No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಹುಬ್ಬಳ್ಳಿ-ಧಾರವಾಡ

ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2024
in ಹುಬ್ಬಳ್ಳಿ-ಧಾರವಾಡ
0
ಬಡವರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳ ಅಗತ್ಯವಿದೆ: ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ವೈದ್ಯಕೀಯ ಶಿಕ್ಷಣದಲ್ಲಿ ಸಾರ್ವಜನಿಕರ ಆರೋಗ್ಯದ ಸಲುವಾಗಿ ವಿಶೇಷ ಕೋರ್ಸ್‌ಗಳು ಹಾಗೂ ವಿಶೇಷ ಕೇಡರ್‌ಗಳನ್ನು ನಿರ್ಮಾಣ ಮಾಡಿ, ಬಡವರಿಗೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗದೇ ಚಿಕಿತ್ಸೆ ನೀಡುವ ವ್ಯವಸ್ಥೆ ಬಂದರೆ ಆರೋಗ್ಯಕರವಾಗಿರುವ ಸಮಾಜ ನಿರ್ಮಾಣವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ #Basavaraja Bommai ಅಭಿಪ್ರಾಯ ಪಟ್ಟಿದ್ದಾರೆ.

ಅವರು ಇಂದು ಹುಬ್ಬಳ್ಳಿಯಲ್ಲಿ ಸಂಯುಕ್ತ ಕರ್ನಾಟಕ ದಿನಪತ್ರಿಕೆ ವತಿಯಿಂದ ಏರ್ಪಡಿಸಿದ್ದ ಆರೋಗ್ಯ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಭಾರತ ದೇಶದಲ್ಲಿ ಬಡತನದ ವ್ಯವಸ್ಥೆ ಬೇರೆ ಬೇರೆ ಸ್ಥರದಲ್ಲಿದೆ. ಅತ್ಯಂತ ಬಡವರು, ಬಡವರು, ಕೆಳ ಮಧ್ಯಮ ವರ್ಗ, ಮಧ್ಯಮ ವರ್ಗ ಹೀಗಿದೆ. ಬಡತನ ಮತ್ತು ಆರೋಗ್ಯದ ನಡುವೆ ಸಂಬಂಧ ಇದೆ. ಇದನ್ನು ಕಾನೂನು ರೂಪಿಸುವವರು ಅರ್ಥ ಮಾಡಿಕೊಳ್ಳಬೇಕು. ಬಡತನ ಎಲ್ಲಿದೆ. ಅಲ್ಲಿ ಸ್ವಚ್ಛತೆ ಹಾಗೂ ಪೌಷ್ಟಿಕ ಆಹಾರದ ಸಮಸ್ಯೆ ಇರುತ್ತದೆ. ಹಲವಾರು ರೋಗಗಳ ಉಲ್ಬಣ, ಮಕ್ಕಳು ಚಿಕ್ಕವರಿದ್ದಾಗ ರೋಗಗಳಿಗೆ ತುತ್ತಾಗಿ ಮುಂದೆ ಅವರು ಸದೃಢ ಆರೋಗ್ಯವಂತ ನಾಗರಿಕರಾಗುವುದಿಲ್ಲ. ನಮ್ಮ ಗಮನ ಬಡವರ ಆರೋಗ್ಯದ ಕಡೆಗೆ ಹೆಚ್ಚು ಒತ್ತು ಕೊಡಬೇಕು. ನಮ್ಮ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾಗಬೇಕು. ನಾವು ಪಾಶ್ಚಿಮಾತ್ಯ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಇಟ್ಟುಕೊಂಡಿದ್ದೇವೆ. ಅಲ್ಲಿ ಶ್ರೀಮಂತರು ಮಧ್ಯಮ ವರ್ಗ ಎರಡೇ ಇರುವುದು. ಇಲ್ಲಿ ಅತ್ಯಂತ ಬಡವರು ಇರುವುದರಿಂದ ಐದು ವರ್ಷ ಎಂಬಿಬಿಎಸ್, ಎರಡು ವರ್ಷ ಪಿಜಿ, ಒಟ್ಟು ಎಂಟತ್ತು ವರ್ಷ ಕಲಿತು ನಾಲೈದು ಕೋಟಿ ರೂಪಾಯಿ ಖರ್ಚಾಗುತ್ತದೆ. ಸರ್ಕಾರದ ಸೀಟಿದ್ದರೆ ಸರ್ಕಾರದ ಎರಡುಮೂರು ಕೋಟಿ ಖರ್ಚಾಗುತ್ತದೆ. ಆದರೆ, ಅವರು ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಶ್ರೀಮಂತರಿಗೆ ಸೇವೆ ಕೊಡುತ್ತಾರೆ. ಮತ್ತೂ ಬಡವರ ಆರೋಗ್ಯ ಸಮಸ್ಯೆ ಹಾಗೇ ಉಳಿಯುತ್ತಿದೆ ಎಂದರು.
ಕೊವಿಡ್ #Covid ಸಂದರ್ಭದಲ್ಲಿ ನಮ್ಮ ಆಸ್ಪತ್ರೆಗಳ ಮೂಲ ಸೌಕರ್ಯ ಹೇಗಿತ್ತು ಎಂದು ನಮಗೆ ಅರಿವಿಗೆ ಬಂದಿದೆ. ನಾವು ಕೊವಿಡ್ ಸಂಕಷ್ಟವನು, ಅವಕಾಶವನ್ನಾಗಿ ಪರಿವರ್ತಿಸಿ ಎಲ್ಲಾ ಜಿಲ್ಲಾ ಹಾಗೂ ಪ್ರಮುಖ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್, ಆಕ್ಸಿಜೆನ್ ‌ ವ್ಯವಸ್ಥೆ ಮಾಡಿದ್ದೇವೆ. ಐಸಿಯು ಕೂಡ ಆಯಿತು. ಅದನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಬೇಕು. ಕೆಲವು ಕಡೆ ನಿರ್ವಹಣೆ ಸರಿಯಾಗಿಲ್ಲ. ಹೀಗಾಗಿ ಜನರು ಖಾಸಗಿಯವರ ಕಡೆ ಹೋಗುವಂತಾಗಿದೆ. ಇದರ ಬಗ್ಗೆ ಚಿಂತನೆ ಮಾಡಬೇಕು ಎಂದರು.

Also read: ರಾಜ್ಯದ ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿಕ್ರಮ: ಕಾರಣವೇನು?

ನಾವಿದ್ದಾಗ ಡಯಾಲಿಸಿಸ್ ‌ ಸೈಕಲ್ ಹೆಚ್ಚಳ ಮಾಡಿದ್ದೇವೆ. ನಮ್ಮ ಕ್ಲಿನಿಕ್ ಮಾಡಿದ್ದೇವೆ. ಕಿವಿಗಳಿಗೆ ತೊಂದರೆಯಾದರೆ ಕಾಂಕ್ಲಿಯರ್ ಇನ್ಫಾಂಟ್ ವ್ಯವಸ್ಥೆ ಮಾಡಿದ್ದೇವೆ. ಹಲವಾರು ಸುಧಾರಣೆ ಮಾಡುವ ಅವಶ್ಯಕತೆ ಇದೆ. ಉತ್ತರ ಕರ್ನಾಟಕದ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇದೆ. ಇಲ್ಲಿನ ರೋಗಿಗಳು, ಬೆಡ್ ಮತ್ತು ವೈದ್ಯರ ನಡುವಿನ ಅನುಪಾತ ಬಹಳ ವ್ಯತ್ಯಾಸ ಇದೆ. ಅದನ್ನು ಸರಿಪಡಿಸುವ ಕೆಲಸ ಮಾಡಬೇಕು. ಇದು ಬಹಳ ಅವಶ್ಯಕೆ ಇದೆ. ಖಾಸಗಿ ವಲಯದ ಬಗ್ಗೆ ಬಹಳ ಚರ್ಚೆಯಾಗುತ್ತಿದೆ. ಬಡವರ ಪರಿಸ್ಥಿತಿ ಬಹಳ ಕಷ್ಟ ಇದೆ. ನಾವೆಲ್ಲರೂ ಚಿಂತನೆ ಮಾಡಬೇಕಿದೆ. ನಾವೆಲ್ಲ ತಲೆ ಕೆಡಿಸಿಕೊಳ್ಳಬೇಕಿದೆ. ಒಂದು ಲಕ್ಷ ಕಟ್ಟಿದರೆ ಚಿಕಿತ್ಸೆ ನೀಡುತ್ತೇವೆ ಎನ್ನುತ್ತಾರೆ. ಇನ್ಸೂರೆನ್ ಇದ್ದರೆ ಮಾತ್ರ ಚಿಕಿತ್ಸೆ ನೀಡುತ್ತೇವೆ ಎನ್ನುತ್ತಾರೆ. ಎಮರ್ಜೆನ್ಸಿ ಇದೆ ಎನ್ನುತ್ತಾರೆ. ಯಾವುದೂ ಎಮರ್ಜೆನ್ನಿ ಇರುವುದಿಲ್ಲ. ಎಲ್ಲವೂ ಭಷ್ಟಾಚಾರ ಇದನ್ನು ಅಮೂಲಾಗ್ರ ಬದಲಾವಣೆ ಮಾಡಬೇಕು. ಇಡೀ ಸಮಾಜ ಬಡವರ ಪರವಾಗಿ ನಿಂತಾಗ ಮಾತ್ರ ಸಾಧ್ಯ ಇದೆ. ಅದೊಂದು ಕ್ರಾಂತಿ ಆಗಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರ ಒಟ್ಟಿಗೆ ಮಾಡಬೇಕಿದೆ ಎಂದು ಹೇಳಿದರು.

ಪತ್ರಿಕೆ ಪಾತ್ರ ಮಹತ್ವದ್ದು

ಸ್ವಾತಂತ್ರ್ಯ ಹೋರಾಟದಲ್ಲಿ ಪತ್ರಿಕೆಗಳ ಮಹತ್ವ ಭಾರತದಲ್ಲಿ ಪೂಜ್ಯ ಮಹಾತ್ಮಾ ಗಾಂಧಿಗೆ ಗೊತ್ತಿತ್ತು. ಹೀಗಾಗಿ ಅವರು ಸ್ವಂತ ಪತ್ರಿಕೆ ಆರಂಭಿಸಿದ್ದರು. ಆ ಪತ್ರಿಕಾ ಶಕ್ತಿ ಕನ್ನಡ ನಾಡಿನಲ್ಲಿ ಏಕಮಾತ್ರ ಪತಿಕೆ ಕಂಡುಕೊಂಡಿದ್ದು ಸಂಯುಕ್ತ ಕರ್ನಾಟಕ ಹಲವಾರು ಸವಾಲು ಎದುರಿಸಿ ಬೆಳೆದು ನಿಂತಿದೆ. ಅದರ ಕರ್ಮವೀರ, ಕಸೂರಿ ಮ್ಯಾಗಜಿನ್‌ಗಳು ಮನೆ ಮಾತಾಗಿವೆ. ಕರ್ನಾಟಕದ ಏಕೀಕರಣದಲ್ಲಿ ಸಂಯುಕ್ತ ಕರ್ನಾಟಕದ ಪಾತ್ರ ಎಷ್ಟಿತ್ತು ಎಂದರೆ, ಏಕೀಕರಣವನ್ನು ಸಂಯುಕ್ತ ಕರ್ನಾಟಕ ಪ್ರತಿಪಾದಿಸದಿದ್ದರೆ ಏಕೀಕರಣ ಆಗುತ್ತಿರಲಿಲ್ಲ. ಅಷ್ಟು ಮಹತ್ವದ ಪಾತ್ರವಹಿಸಿರುವ ಈ ಪತ್ರಿಕೆ ನಂತರ ಬಂದಿರುವ ಜಾಗತೀಕರಣ, ಉದಾರೀಕರಣದ ಏಳುಬೀಳು ಕಂಡು ಈಗ ಮತ್ತೆ ಪುಟಿದೇಳುವಂತಹ ಸುವರ್ಣಯುಗ ಶತಮಾನೋತ್ಸವ ಆಚರಿಸುತ್ತಿರುವ ಸಂಯುಕ್ತ ಕರ್ನಾಟಕಕ್ಕೆ ಬಂದಿದೆ. ಮುಳುಗುತ್ತಿರುವ ಹಡುಗನ್ನು ಮತ್ತೆ ದಡ ಸೇರಿಸುವ ಕೆಲಸವನ್ನು ಯು.ಬಿ. ವೆಂಕಟೇಶ ಅವರು ಮಾಡುತ್ತಿದ್ದಾರೆ ಎಂದರು.

ಮೊದಲು ಸಾಹಿತಿಗಳು ಪತ್ರಿಕೆ ನಡೆಸಬೇಕು ಎಂದಿತ್ತು ಇವತ್ತಿನ ಕಾಲದಲ್ಲಿ ಎಲ್ಲ ರೀತಿಯ ಆಡಳಿತ ಅವಶ್ಯಕತೆ ಇದೆ ಎಂದು ಯು.ಬಿ.ವೆಂಕಟೇಶ್ ತೋರಿಸಿದ್ದಾರೆ. ಬಹಳ ಕಷ್ಟದಲ್ಲಿತ್ತು. ಅದನ್ನು ಮೇಲೆತ್ತಿದ್ದಾರೆ. ಇನ್ನು ದೊಡ್ಡ ಪ್ರಮಾಣದಲ್ಲಿ ಮಾಡುವ ಇಚ್ಚೆ ಹೊಂದಿದ್ದಾರೆ. ನಮ್ಮ ಅವಧಿಯಲ್ಲಿ ಅವರಿಗೆ 5 ಎಕರೆ ಜಮೀನು ನೀಡಿದ್ದೇವೆ. ಬರುವ ದಿನಗಳಲ್ಲಿ ಒಳ್ಳೆಯ ಭವಿಷ್ಯ ಇದೆ. ಸಾಮಾಜಿಕ ಜವಾಬ್ದಾರಿಯನ್ನೂ ಉತ್ತಮವಾಗಿ ನಿರ್ವಹಿಸುತ್ತ ಬಂದಿದ್ದಾರೆ. ಎಂ.ಎಂ. ಜೋಶಿಯವರು ಇಡೀ ಜೀವನವನ್ನು ಬಡವರಿಗೆ ಬೆಳಕು ನೀಡಿದ್ದಾರೆ. ಬಹಳ ಜನರಿಗೆ ಅವರು ಸಾಕ್ಷಾತ್ ದೇವರಂತೆ ಕಂಡಿದ್ದಾರೆ. ಅವರು ಅತ್ಯಂತ ಸರಳ ವೈದ್ಯರು ಎಂದು ಹೇಳಿದರು.
ಎಲ್ಲರೂ ಸೇರಿ ನಮ್ಮ ಆರೋಗ್ಯ ಸುಧಾರಣೆ ಮಾಡೋಣ. ನಮ್ಮ ಸುತ್ತಲಿರುವವರ ಆರೋಗ್ಯ ಸುಧಾರಣೆ ಮಾಡೋಣ, ಆರೋಗ್ಯ ಆಪ್ ಯಶಸ್ವಿಯಾಗಲಿ ಇದು ಅರಿವು ಮೂಡಿಸುವಂಥದ್ದು, ತಜ್ಞರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಂಥದ್ದು, ಸಂಯುಕ್ತ ಕರ್ನಾಟಕ ಉತ್ತಮ ಕಾರ್ಯ ಮಾಡಿದೆ. ಇದರಿಂದ ಬಹಳ ಸಂತೋಷ ತಂದಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ಜಗದೀಶ ಶೆಟ್ಟರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವಿಧಾನ ಸಭೆ ವಿರೋಧ ಪಕ್ಷದ ಉಪನಾಯಕ ಆರವಿಂದ ಬೆಲ್ಲದ, ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ ಹಾಗೂ ಮತ್ತಿತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Basavaraja BommaiCovidHubliKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಕೊವಿಡ್ಬಸವರಾಜ ಬೊಮ್ಮಾಯಿಹುಬ್ಬಳ್ಳಿ
Share196Tweet123Send
Previous Post

ರಾಜ್ಯದ ವಿಮಾನ ನಿಲ್ದಾಣ, ಬಂದರು ಸೇರಿದಂತೆ ಮತ್ತಿತರ ಕಡೆ ಬಿಗಿಕ್ರಮ: ಕಾರಣವೇನು?

Next Post

ಎಚ್ಡಿಕೆ NDA ದ ಒಂದು ಭಾಗ, NDA ದಲ್ಲಿ ಇರೋ ಯಾರನ್ನೂ ಕೈ ಬಿಡಲ್ಲ ಬಿಜೆಪಿ: ಸಚಿವ ಪ್ರಲ್ಹಾದ ಜೋಶಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರಧಾನಿ ಮೋದಿ ಅವರಿಂದ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆಗೆ ಸಿದ್ಧತೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಎಚ್ಡಿಕೆ NDA ದ ಒಂದು ಭಾಗ, NDA ದಲ್ಲಿ ಇರೋ ಯಾರನ್ನೂ ಕೈ ಬಿಡಲ್ಲ ಬಿಜೆಪಿ: ಸಚಿವ ಪ್ರಲ್ಹಾದ ಜೋಶಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL