No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ನಗರದ ರಸ್ತೆ ಅಗಲೀಕರಣಕ್ಕೆ ನಾನು ಸದಾ ಬದ್ಧ: ಶಾಸಕ ಸಂಗಮೇಶ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2020
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ನ್ಯಾಯಾಯಲಯದ ಮುಂಭಾಗದಲ್ಲಿ ನಿರ್ಮಾಣವಾಗುತ್ತಿರುವ ರಸ್ತೆಯನ್ನು ರಂಗಪ್ಪ ವೃತ್ತದವರೆಗೆ ವಿಶಾಲವಾಗಿ ನಿರ್ಮಿಸುವ ಮೂಲಕ ನಾಗರಿಕರ ಸಂಚಾರಕ್ಕೆ ಮತ್ತು ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕೆಂದು ನಗರದ ವಕೀಲರ ಸಂಘದವರು ಶಾಸಕ ಬಿ.ಕೆ. ಸಂಗಮೇಶ್ ಅವರ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದರು.

ಸುಂದರ ನಗರದ ನಿರ್ಮಾಣಕ್ಕೆ ಅಗತ್ಯವಾದ ಗುಣಮಟ್ಟದ ವಿಶಾಲ ರಸ್ತೆ ಹಾಗೂ ರಸ್ತೆ ಬದಿ ಸಾಲುಮರಗಳನ್ನು ಬೆಳೆಸುವಿಕೆ ಅಗತ್ಯವಾಗಿದ್ದು ಈ ನಿಟ್ಟಿನಲ್ಲಿ ಸದರಿ ನ್ಯಾಯಾಲಯದ ರಸ್ತೆ ವಿಶಾಲಗೊಳಿಸುವದರ ಜೊತೆಗೆ ಉತ್ತಮ ಫುಟ್’ಪಾತ್ ಹಾಗೂ ಸದರಿ ರಸ್ತೆಯ ಉಭಯ ಪಾರ್ಶ್ವಗಳಲ್ಲಿ ಸಿಸಿಗಳನ್ನು ನೆಟ್ಟು ಮರಗಳನ್ನು ಬೆಳೆಸಲು ಸೂಕ್ತ ವ್ಯವಸ್ಥೆ ಮಾಡಬೇಕೆಂದು ವಕೀಲರು ಶಾಸಕರಿಗೆ ಮನವಿ ಮಾಡಿ ಮಾತನಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕರು, ಭದ್ರಾವತಿ ನಗರವನ್ನು ಸುಂದರ ನಗರವನ್ನಾಗಿ ಮಾಡಲು ವಕೀಲರು ತೋರುತ್ತಿರುವ ಆಸಕ್ತಿಗೆ ಸಂತಸವಾಗಿದೆ. ಇದೇ ರೀತಿ ನಗರದ ಬೇರೆ ರಸ್ತೆಗಳಾದ ಸಿಎನ್ ರಸ್ತೆ ಅಗಲೀಕರಣವೂ ಸಹ ಅತ್ಯಗತ್ಯವಾಗಿದ್ದು ಅದಕ್ಕೂ ನಿಮ್ಮ ಸಹಕಾರ ಅಗತ್ಯ. ಭದ್ರಾವತಿಯಲ್ಲಿ ಹಿಂದೆಂದೂ ಕಾಣದಂತಹ ರಸ್ತೆಗಳು ನಿರ್ಮಾಣವಾಗುತ್ತಿದೆ. ಈಗ ನ್ಯಾಯಾಲಯದ ಮುಂದಿರುವ ರಸ್ತೆಯನ್ನು ನಿಗಧಿತವಾದ ಅಳತೆಗೆ ಅಗಲೀಕರಣ ಮಾಡಲು ನನ್ನ ಸಂಪೂರ್ಣ ಸಹಕಾರವಿದೆ. ರಸ್ತೆ ಅಗಲೀಕರಣ ಮಾಡುವಾಗ ಕೆಲವರ ಕಟ್ಟಡಗಳು ಹೋಗುತ್ತವೆ ಎಂದರು.

ಊರಿನ ಒಳಿತಿಗಾಗಿ ಅದನ್ನು ಎಲ್ಲರೂ ಒಪ್ಪಿಕೊಳ್ಳಬೇಕಾಗುತ್ತದೆ. ನಮಗೆ ಸೇರಿದ ಕೆಲವು ಕಟ್ಟಡಗಳು ರಸ್ತೆ ಬದಿಯಲ್ಲಿಯೇ ಯಿವೆ ರಸ್ತೆ ಅಗಲೀಕರಣಕ್ಕೆ ಅವುಗಳ ಕೆಲವು ಭಾಗವನ್ನು ಒಡೆಯಲೇ ಬೇಕಾದ್ದರಿಂದ ನಾವು ಅದಕ್ಕೆ ಸಮ್ಮತಿಸಿದ್ದೇವೆ. ಅದೇ ರೀತಿ ನಾಗರಿಕರು ಸಹ ಇದನ್ನು ಅರ್ಥಮಾಡಿಕೊಂಡು ಸಹಕರಿಸಬೇಕು.

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭಾ ಆಯುಕ್ತ ಮನೋಹರ್, ನ್ಯಾಯಾಲಯದ ಎದುರಿಗಿರುವ ಕಟ್ಟಡಗಳ ಮಾಲೀಕರಿಗೆ ನಗರಸಭೆಯಿಂದ ದಾಖಲಾತಿಗಳನ್ನು ಹಾಜರುಪಡಿಸುವಂತೆ ನೋಟೀಸ್ ನೀಡಿದ್ದು, ಅವರು ನೀಡಿರುವ ದಾಖಲಾತಿಗಳನ್ನು ಪರೀಶೀಲಿಸಿ ಆ ಕಟ್ಟಡಗಳು ಅಕ್ರಮವಾಗಿ ನಿರ್ಮಿಸಿದ್ದರೆ ಅವುಗಳನ್ನು ತೆರವುಗೊಳಿಸಲಾಗುತ್ತದೆ. ಒಂದೊಮ್ಮೆ ದಾಖಲಾತಿಯಿದ್ದರೆ ಅವರಿಗೆ ಪರಿಹಾರ ನೀಡಿ ಆಜಾಗವನ್ನು ರಸ್ತೆ ಅಗಲೀಕರಣಕ್ಕೆ ಸ್ವಾಧೀನ ಪಡಿಸಿಕೊಳ್ಳಬೇಕಾಗುತ್ತದೆ. ಈ ಕುರಿತು ಶಾಸಕರು ನಿರ್ಧಾರ ಕೈಗೊಳ್ಳಬೇಕು ಎಂದರು.

ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಮಂಜುನಾಥ ಮಾತನಾಡಿ, ನ್ಯಾಯಾಲಯದ ಮುಂದಿರುವ ರಸ್ತೆಯನ್ನು ಅಡ್ಜೆಸ್ಟ್‌ ಮಾಡಿ ನಿರ್ಮಿಸಲಾಗುತ್ತಿದೆ. ವಿಶಾಲ ರಸ್ತೆ ಮಾಡಬೇಕಾದರೆ ಕೆಲವು ಕಟ್ಟಡಗಳನ್ನು ತೆರವುಗೊಳಿಸಿ ಮಾಡಬೇಕಾಗುತ್ತದೆ ಎಂದರು.

ಶಾಸಕ ಬಿ.ಕೆ. ಸಂಗಮೇಶ್ ಪ್ರತಿಕ್ರಿಯಿಸಿ, ಊರಿನ ಒಳಿತಿಗಿಂತ ಯಾವುದೂ ದೊಡ್ಡದಲ್ಲ ನ್ಯಾಯಾಲಯದ ಮುಂದಿರುವ ರಸ್ತೆ ರಂಗಪ್ಪ ವೃತ್ತದವರೆಗೆ ನಿಗದಿತವಾದ ರೀತಿ ಸಮರ್ಪಕವಾಗಿ ವಿಶಾಲ ರಸ್ತೆ ನಿರ್ಮಾಣಕ್ಕೆ ನಾವು ಬದ್ಧರಿದ್ದು ಈ ದಿಸೆಯಲ್ಲಿ ಅಲ್ಲಿ ರಸ್ತೆ ಬದಿಗೆಯಿರುವ ಕಟ್ಟಡಗಳು ಅಕ್ರಮವಾಗಿದ್ದರೆ ಅದನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಲಾಗುವುದು. ಒಂದೊಮ್ಮೆ ಆ ಕಟ್ಟಡಗಳ ಮಾಲಿಕರು ಸಮರ್ಪಕವಾದ ದಾಖಲಾತಿ ಹೊಂದಿರುವುದನ್ನು ತೋರಿಸಿದರೆ ಅವರಿಗೆ ಪರಿಹಾರ ನೀಡಿ ಜಾಗವನ್ನು ವಶಪಡಿಸಿಕೊಂಡು ರಸ್ತೆ ನಿರ್ಮಾಣ ಮಾಡುವ ಕುರಿತು ಗಮನಹರಿಸಲಾಗುವುದು. ರಸ್ತೆ ಅಗಲೀಕರಣಕ್ಕೆ ರಸ್ತೆ ಬದಿಯ ಮರಗಳನ್ನು ಕಡಿದಿರುವುದರಿಂದ ರಸ್ತೆ ಅಗಲೀಕರಣವನ್ನು ವಿಶಾಲವಾಗಿ ಮಾಡಲೇಬೇಕಾಗುತ್ತದೆ ಎಂದರು.

ನ್ಯಾಯವಾದಿಗಳ ಸಂಘದ ಅಧ್ಯಕ್ಷ ವಿ. ವೆಂಕಟೇಶ್, ಉಪಾಧ್ಯಕ್ಷ ವೈ. ಜಯರಾಂ, ಕಾರ್ಯದರ್ಶಿ ರಾಜು, ಸಹಕಾರ್ಯದರ್ಶಿ ಮೋಹನ್, ಖಜಾಂಚಿ ರಂಗಪ್ಪ ಹಾಗೂ ಹಿರಿಯ ವಕೀಲರಾದ ಎಸ್. ನಾರಾಯಣರಾವ್, ಎಚ್. ಮಹೇಶ್, ಎ.ಟಿ. ರವಿ, ಬಿ.ಎಸ್. ಮಹೇಶ್ ಕುಮಾರ್, ಬಿ.ಎಸ್. ನಾಗರಾಜ, ಎಚ್.ಎಲ್. ವಿಶ್ವನಾಥ್, ಹೇಮಂತ, ಬಸವರಾಜ, ಮುಂತಾದವರು ಶಾಸಕರ ಬೇಟಿಯ ವೇಳೆ ಹಾಜರಿದ್ದು ಸದರಿ ರಸ್ತೆಯ ಅಗಲೀಕರಣದ ಕುರಿತು ಅವರಿಗೆ ಮನವರಿಕೆ ಮಾಡಿಕೊಟ್ಟರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಸೋಮಶೇಖರ್ ಅವರು ಹಾಜರಿದ್ದರು.

Get in Touch With Us info@kalpa.news Whatsapp: 9481252093

Tags: BhadravathiKannadaNewsWebsiteLatestNewsKannadaMalnadNewsMLA B K SangameshRoad Wideningಭದ್ರಾವತಿರಸ್ತೆ ಅಗಲೀಕರಣಶಾಸಕ ಬಿ.ಕೆ. ಸಂಗಮೇಶ್
Share198Tweet123Send
Previous Post

ವಿಶ್ವದಾದ್ಯಂತ ಕೊರೋನಾ ವೈರಸ್’ಗೆ ಬಲಿಯಾದವರ ಸಂಖ್ಯೆ 8 ಸಾವಿರಕ್ಕೆ ಏರಿಕೆ

Next Post

ಕೊರೋನಾ ಕುರಿತು ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಕಲಾವಿದ ಗುರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊರೋನಾ ಕುರಿತು ಸ್ವಂತ ಖರ್ಚಿನಲ್ಲಿ ಜಾಗೃತಿ ಮೂಡಿಸುತ್ತಿರುವ ಭದ್ರಾವತಿ ಕಲಾವಿದ ಗುರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL