No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Monday, February 16, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಆನಂದ ಕಂದ

ರಾಮನಂತಿದ್ದರೆ ಆರಾಮ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 28, 2024
in ಆನಂದ ಕಂದ
0
ರಾಮನಂತಿದ್ದರೆ ಆರಾಮ 
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಆನಂದಕಂದ ಲೇಖನ ಮಾಲಿಕೆ-15  |
ನಾವೆಲ್ಲರೂ ರಾಮನನ್ನು ಆದರ್ಶ ಪುರುಷರನ್ನಾಗಿಸಿಕೊಂಡಿದ್ದೇವೆ. ರಾಜ್ಯವೆಂದರೆ ರಾಮರಾಜ್ಯ! ಮಗನಿದ್ದರೆ ರಾಮನಂಥ ಮಗನಿರಬೇಕು ಎಂದು ಈಗಲೂ ಜನರೆನ್ನುತ್ತಾರೆ. ರಾಮ ಕೇವಲ ದೇವರಾಗಿ ಉಪದೇಶ ಮಾಡದೆ ಮನಷ್ಯನಾಗಿ ನಮ್ಮೊಡನೆದ್ದು ಅನೇಕ ಪಾತ್ರಗಳಲ್ಲಿ ತಾನೇ ನಡೆದು ತೋರಿಸಿದ್ದಾನೆ.

ಮಗನಾಗಿ ರಾಮ-ಪಿತೃವಾಕ್ಯ ಪರಿಪಾಲಕ 
ರಾಮನು ದಶರಥನಿಗೆ ಪ್ರೀತಿಯ ದಾಶರಥಿ ಯಾಗಿ ತಂದೆಯ ಮಾತಿಗೆ ಎಂದೂ ತಪ್ಪದೆ, ಅತ್ಯಂತ ಪ್ರೀತಿ ಗೌರವಗಳಿಂದ ನಡೆದುಕೊಂಡ.  ತನಗೆ ರಾಜನ ಪಟ್ಟವಿಲ್ಲವೆಂದು ತಿಳಿದಾಗಲೂ, ತಂದೆಯ ಮೇಲೆ ಅದೇ ಪ್ರೀತಿ ಗೌರವದಿಂದಲೇ ಇದ್ದ. ಅಬ್ಬಾ! ರಾಮ ಎಂಥಾ ಅಚ್ಚರಿ. ಇಂದಿನ ಸಿನಿಮಾ ಧಾರವಾಹಿಗಳಲ್ಲಿ ತೋರಿಸುವಂತೆ, ನಮಗೆ ಬೇಕಾದ ವಸ್ತು ಸಿಗಲಿಲ್ಲ ಎಂದರೆ ಮನೆಯ ವಸ್ತುಗಳನ್ನೆಲ್ಲ ಹಾಳುಮಾಡಿ, ಸಿಕ್ಕಲ್ಲಿ, ಸಿಕ್ಕಿದ್ದನ್ನೆಲ್ಲ ಎಸೆದು ಹಠ ಮಾಡುವ ನಾವೆಲ್ಲಿ? ಕಾಡಿಗೆ ಹೋಗಬೇಕಾಗಿ ಬಂದಾಗಲೂ ಮುಖದಲ್ಲಿ ಸಣ್ಣ ಬೇಸರದ ಗೆರೆಯೂ ಇಲ್ಲದೆ ತಂದೆ ಮಾತನ್ನು ನಡೆಸಲು ಹೆಮ್ಮೆಯಿಂದಲೇ ಕಾಡಿಗೆ ಹೊರಟ ರಾಮನೆಲ್ಲಿ? ಇದಕ್ಕಾಗಿಯೇ ರಾಮ ಆದರ್ಶವಾಗಿ ನಿಲ್ಲುವುದು. ರಾಮನನ್ನು ಕಾಡಿಗೆ ಕಳುಹಿಸಿದಳೆಂದು ಕೈಕೇಯಿ ಮೇಲೆ ಕೋಪಗೊಂಡ ಭರತನು ಆಕೆಯನ್ನು ನಿಂದಿಸುವಾಗ “ತಾಯಿ ಕೈಕೇಯಿಯನ್ನು ಎಂದಿಗೂ ನಿಂದಿಸಕೂಡದು, ನಿಂದಿಸಿದ ಪಕ್ಷದಲ್ಲಿ ನಿನ್ನ ಮುಖವನ್ನು ನಾನು  ನೋಡುವುದಿಲ್ಲ” ಎಂದು ಶ್ರೀರಾಮ ಭರತನನ್ನು ತಡೆಯುವ ಮೂಲಕ ಎಚ್ಚರಿಸುತ್ತಾನೆ.ರಾಜನಾಗಿ ರಾಮ
ರಾಮನು ಪ್ರಜೆಗಳನ್ನು ಅತ್ಯಂತ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದ. ಪ್ರಜೆಗಳಲ್ಲಿ ಯಾರಿಗಾದರೂ ತೊಂದರೆ ಉಂಟಾದರೆ ತಾನೇ ಖುದ್ದಾಗಿ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದ. ಮಕ್ಕಳ ಸಂತೋಷವನ್ನು ತಂದೆ ಅನುಭವಿಸುವಂತೆ ಪ್ರಜೆಗಳ ಸಂತೋಷವನ್ನು ತಾನು ಪ್ರೀತಿಯಿಂದ ಜೊತೆಗಿದ್ದು ಸವಿಯುತ್ತಿದ್ದ. ವೇಷ ಮರೆಸಿಕೊಂಡು ಪ್ರಜೆಗಳ ಮಧ್ಯೆ ಓಡಾಡಿ, ಅವರ ಕಷ್ಟ ಸುಖಗಳನ್ನು ತಿಳಿಯುತ್ತಿದ್ದ, ತಿಳಿದು ದುಃಖಗಳನ್ನು ತಿಳಿಗೊಳಿಸುತ್ತಿದ್ದ.

ರಾಮನು ಪತಿಯಾಗಿ
ರಾಮನು ಸೀತೆಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದ. ತಾನು ಕಾಡಿಗೆ ಹೊರಟುನಿಂತಾಗ ತಾನೂ ಬರುವುದಾಗಿ ಹಠ ಹಿಡಿದ ಸೀತೆಯನ್ನು ಬಗೆ ಬಗೆಯಾಗಿ ತಡೆದ. ಆದಾಗ್ಯೂ ಕೇಳದ ಸೀತೆಯು ಲಕ್ಷ್ಮಣ ರಾಮನೊಡನೆ ಕಾಡಿಗೆ ಹೊರಟಳು. ಮತ್ತೆ ಶೂರ್ಪನಖಿ ಬಂದಾಗಲೂ ಮರ್ಯಾದಾಪುರುಷೋತ್ತಮನಾದ ಶ್ರೀರಾಮ ತಾನು ಏಕಪತ್ನಿ ವ್ರತಸ್ಥ ಎಂದು ಆಕೆಯನ್ನು ತಡೆದ. ಅಶ್ವಮೇಧ ಯಜ್ಞದ ಪ್ರಸಂಗ ಬಂದಾಗ ಬೇರೆ ವಿವಾಹವಾಗದೆ ಬಂಗಾರದ ಸೀತೆಯನ್ನು ಮಾಡಿ ಪಕ್ಕದಲ್ಲಿ ಇರಿಸಿಕೊಂಡು ಯಾಗ ಮಾಡಿದನು. ಸೀತೆ ಜೊತೆಯಲ್ಲಿದ್ದಾಗಲೂ ಇಲ್ಲದಿದ್ದಾಗಲೂ ರಾಮನು ಸೀತಾಪತಿಯಾಗಿಯೇ ಇದ್ದ.ಅಣ್ಣನಾಗಿ ರಾಮ
ರಾಮ ಕಾಡಿಗೆ ಹೋಗಬೇಕಾಗಿ ಬಂದಾಗ ಭರತನ ಬಗ್ಗೆ ಕೊಂಕು ಮಾತು ಆಡಲಿಲ್ಲ. ಕಾಡಿನಲ್ಲಿ ಲಕ್ಷ್ಮಣನಿಗಾಗಿ ಕಾಳಜಿ ವಹಿಸಿದ. ಮಾರೀಚ ವಧೆ ಸಂದರ್ಭದಲ್ಲಿ ಮೊದಲೇ ಸೀತೆಯಿಂದ ಬೈಸಿಕೊಂಡು ಬಂದ ಲಕ್ಷ್ಮಣನ ಮನಸ್ಸಿಗೆ ಇನ್ನಷ್ಟು ನೋವಾದೀತು ಎಂದು ಯೋಚಿಸಿದ ರಾಮ, ಸೀತೆಯನ್ನು ಬಿಟ್ಟು ನೀನೇಕೆ ಇಲ್ಲಿ ಬಂದೆ? ಎಂದು ಒಮ್ಮೆ ಮಾತ್ರ ಕೇಳಿದ ಹೊರತೂ ಮತ್ತೆಂದೂ ಆತನನ್ನು ನಿಂದಿಸಲಿಲ್ಲ. ಈಗಂತೂ ಮಕ್ಕಳು ಪರೀಕ್ಷೆಯಲ್ಲಿ ಚೆನ್ನಾಗಿ ಅಂಕ ಪಡೆಯಲಿಲ್ಲವೆಂದರೆ ಮಕ್ಕಳನ್ನು ಪರಿಪರಿಯಾಗಿ ನಿಂದಿಸುತ್ತಾರೆ. ಒಮ್ಮೆಯಾದರೂ ಮಗುವಿನ ಜಾಗದಲ್ಲಿ ನಿಂತು ಯೋಚಿಸಿ ನಿರ್ಣಯಿಸಬೇಕಲ್ಲವೇ? ರಾಮನು  ಕೊನೆಯ ತನಕವೂ ಲಕ್ಷಮಣನಿಗೆ ‘ನಿನ್ನಿಂದ ಹೀಗಾಯಿತು‘ ಎಂದು ಮಾತಿನಿಂದ ತಿವಿಯಲಿಲ್ಲ.

ಹೀಗೆ ರಾಮಚಂದ್ರನು ಸೂರ್ಯವಂಶದಲ್ಲಿ ಬಂದ ಬೆಳದಿಂಗಳು. ಈ ಲೇಖನದಲ್ಲಿ ರಾಮಚಂದ್ರನ ಹಲವಾರು ಮುಖಗಳ ಪರಿಚಯವನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ರಾಮನು ಎಲ್ಲಾ ಪಾತ್ರಗಳನ್ನೂ ಪರಿಪೂರ್ಣವಾಗಿ, ಸಮರ್ಥವಾಗಿ ನಿರ್ವಹಿಸುತ್ತಾನೆ. ಇದಕ್ಕೇ ರಾಮನೊಬ್ಬ ಆದರ್ಶ ವ್ಯಕ್ತಿಯಾಗಿ ನಿಂತ. ರಾಮಾಯಣವನ್ನು ಈ ನಿಟ್ಟಿನಲ್ಲಿ ಓದಿ, ಅದರಂತೆ ಜೀವನದಲ್ಲಿ ರಾಮನ ಆದರ್ಶಗಳನ್ನು ಅಳವಡಿಸಿಕೊಳ್ಳೋಣ. ಇದಕ್ಕೆ ಪೂರಕವಾಗಿಯೇ ಅಯೋಧ್ಯಾಪತಿ ಶ್ರೀರಾಮಚಂದ್ರ ನಮಗಾಗಿ 500 ವರ್ಷಗಳ ನಂತರ ಮತ್ತೆ ಭಾರತದ ಅಸ್ಮಿತೆಯ ಮೂರ್ತರೂಪವಾಗಿ ಬಾಲರೂಪದಲ್ಲಿ ಪ್ರತಿಷ್ಠಾಪನೆಗೊಂಡಿದಾನೆ. ರಾಮನಂತಹ ರಾಜನ ಸಂರಕ್ಷಣೆಯಲ್ಲಿ ನಾವೆಲ್ಲರೂ ಸುರಕ್ಷಿತವಾಗಿದ್ದೇವೆ. “ರಾಜಾ ಕಾಲಸ್ಯ ಕಾರಣಂ” ಎಂಬ ಮಾತು ಸತ್ಯಗೊಳಿಸುವಲ್ಲಿ ನಾವು ಕಂಕಣಬದ್ಧರಾಗಬೇಕಿದೆ. ಆತನ ಆದರ್ಶಗುಣಗಳನ್ನು ಅಳವಡಿಸಿಕೊಂಡು ರಾಮನೆಂದರೆ ಭರತ, ಭಾರತವೆಂದರೆ ರಾಮ ಎಂಬ ಘೋಷವನ್ನು ಜಗತ್ತಿನಾದ್ಯಂತ ಮೊಳಗಿಸುವಲ್ಲಿ ಕಾರ್ಯರತರಾಗಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: AnandakandaAnandavana GurukulaAyodhyaBharataKannada News WebsiteLatest News KannadaLord RamaRamaRama Articleಆದರ್ಶಆನಂದಕಂದದಶರಥರಾಮರಾಮರಾಜ್ಯಲೇಖನ ಮಾಲಿಕೆ
Share196Tweet123Send
Previous Post

ಬಳ್ಳಾರಿಯಲ್ಲಿ ನಿಲ್ಲದ ಬಾಣಂತಿಯರ ಸಾವಿನ ಸರಣಿ | ವ್ಯಾಪಕ ಆಕ್ರೋಶ

Next Post

ಘೋರಾತಿಘೋರ | ಆಸ್ಪತ್ರೆ ಟಾಯ್ಲೆಟ್’ನಲ್ಲಿ ನವಜಾತ ಶಿಶು ಎಸೆದು ಫ್ಲಶ್ ಮಾಡಿದ ರಾಕ್ಷಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಘೋರಾತಿಘೋರ | ಆಸ್ಪತ್ರೆ ಟಾಯ್ಲೆಟ್’ನಲ್ಲಿ ನವಜಾತ ಶಿಶು ಎಸೆದು ಫ್ಲಶ್ ಮಾಡಿದ ರಾಕ್ಷಸರು

ಘೋರಾತಿಘೋರ | ಆಸ್ಪತ್ರೆ ಟಾಯ್ಲೆಟ್'ನಲ್ಲಿ ನವಜಾತ ಶಿಶು ಎಸೆದು ಫ್ಲಶ್ ಮಾಡಿದ ರಾಕ್ಷಸರು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

ಹಂಪಿ | ವಿದೇಶ ಮಹಿಳೆ ಅತ್ಯಾಚಾರ, ಪ್ರವಾಸಿಗನ ಹತ್ಯೆ | ಆರೋಪಿಗಳಿಗೆ ಗಲ್ಲು ಶಿಕ್ಷೆ

February 16, 2026
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ಆರೋಪ | ಮಹಿಳೆ ವೀಡಿಯೋ ವೈರಲ್ | ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಟಿವಿ ನೋಡುತ್ತಾ ಊಟ ಮಾಡಬೇಡ ಎಂದು ತಾಯಿ ಬೈದಿದ್ದಕ್ಕೆ ಬಾಲಕಿ ಆತ್ಮಹತ್ಯೆ

February 16, 2026
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಸಾಮೂಹಿಕ ಶಿವರಾತ್ರಿ ಆಚರಣೆ

February 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಬೀರೂರು | ಗ್ರಾಹಕರ ಸೋಗಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ

February 16, 2026
ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಕನ್ಸರ್‌ವೆನ್ಸಿ ಒತ್ತುವರಿ ತೆರವು ಕಾರ್ಯಾಚರಣೆ | ಪಾಲಿಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

February 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL