No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

1951ರಲ್ಲಿ ಶಿವಮೊಗ್ಗ ವ್ಯಾಪ್ತಿಯಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರಗಳಿತ್ತು? ಯಾರೆಲ್ಲಾ ಮೊದಲ ಶಾಸಕರಾಗಿದ್ದರು?

ಅಂದಿನ ಚುನಾವಣೆಯಲ್ಲಿ ಎಷ್ಟು ಮತದಾರರಿದ್ದರು? ಶಿವಮೊಗ್ಗದ ಮೊದಲ ಶಾಸಕರು ಯಾರು? ಎಷ್ಟು ಮತ ಪಡೆದಿದ್ದರು ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 11, 2023
in Special Articles, ಶಿವಮೊಗ್ಗ
0
1951ರಲ್ಲಿ ಶಿವಮೊಗ್ಗ ವ್ಯಾಪ್ತಿಯಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರಗಳಿತ್ತು? ಯಾರೆಲ್ಲಾ ಮೊದಲ ಶಾಸಕರಾಗಿದ್ದರು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

2023ನೆಯ ರಾಜ್ಯ ವಿಧಾನಸಭಾ ಚುನಾವಣೆಗೆ #AssemblyElection ಮತದಾನ ಮುಕ್ತಾಯವಾಗಿದ್ದು, ಮೇ 13ರಂದು ಫಲಿತಾಂಶ ಪ್ರಕಟಗೊಳ್ಳಲಿದೆ.

ಇದರ ನಡುವೆಯೇ ಯಾರು ಎಷ್ಟು ಮತ ಪಡೆಯುತ್ತಾರೆ ಎಂಬುದು ಸೇರಿದಂತೆ ಸೋಲು ಗೆಲುವಿನ ಲೆಕ್ಕಾಚಾರ ಭರ್ಜರಿಯಾಗಿಯೇ ಸಾಗಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ #Shivamogga ಜಿಲ್ಲೆಯಲ್ಲಿ ಮೊಟ್ಟ ಮೊದಲ ಚುನಾವಣೆ ನಡೆದಿದ್ದು ಯಾವಾಗ? ಗೆಲುವು ಸಾಧಿಸಿ, ಅಂದು ಜಿಲ್ಲೆಯಲ್ಲಿ ಎಷ್ಟು ವಿಧಾನಸಭಾ ಕ್ಷೇತ್ರಗಳಿತ್ತು? ಯಾರೆಲ್ಲಾ ಮೊದಲ ಶಾಸಕರಾಗಿದ್ದು ಯಾರು? ಎಷ್ಟು ಮತ ಪಡೆದಿದ್ದರು ಎಂಬ ಕುತೂಹಲಕಾರಿ ಮಾಹಿತಿಯನ್ನು ಕಲ್ಪ ನ್ಯೂಸ್ ಓದುಗರಿಗಾಗಿ ಪ್ರಕಟಿಸುತ್ತಿದ್ದೇವೆ.
ಯಾವಾಗ ನಡೆದಿತ್ತು ಮೊದಲ ಚುನಾವಣೆ?
ಆಗಿನ್ನೂ ಕರ್ನಾಟಕ ರಾಜ್ಯ ಎಂಬುದು ಉದಯವಾಗಿರಲಿಲ್ಲ. ಆಗ ಮೈಸೂರು ರಾಜ್ಯ#MysoreState  ಎಂಬುದಾಗಿತ್ತು. 1951ಕ್ಕೆ ಅನ್ವಯವಾಗುವಂತೆ 27-03-1952ರಂದು ಮೊಟ್ಟ ಮೊದಲ ವಿಧಾನಸಭಾ ಚುನಾವಣೆ ನಡೆದಿತ್ತು.

ಆ ಸಮಯದಲ್ಲಿ ಇಂದಿನ ಶಿವಮೊಗ್ಗದ ವ್ಯಾಪ್ತಿಗೆ ಶಿವಮೊಗ್ಗ, ಭದ್ರಾವತಿ, ಚನ್ನಗಿರಿ, ಹೊನ್ನಾಳಿ, ಸಾಗರ-ಹೊಸನಗರ, ಸೊರಬ-ಶಿಕಾರಿಪುರ, ತೀರ್ಥಹಳ್ಳಿ-ಕೊಪ್ಪ, ಸೇರಿತ್ತು. ಈ ಎಲ್ಲ ಕ್ಷೇತ್ರಗಳಲ್ಲಿ 1951ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಎಷ್ಟು ಮತ ಚಲಾವಣೆಯಾಗಿತ್ತು? ಯಾರು ಗೆದ್ದಿದ್ದರು ಎಂಬ ಮಾಹಿತಿ ಇಲ್ಲಿದೆ.

ಶಿವಮೊಗ್ಗ
1952ರಲ್ಲಿ ಶಿವಮೊಗ್ಗ #Shivamogga ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 40,541 ಮತದಾರರಿದ್ದು, ಅಂದಿನ ಚುನಾವಣೆಯಲ್ಲಿ ಒಟ್ಟು 21,711(ಶೇ.53.55) ಮತ ಚಲಾವಣೆಯಾಗಿತ್ತು.
ಐಎನ್’ಸಿಯಿಂದ ಸ್ಪರ್ಧಿಸಿದ್ದ ಎಸ್.ಆರ್. ನಾಗಪ್ಪ ಶೆಟ್ಟಿ ಅವರು 10,069 ಮತಗಳನ್ನು ಪಡೆದು ಗೆಲುವು ಸಾಧಿಸಿ, ಶಿವಮೊಗ್ಗ ಮೊಟ್ಟ ಮೊದಲ ಶಾಸಕರು ಎಂಬ ಗರಿಯನ್ನು ಮುಡಿಗೇರಿಸಿಕೊಂಡಿದ್ದರು. ಎಸ್’ಪಿ ಯಿಂದ ಸ್ಪರ್ಧಿಸಿದ್ದ ಎಂ.ಸಿ. ಮಹೇಶ್ವರಪ್ಪ ಅವರು 4,203 ಮತಗಳನ್ನು ಪಡೆದಿದ್ದರು. ನಾಗಪ್ಪ ಶೆಟ್ಟಿ ಅವರು 5,866 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಭದ್ರಾವತಿ
1952ರಲ್ಲಿ ಭದ್ರಾವತಿ #Bhadravathi ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 40,674 ಮತದಾರರಿದ್ದು, ಅಂದಿನ ಚುನಾವಣೆಯಲ್ಲಿ 20,203 ಮತಗಳು ಚಲಾವಣೆಯಾಗಿದ್ದವು.

ಐಎನ್’ಸಿಯಿಂದ ಸ್ಪರ್ಧಿಸಿದ್ದ ಬಿ. ಮಾಧವಾಚಾರ್ ಅವರು 10,241 ಮತಗಳನ್ನು ಪಡೆಯುವ ಮೂಲಕ ಕ್ಷೇತ್ರದ ಮೊದಲ ಶಾಸಕರಾದರು. ಎಸ್’ಪಿಯಿಂದ ಸ್ಪರ್ಧಿಸಿದ್ದ ಕೆ.ಎಸ್. ರಾಮಚಂದ್ರ ಶೆಟ್ಟಿ ಅವರು 5119 ಮತಗಳನ್ನು ಪಡೆದಿದ್ದರು. ಮಾಧವಾಚಾರ್ ಅವರ ಗೆಲುವಿನ ಅಂತರ 5122 ಮತಗಳಾಗಿತ್ತು.

ತೀರ್ಥಹಳ್ಳಿ-ಕೊಪ್ಪ
ಇಂದು ಚಿಕ್ಕಮಗಳೂರು #Chikkamagalur ಜಿಲ್ಲೆಗೆ ಸೇರಿರುವ ಕೊಪ್ಪ #Koppa ಅಂದು ತೀರ್ಥಹಳ್ಳಿ #Thirthahalli ವಿಧಾನಸಭಾ ಕ್ಷೇತ್ರದೊಂದಿಗೆ ಸೇರಿಕೊಂಡಿತ್ತು. ಆಗ ಒಟ್ಟು 39,480 ಮತದಾರರಿದ್ದು, ಆ ಚುನಾವಣೆಯಲ್ಲಿ 27,827(ಶೇ.70.48) ಮತಗಳು ಚಲಾವಣೆಯಾಗಿತ್ತು.
ಐಎನ್’ಸಿಯಿಂದ ಸ್ಪರ್ಧಿಸಿದ್ದ ಕಡಿದಾಳ್ ಮಂಜಪ್ಪ ಅವರು 16,570 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಬಿಜೆಎಸ್’ನಿಂದ ಸ್ಪರ್ಧಿಸಿದ್ದ ಕೆ. ರಾಮಕೃಷ್ಣರಾವ್ ಅವರು 7,552 ಮತಗಳನ್ನು ಪಡೆದಿದ್ದರು. ಮಂಜಪ್ಪ ಅವರ ಗೆಲುವಿನ ಅಂತರ 9018 ಮತಗಳಾಗಿತ್ತು.

ಚನ್ನಗಿರಿ
ಇಂದು ದಾವಣಗೆರೆ #Davanagere ಜಿಲ್ಲೆಗೆ ಸೇರಿರುವ ಚನ್ನಗಿರಿ #Channagiri ಅಂದು ಶಿವಮೊಗ್ಗ ವ್ಯಾಪ್ತಿಯಲ್ಲಿತ್ತು. ಆಗ ಕ್ಷೇತ್ರದಲ್ಲಿ ಒಟ್ಟು 42,991 ಮತಗಳಿದ್ದು, 33,727(ಶೇ.78.45) ಮತಗಳು ಚಲಾವಣೆಯಾಗಿದ್ದವು.

ಕೆಎಂಪಿಪಿಯಿಂದ ಸ್ಪರ್ಧಿಸಿದ್ದ ಎಲ್. ಸಿದ್ದಪ್ಪ ಅವರು 17,297 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಐಎನ್’ಸಿಯಿಂದ ಸ್ಪರ್ಧಿಸಿದ್ದ ಕುಂದರ್ ರುದ್ರಪ್ಪ ಅವರು 16,430 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಸಿದ್ದಪ್ಪ ಅವರ ಗೆಲುವಿನ ಅಂತರ ಕೇವಲ 867 ಮತಗಳಾಗಿತ್ತು.
ಹೊನ್ನಾಳಿ
ಇಂದು ದಾವಣಗೆರೆ ಜಿಲ್ಲೆಗೆ ಸೇರಿರುವ ಹೊನ್ನಾಳಿಯೂ #Honnali ಸಹ ಅಂದು ಶಿವಮೊಗ್ಗ ವ್ಯಾಪ್ತಿಯಲ್ಲಿತ್ತು. ಆಗ ಕ್ಷೇತ್ರದಲ್ಲಿ ಒಟ್ಟು 39,175 ಮತಗಳಿದ್ದು, ಅಂದಿನ ಚುನಾವಣೆಯಲ್ಲಿ 29,012(ಶೇ.74.06) ಮತಗಳು ಚಲಾವಣೆಯಾಗಿದ್ದವು.

ಐಎನ್’ಸಿಯಿಂದ ಸ್ಪರ್ಧಿಸಿದ್ದ ಎಚ್.ಎಸ್. ರುದ್ರಪ್ಪ ಅವರು 16,848 ಮತಗಳನ್ನು ಪಡೆದು ಜಯಶಾಲಿಯಾಗಿದ್ದರೆ, ಸ್ವತಂತ್ರವಾಗಿ ಸ್ಪರ್ಧಿಸಿದ್ದ ಪಟ್ಣಶೆಟ್ರ ಮುರಿಗೆಪ್ಪ ಅವರು 12,164 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ರುದ್ರಪ್ಪ ಅವರ ಗೆಲುವಿನ ಅಂತರ 4684 ಮತಗಳಾಗಿತ್ತು.

ಸೊರಬ-ಶಿಕಾರಿಪುರ
ಆಗ ಸೊರಬ-ಶಿಕಾರಿಪುರ #Shikaripura ಕ್ಷೇತ್ರ ಒಟ್ಟು ಎರಡು ಸ್ಥಾನಗಳನ್ನು ಹೊಂದಿತ್ತು. ಈ ಕ್ಷೇತ್ರಕ್ಕೆ ಸಂಬಂಧಿಸಿದ ಮತದಾರರ ಸಂಖ್ಯೆಯ ವಿವರ ಅಷ್ಟೊಂದು ಸ್ಪಷ್ಟವಾಗಿ ಲಭ್ಯವಿಲ್ಲ. ಆದರೆ, ಒಟ್ಟು 74,314 ಮತದಾರರಿದ್ದರು ಎನ್ನಲಾಗಿದೆ.

ಅಂದಿನ ಚುನಾವಣೆಯಲ್ಲಿ ಐಎನ್’ಸಿಯಿಂದ ಸ್ಪರ್ಧಿಸಿದ್ದ ಎಚ್. ಸಿದ್ಧಯ್ಯ ಅವರು 20, 737 ಹಾಗೂ ಇನ್ನೊಂದು ಸ್ಥಾನಕ್ಕೆ ಐಎನ್’ಸಿಯಿಂದ ಸ್ಪರ್ಧಿಸಿದ್ದ ಗಂಗಾ ನಾಯಕ್ ಅವರು 19,519 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು.
ಸಾಗರ-ಹೊಸನಗರ
ಒಟ್ಟು 38,527 ಮತಗಳನ್ನು ಹೊಂದಿದ್ದ ಈ ಕ್ಷೇತ್ರದಲ್ಲಿ ಅಂದಿನ ಚುನಾವಣೆಯಲ್ಲಿ 25,207(ಶೇ.65.43) ಮತ ಚಲಾವಣೆಯಾಗಿತ್ತು.

ಎಸ್’ಪಿಯಿಂದ ಸ್ಪರ್ಧಿಸಿದ್ದ ಎಸ್. ಗೋಪಾಲಗೌಡ ಅವರು 13,722 ಮತಗಳನ್ನು ಪಡೆದು ಗೆಲುವು ಸಾಧಿಸಿ, ಕ್ಷೇತ್ರದ ಮೊದಲ ಶಾಸಕರು ಎನಿಸಿಕೊಂಡರೆ, ಐಎನ್’ಸಿಯಿಂದ ಸ್ಪರ್ಧಿಸಿದ್ದ ಎ.ಆರ್. ಬದ್ರಿ ನಾರಾಯಣ ಅವರು 11,485 ಮತಗಳನ್ನು ಪಡೆದು ಪರಾಭವಗೊಂಡಿದ್ದರು. ಗೆಲುವಿನ ಅಂತರ 2237 ಮತಗಳಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: BhadarvathiBhadravathiChannagiriFirst Election of IndiaFirst Election of ShivamoggaFirst MLA of BhadravathiFirst MLA of ShivamoggaHonnaliLocal NewsMalnad NewsS R Nagappa ShettySagaraShikaripuraShimogaShivamoggaShivamogga NewsSorabaThirthahalliಚನ್ನಗಿರಿಭದ್ರಾವತಿಮೊದಲ ಚುನಾವಣೆವಿಧಾನಸಭಾ ಚುನಾವಣೆಶಿವಮೊಗ್ಗಸೊರಬಹೊನ್ನಾಳಿ
Share209Tweet123Send
Previous Post

ಶಿಕ್ಷಣದಲ್ಲಿ ಮಾತೃಭಾಷೆಯ ಬಳಕೆಗೆ ಹೆಚ್ಚಿನ ಮಹತ್ವ ನೀಡಲು ಅಮಿತ್ ಶಾರಿಗೆ ರವೀಂದ್ರನಾಥ ಟ್ಯಾಗೋರ್‌ರ ತತ್ವಗಳೇ ಸ್ಪೂರ್ತಿ

Next Post

ಕಿರ್ಲೋಸ್ಕರ್ ಫೆರಸ್ ಕಾರ್ಮಿಕ ಸಂಘದ ರಜತ ಮಹೋತ್ಸವ ಹಿನ್ನೆಲೆ: ವಿವಿಧ ಸ್ಪರ್ಧೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಿರ್ಲೋಸ್ಕರ್ ಫೆರಸ್ ಕಾರ್ಮಿಕ ಸಂಘದ ರಜತ ಮಹೋತ್ಸವ ಹಿನ್ನೆಲೆ: ವಿವಿಧ ಸ್ಪರ್ಧೆ

ಕಿರ್ಲೋಸ್ಕರ್ ಫೆರಸ್ ಕಾರ್ಮಿಕ ಸಂಘದ ರಜತ ಮಹೋತ್ಸವ ಹಿನ್ನೆಲೆ: ವಿವಿಧ ಸ್ಪರ್ಧೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL