ಕಲ್ಪ ಮೀಡಿಯಾ ಹೌಸ್ | ಹೊಸಪೇಟೆ(ವಿಜಯನಗರ) |
ಈ ವರ್ಷ ವಿಜಯನಗರ ಸಾಮ್ರಾಜ್ಯದ ವೈಭವ ಬಿಂಬಿಸುವ ಹಂಪಿ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.
ವಿಜಯನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಕಳೆದೆರಡು ವರ್ಷಗಳಿಂದ ಹಂಪಿ ಉತ್ಸವ ಆಚರಿಸಿರಲಿಲ್ಲ. ಈ ಬಾರಿ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಸ್ಥಳೀಯ ಶಾಸಕರು ಆಗಿರುವ ಪ್ರವಾಸೋದ್ಯಮ ಸಚಿವ ಆನಂದಸಿಂಗ್ ಅವರೊಂದಿಗೆ ಚರ್ಚಿಸಿ ಸೂಕ್ತ ದಿನಾಂಕ ನಿಗದಿಪಡಿಸಿ ಅದ್ಧೂರಿಯಾಗಿ ಆಚರಿಸಲಾಗುವುದು; ಹಂಪಿ ಉತ್ಸವ ಆಚರಣೆಗೆ ಹಣದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ವಿಜಯನಗರ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಡಿಯಲ್ಲಿ 2021 ಅಕ್ಟೋಬರ್ದಿಂದ 2022 ಆಗಸ್ಟ್ 2022ರವರೆಗೆ ಮಳೆಯಿಂದ ಒಟ್ಟು 37,857 ಎಕರೆ ಕೃಷಿ ಬೆಳೆ ಹಾನಿಯಾಗಿದ್ದು ರೂ.22.62 ಕೋಟಿ ಪರಿಹಾರವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಬಿಡುಗಡೆ ಮಾಡಲಾಗಿದೆ ಮಳೆಯಿಂದ 1613 ಮನೆಗಳು ಹಾನಿಯಾಗಿದ್ದು, ರೂ.5.12 ಕೋಟಿ ರೂ.ಪರಿಹಾರ ಫಲಾನುಭವಿಗಳ ಖಾತೆಗೆ ಪರಿಹಾರ ಪಾವತಿಸಲಾಗಿದೆ. 14 ಜನರ ಜೀವಹಾನಿಯಾಗಿದ್ದು 68ಲP್ಷÀ ರೂ.ಪರಿಹಾರ ಪಾವತಿಸಲಾಗಿದೆ ಎಂದು ಅವರು ವಿವರಿಸಿದರು.
ಮರಿಯಮ್ಮನಹಳ್ಳಿಗೆ ಪಾವಗಡ ಸ್ಕೀಂ ಮೂಲಕ ಕುಡಿಯುವ ನೀರು ಪೂರೈಸಲು ನಮ್ಮ ಸರಕಾರ ಬದ್ಧವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ವೈ. ದೇವೇಂದ್ರಪ್ಪ, ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್, ಎಸ್ಪಿ ಡಾ.ಅರುಣ್.ಕೆ. ,ಜಿಪಂ ಸಿಇಒ ಹರ್ಷಲ್ ಭೋರ್ಯ, ಹೊಸಪೇಟೆ ನಗರಸಭೆ ಅಧ್ಯಕ್ಷೆ ಸುಂಕಮ್ಮ, ಅಪರ ಜಿಲ್ಲಾಧಿಕಾರಿ ಮಹೇಶಬಾಬು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post