No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Extension of Special Train Services to Manage Summer Rush

by ಕಲ್ಪ ನ್ಯೂಸ್
April 7, 2026
0

Kalpa Media House  |  Hubballi | To manage the extra rush of passengers during the summer season, South Western Railway...

Read moreDetails
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
  • Advertise With Us
  • Grievances
  • About Us
  • Contact Us
Tuesday, April 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಇನ್ನೆಷ್ಟು ವರ್ಷ ಆಹಾರ ಪದಾರ್ಥಕ್ಕೆ ‘ಐಟಂ’ ಎನ್ನುತ್ತೀರಾ? ರಾಘವೇಶ್ವರ ಶ್ರೀ ಕಳವಳಕಾರಿ ಪ್ರಶ್ನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 14, 2025
in ಉತ್ತರ ಕನ್ನಡ
0
ಇನ್ನೆಷ್ಟು ವರ್ಷ ಆಹಾರ ಪದಾರ್ಥಕ್ಕೆ ‘ಐಟಂ’ ಎನ್ನುತ್ತೀರಾ? ರಾಘವೇಶ್ವರ ಶ್ರೀ ಕಳವಳಕಾರಿ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಭಾರತ ಬಿಟ್ಟು ಬ್ರಿಟಿಷರು ತೊಲಗಿ 75 ವರ್ಷ ಕಳೆದರೂ ಇಂದಿಗೂ ಲಿಸ್ಟ್, ಐಟಂ ಎಂಬ ಪದಗಳೇ ಇಂದು ರಾರಾಜಿಸುತ್ತಿವೆ. ಊಟದಲ್ಲಿ ವೈವಿಧ್ಯತೆ ಹೇಗೆ ಮುಖ್ಯವೋ ಐಟಂ ಎಂಬ ಬದಲು ವೈವಿಧ್ಯತೆಯನ್ನು ಬಿಂಬಿಸುವ ‘ಬಗೆ’ ಎನ್ನುವ ಸರಳ ಸುಂದರ ಪದ ಬಳಸೋಣ -ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ, ಭಾಷಾ ಶುದ್ಧೀಕರಣ ಎಲ್ಲರ ಆದ್ಯತೆಯಾಗಬೇಕು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿ ಆಶಿಸಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 35ನೇ ದಿನವಾದ ಬುಧವಾರ ಹೊನ್ನಾವರ ಮಂಡಲದ ಹೊಸಾಕುಳಿ, ಕರ್ಕಿ, ಕಡ್ಲೆ, ಹೊನ್ನಾವರ ಮತ್ತು ಮುಗ್ವಾ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು.

ಹಿಂದಿಯಲ್ಲಿ ಕೂಡಾ ಮೊಘಲರ ಆಳ್ವಿಕೆ ಕಾಲದಲ್ಲಿ ಪರ್ಶಿಯನ್ ಪದಗಳು ಸೇರಿಕೊಂಡಿದೆ. ಇದು ಎಲ್ಲ ಭಾರತೀಯ ಭಾಷೆಗಳ ಸ್ಥಿತಿ. ಆದ್ದರಿಂದ ದಾಸ್ಯಕ್ಕೆ ಜೋತುಬೀಳದೇ ಭಾಷೆ ಶುದ್ಧವಾಗಿಟ್ಟುಕೊಳ್ಳುವ ದೃಢಸಂಕಲ್ಪ ತೊಡೋಣ ಎಂದು ಕರೆ ನೀಡಿದರು.

ಬ್ರಿಟನ್‍ಗೆ ತೀರಾ ಸನಿಹದಲ್ಲಿರುವ ಫ್ರಾನ್ಸ್‍ನಲ್ಲೂ ಇಂಗ್ಲಿಷ್ ಬಳಕೆ ಸೀಮಿತ. ಅಲ್ಲಿ ಶುದ್ಧ ಫ್ರೆಂಚ್ ಭಾಷೆಯನ್ನೇ ಬಳಸಲಾಗುತ್ತದೆ. ಇಲ್ಲಿ ಫ್ರೆಂಚ್‍ಗೆ ಯಾವುದೇ ಪದ ಸೇರಿಸಬೇಕಾದರೆ, ಅದಕ್ಕೆ ಪದಮಂಡಲದ ಅನುಮೋದನೆ ಬೇಕು. ಆದರೆ ನಮ್ಮ ಭಾಷೆ ಮಾತ್ರ ಬೇಲಿ ಇಲ್ಲದ ತೋಟದಂತಾಗವೆ. ಆದ್ದರಿಂದಲೇ ಕನ್ನಡದಲ್ಲಿ ಇಂಗ್ಲಿಷ್, ಪರ್ಶಿಯನ್, ಫೋರ್ಚ್‍ಗೀಸ್, ಉರ್ದು ಪದಗಳು ಹೇರಳವಾಗಿ ಸೇರಿಕೊಂಡಿವೆ. ಮನೆಗೆ ಬಾಗಿಲು ಹೇಗೆ ಅಗತ್ಯವೋ ಭಾಷೆ ಭದ್ರವಾಗಿರಬೇಕಾದರೆ ನಾಲಿಗೆಗೂ ಬಾಗಿಲು ಬೇಕು ಎಂದು ಮಾರ್ಮಿಕವಾಗಿ ನುಡಿದರು.

ಪಾಶ್ಚಾತ್ಯ ಪ್ರಭಾವದಿಂದ ರುಚಿಕರ ಹಾಗೂ ಆರೋಗ್ಯಕರ ತಿಂಡಿ ತಿನಸುಗಳು ಮರೆತುಹೋಗಿವೆ. ಅಂತೆಯೇ ಭಾಷೆ ಕೂಡಾ ಕಲಬೆರಕೆಯಾಗಿದೆ. ಸರಿಯಾಗಿ ಕನ್ನಡ ಮಾತನಾಡಲು ಅಗದ ಸ್ಥಿತಿ ನಿರ್ಮಾಣವಾಗಿದೆ. ನಮ್ಮ ಭಾಷೆಯಲ್ಲೂ ಪರಕೀಯಯತೆ ನುಸುಳಿರುವುದು ಆತ್ಮಾಭಿಮಾನದ ಕೊರತೆಯನ್ನು ಸೂಚಿಸುತ್ತದೆ. ಇದು ಮರ್ಯಾದೆಗೇಡು. ಜಪಾನ್, ರಷ್ಯಾ, ಜರ್ಮನಿಯಂಥ ಮುಂದುವರಿದ ದೇಶಗಳನ್ನು ನೋಡಿದರೂ ಸ್ವಭಾಷೆ ಬಗ್ಗೆ ಅಭಿಮಾನವಿದೆ. ಆದರೆ ನಮ್ಮಲ್ಲಿ ಸ್ವಭಾಷೆ ಬಗ್ಗೆ ತಾತ್ಸಾರ ಸಲ್ಲದು ಎಂದು ಹೇಳಿದರು.

ದಿನಕ್ಕೊಂದು ಆಂಗ್ಲ ಪದ ತ್ಯಜಿಸುವ ಅಭಿಯಾನದಲ್ಲಿ ಲಿಸ್ಟ್ ಪದದ ಬದಲಾಗಿ ಕನ್ನಡದ ಯಾದಿ, ಪಟ್ಟಿ, ಅನುಕ್ರಮಣಿಕೆ, ಸೂಚಿ, ಕೋಷ್ಟಕ ಪದಗಳ ಬಳಕೆಯನ್ನು ಚಾಲ್ತಿಗೆ ತರುವಂತೆ ಕರೆ ನೀಡಿದರು.

ಭಾರತ ಬಿಟ್ಟು ಬ್ರಿಟಿಷರು ತೊಲಗಿ 75 ವರ್ಷ ಕಳೆದರೂ ಇಂದಿಗೂ ಲಿಸ್ಟ್, ಐಟಂ ಎಂಬ ಪದಗಳೇ ಇಂದು ರಾರಾಜಿಸುತ್ತಿವೆ. ಊಟದಲ್ಲಿ ವೈವಿಧ್ಯತೆ ಹೇಗೆ ಮುಖ್ಯವೋ ಐಟಂ ಎಂಬ ಬದಲು ವೈವಿಧ್ಯತೆಯನ್ನು ಬಿಂಬಿಸುವ ‘ಬಗೆ’ ಎನ್ನುವ ಸರಳ ಸುಂದರ ಪದ ಬಳಸೋಣ ಎಂದರು. ಭೋಜನದಲ್ಲಿ ಉಪ್ಪು, ಖಾರ, ಹುಳಿ, ಸಿಹಿ, ಕಹಿ, ಒಗರು ಹೀಗೆ ಗೃಹಸ್ಥರಿಗೆ ಷಡ್ರಸೋಪೇತ ಖಾದ್ಯಗಳ ವೈವಿಧ್ಯಗಳು ಬೇಕು. ಆದ್ದರಿಂದ ಐಟಂ ಎಂಬ ಬದಲು ಬಗೆ ಎಂಬ ಪದ ಬಳಸಿದರೆ ಇದು ವೈವಿಧ್ಯವನ್ನು ಸೂಚಿಸುತ್ತದೆ ಎಂದು ವಿಶ್ಲೇಷಿಸಿದರು.ನವರಾತ್ರಿ ನಮಸ್ಯ
ನವರಾತ್ರಿ ನಮಸ್ಯ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಲೋಕಾರ್ಪಣೆ ಮಾಡಿದ ಶ್ರೀಗಳು, ಸುಮಾರು 15 ದಿನಗಳ ಭವ್ಯ ಕಾರ್ಯಕ್ರಮ ನವರಾತ್ರ ನಮಸ್ಯ ಹೆಸರಿನಲ್ಲಿ ಸಾಗರದಲ್ಲಿ ನಡೆಯುತ್ತಿದೆ. ಇಡೀ ಸಾಗರ ಪ್ರಾಂತ್ಯದಲ್ಲಿ ಈ ಕಾರ್ಯಕ್ರಮ ಸಂಚಲನ ಮೂಡಿದೆ. ಮಾತೃಸಂಘಟನೆ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಇಡೀ ಪ್ರಾಂತ್ಯಕ್ಕೆ ಶಕ್ತಿಸ್ವರೂಪಿಣಿಯಾದ ರಾಜರಾಜೇಶ್ವರಿ ಚೈತನ್ಯ ತುಂಬಲಿ ಎಂದು ಆಶಿಸಿದರು.

ಸಂಘಟನೆಯ ಮೂಲಕ ವೈಯಕ್ತಿಕ ಹಾಗೂ ಸಾಮೂಹಿಕವಾಗಿ ಸಾಕಷ್ಟು ಪ್ರಯೋಜನಗಳಾಗಿವೆ. ಶ್ರೀಮಠದ ಶಿಷ್ಯರು ಇಂದು ದೊಡ್ಡ ಸಮಷ್ಟಿಯಾಗಿದ್ದೀರಿ. ಮಳೆ ಬಿಂದುಗಳು ಭೂಮಿಯಲ್ಲಿ ಒಂದಾಗುವಂತೆ ಮಠದಲ್ಲಿ ಶಿಷ್ಯರು ಒಗ್ಗೂಡುತ್ತಿರುವುದು ಸಂತಸದ ಸಂಗತಿ ಎಂದು ಹೇಳಿದರು. ಹೆಚ್ಚು ಹೆಚ್ಚು ಸೇವೆಯನ್ನು ಒಳ್ಳೆಯ ರೀತಿಯಿಂದ ಮಾಡುವಂತಾಗಲಿ; ಹಿಂದೆ ಇದ್ದ ಪದಾಧಿಕಾರಿಗಳು ಹೊಸ ಕಾರ್ಯಕ್ಕೆ ಅಣಿಯಾಗಬೇಕು ಎಂದು ಆಶಿಸಿದರು.

ಶಾಸನತಂತ್ರ ಅಧ್ಯಕ್ಷ ಮೋಹನ ಭಾಸ್ಕರ ಹೆಗಡೆ, ಕಾರ್ಯದರ್ಶಿ ಕೆ.ಪಿ.ಎಡಪ್ಪಾಡಿ, ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಾಪ್ಪು, ಧರ್ಮಭಾರತಿ ಪ್ರಧಾನ ರಮೇಶ್ ಹೆಗಡೆ ಗುಂಡೂಮನೆ, ಸಾಗರ ಮಂಡಲ ಅಧ್ಯಕ್ಷ ಮುರಳಿ ಗೀಜಗಾರ್, ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ ಹೆಗಡೆ, ವಿತ್ತಾಧ್ಯಕ್ಷ ಗಣೇಶ್ ಜೆ.ಎಲ್, ವಿವಿವಿ ಆಡಳಿತಾಧಿಕಾರಿ ಡಾ.ಟಿ.ಜೆ.ಪ್ರಸನ್ನಕುಮಾರ್, ಹೊನ್ನಾವರ ಮಂಡಲದ ನಿಕಟಪೂರ್ವ ಅಧ್ಯಕ್ಷ ಆರ್.ಜಿ.ಹೆಗಡೆ, ನೂತನ ಅಧ್ಯಕ್ಷ ಪರಮೇಶ್ವರ ನಾರಾಯಣ ಭಟ್, ಕಾರ್ಯದರ್ಶಿ ಕೃಷ್ಣ ಲಕ್ಷ್ಮೀನಾರಾಯಣ ಹೆಗಡೆ ಚಿಟ್ಟಾಣಿ, ಎಂಜಿನಿಯರ್ ವಿಷ್ಣು ಮತ್ತಿತರರು ಉಪಸ್ಥಿತರಿದ್ದರು. ಇಡೀ ವಿವಿವಿ ಕ್ಯಾಂಪಸ್‍ನಲ್ಲಿ ಸೌರದೀಪ ಬೆಳಗುವ ಅಶೋಕಲೋಕ ಪ್ರಾಂಗಣದೀಪ ಯೋಜನೆಗೆ ಚಾಲನೆ ನೀಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

                                               

Tags: GokarnaKannada News WebsiteLatest News KannadaRaghaveshwara Bharati Swamijiಕನ್ನಡಗೋಕರ್ಣಮೊಘಲರುರಾಘವೇಶ್ವರ ಶ್ರೀಶಂಕರಾಚಾರ್ಯಶ್ರೀ ರಾಘವೇಶ್ವರ ಭಾರತೀಮಹಾಸ್ವಾಮೀಜಿಸ್ವಭಾಷಾ ಚಾತುಮಾಸ್ಯ ವ್ರತಹಿಂದಿ
Share196Tweet123Send
Previous Post

ಮುಂಜಾನೆ ಸುವಿಚಾರ | ಸ್ವಾತಂತ್ರವಿರಲಿ, ಸ್ವೇಚ್ಛಾಚಾರದ ಮಾಯೆ ಕವಿಯದಿರಲಿ

Next Post

ದರ್ಶನ್, ಪವಿತ್ರಾ ಸೇರಿ 7 ಜನರ ಜಾಮೀನು ರದ್ದು | ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೆಣದ ಬೆನ್ಹತ್ತಿದ್ದ ತನಿಖೆ, ನಿಂತಿದ್ದು ದರ್ಶನ್ ಬಳಿಗೆ | ಸಿಡಿಆರ್ ನೀಡಿತ್ತು ಆರೋಪಿ ನಟನ ಸುಳಿವು

ದರ್ಶನ್, ಪವಿತ್ರಾ ಸೇರಿ 7 ಜನರ ಜಾಮೀನು ರದ್ದು | ವಿಐಪಿ ಟ್ರೀಟ್‌ಮೆಂಟ್ ಕೊಟ್ಟರೆ ಹುಷಾರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

ಯುವಕರಲ್ಲಿ ಉದ್ಯಮಶೀಲತಾ ಮನೋಭಾವ ಬೆಳೆಸುವುದು ಅತ್ಯಗತ್ಯ: ಆಶಿಶ್ ತ್ರಿಪಾಠಿ

April 7, 2026
ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ

April 7, 2026
ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

ಪರಿಸರ ಪ್ರೇಮಿ ಉದ್ಯಮಿ ಡಾ.  ಬಿ ಎಂ ಫಾರೂಕ್ ಗೆ ಬೆಂಗಳೂರು ವಿವಿ ಗೌರವ ಡಾಕ್ಟರೇಟ್

April 7, 2026
ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

ಮೈಸೂರು ತಾಳಗುಪ್ಪ ರೈಲಿಗೆ ಇನ್ಮುಂದೆ LHB ಕೋಚ್ ಅಳವಡಿಕೆ | ಹೇಗಿರತ್ತೆ ಬೋಗಿ?

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL