂತಹ ಜಮೀನುಗಳನ್ನು ಗುರುತಿಸಿ ತೆರವುಗೊಳಿಸಲು ಕ್ರಮಕೈಗೊಳ್ಳುವುದು.
ಬರ/ಪ್ರವಾಹ ಇದ್ದಲ್ಲಿ ಬರ ಪರಿಸ್ಥಿತಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ಪ್ರತಿ ನಿತ್ಯ ಕುಡಿಯುವ ನೀರಿನ ತೊಂದರೆ ಬಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಸಮಸ್ಯೆ ಇದ್ದಲ್ಲಿ ಟ್ಯಾಂಕರ್ ಮೂಲಕ ಅಥವಾ ಖಾಸಗಿ ಬೋರವೆಲ್ಗಳನ್ನು ಬಾಡಿಗೆ ಆಧಾರದ ಮೇಲೆ ಪಡೆದು ನೀರು ಸರಬರಾಜು ಮಾಡಲು ಕ್ರಮ ವಹಿಸುವುದು, ಪ್ರವಾಹ ಪರಿಸ್ಥಿತಿ ಉದ್ಭವಿಸಿದಲ್ಲಿ ವಿವಿಧ ಹಾನಿಗಳಿಗೀಡಾದ ಸಂತ್ರಸ್ಥರಿಗೆ ಎಸ್.ಡಿ.ಅರ್.ಎಫ್. ಮಾರ್ಗಸೂಚಿಯ ಪ್ರಕಾರ ಪರಿಹಾರ ನೀಡಲು ಬೇಕಾಗುವ ಎಲ್ಲಾ ತರಹದ ದಾಖಲೆಗಳನ್ನು ಗ್ರಾಮ ಮಟ್ಟದಲ್ಲಿ ಮತ್ತು ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ನಿಗದಿತ ಸಮಯದಲ್ಲಿ ಸಂಗ್ರಹಿಸಿ ಮೇಲಾಧಿಕಾರಿಗಳಿಗೆ ಸಲ್ಲಿಸಿ ಪರಿಹಾರ ನೀಡಲು ಕ್ರಮವಹಿಸಬೇಕು ಎಂದು ಅವರು ಹೇಳಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post