ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದಲ್ಲಿ #South Western Railway Hubli Division ಆಯೋಜಿಸಲಾಗಿದ್ದ ಅಖಿಲ ಭಾರತ ಪಿಂಚಣಿ ಅದಾಲತ್ 2025 #Pension Adalat ಯಶಸ್ವಿಯಾಯಿತು.
ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಆರ್. ಪ್ರಸಾದ್ ಇಚಂಗಿಮಠ ಮಾತನಾಡಿ, ರೈಲ್ವೆಯ ಅಭಿವೃದ್ಧಿಯಲ್ಲಿ ನಿವೃತ್ತ ನೌಕರರು ವಹಿಸಿರುವ ಮಹತ್ವದ ಪಾತ್ರವನ್ನು ಸ್ಮರಿಸಿ, ಪಿಂಚಣಿದಾರರ ಕಲ್ಯಾಣಕ್ಕೆ ರೈಲ್ವೆ ಸದಾ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದರು.
ಪಿಂಚಣಿದಾರರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಉದ್ದೇಶದಿಂದ ಈ ಪಿಂಚಣಿ ಅದಾಲತ್ -2025 ಅನ್ನು ನಡೆಸಲಾಗಿದ್ದು, ಸೇವಾ ದಾಖಲೆಗಳಲ್ಲಿ ಉಂಟಾದ ವ್ಯತ್ಯಾಸಗಳು, ಪಿಂಚಣಿ ಪಾವತಿ ಆದೇಶಗಳು, ಸೆಟಲ್ಮೆಂಟ್ ಶೀಟ್’ಗಳು ಹಾಗೂ ಪಿಂಚಣಿ ಹೇಳಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಅದಾಲತನಲ್ಲಿ ಸೂಕ್ತವಾಗಿ ಪರಿಶೀಲಿಸಿ ಪರಿಹರಿಸಲಾಯಿತು. ಅಲ್ಲದೆ, ಕುಟುಂಬ ಪಿಂಚಣಿ ಸಂಬಂಧಿತ ಸಮಸ್ಯೆಗಳನ್ನೂ ಸೂಕ್ತ ದಾಖಲೆಗಳ ಮೂಲಕ ಪರಿಹರಿಸಲಾಗಿದೆ ಎಂದರು.
ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕರಾದ ಡಾ. ಅನುಪ್ ಮಾತನಾಡಿ, ಕುಟುಂಬ ಪಿಂಚಣಿಯೂ ಸೇರಿದಂತೆ ವಿವಿಧ ಪಿಂಚಣಿ ಸಂಬಂಧಿತ ಸಮಸ್ಯೆಗಳಿಗೆ ಪರಿಹಾರ ಒದಗಿಸುವಲ್ಲಿ ಲೆಕ್ಕಪತ್ರ ವಿಭಾಗ ಕೈಗೊಂಡಿರುವ ವಿವಿಧ ಕ್ರಮಗಳನ್ನು ವಿವರಿಸಿದರು. ಸಿಬ್ಬಂದಿ ಹಾಗೂ ಲೆಕ್ಕಪತ್ರ ವಿಭಾಗಗಳ ಸಮನ್ವಯ ಕಾರ್ಯಕ್ಷಮತೆಯಿಂದ ಅದಾಲತ್’ನಲ್ಲಿ ಬಾಕಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದಾಗಿ ಅವರು ಹೇಳಿದರು.
ಪಿಂಚಣಿದಾರರಿಗೆ ಮೆಡಿಕಲ್ ಮರುಪಾವತಿ ಸ್ವೀಕರಿಸುವ ಸಂದರ್ಭದಲ್ಲಿ ಯಾವುದೇ ಬ್ಯಾಂಕಿಂಗ್ ಸಂಬಂಧಿತ ತೊಂದರೆಗಳು ಎದುರಾದಲ್ಲಿ, ರೈಲ್ವೆ ಇಲಾಖೆ ತಕ್ಷಣ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಪಿಂಚಣಿದಾರರು, ಪಿಂಚಣಿದಾರರ ಪ್ರತಿನಿಧಿಗಳು, ವಿವಿಧ ಸಂಘಟನೆಗಳ ಸದಸ್ಯರು, ಸಿಬ್ಬಂದಿ ಹಾಗೂ ಲೆಕ್ಕಪತ್ರ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
ಈ ಪಿಂಚಣಿ ಅದಾಲತ್’ಗೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಷ್ಣು ಗೌಡ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ/ಸಮನ್ವಯಕ/ಮೈಸೂರು, ಹರ್ಷವರ್ಧನ, ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ/ಮೈಸೂರು ಹಾಗೂ ಪೃಥ್ವಿ ಎಸ್. ಹುಲ್ಲತ್ತಿ, ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ/ಮೈಸೂರು ಅವರು ಭಾಗವಹಿಸಿ, ಪಿಂಚಣಿದಾರರ ಅಹವಾಲುಗಳಿಗೆ ಪರಿಹಾರ ಒದಗಿಸಿದರು.
ಒಟ್ಟು 47 ಪಿಂಚಣಿದಾರರು ಈ ಪಿಂಚಣಿ ಅದಾಲತ್’ನಲ್ಲಿ ಭಾಗವಹಿಸಿದ್ದರು. ಅವರಲ್ಲಿ ಅದಾಲತ್ ದಿನದಂದು ಪ್ರತಿನಿಧಿಸಲಾದ ಎರಡು ಹೊಸ ಪ್ರಕರಣಗಳು ಸೆರಿದಂತೆ ಒಟ್ಟು 32 ಪ್ರಕರಣಗಳನ್ನು ವಿಚಾರಣೆಗೆ ತೆಗೆದುಕೊಳ್ಳಲಾಯಿತು. ಈ ಪೈಕಿ 16 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದ್ದು ಉಳಿದ ಪ್ರಕರಣಗಳನ್ನು ಪರಿಶೀಲಿಸಲಾಗುತ್ತಿದ್ದು, ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ರೈಲ್ವೆ ಪಿಂಚಣಿದಾರರ ಕಲ್ಯಾಣ ಸಂಘ ಮೈಸೂರು, ಇದರ ಅಧ್ಯಕ್ಷರಾದ ಪಾರ್ಥಸಾರಥಿ ಅವರು, ಪಿಂಚಣಿದಾರರ ಅಹವಾಲುಗಳನ್ನು ಮೈಸೂರು ವಿಭಾಗವು ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಪರಿಹರಿಸುತ್ತಿರುವುದಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಉಳಿದಿರುವ ಎಲ್ಲ ಅಹವಾಲುಗಳನ್ನು ಶೀಘ್ರದಲ್ಲೇ ಪರಿಹರಿಸುವುದಾಗಿ ಭರವಸೆ ನೀಡಿದರು.
ರೈಲ್ವೆ ಪಿಂಚಣಿದಾರರ ಕಲ್ಯಾಣ ಸಂಘ, ಮೈಸೂರು ಇದರ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಸ್ವಾಮಿನಾಥನ್ ಹಾಗೂ ಸಂಘದ ಇತರ ಸದಸ್ಯರು ಕೂಡ ಪಿಂಚಣಿ ಅದಾಲತ್ನಲ್ಲಿ ಉಪಸ್ಥಿತರಿದ್ದರು.
ಪಿಂಚಣಿದಾರರು ಅದಾಲತ್’ನಲ್ಲಿ ತಮ್ಮ ಅಹವಾಲುಗಳನ್ನು ಮಂಡಿಸಿದ್ದು, ರೈಲ್ವೆ ಅಧಿಕಾರಿಗಳು ಅವುಗಳಿಗೆ ಸಮರ್ಪಕವಾಗಿ ಸ್ಪಷ್ಟನೆ ನೀಡಿದ್ದು, ಸಮಸ್ಯೆಗಳಿಗೆ ಪರಿಹಾರ ಒದಗಿಸಿದರು.
ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗವು ಇಂದು ಅಖಿಲ ಭಾರತ ಪಿಂಚಣಿ ಅದಾಲತ್-2025 ಅನ್ನು ಆಯೋಜಿಸಿತು. ನಿವೃತ್ತ ರೈಲ್ವೆ ನೌಕರರ ಪಿಂಚಣಿ ಸಂಬಂಧಿತ ಅಹವಾಲುಗಳನ್ನು ಪರಿಶೀಲಿಸಿ ಶೀಘ್ರ ಪರಿಹಾರ ಒದಗಿಸುವುದೇ ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















