ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಹೇಳಿಕೆಗಳನ್ನು ನೀಡಲು, ತೀರ್ಮಾನಗಳನ್ನು ಕೊಡಲು ವಿರೋಧ ಪಕ್ಷದವವರೇನು ನ್ಯಾಯಾಧೀಶರೇ ಅಥವಾ ಪೊಲೀಸರೇ, ಪ್ರಕರಣವನ್ನು ಈಗಾಗಲೇ ತನಿಖೆಗೊಪ್ಪಿಸಲಾಗಿದ್ದು, ಸತ್ಯಾಸತ್ಯತೆ ಹೊರಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Chief Minister Basavaraja Bommai ಹೇಳಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕರು ಈಶ್ವರಪ್ಪ Eshwarappa ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ, ಕಾಂಗ್ರೆಸ್ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಕೆ ಜೆ ಜಾರ್ಜ್ ರಾಜೀನಾಮೆ ನೀಡಿದ ನಂತರ ಅವರ ಬಂಧನವಾಗಿತ್ತೇ, ಆಗ ಬಿಜೆಪಿ ನಾಯಕರು ಜಾರ್ಜ್ ಅವರ ಬಂಧನಕ್ಕೆ ಆಗ್ರಹಿಸಿರಲಿಲ್ಲ ಎಂದು ಹೇಳಿದರು.
ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಸ್ವಯಂಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ, ಶೀಘ್ರದಲ್ಲಿಯೇ ಅವರು ಆರೋಪಗಳಿಂದ ಮುಕ್ತವಾಗುತ್ತಾರೆ. ಈ ವಿಷಯದಲ್ಲಿ ಬಹಳ ಸ್ಪಷ್ಟವಾಗಿದ್ದಾರೆ. ಇಂದು ಸಂಜೆ ಸಚಿವ ಸ್ಥಾನಕ್ಕೆ ಕೆ ಎಸ್ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ. ನಿನ್ನೆ ರಾತ್ರಿ ದೂರವಾಣಿ ಮೂಲಕ ಅವರಲ್ಲಿ ಮಾತನಾಡಿದ್ದೇನೆ, ಎಲ್ಲಾ ಆಯಾಮಗಳಿಂದ ಪ್ರಕರಣದ ತನಿಖೆ ಶೀಘ್ರವೇ ಮಾಡಿ ಎಂದು ಹೇಳಿದ್ದಾರೆ, ಆದಷ್ಟು ಬೇಗ ಅವರು ಆರೋಪಗಳಿಂದ ಮುಕ್ತರಾಗುತ್ತಾರೆ ಎಂಬ ವಿಶ್ವಾಸವಿದೆ ಎಂದರು.
Also read: ಶಿವಮೊಗ್ಗದ ಮಹೇಶ್ ಪಿಯು ಕಾಲೇಜಿನಲ್ಲಿ 1-2 ಪಿಯುಸಿ ದಾಖಲಾತಿ ಆರಂಭ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post