ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತಾವು ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಮಾತ್ರವಲ್ಲ ಇಂದು ಪ್ರಧಾನಿ ಮೋದಿ ಅವರ ಕಾರ್ಯಕ್ರಮಕ್ಕೂ ಸಹ ಹೋಗುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ನಗರದಲ್ಲಿ ಇಂದು ನಡೆಯುತ್ತಿರುವ ಪ್ರಧಾನಿ ನರೇಂದ್ರ ಮೋದಿ #PMNarendraModi ಅವರ ಕಾರ್ಯಕ್ರಮಕ್ಕೆ ತಾವು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಮೋದಿಯವರನ್ನು ದೇಶದ ಜನತೆ ದೇವರಂತೆ ಕಾಣುತ್ತಾರೆ. ನಮಗೂ ಸಹ ಹಾಗೆಯೇ. ಹೀಗಾಗಿ, ಜನತೆಯ ಪರವಾಗಿ ಮೋದಿಯವರಗೆ ಸ್ವಾಗತ ಕೋರುತ್ತೇನೆ. ಆದರೆ, ನಾನು ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದಿದ್ದಾರೆ.
ಕುಟುಂಬ ರಾಜಕಾರಣದ ವಿರುದ್ಧ ನಮ್ಮ ಹೋರಾಟವೇ ಹೊರತು, ಪಕ್ಷ ಹಾಗೂ ಮೋದಿಯವರ ವಿರುದ್ಧವಲ್ಲ. ನಾವು ದೇವರಂತೆ ಕಾಣುವ ಮೋದಿ ಅವರ ಬಳಿಗೆ ನಾನು ಚುನಾವಣೆಯಲ್ಲಿ ಗೆಲುವು ಸಾಧಿಸಿಯೇ ಹೋಗುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post