ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಭಾರತದಲ್ಲಿ ವಕ್ಫ್ #Waqf ಕಾನೂನು ಮಾಡಿದ್ದೇ ತಪ್ಪು. ಮೊದಲಿದನ್ನು ತೆಗೆದು ಹಾಕುವುದೇ ಸೂಕ್ತ” ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ #Pralhad Joshi ಹೇಳಿದರು.
ಧಾರವಾಡದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ನೆಹರು ಕಾಲದಲ್ಲಿ ಕಾಂಗ್ರೆಸ್ ಅದೇಕೆ ವಕ್ಫ್ ಕಾನೂನು ಮಾಡಿತೋ? ಗೊತ್ತಿಲ್ಲ. ಆದರೆ, 2013ರಲ್ಲಿ ವಕ್ಫ್ ಗೆ ಮತ್ತೆ ಅಪರಿಮಿತ ಅಧಿಕಾರ ಕೊಟ್ಟಿದ್ದೇಕೆ? ಎಂದು ಆಕ್ಷೇಪಿಸಿದರು.
ದೇಶದಲ್ಲಿ ವಕ್ಫ್ ಕಾನೂನು ಮಾಡಿದ್ದೇ ಮೊದಲ ತಪ್ಪು. ಅಥದ್ದರಲ್ಲಿ ಸುಪ್ರೀಂ ಕೋರ್ಟ್ ಸಹ ಪ್ರಶ್ನಿಸದಂತಹ ಪ್ರಶ್ನಾತೀತ ಅಧಿಕಾರವೇ? ಎಂದು ಪ್ರಶ್ನಿಸಿದ ಪ್ರಲ್ಹಾದ ಜೋಶಿ, ಮೊದಲು ಇದನ್ನು ತೆಗೆದು ಹಾಕಿದರೆ ಎಲ್ಲಾ ಸರಿ ಹೋಗುತ್ತದೆ ಎಂದು ಹೇಳಿದರು.
Also read: 900 Days and Counting: Minister NS Boseraju Demands Urgent Action on AIIMS for Raichur
ವಕ್ಫ್ ಕಾನೂನು ತಿದ್ದುಪಡಿ ಅಗತ್ಯ: ಪ್ರಸ್ತುತ ಬೆಳವಣಿಗೆ ನೋಡಿದರೆ ಕಡೇ ಪಕ್ಷ ವಕ್ಫ್ ಕಾನೂನು ತಿದ್ದುಪಡಿ ತರುವ ಅವಶ್ಯಕತೆಯಿದೆ. ಅಲ್ಲಾನ ನೆಪದಲ್ಲಿ ವಕ್ಫ್ ಮೂಲಕ ಭೂ ಕಬಳಿಸುವವರಿಗೆ ಕಡಿವಾಣ ಹಾಕಬೇಕಿದೆ ಎಂದು ಜೋಶಿ ಹೇಳಿದರು.
ಜಗತ್ತಿನಲ್ಲೇ ಇಲ್ಲ ಇಂಥ ವಕ್ಫ್ ಕಾನೂನು: ದೇಶದಲ್ಲಿ ವಕ್ಫ್ ಗೆ ಪರಿಮಿತಿಯೇ ಇಲ್ಲದಾಗಿದೆ. ಜಗತ್ತಿನ ಯಾವ ದೇಶದಲ್ಲೂ ಇಂಥ ವಕ್ಫ್ ಕಾನೂನು ಇಲ್ಲ. ಹಿಂದೂಗಳು, ರೈತರು ಎಚ್ಚೆತ್ತುಕೊಳ್ಳಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಕರೆ ನೀಡಿದರು.
ನಾವಿರುವ ಮನೆ, ನಿಂತ ನೆಲವೂ ತನ್ನದೇ ಎನ್ನಬಹುದು ವಕ್ಫ್: ಮುಂದೊಂದು ದಿನ ನಾವಿರುವ ಮನೆ, ನಿಂತ ನೆಲವನ್ನೇ ವಕ್ಫ್ ತನ್ನ ಆಸ್ತಿ ಎಂದರೂ ಅಚ್ಚರಿಯಿಲ್ಲ. ಅಷ್ಟೊಂದು ಅಪರಿಮಿತ ಅಧಿಕಾರ ಕೊಟ್ಟು ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಕಾಂಗ್ರೆಸ್. ಯಾವುದೇ ಕಾರಣಕ್ಕೂ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post