Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಧಾರವಾಡ

ರಾಜ್ಯ ಸರ್ಕಾರದಿಂದ ರೈತರಿಗೆ ಬೆಲೆ ಕಡಿತದ ಬರೆ | ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ

September 3, 2024
in ಧಾರವಾಡ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಗಣೇಶ ಹಬ್ಬದ ವೇಳೆ ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಬೆಂಬಲ ಬೆಲೆಯ ಗಿಫ್ಟ್ ಕೊಟ್ಟರೆ; ರಾಜ್ಯ ಸರ್ಕಾರ ಹಾಲಿನ ಬೆಲೆ ಕಡಿತದ ಕೊಡುಗೆ ಕೊಟ್ಟಿದೆ! ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

ಬೆಲೆ ಕುಸಿತದ ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಆಹಾರ ಧಾನ್ಯ ಖರೀದಿಸುತ್ತಿದೆ. ಆದರೆ, ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಈಗಿರುವ ಬೆಲೆಯನ್ನೂ ಕಡಿತಗೊಳಿಸಿ ಹಾಲು ಖರೀದಿಸುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ರಾಜ್ಯ ಸರ್ಕಾರ, ರಾಜ್ಯದ ಹಾಲು ಉತ್ಪಾದಕರಿಗೆ ಕೊಡುವ ಬೆಲೆಯಲ್ಲಿ 1.5 ರೂ., 2 ರೂ.ವರೆಗೂ ಕಡಿತಗೊಳಿಸುವ ಮೂಲಕ ಹೈನುಗಾರರ ಶ್ರಮಕ್ಕೆ ತಣ್ಣೀರೆರೆಚುವ ಕೆಲಸ ಮಾಡಿದೆ ಎಂದು ಜೋಶಿ ಖಂಡಿಸಿದ್ದಾರೆ.

ಹೈನುಗಾರರು ಹೈರಾಣ: ಅತಿವೃಷ್ಟಿಯಿಂದಾಗಿ ರಾಜ್ಯದ ರೈತರು ಬೆಳೆ ಹಾನಿಯಾಗಿ ತೀವ್ರ ಸಂಕಷ್ಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನೆರವಿಗೆ ಧಾವಿಸಿ ಹೆಸರು, ಉದ್ದು, ಸೂರ್ಯಕಾಂತಿ, ಸೋಯಾಬಿನ್ ಗೆ ಬೆಂಬಲ ಬೆಲೆ ಹೆಚ್ಚಿಸಿ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದೆ. ಆದರೆ, ರಾಜ್ಯ ಸರ್ಕಾರದ ಹಾಲು ಒಕ್ಕೂಟಗಳು ರೈತರಿಗೆ ನೀಡುವ ಹಾಲಿನ ದರ ಕಡಿತಗೊಳಿಸಿ ಹೈನುಗಾರರನ್ನು ಹೈರಾಣಾಗಿಸಿದೆ ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಂದೆಡೆ ಕೇಂದ್ರ ಸರ್ಕಾರ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕೆಂದು ಶ್ರಮಿಸುತ್ತಿದ್ದರೆ, ಇತ್ತ ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರ ರೈತರಿಗೆ ನೀಡುವ ಹಾಲಿನ ದರದಲ್ಲಿ ಕಡಿತ ಮಾಡಿದೆ ಎಂದು ಹರಿ ಹಾಯ್ದಿದ್ದಾರೆ.
ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ಗರಿಷ್ಠ 30.50 ರೂ.ನೀಡಿ ಖರೀದಿ ಮಾಡುತ್ತಿದ್ದವು. ಆದರೀಗ 1.5 ರೂ. ಕಡಿತಗೊಳಿಸಿ ರೈತರಿಗೆ ಪ್ರತಿ ಲೀಟರ್ ಗೆ 28, 29 ರೂ. ನೀಡುತ್ತಿವೆ. ಕೆಲವೆಡೆ ಇದಕ್ಕೂ ಖೋತಾ ಆಗಿದೆ. ಇದು ಹೈನುಗಾರರ ದುರಂತ ಸ್ಥಿತಿ ಎಂದು ಸಚಿವ ಜೋಶಿ ಆತಂಕಿಸಿದ್ದಾರೆ.

ಒಕ್ಕೂಟಗಳಿಂದ ನಷ್ಟದ ಸಬೂಬು: ಹಾಲು ಉತ್ಪಾದಕರು ದರ ಕಡಿತದ ಬಗ್ಗೆ ಪ್ರಶ್ನಿಸಿದರೆ ಬಳ್ಳಾರಿ, ರಾಯಚೂರು, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟವು ನಷ್ಟದ ಸಬೂಬು ನೀಡಿದೆ. ನಷ್ಟದ ನೆಪದಲ್ಲಿ ಸರ್ಕಾರ ಹಾಲು ಉತ್ಪಾದಕರಿಗೆ ಬೆಲೆ ಕಡಿತದ ಬರೆ ಎಳೆದಿದೆ ಎಂದು ಸಚಿವರು ಖಂಡಿಸಿದ್ದಾರೆ.

Also read: ನಾಲಿಗೆ ರುಚಿಗಿಂತ ದೇಹಾರೋಗ್ಯ ಕಾಪಾಡುವ ಆಹಾರಕ್ಕೆ ಆದ್ಯತೆ ನೀಡಿ: ಡಾ. ವಾದಿರಾಜ್

ನಷ್ಟದಲ್ಲಿ ಇರುವುದು ಒಕ್ಕೂಟಗಳಲ್ಲ; ರೈತರು ಹೈನುಗಾರಿಕೆಯಲ್ಲಿ ನಿಜವಾಗಿ ನಷ್ಟದಲ್ಲಿ ಇರುವುದು ಹಾಲಿನ ಒಕ್ಕೂಟಗಳಲ್ಲ, ರೈತರು. ಕಾರಣ ಹಾಲು ಉತ್ಪಾದನೆ ವೆಚ್ಚ ದುಪ್ಪಟ್ಟಾಗಿದೆ. ಹಸು, ಎಮ್ಮೆಗಳ ಬೆಲೆ ಹೆಚ್ಚಿದೆ. ಪಶು ಆಹಾರ ಬೆಲೆಯೂ ದುಪ್ಪಟ್ಟಾಗಿ ಸಾಕಾಣಿಕೆ ದುಬಾರಿಯಾಗಿದೆ. ಇತ್ತ ನ್ಯಾಯಯುತ ದರವೂ ದಕ್ಕುತ್ತಿಲ್ಲ ಎಂದು ಸಚಿವ ಜೋಶಿ ಹೇಳಿದ್ದಾರೆ.

ಮಾರುವ ದರ ದುಪ್ಪಟ್ಟು; ಕೊಳ್ಳೋ ಬೆಲೆ ತೀರಾ ಕಡಿಮೆ: 2013-14ರಲ್ಲಿ ನಂದಿನಿ ಹಾಲಿನ ಬೆಲೆ ಲೀಟರ್ ಗೆ 29 ರೂ. ಇತ್ತು, 2024ರಲ್ಲಿ ಅರ್ಧ ಲೀಟರ್ ಹಾಲಿಗೇ ಇಷ್ಟು ಬೆಲೆಯಿದೆ. ಅಂದರೆ ಹತ್ತು ವರ್ಷದಲ್ಲಿ ಗ್ರಾಹಕರಿಗೆ ಶೇ.100ರಷ್ಟು ಬೆಲೆಯ ಹೊರೆ ಹೇರಲಾಗಿದೆ. ಆದರೆ ರೈತರಿಗೆ ಶೇ.10 ರಷ್ಟೂ ಬೆಲೆ ಹೆಚ್ಚಿಲ್ಲ. ಈಗಲೂ 2014ರಲ್ಲಿ ಇದ್ದಷ್ಟೇ ಇದೆ. ಅತ್ಯಂತ ಕನಿಷ್ಠ ದರ 26 ರಿಂದ 29 ರೂ.ಲೀಟರ್ ಗೆ ದಕ್ಕುತ್ತಿದೆ ಎಂದು ಸಚಿವರು ವಿಷಾದಿಸಿದ್ದಾರೆ.

ರೈತರಿಗೂ ಬರೆ, ಗ್ರಾಹಕರಿಗೂ ಬರೆ: ಸರ್ಕಾರ 2 ತಿಂಗಳ ಹಿಂದೆ 2 ರೂಪಾಯಿ ಹಾಲಿನ ದರ ಹೆಚ್ಚಳ ಮಾಡಿ ಗ್ರಾಹಕರಿಗೆ ಬರೆ ಎಳೆದಿತ್ತು. ಈಗ ಖರೀದಿ ಬೆಲೆ ಕಡಿತಗೊಳಿಸಿ ಉತ್ಪಾದಕರಿಗೂ ಬರೆ ಎಳೆದಿದೆ ಎಂದಿದ್ದಾರೆ.

ಲೀಟರ್ ಹಾಲಿನ ಮೇಲೆ ಹತ್ತಾರು ರೂ. ಹೆಚ್ಚುವರಿ: ಇನ್ನು ಹಾಲಿನ ಗುಣಮಟ್ಟದ ನೆಪದಲ್ಲಿ ಐದಾರು ರೂಪಾಯಿ ಪ್ರೋತ್ಸಾಹ ಧನಕ್ಕೂ ಕೊಕ್ ಹಾಕುತ್ತಿದೆ. ರಾಜ್ಯ ಸರ್ಕಾರ, ಈ ರೀತಿ ಪ್ರೋತ್ಸಾಹ ಧನ ಉಳಿಕೆ, ಖರೀದಿ ದರ ಕಡಿತ, ಮಾರಾಟ ದರ ಹೆಚ್ಚಳ ರೂಪದಲ್ಲಿ ಲೀಟರ್ ಹಾಲಿನ ಮೇಲೆ ಹತ್ತಾರು ರೂಪಾಯಿ ಹೆಚ್ಚುವರಿ ಆದಾಯದ ಮಾರ್ಗ ಕಂಡುಕೊಂಡಿದೆ. ಹೀಗಿರುವಾಗ ನಷ್ಟ ಹೇಗೆಂದು? ಸಚಿವ ಜೋಶಿ ಪ್ರಶ್ನಿಸಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

ನಷ್ಟ ಸರಿದೂಗಿಸಲು ಸೋರಿಕೆ ತಡೆಗೆಟ್ಟಲಿ: ಹಾಲು ಒಕ್ಕೂಟಗಳು ನಷ್ಟದಲ್ಲಿ ಇದ್ದರೆ ಮೊದಲು ಹಾಲು ಒಕ್ಕೂಟ, ಶೀತಲೀಕರಣ ಘಟಕ ಹಾಗೂ ಹಾಲು ಸಂಗ್ರಹ ಕೇಂದ್ರಗಳಲ್ಲಿ ಆಗುತ್ತಿರುವ ಸೋರಿಕೆಯನ್ನೇ ತಡೆ ಗಟ್ಟಿದರೆ ಸಾಕು ಎಂದು ಸರ್ಕಾರಕ್ಕೆ ಟಾಂಗ್ ಕೊಟ್ಟಿದ್ದಾರೆ ಸಚಿವ ಜೋಶಿ.

ಹೈನುಗಾರಿಕೆಯಿಂದ ವಿಮುಖ: ಒಂದೆಡೆ ಮೇವು, ಪಶು ಆಹಾರ ಬೆಲೆ ಹೆಚ್ಚಳ, ಇನ್ನೊಂದೆಡೆ ಹಾಲು ಒಕ್ಕೂಟಗಳು ಮತ್ತು ಸರ್ಕಾರದಿಂದ ವಂಚನೆ. ಹೀಗಾಗಿ ರಾಜ್ಯದ ಅನೇಕ ಗ್ರಾಮಗಳಲ್ಲಿ ಇಂದು ಸಣ್ಣಪುಟ್ಟ ರೈತರು ಹೈನುಗಾರಿಕೆಯಿಂದಲೇ ವಿಮುಖರಾಗುವಂತಾಗಿ, ಹೈನುಗಾರಿಕೆ ಪ್ರಭಾವಿಗಳ ಸ್ವತ್ತಾಗಲಿದೆ ಎಂದು ಜೋಶಿ ಎಚ್ಚರಿಸಿದ್ದಾರೆ.

ರೈತ ಪರ ಎನ್ನುವ ಕಾಂಗ್ರೆಸ್ ಗೆ ನಾಚಿಕೆ ಆಗಬೇಕು: ನಮ್ಮದು ರೈತಪರ ಸರ್ಕಾರ, ಜನಪರ ಸರ್ಕಾರ ಎನ್ನುವ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನಿಲುವುಗಳನ್ನೇ ತೆಗೆದುಕೊಳ್ಳುತ್ತಿದ್ದು, ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಕಿಡಿ ಕಾರಿದ್ದಾರೆ.

ಬೆಲೆ ಕಡಿತ ಕೈಬಿಟ್ಟು ನ್ಯಾಯಯುತ ದರ ನೀಡಲಿ: ರಾಜ್ಯ ಸರ್ಕಾರ ಕೂಡಲೇ ಬೆಲೆ ಕಡಿತದ ಆದೇಶ ಹಿಂಪಡೆಯಬೇಕು. ಹಾಲು ಉತ್ಪಾದಕರಿಗೆ ನ್ಯಾಯಯುತ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟ್ವೀಟ್ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: HubliKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಹುಬ್ಬಳ್ಳಿ
Previous Post

ನಾಲಿಗೆ ರುಚಿಗಿಂತ ದೇಹಾರೋಗ್ಯ ಕಾಪಾಡುವ ಆಹಾರಕ್ಕೆ ಆದ್ಯತೆ ನೀಡಿ: ಡಾ. ವಾದಿರಾಜ್

Next Post

Government Cracks Down on Nursing Colleges Over Exorbitant Fees and Substandard Facilities

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Government Cracks Down on Nursing Colleges Over Exorbitant Fees and Substandard Facilities

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!