ಕಲ್ಪ ಮೀಡಿಯಾ ಹೌಸ್ | ಹೈದರಾಬದ್ |
ಜಲ್ಲಿ ತುಂಬಿದ್ದ ಟ್ರಕ್ ಹಾಗೂ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 19 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವಲ್ಲಾ ಬಳಿಯ ಮಿರ್ಜಗುಡದಲ್ಲಿ ನಡೆದಿದೆ.
ಘಟನೆ ನಡೆದಿದ್ದು ಹೇಗೆ?
ಜಲ್ಲಿ ಕಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರಕ್ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಆರ್’ಟಿಸಿ ಬಸ್’ಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.

ಅಪಘಾತಕ್ಕೀಡಾದ ಬಸ್’ನಲ್ಲಿ 40 ಪ್ರಯಾಣಿಕರಿದ್ದರು. ಡಿಕ್ಕಿಯ ನಂತರ ಟ್ರಕ’ನಲ್ಲಿದ್ದ ಜಲ್ಲಿಕಲ್ಲುಗಳ ಹೊರೆ ಪ್ರಯಾಣಿಕರ ಮೇಲೆ ಬಿದ್ದಿದೆ.
ಬಸ್’ನಿನಿಂದ ಶವಗಳನ್ನು ಮತ್ತು ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post