No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 16, 2021
in Small Bytes, ಬೆಂಗಳೂರು ನಗರ
0
ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹಾಗೂ ಮೈಸೂರು ಸಂಸ್ಥಾನದಲ್ಲಿ ಹಂಗಾಮಿ ದಿವಾನರಾಗಿದ್ದ ಎಚ್.ವಿ.ನಂಜುಂಡಯ್ಯ ಅವರು ವಾಸವಿದ್ದ ಹಾಗೂ ತದ ನಂತರ ಮಲ್ಲೇಶ್ವರದ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ ದಾನ ಮಾಡಿದ್ದ ಭವ್ಯ ಭಂಗಲೆಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಸೆ ಮೇರೆಗೆ ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಡಿಸಿಎಂ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲನೆ ನಡೆಸಿದರು.

ನಗರದಲ್ಲಿರುವ ಜರ್ಮನ್ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳು ಡಿಸಿಎಂ ಜತೆ ಈ ಭಂಗಲೆಗೆ ಭೇಟಿ ನೀಡಿ ಅಲ್ಲಿನ ನಿರ್ಮಾಣ ಶೈಲಿಯನ್ನು ಕಂಡು ಚಕಿತರಾದರು. ನಗರದ ಪ್ರಮುಖ ಪಾರಂಪರಿಕ ಕಟ್ಟಡವಾಗಿರುವ ಈ ಭಂಗಲೆಯಲ್ಲಿ ನಂಜುಂಡಯ್ಯ ಅವರು ವಾಸವಿದ್ದರು. 1915ರಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಲಾಗಿತ್ತು. ಇದು ಎಚ್‌ವಿಎನ್ ಭಂಗಲೆ ಎಂದೇ ಪ್ರಖ್ಯಾತಿಯಾಗಿದೆ. ಕಟ್ಟಡ ಹಳತಾದಂತೆಲ್ಲ ಅದಕ್ಕೆ ಅಲ್ಲಲ್ಲಿ ಧಕ್ಕೆ ಉಂಟಾಗಿತ್ತು. ಇದನ್ನು ಗಮನಿಸಿದ್ದ ಡಿಸಿಎಂ ಅವರು ಬಿಬಿಎಂಪಿ ನೆರವಿನೊಂದಿಗೆ ಜೀರ್ಣೋದ್ಧಾರ ಕಾರ್ಯ ಕೈಗೊಂಡಿದ್ದಾರೆ.

2 ಕೋಟಿ ರೂ. ವೆಚ್ಚ:

ಇಡೀ ನಗರಕ್ಕೆ ಹೆಮ್ಮೆ ತರುವ ಕಟ್ಟಡ ಇದಾಗಿದ್ದು, ಮಲ್ಲೇಶ್ವರದಲ್ಲಿ ಇರುವುದು ನಮ್ಮ ಭಾಗ್ಯವೇ ಸರಿ. ಇದನ್ನ ಉಳಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗಿದೆ. ಎಸ್ತೆಟಿಕ್ ಆರ್ಕಿಟೆಕ್ಟ್ ಸಂಸ್ಥೆಯವರು ಜೀರ್ಣೋದ್ಧಾರ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ. ಬಿಬಿಎಂಪಿ 2 ಕೋಟಿ ರೂ. ಅನುದಾನ ನೀಡಿದ್ದು, ಕೆಲಸ ಭರದಿಂದ ಸಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಹಳೆಯ ಅಥವಾ ಪಾರಂಪರಿಕ ಕಟ್ಟಡಗಳು ಎಂದರೆ ಜರ್ಮನ್ನರಿಗೆ ಅಚ್ಚುಮೆಚ್ಚು. ಅದಕ್ಕಾಗಿ ಇವತ್ತು ಬೆಂಗಳೂರಿನ ಜರ್ಮನ್ ಕಾನ್ಸುಲೇಟ್ ಜನರಲ್ ಆಗಿರುವ ಆಕ್ಚಿಮ್ ಬರ್ಕಾರ್ಟ್ ಹಾಗೂ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣರಾಜೇಂದ್ರ ಒಡೆಯರ್ ಸ್ಥಳಕ್ಕೆ ಆಗಮಿಸಿ ಭಂಗಲೆಯಲ್ಲಿ ನಡೆಯುತ್ತಿರುವ ಕೆಲಸವನ್ನು ವೀಕ್ಷಣೆ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ, ಇಡೀ ಬೆಂಗಳೂರಿನ ಕೀರ್ತಿಯನ್ನು ಹೆಚ್ಚಿಸುವ ಕಾರ್ಯ ಇದಾಗಿದೆ ಎಂದು ಡಿಸಿಎಂ ಹೇಳಿದರು.

ಚಕಿತರಾದ ಜರ್ಮನ್ನರು:

ಈ ಭಂಗಲೆಯಲ್ಲಿ ಆ ಕಾಲಕ್ಕೆ ಬೃಹತ್ ಗಾತ್ರದ ಸೋನಾ ಬಾತ್ ವ್ಯವಸ್ಥೆ ನಿರ್ಮಾಣವಾಗಿದೆ. ಇದನ್ನು ಕಂಡು ಜರ್ಮನ್ ರಾಜತಾಂತ್ರಿಕರು ಚಕಿತರಾದರು. ಕಟ್ಟಡದ ವಿನ್ಯಾಸ, ಗಾಳಿ-ಬೆಳಕಿನ ವ್ಯವಸ್ಥೆ, ಕಲ್ಲು ಮತ್ತು ಮರದ ಕೆತ್ತನೆ ಇತ್ಯಾದಿಗಳನ್ನು ಕಂಡು ಜರ್ಮನ್ ಕಾನ್ಸುಲೇಟ್ ಜನರಲ್ ಆಗಿರುವ ಆಕ್ಚಿಮ್ ಬರ್ಕಾರ್ಟ್ ಅವರು ಚಕಿತರಾದರು.

ಯದುವೀರ್ ಕೃಷ್ಣರಾಜೇಂದ್ರ ಒಡೆಯರ್ ಅವರು ಕೂಡ, ಪಾರಂಪರಿಕ ಕಟ್ಟಡವನ್ನು ಜೀರ್ಣೋದ್ಧಾರ ಮಾಡಿಸುತ್ತಿರುವ ಡಿಸಿಎಂ ಆಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಇಂಥ ಅಪರೂಪದ ಕಟ್ಟಡಗಳನ್ನು ಉಳಿಸಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಈ ವರ್ಷಾಂತ್ಯಕ್ಕೆ ಕಾಮಗಾರಿ ಮುಗಿಯುತ್ತದೆ. ಈ ಕಟ್ಟಡವನ್ನು ಪುನರುದ್ಧಾರ ಮಾಡುತ್ತಿರುವುದು ನಮಗೆ ಹೆಮ್ಮೆಯ ಸಂಗತಿ. ಕಾಮಗಾರಿ ಮುಗಿದ ಮೇಲೆ ಇಡೀ ಮಲ್ಲೇಶ್ವರವನ್ನು ಪ್ರತಿಬಿಂಬಿಸುವ ಮ್ಯೂಸಿಯಂ ರೀತಿಯಲ್ಲಿ ಇದನ್ನು ಅಭಿವೃದ್ಧಿ ಮಾಡಲಾಗುವುದು. ಆ ಮೂಲಕ ನಂಜುಂಡಯ್ಯ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲಾಗುವುದು ಎಂದರು.

ಕಳೆದ ವರ್ಷದ ನವೆಂಬರ್‌ನಲ್ಲಿ ಜೀರ್ಣೋದ್ಧಾರ ಕೆಲಸ ಶುರುವಾಗಿದೆ. ಕೆಲಸ ಆರಂಭಿಸುವ ಮುನ್ನ ವ್ಯಾಪಕ ಅಧ್ಯಯನ-ಸಂಶೋಧನೆ ಮಾಡಲಾಗಿದೆ. ಎಲ್ಲಿಯೂ ಮೂಲ ಸ್ವರೂಪಕ್ಕೆ ಧಕ್ಕೆ ಇಲ್ಲದೆ ಇಡೀ ಕಟ್ಟಡವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಅಲ್ಲಲ್ಲಿ ಶಿಥಿಲಗೊಂಡಿರುವ ಕಂಬಗಳು, ಮರದ ಕೆತ್ತನೆ. ಹಲಗೆಗಳು ಇತ್ಯಾದಿಗಳನ್ನು ಅತ್ಯಂತ ಜತನದಿಂದ ರಿಪೇರಿ ಮಾಡುವ ಅಥವಾ ಅದೇ ಶೈಲಿಯಲ್ಲಿ ಬದಲಿಸುವ ಕೆಲಸ ನಡೆಯುತ್ತಿದೆ. ಈ ವಿಷಯದಲ್ಲಿ ತಜ್ಞರಾಗಿರುವ ಅನೇಕರು ಕೆಲಸ ಮಾಡುತ್ತಿದ್ದಾರೆಂದು ಡಿಸಿಎಂ ಮಾಹಿತಿ ನೀಡಿದರು.

ಈ ಸಂಸದರ್ಭದಲ್ಲಿ ಎಚ್.ವಿ. ನಂಜುಂಡಯ್ಯ ಅವರ ಕುಟುಂಬದವರು ಇದ್ದು, ಜೀರ್ಣೋದ್ಧಾರ ಕೆಲಸಗಳನ್ನು ವೀಕ್ಷಣೆ ಮಾಡಿದರು. ಜರ್ಮನ್ ಕಾನ್ಸುಲೇಟ್‌ನ ಉಪ ಕಾನ್ಸುಲ್ ಜನರಲ್ ಕಾರ್ಲ್ ಫಿಲಿಪ್, ಜರ್ಮನ್ ಕಾನ್ಸುಲೇಟ್‌ನ ಸಾಂಸ್ಕೃತಿಕ ವಿಭಾಗದ ಅಧಿಕಾರಿ ಆನ್ ಕ್ರಿಸ್ಟಿನ್ ಸ್ಮಿತ್, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ಸುಜಾತಾ ಸುಂದರಂ, ಬಿಬಿಎಂಪಿ ಕಾರ್ಯ ನಿರ್ವಾಹಕ ಎಂಜಿನಿಯರ್ ಪಾಪ ರೆಡ್ಡಿ ಹಾಗೂ ಎಸ್ತೆಟಿಕ್ ಆರ್ಕಿಟೆಕ್ಟ್ ಸಂಸ್ಥೆಯ ಅಧಿಕಾರಿಗಳು ಕೂಡ ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDCM Ashwath NarayanGerman Consulate GeneralHV Nanjundaiah Heritage BuildingKannada News WebsiteLatest News KannadaLocal NewsS V NanjundaiahYaduveer Krishnadatta Chamaraja Wodeyarಬೆಂಗಳೂರು
Share213Tweet123Send
Previous Post

ಚಿತ್ರದುರ್ಗ ರೇಷ್ಮೆ ಇಲಾಖೆ ಪ್ರದರ್ಶಕ ಅಧಿಕಾರಿ ಎಸಿಬಿ ಬಲೆಗೆ

Next Post

ಜನರಿಕ್ ಔಷಧ: ಜನತೆಗೊಂದು ವರದಾನ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜನರಿಕ್ ಔಷಧಿಗಳು ಕಳಪೆಯಲ್ಲ: ಬೆಲೆ ಕಡಿಮೆ. ಆದರೆ, ಗುಣಮಟ್ಟ ಮಾತ್ರ ಅತ್ಯುತ್ತಮ

ಜನರಿಕ್ ಔಷಧ: ಜನತೆಗೊಂದು ವರದಾನ!

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ಉತ್ತಮ ಕಥೆ ಪುಸ್ತಕಗಳು ಸಮಗ್ರ ವಿಕಾಸಕ್ಕೆ ಬುನಾದಿ: ಪೊಲೀಸ್ ಅಧೀಕ್ಷಕಿ ಸ್ನೇಹ ರಾಜ್

ಉತ್ತಮ ಕಥೆ ಪುಸ್ತಕಗಳು ಸಮಗ್ರ ವಿಕಾಸಕ್ಕೆ ಬುನಾದಿ: ಪೊಲೀಸ್ ಅಧೀಕ್ಷಕಿ ಸ್ನೇಹ ರಾಜ್

February 5, 2026
ಸೊರಬ | ಉಳವಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

ಸೊರಬ | ಉಳವಿ ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಪರಿಶೀಲನೆ

February 5, 2026
ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

ವರ್ಲ್ಡ್ ಲೆಜೆಂಡ್ಸ್ ಪ್ರೊ ಟಿ20 ಲೀಗ್ | ದುಬೈ ರಾಯಲ್ಸ್ ತಂಡಕ್ಕೆ ಚಾಂಪಿಯನ್ ಪಟ್ಟ!

February 5, 2026
ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

ಜನಸಹಭಾಗಿತ್ವದಲ್ಲಿ ಬೃಹತ್ ಮೈಸೂರು ಮಹಾನಗರಪಾಲಿಕೆ ರಚಿಸುವಂತೆ ಆಗ್ರಹ

February 5, 2026
ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

ಬೆಂಗಳೂರು | ಮತ್ತೆ ನಮ್ಮ ಮೆಟ್ರೋ ಪ್ರಯಾಣದರ ಏರಿಕೆ | ಎಂದಿನಿಂದ ಜಾರಿ? ಎಷ್ಟು ಹೆಚ್ಚಳ?

February 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL