No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಎಂಪಿಎಂ ಸ್ಥಿತಿ ಹೀಗೇ ಮುಂದುವರೆದರೆ ಉಳಿದ ಕಾರ್ಮಿಕರೂ ಬೀದಿಪಾಲಾಗಲಿದ್ದಾರೆ

ಎಂಪಿಎಂ ಕಾರ್ಖಾನೆ ಮುಚ್ಚದಂತೆ ರಾಜ್ಯ ಸರಕಾರಕ್ಕೆ ನೌಕರರ ಸಂಘದ ಮನವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 28, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯ ಭ್ರಷ್ಠ ಅಧಿಕಾರಿಗಳು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿಗಳಿಗೆ ಕಾರ್ಖಾನೆಯಲ್ಲಿ ಸಂಪೂರ್ಣ ಉತ್ಪಾದನೆ ಸ್ಥಗಿತ ಮಾಡಲಾಗಿದೆ ಎಂಬ ಪತ್ರ ಬರೆದಿರುವುದು ದುರಂತ ಎಂದು ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ಬಸವರಾಜಯ್ಯ ಮನವಿಯಲ್ಲಿ ತಿಳಿಸಿದ್ದಾರೆ.

ಎಂಪಿಎಂ ಕಾಗದ ಕಾರ್ಖಾನೆ ನೌಕರರ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಮಿನಿ ವಿಧಾನಸೌಧ ಮುಂಭಾಗ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಇದೇ ಸ್ಥಿತಿ ಮುಂದುವರೆದರೆ ಕಾರ್ಖಾನೆಯಲ್ಲಿ ಹಾಲಿ ಉಳಿದಿರುವ ಕಾಯಂ ಕಾರ್ಮಿಕರ ಬದುಕೂ ಸಹ ಬೀದಿ ಪಾಲಾಗಲಿದೆ. ಸರ್.ಎಂ. ವಿಶ್ವೇಶ್ವರಯ್ಯ ಸ್ಥಾಪಿಸಿರುವ ಎಂಪಿಎಂ ಕಾರ್ಖಾನೆಯನ್ನು ಆಡಳಿತ ವರ್ಗದ ಕೈಗಳು ನಿಷ್ಕ್ರಿಯೆ ಆಳ್ವಿಕೆಯಿಂದ ಅಧೋಗತಿಗೆ ತಂದು ನಿಲ್ಲಿಸಿದ್ದಾರೆ. ಸ್ವಯಂ ನಿವೃತ್ತಿ ಯೋಜನೆಯಡಿ ಸಾವಿರಾರು ಕಾರ್ಮಿಕರು ನಿವೃತ್ತಿ ಪಡೆಯುವಂತೆ ಮಾಡಲಾಗಿದೆ. ಸ್ವಯಂ ನಿವೃತ್ತಿ ಪಡೆಯದ ಸುಮಾರು 240 ಮಂದಿ ಕಾರ್ಮಿಕರು ಎಂಪಿಎಂ ಮತ್ತೆ ಪ್ರಾರಂಭವಾಗುವ ವಿಶ್ವಾಸ ಹೊತ್ತು ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇಂದಲ್ಲಾ ನಾಳೇ ಕಾರ್ಖಾನೆ ಮತ್ತೆ ಉತ್ತಮ ಪರಿಸ್ಥಿತಿ ತಲುಪುತ್ತದೆ ಎಂಬ ಆಶಾ ಭಾವನೆ ಹೊಂದಿದ್ದಾರೆ. ಸ್ವಯಂ ನಿವೃತ್ತಿ ಪಡೆದ ಕಾರ್ಮಿಕರಿಗೆ ನೀಡಬೇಕಾಗಿರುವ ಸವಲತ್ತುಗಳು ನೀಡದೆ ಸತಾವಣೆ ಮಾಡಲಾಗುತ್ತಿದೆ. ಕಾರ್ಖಾನೆಯ ಮನೆಗಳಲ್ಲಿ ವಾಸಿಸುತ್ತಿರುವವರಿಗೆ ಖಾಲಿ ಮಾಡುವಂತೆ ನೋಟೀಸ್ ನೀಡಲಾಗುತ್ತಿದೆ ಎಂದರು.

ಇಷ್ಟೆಲ್ಲಾ ಅವಾಂತರಗಳು, ಅನಾಹುತಗಳು ನಡೆಯುತ್ತಿದ್ದರು ನಿವೃತ್ತಿ ಪಡೆದ ಕೆಲ ಪಟ್ಟಭದ್ರ ಹಿತಾಸಕ್ತಿ ಅಧಿಕಾರಿಗಳು ಪುನಃ ಹಿಂಬಾಗಿಲಿನಿಂದ ಕಾರ್ಖಾನೆಯಲ್ಲಿ ಕೆಲಸಕ್ಕೆ ಸೇರಿಕೊಂಡು ಕಾರ್ಖಾನೆಯನ್ನು ಸಂಪೂರ್ಣವಾಗಿ ಮುಚ್ಚುವ ಪ್ರಯತ್ನ ಮಾಡುತ್ತಿದ್ದಾರೆ. ಆದ್ದರಿಂದ ಈ ಹಿಂದೆ ನಗರಕ್ಕಾಗಮಿಸಿದ್ದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿದ್ದ ಭರವಸೆಯಂತೆ ಈ ಕಾರ್ಖಾನೆಯನ್ನು ಪುನರಾರಂಭಗೊಳಿಸಬೇಕು. ಭ್ರಷ್ಟ ಅಧಿಕಾರಿಗಳನ್ನು ಕಾರ್ಖಾನೆಯಿಂದ ಹೊರಗಟ್ಟಿ ಕಳಂಕ ರಹಿತ ಐಎಎಸ್ ಮತ್ತು ಕೆಎಎಸ್ ಅಧಿಕಾರಿಗಳನ್ನು ನೇಮಿಸಬೇಕು. ನೌಕರರಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಿ ಕೊಡಬೇಕು. ಕಾರ್ಖಾನೆಯನ್ನು ಸರಕಾರಿ ಸ್ವಾಮ್ಯದಲ್ಲಿಯೆ ಉಳಿಸಬೇಕೆಂದು ಒತ್ತಾಯಿಸಿದರು.

ಪ್ರಸ್ತುತ ಉಳಿದಿರುವ ಕಾರ್ಮಿಕರನ್ನು ಬಳಸಿಕೊಂಡು ಅತಿಕಡಿಮೆ ಬಂಡವಾಳ ತೊಡಗಿಸಿ ಉತ್ಪಾದನೆ ಪ್ರಾರಂಭಿಸಬೇಕು. ಕಾರ್ಖಾನೆಯ ಆಡಳಿತದ ಸುಮಾರು 75 ಸಾವಿರ ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿರುವ ಕಚ್ಚಾ ವಸ್ತುಗಳಾದ ನೀಲಗಿರಿ ಮತ್ತು ಅಕೇಶಿಯ ಮರಗಳನ್ನು ಕಡಿತಲೆ ಮಾಡಿ ಮಾರಾಟ ಮಾಡುವ ಮೂಲಕ ಕಾರ್ಮಿಕರಿಗೆ ನೀಡಬೇಕಾದ ಸಂಬಳ ಮತ್ತು ಸೌಲಭ್ಯ ನೀಡಬಹುದಾಗಿರುತ್ತದೆ. ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚದಂತೆ ಮರುಜೀವ ನೀಡಿ ಸರ್’ಎಂವಿ ರವರ ಹೆಸರನ್ನು ಉಳಿಸಲು ಮುಂದಾಗಬೇಕೆಂದು ಬಸವರಾಜಯ್ಯ ಒತ್ತಾಯಿಸಿದರು.

ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಧರ್ಮಪ್ರಸಾದ್ ಮಾತನಾಡಿ ಎಂಪಿಎಂ ಕಾರ್ಖಾನೆಯ ಇಂದಿನ ದುಸ್ಥಿತಿಗೆ ಕಾರ್ಖಾನೆಯ ಕೆಟ್ಟ ಆಡಳಿತ ನೀತಿ ಮತ್ತು ಸ್ಥಳೀಯ ಜನಪ್ರತಿನಿಧಿಗಳೆಂದು ಆರೋಪಿಸಿದರು. ತಹಶೀಲ್ದಾರ್ ಸೋಮಶೇಖರ್ ಮನವಿಯನ್ನು ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಕಾರ್ಮಿಕ ಮುಖಂಡರಾದ ಲಿಂಗೋಜಿರಾವ್, ಮುತ್ತು, ರಮೇಶ್, ಬ್ರಹ್ಮಲಿಂಗಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್.ರಾಜು, ಮನೆ ಮಾಲೀಕರ ಸಂಘದ ಅಧ್ಯಕ್ಷ ಎಲ್.ವಿ.ರುದ್ರಪ್ಪ ಹಾಗೂ ವಿವಿಧ ಸಂಘಸಂಸ್ಥೆಗಳ ಮುಖಂಡರು ಹಾಜರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsMalnad NewsMPM BhadravathiMysore Paper Millsಎಂಪಿಎಂ ಕಾಗದ ಕಾರ್ಖಾನೆಭದ್ರಾವತಿಮೈಸೂರು ಕಾಗದ ಕಾರ್ಖಾನೆ
Share196Tweet123Send
Previous Post

ಭದ್ರಾವತಿ: ಕರುಮಾರಿಯಮ್ಮ ದೇವಸ್ಥಾನ ಲೋಕಾರ್ಪಣೆ

Next Post

ಸಹನಾ ಚೇತನ್ ಬರೆಯುತ್ತಾರೆ: ಮಾಲ್‌ಗೆ ಹೋಗಿ ಸಿನೆಮಾ ನೋಡುವ ಬದಲು ನೃತ್ಯ ವೀಕ್ಷಣೆಯ ಪಣ ತೊಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಹನಾ ಚೇತನ್ ಬರೆಯುತ್ತಾರೆ: ಮಾಲ್‌ಗೆ ಹೋಗಿ ಸಿನೆಮಾ ನೋಡುವ ಬದಲು ನೃತ್ಯ ವೀಕ್ಷಣೆಯ ಪಣ ತೊಡಿ

ಸಹನಾ ಚೇತನ್ ಬರೆಯುತ್ತಾರೆ: ಮಾಲ್‌ಗೆ ಹೋಗಿ ಸಿನೆಮಾ ನೋಡುವ ಬದಲು ನೃತ್ಯ ವೀಕ್ಷಣೆಯ ಪಣ ತೊಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಾಜ್ಯ ಬಜೆಟ್ 2026 | ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

ರಾಜ್ಯ ಬಜೆಟ್ 2026 | ಮುಳ್ಳಯ್ಯನಗಿರಿ ಪ್ರವಾಸಿಗರಿಗೆ ಬಿಗ್ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರ್ಕಾರ

March 6, 2026
ರಾಜ್ಯ ಬಜೆಟ್ 2026 | 16 ವರ್ಷದೊಳಗಿನ ಮಕ್ಕಳ ಸೋಷಿಯಲ್ ಮೀಡಿಯಾ ಬ್ಯಾನ್

ರಾಜ್ಯ ಬಜೆಟ್ 2026 | 16 ವರ್ಷದೊಳಗಿನ ಮಕ್ಕಳ ಸೋಷಿಯಲ್ ಮೀಡಿಯಾ ಬ್ಯಾನ್

March 6, 2026
ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

ಉದ್ಯೋಗಾಕಾಂಕ್ಷಿಗಳಿಗೆ ಬಜೆಟ್’ನಲ್ಲಿ ಬಿಗ್ ಗುಡ್ ನ್ಯೂಸ್ ನೀಡಿದ ಸಿಎಂ ಸಿದ್ದರಾಮಯ್ಯ

March 6, 2026
ಅಬ್ಬಬ್ಬಾ! ಈ ಬಾರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲವೆಷ್ಟು ಗೊತ್ತಾ?

ಅಬ್ಬಬ್ಬಾ! ಈ ಬಾರಿ ಸಿದ್ದರಾಮಯ್ಯ ಸರ್ಕಾರ ಮಾಡಿರುವ ಸಾಲವೆಷ್ಟು ಗೊತ್ತಾ?

March 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL