Tuesday, June 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಎಚ್.ವಿ.ನಂಜುಂಡಯ್ಯ ಪಾರಂಪರಿಕ ಕಟ್ಟಡ ಜೀರ್ಣೋದ್ಧಾರ: ಜರ್ಮನ್ ಕಾನ್ಸುಲೇಟ್ ಅಧಿಕಾರಿಗಳ ಮೆಚ್ಚುಗೆ

March 16, 2021
in Small Bytes, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ಅಧ್ಯಕ್ಷ ಹಾಗೂ ಮೈಸೂರು ಸಂಸ್ಥಾನದಲ್ಲಿ ಹಂಗಾಮಿ ದಿವಾನರಾಗಿದ್ದ ಎಚ್.ವಿ.ನಂಜುಂಡಯ್ಯ ಅವರು ವಾಸವಿದ್ದ ಹಾಗೂ ತದ ನಂತರ ಮಲ್ಲೇಶ್ವರದ ಸರಕಾರಿ ಬಾಲಕಿಯರ ಪ್ರೌಢಶಾಲೆಗೆ ದಾನ ಮಾಡಿದ್ದ ಭವ್ಯ ಭಂಗಲೆಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಸೆ ಮೇರೆಗೆ ಜೀರ್ಣೋದ್ಧಾರ ಮಾಡಲಾಗುತ್ತಿದ್ದು, ಡಿಸಿಎಂ ಅವರು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪ್ರಗತಿಯನ್ನು ಪರಿಶೀಲನೆ ನಡೆಸಿದರು.

ನಗರದಲ್ಲಿರುವ ಜರ್ಮನ್ ರಾಯಭಾರ ಕಚೇರಿಯ ಹಿರಿಯ ಅಧಿಕಾರಿಗಳು ಡಿಸಿಎಂ ಜತೆ ಈ ಭಂಗಲೆಗೆ ಭೇಟಿ ನೀಡಿ ಅಲ್ಲಿನ ನಿರ್ಮಾಣ ಶೈಲಿಯನ್ನು ಕಂಡು ಚಕಿತರಾದರು. ನಗರದ ಪ್ರಮುಖ ಪಾರಂಪರಿಕ ಕಟ್ಟಡವಾಗಿರುವ ಈ ಭಂಗಲೆಯಲ್ಲಿ ನಂಜುಂಡಯ್ಯ ಅವರು ವಾಸವಿದ್ದರು. 1915ರಲ್ಲಿ ಕಟ್ಟಡವನ್ನು ನಿರ್ಮಾಣ ಮಾಡಲಾಗಿತ್ತು. ಇದು ಎಚ್‌ವಿಎನ್ ಭಂಗಲೆ ಎಂದೇ ಪ್ರಖ್ಯಾತಿಯಾಗಿದೆ. ಕಟ್ಟಡ ಹಳತಾದಂತೆಲ್ಲ ಅದಕ್ಕೆ ಅಲ್ಲಲ್ಲಿ ಧಕ್ಕೆ ಉಂಟಾಗಿತ್ತು. ಇದನ್ನು ಗಮನಿಸಿದ್ದ ಡಿಸಿಎಂ ಅವರು ಬಿಬಿಎಂಪಿ ನೆರವಿನೊಂದಿಗೆ ಜೀರ್ಣೋದ್ಧಾರ ಕಾರ್ಯ ಕೈಗೊಂಡಿದ್ದಾರೆ.

2 ಕೋಟಿ ರೂ. ವೆಚ್ಚ:

ಇಡೀ ನಗರಕ್ಕೆ ಹೆಮ್ಮೆ ತರುವ ಕಟ್ಟಡ ಇದಾಗಿದ್ದು, ಮಲ್ಲೇಶ್ವರದಲ್ಲಿ ಇರುವುದು ನಮ್ಮ ಭಾಗ್ಯವೇ ಸರಿ. ಇದನ್ನ ಉಳಿಸಿ ಸಂರಕ್ಷಣೆ ಮಾಡುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗಿದೆ. ಎಸ್ತೆಟಿಕ್ ಆರ್ಕಿಟೆಕ್ಟ್ ಸಂಸ್ಥೆಯವರು ಜೀರ್ಣೋದ್ಧಾರ ಕಾಮಗಾರಿ ಕೈಗೆತ್ತಿಕೊಂಡಿದ್ದಾರೆ. ಬಿಬಿಎಂಪಿ 2 ಕೋಟಿ ರೂ. ಅನುದಾನ ನೀಡಿದ್ದು, ಕೆಲಸ ಭರದಿಂದ ಸಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ಹಳೆಯ ಅಥವಾ ಪಾರಂಪರಿಕ ಕಟ್ಟಡಗಳು ಎಂದರೆ ಜರ್ಮನ್ನರಿಗೆ ಅಚ್ಚುಮೆಚ್ಚು. ಅದಕ್ಕಾಗಿ ಇವತ್ತು ಬೆಂಗಳೂರಿನ ಜರ್ಮನ್ ಕಾನ್ಸುಲೇಟ್ ಜನರಲ್ ಆಗಿರುವ ಆಕ್ಚಿಮ್ ಬರ್ಕಾರ್ಟ್ ಹಾಗೂ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣರಾಜೇಂದ್ರ ಒಡೆಯರ್ ಸ್ಥಳಕ್ಕೆ ಆಗಮಿಸಿ ಭಂಗಲೆಯಲ್ಲಿ ನಡೆಯುತ್ತಿರುವ ಕೆಲಸವನ್ನು ವೀಕ್ಷಣೆ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ, ಇಡೀ ಬೆಂಗಳೂರಿನ ಕೀರ್ತಿಯನ್ನು ಹೆಚ್ಚಿಸುವ ಕಾರ್ಯ ಇದಾಗಿದೆ ಎಂದು ಡಿಸಿಎಂ ಹೇಳಿದರು.

ಚಕಿತರಾದ ಜರ್ಮನ್ನರು:

ಈ ಭಂಗಲೆಯಲ್ಲಿ ಆ ಕಾಲಕ್ಕೆ ಬೃಹತ್ ಗಾತ್ರದ ಸೋನಾ ಬಾತ್ ವ್ಯವಸ್ಥೆ ನಿರ್ಮಾಣವಾಗಿದೆ. ಇದನ್ನು ಕಂಡು ಜರ್ಮನ್ ರಾಜತಾಂತ್ರಿಕರು ಚಕಿತರಾದರು. ಕಟ್ಟಡದ ವಿನ್ಯಾಸ, ಗಾಳಿ-ಬೆಳಕಿನ ವ್ಯವಸ್ಥೆ, ಕಲ್ಲು ಮತ್ತು ಮರದ ಕೆತ್ತನೆ ಇತ್ಯಾದಿಗಳನ್ನು ಕಂಡು ಜರ್ಮನ್ ಕಾನ್ಸುಲೇಟ್ ಜನರಲ್ ಆಗಿರುವ ಆಕ್ಚಿಮ್ ಬರ್ಕಾರ್ಟ್ ಅವರು ಚಕಿತರಾದರು.

ಯದುವೀರ್ ಕೃಷ್ಣರಾಜೇಂದ್ರ ಒಡೆಯರ್ ಅವರು ಕೂಡ, ಪಾರಂಪರಿಕ ಕಟ್ಟಡವನ್ನು ಜೀರ್ಣೋದ್ಧಾರ ಮಾಡಿಸುತ್ತಿರುವ ಡಿಸಿಎಂ ಆಸಕ್ತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹಾಗೂ ಇಂಥ ಅಪರೂಪದ ಕಟ್ಟಡಗಳನ್ನು ಉಳಿಸಿ ಸಂರಕ್ಷಣೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಈ ವರ್ಷಾಂತ್ಯಕ್ಕೆ ಕಾಮಗಾರಿ ಮುಗಿಯುತ್ತದೆ. ಈ ಕಟ್ಟಡವನ್ನು ಪುನರುದ್ಧಾರ ಮಾಡುತ್ತಿರುವುದು ನಮಗೆ ಹೆಮ್ಮೆಯ ಸಂಗತಿ. ಕಾಮಗಾರಿ ಮುಗಿದ ಮೇಲೆ ಇಡೀ ಮಲ್ಲೇಶ್ವರವನ್ನು ಪ್ರತಿಬಿಂಬಿಸುವ ಮ್ಯೂಸಿಯಂ ರೀತಿಯಲ್ಲಿ ಇದನ್ನು ಅಭಿವೃದ್ಧಿ ಮಾಡಲಾಗುವುದು. ಆ ಮೂಲಕ ನಂಜುಂಡಯ್ಯ ಅವರ ಹೆಸರನ್ನು ಚಿರಸ್ಥಾಯಿಗೊಳಿಸಲಾಗುವುದು ಎಂದರು.

ಕಳೆದ ವರ್ಷದ ನವೆಂಬರ್‌ನಲ್ಲಿ ಜೀರ್ಣೋದ್ಧಾರ ಕೆಲಸ ಶುರುವಾಗಿದೆ. ಕೆಲಸ ಆರಂಭಿಸುವ ಮುನ್ನ ವ್ಯಾಪಕ ಅಧ್ಯಯನ-ಸಂಶೋಧನೆ ಮಾಡಲಾಗಿದೆ. ಎಲ್ಲಿಯೂ ಮೂಲ ಸ್ವರೂಪಕ್ಕೆ ಧಕ್ಕೆ ಇಲ್ಲದೆ ಇಡೀ ಕಟ್ಟಡವನ್ನು ಜೀರ್ಣೋದ್ಧಾರ ಮಾಡಲಾಗುತ್ತಿದೆ. ಅಲ್ಲಲ್ಲಿ ಶಿಥಿಲಗೊಂಡಿರುವ ಕಂಬಗಳು, ಮರದ ಕೆತ್ತನೆ. ಹಲಗೆಗಳು ಇತ್ಯಾದಿಗಳನ್ನು ಅತ್ಯಂತ ಜತನದಿಂದ ರಿಪೇರಿ ಮಾಡುವ ಅಥವಾ ಅದೇ ಶೈಲಿಯಲ್ಲಿ ಬದಲಿಸುವ ಕೆಲಸ ನಡೆಯುತ್ತಿದೆ. ಈ ವಿಷಯದಲ್ಲಿ ತಜ್ಞರಾಗಿರುವ ಅನೇಕರು ಕೆಲಸ ಮಾಡುತ್ತಿದ್ದಾರೆಂದು ಡಿಸಿಎಂ ಮಾಹಿತಿ ನೀಡಿದರು.

ಈ ಸಂಸದರ್ಭದಲ್ಲಿ ಎಚ್.ವಿ. ನಂಜುಂಡಯ್ಯ ಅವರ ಕುಟುಂಬದವರು ಇದ್ದು, ಜೀರ್ಣೋದ್ಧಾರ ಕೆಲಸಗಳನ್ನು ವೀಕ್ಷಣೆ ಮಾಡಿದರು. ಜರ್ಮನ್ ಕಾನ್ಸುಲೇಟ್‌ನ ಉಪ ಕಾನ್ಸುಲ್ ಜನರಲ್ ಕಾರ್ಲ್ ಫಿಲಿಪ್, ಜರ್ಮನ್ ಕಾನ್ಸುಲೇಟ್‌ನ ಸಾಂಸ್ಕೃತಿಕ ವಿಭಾಗದ ಅಧಿಕಾರಿ ಆನ್ ಕ್ರಿಸ್ಟಿನ್ ಸ್ಮಿತ್, ಸಾಂಸ್ಕೃತಿಕ ವಿಭಾಗದ ಕಾರ್ಯದರ್ಶಿ ಸುಜಾತಾ ಸುಂದರಂ, ಬಿಬಿಎಂಪಿ ಕಾರ್ಯ ನಿರ್ವಾಹಕ ಎಂಜಿನಿಯರ್ ಪಾಪ ರೆಡ್ಡಿ ಹಾಗೂ ಎಸ್ತೆಟಿಕ್ ಆರ್ಕಿಟೆಕ್ಟ್ ಸಂಸ್ಥೆಯ ಅಧಿಕಾರಿಗಳು ಕೂಡ ಹಾಜರಿದ್ದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

 

Tags: BangaloreDCM Ashwath NarayanGerman Consulate GeneralHV Nanjundaiah Heritage BuildingKannada News WebsiteLatest News KannadaLocal NewsS V NanjundaiahYaduveer Krishnadatta Chamaraja Wodeyarಬೆಂಗಳೂರು
Previous Post

ಚಿತ್ರದುರ್ಗ ರೇಷ್ಮೆ ಇಲಾಖೆ ಪ್ರದರ್ಶಕ ಅಧಿಕಾರಿ ಎಸಿಬಿ ಬಲೆಗೆ

Next Post

ಜನರಿಕ್ ಔಷಧ: ಜನತೆಗೊಂದು ವರದಾನ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Image Courtesy: Internet

ಜನರಿಕ್ ಔಷಧ: ಜನತೆಗೊಂದು ವರದಾನ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!