ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಸ್ವಾಮೀಜಿ Dr. Shivamurthy Swamiji ಅವರನ್ನು ಪೊಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ADGP Alok Kumar ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶ್ರೀಗಳನ್ನು ಬಂಧಿಸಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬಂದಿವೆ. ಒಂದು ವೇಳೆ ಅವರ ಬಂಧನವಾಗಿದ್ದರೆ ನನಗೆ ಇಲಾಖಾ ಮಾಹಿತಿ ಬರುತ್ತಿತ್ತು. ಆದರೆ, ಈವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಅಲ್ಲದೇ, ಪ್ರಕರಣದ ತನಿಖೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಯಾವುದೇ ಮಾಹಿತಿ ನೀಡುವಂತಿಲ್ಲ ಎಂದಿದ್ದಾರೆ.
ಇನ್ನು, ಪ್ರಕರಣದ ತನಿಖೆ ವಿಚಾರದಲ್ಲಿ ಯಾರದ್ದು, ಒತ್ತಡ ಬಂದಿಲ್ಲ. ಪೋಕ್ಸೋ ಪ್ರಕರಣದ ತನಿಖೆ ಯಾವ ರೀತಿಯಲ್ಲಿ ನಡೆಯಬೇಕೋ ಅದೇ ರೀತಿಯಲ್ಲಿ ನಡೆಯುತ್ತಿದೆ ಎಂದಿದ್ದಾರೆ.
Also read: ಮಠದ ಒಳ ಜಗಳದಿಂದ ಮುರುಘಾ ಶ್ರೀಗಳ ಮೇಲೆ ಆರೋಪ : ಸಚಿವ ಉಮೇಶ್ ಕತ್ತಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post