No Result
View All Result
V. Somanna Dedicates ₹22.40 Crore Road Over Bridge at Yelekeri Gate
English Articles

V. Somanna Dedicates ₹22.40 Crore Road Over Bridge at Yelekeri Gate

by ಕಲ್ಪ ನ್ಯೂಸ್
June 30, 2026
0

Kalpa Media House  |  Bangaluru  | Hon'ble Minister of State for Railways & Jal Shakti, Shri V. Somanna, dedicates Road...

Read moreDetails
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
  • Advertise With Us
  • Grievances
  • About Us
  • Contact Us
Tuesday, June 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಬ್ಲಾಕ್ ಫಂಗಸ್ ಸೊಂಕು ತಡೆಗೆ ಮುಂಜಾಗೃತ ಕ್ರಮ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 22, 2021
in ಹುಬ್ಬಳ್ಳಿ-ಧಾರವಾಡ
0
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಹುಬ್ಬಳ್ಳಿ: ರಾಜ್ಯದಲ್ಲಿ ಮ್ಯೂಕಸ್ ಮೈಕ್ರೋಸಿಸ್ (ಬ್ಲಾಕ್ ಫಂಗಸ್) ಸೊಂಕು ಹೆಚ್ಚಾಗಿ ಹರಡುತ್ತಿದೆ. ಇದರ ಕಾರಣ ತಿಳಿಯಲು ಸರ್ಕಾರದಿಂದ ಮೈಕೋಲಾಜಿಸ್ಟ್ (ಶಿಲೀಂದ್ರ ತಜ್ಞರ) ಸಮಿತಿ ನೇಮಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಕಿಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ತಜ್ಞರ ಸಮಿತಿ ಪ್ರಾಥಮಿಕ ವರದಿಯನ್ನು ನೀಡಿದೆ. ಆಸ್ಪತ್ರೆಗಳಲ್ಲಿ ಬಳಸುವ ಹ್ಯುಮಿಡಿಫೈಡ್‌ಗಳಲ್ಲಿ ಡಿಸ್ಟಿಲ್ ವಾಟರ್‌ ಬಳಸಬೇಕು, ಆದರೆ ಹಲವು ಕಡೆ ನಳದ ನೀರನ್ನು ಹಾಕಿದ್ದಾರೆ. ಇದರಿಂದ ಫಂಗಸ್ ಬೆಳವಣಿಗೆಯಾಗಿದೆ. ಕ್ಯಾನುಲಾಗಳು ಸೇರಿದಂತೆ ಐ.ಸಿ.ಯುನಲ್ಲಿ ಬಳಸುವ ವೈದ್ಯಕೀಯ ಪರಿಕರಗಳಲ್ಲಿ ಕೂಡ ಫಂಗಸ್ ಬೆಳೆಯತ್ತಿದೆ. ಇವುಗಳನ್ನು ಮತ್ತೊಬ್ಬ ರೋಗಿ ಬಳಸುವಾಗ ಸಂಪೂರ್ಣವಾಗಿ ಸ್ಯಾನಿಟೈನ್ ಮಾಡಿ ಬಳಸಬೇಕು. ಇಲ್ಲವಾದರೆ ಹೊಸದನ್ನು ಬಳಸಬೇಕು ಎಂಬ ಸಲಹೆಯನ್ನು ತಜ್ಞರ ಸಮಿತಿ ನೀಡಿದೆ. ತಜ್ಞರ ವರದಿ ಆಧರಿಸಿ ಬ್ಲಾಕ್ ಫಂಗಸ್ ಸೊಂಕು ಹರಡುವುದನ್ನು ತಡೆಯಲು ಎಲ್ಲಾ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಬ್ಲಾಕ್ ಹಾಗೂ ವೈಟ್ ಫಂಗಸ್‌ನಲ್ಲಿ ವರ್ಣದ ಅಂಶ ಹೊರತು ಬೇರೆ ವ್ಯತ್ಯಾಸಗಳು ಇಲ್ಲ. ಸ್ಟಿರಾಯ್ಡ್‌ನ ವಿವೇಚನ ರಹಿತ ಬಳಕೆ ದೇಹದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗುವಂತೆ ಮಾಡುತ್ತದೆ. ಐಸಿಯುನಲ್ಲಿ ಆಮ್ಲಜನಕದ ಮೇಲೆ ರೋಗಿಗಳು ಹೆಚ್ಚು ಕಾಲ ಇರುವುದರಿಂದ ಅವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಇದರಿಂದ ಫಂಗಸ್ ಸೋಂಕು ಇವರನ್ನು ತೀವ್ರತರನಾಗಿ ಬಾದಿಸತ್ತಿದೆ. ದೇಶದಲ್ಲಿ 40 ರಿಂದ 50 ಬ್ಲಾಕ್ ಪಂಗಸ್ ಪ್ರಕರಣಗಳು ಬೆಳಕಿಗೆ ಬರುತ್ತಿದ್ದವು. ಆದರೆ ಇಂದು ಹಲವು ರಾಜ್ಯಗಳಲ್ಲಿ ಸೊಂಕು ಹೆಚ್ಚಾಗಿ ಹರಡುತ್ತಿದೆ. ಪ್ರಸ್ತುತ ಮಾಹಿತಿ ಪ್ರಕಾರ ರಾಜ್ಯದಲ್ಲಿ 250 ಬ್ಲಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದರು.

‌ಎಲ್ಲಾ ಸೊಂಕಿತರಿಗೂ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು. ದೇಶದಲ್ಲಿ ಬ್ಲಾಕ್ ಪಂಗಸ್ ಚಿಕಿತ್ಸೆಗೆ ಅಗತ್ಯವಾದ ಔಷದಗಳ 14000 ವೈಲ್ಸ್ ಉತ್ಪಾದನೆಯಾಗುತ್ತಿದೆ. ರಾಜ್ಯಕ್ಕೆ ಅಗತ್ಯವಿರುವಷ್ಟು ವೈಲ್‌ಗಳನ್ನು ಒದಗಿಸುವುದಾಗಿ ಕೇಂದ್ರ ರಾಸಾಯನಿಕ ‌ಹಾಗೂ ರಸಗೊಬ್ಬರ ಖಾತೆ ಸಚಿವರಾದ ಸದಾನಂದಗೌಡ ಅವರು ಆಶ್ವಾಸನೆ ನೀಡಿದ್ದಾರೆ ಎಂದರು.

ಪತ್ರಕರ್ತರ ಪಶ್ನೆಗೆ ಉತ್ತರಿಸಿದ ಸಚಿವರು ಎಲ್ಲಾ ವೈದ್ಯಕೀಯ, ಅರೆ ವೈದ್ಯಕೀಯ‌ ಹಾಗೂ ಗ್ರೂಪ್ ಡಿ ನೌಕರರಿಗೂ ತುರ್ತು ಸಂದರ್ಭದ ಭತ್ಯೆಯನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಿಮ್ಸ್‌ನಲ್ಲಿ ಕೋವಿಡ್ ರೋಗಿಗಳಿಗೆ ನೀಡುತ್ತಿರುವ ಚಿಕಿತ್ಸೆ ವಿಧಿವಿಧಾನ, ಕೈಗೊಳ್ಳಲಾದ ವ್ಯವಸ್ಥೆಗಳು, ಸರ್ಕಾರ ಮಾರ್ಗಸೂಚಿಗಳ ಪಾಲನೆ ಕುರಿತು ಮಾಹಿತಿ ಪಡೆದು, ಪರಿಶೀಲನೆ ನಡೆಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕರ್ತವ್ಯದ ರೋಸ್ಟರ್ ಸರಿಯಾಗಿ ನಿಭಾಯಿಸುವಂತೆ ಕಿಮ್ಸ್ ಮುಖ್ಯಸ್ಥರಿಗೆ ತಿಳಿಸಿದರು. ನಂತರ ಕಿಮ್ಸ್ ವೈದ್ಯಾಧಿಕಾರಿಗಳ ಸಭೆ ಜರುಗಿಸಿದರು.

ಶಾಸಕ ಅರವಿಂದ ಬೆಲ್ಲದ್, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕಿಮ್ಸ್ ನಿರ್ದೇಶಕ ರಾಮಲಿಂಗಪ್ಪ ಅಂಟರಠಾಣಿ, ಜಿ.ಪಂ.ಸಿ.ಇ.ಓ ಡಾ.ಬಿ.ಸುಶೀಲಾ, ಕಿಮ್ಸ್ ಆಡಳಿತಾಧಿಕಾರಿ ರಾಜಶ್ರೀ ಜೈನಾಪುರು, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayaluseeme NewsBlack and white FungusHubliKannada NewsKannada News LiveKannada News OnlineKannada WebsiteKannadaNewsWebsiteKIMS HospitalLatestNewsKannadaMinister SudhakarNews in KannadaNews Kannadaಕಿಮ್ಸ್‌ ಆಸ್ಪತ್ರೆಬಯಲುಸೀಮೆಸುದ್ಧಿಬ್ಲಾಕ್ ಹಾಗೂ ವೈಟ್ ಫಂಗಸ್‌ಸಚಿವ ಸುಧಾಕರ್ಹುಬ್ಬಳ್ಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಳ್ಳಾರಿ ಕುಡುತಿನಿ ಬಿಟಿಪಿಎಸ್ ಸ್ಥಾವರದ ಸಿಬ್ಬಂದಿಗಳಿಗೆ ಕೊರೋನಾ ಆತಂಕ

Next Post

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದ್ರಧನುಷ್ 3.0ಗೆ ಚಾಲನೆ: ಎಷ್ಟು ಜಿಲ್ಲೆಗಳಲ್ಲಿ ಲಸಿಕೆ ಲಭ್ಯ! ಇಲ್ಲಿದೆ ಮಾಹಿತಿ

ಕಿಮ್ಸ್‌ನಲ್ಲಿ ನಿರೀಕ್ಷಿತ ಸಾಮರ್ಥ್ಯದ ಕೋವಿಡ್‌ ಚಿಕಿತ್ಸೆ ಸಿಗುತ್ತಿಲ್ಲ : ಸಚಿವ ಸುಧಾಕರ್‌

Leave a Reply Cancel reply

Your email address will not be published. Required fields are marked *

No Result
View All Result
V. Somanna Dedicates ₹22.40 Crore Road Over Bridge at Yelekeri Gate
English Articles

V. Somanna Dedicates ₹22.40 Crore Road Over Bridge at Yelekeri Gate

by ಕಲ್ಪ ನ್ಯೂಸ್
June 30, 2026
0

Kalpa Media House  |  Bangaluru  | Hon'ble Minister of State for Railways & Jal Shakti, Shri V. Somanna, dedicates Road...

Read moreDetails
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL