No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಉಡುಪಿಯ ಈ ಪಂಚ ದುರ್ಗೆಯರ ದರ್ಶನ ಪಡೆದರೆ ನಿಮ್ಮ ಜನ್ಮವೇ ಪಾವನವಾಗುತ್ತದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 3, 2019
in Special Articles
0
ಉಡುಪಿಯ ಈ ಪಂಚ ದುರ್ಗೆಯರ ದರ್ಶನ ಪಡೆದರೆ ನಿಮ್ಮ ಜನ್ಮವೇ ಪಾವನವಾಗುತ್ತದೆ
Share on FacebookShare on TwitterShare on WhatsApp

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರವನ್ನು ಒಳಗೊಂಡಂತೆ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನಗಳ ಪೌರಾಣಿಕ ಹಿನ್ನೆಲೆ.

ನಾಗಲೋಕವನ್ನು ಶಂಖಚೂಡ ರಾಜನು ಆಳುತ್ತಿದ್ದನು. ಶಂಕಚೂಡನಿಗೆ ಮದುವೆಯಾಗಿ ಅನೇಕ ವರ್ಷಗಳು ಕಳೆದರು ಸಂತಾನಭಾಗ್ಯ ಲಭಿಸಲಿಲ್ಲ.

ಒಂದುದಿನ ಮಹಾದೇವನನ್ನು ಕುರಿತು ಅಪರಿಮಿತವಾದ ಭಕ್ತಿಯಿಂದ ಬೇಡಿಕೊಂಡಾಗ ಪ್ರತ್ಯಕ್ಷನಾದ ಶಿವನು ಐವರು ಪುತ್ರಿಯಾರನ್ನು ವರಪ್ರಸಾದ ರೂಪದಲ್ಲಿ ದಯಪಾಲಿಸಿದನು. ಶಿವ ಕೃಪೆಯಿಂದ ಜನಿಸಿದ ಐವರು ಪುತ್ರಿಯರಿಗೆ ಕ್ರಮವಾಗಿ ದೇವರತಿ, ನಾಗರತಿ, ಚಾರುರತಿ, ಮಂದರತಿ, ನೀಲರತಿ ಎಂದು ಹೆಸರಿಟ್ಟು ಅಕ್ಕರೆಯಿಂದ ಬೆಳೆಸುತ್ತಾನೆ.


ಬಹುಕಾಲದ ನಂತರ ಪಡೆದ ಪುತ್ರಿಯರ ಜೊತೆಗೆ ಬಹುದಿನಗಳ ಕಾಲ ಬದುಕುವ ಸುಯೋಗ ಶಂಕಚೂಡನಿಗೆ ದೊರಕಲಿಲ್ಲ. ಶಿವಪುತ್ರ ಕುಮಾರಸ್ವಾಮಿಗೆ ತನ್ನ ಐವರು ಪುತ್ರಿಯರನ್ನು ಕನ್ಯಾಧಾನ ಮಾಡಬೇಕು. ಎನ್ನುವ ಬಯಕೆಯನ್ನು ಹೊಂದಿದ್ದನು. ಆದರೆ ವಿಧಿಯಾಟದಿಂದ ಮಕ್ಕಳ ಮದುವೆಯನ್ನು ಕಣ್ಣಾರೆ ಕಾಣುವುದಕ್ಕೂ ಮೊದಲೇ ಶಂಖಚೂಡನು ಹೃದಯಾಘಾತದಿಂದ ಮರಣವನ್ನು ಹೊಂದುತ್ತಾನೆ.

ಹಿರಿಯರ ಸೂಚನೆಯಂತೆ ಅರಸನಿಲ್ಲದ ರಾಜ್ಯಕ್ಕೆ ಹಿರಿಯ ಮಗಳಾದ ದೇವರತಿಯನ್ನು ಅರಸಿಯಾಗಿ ಮಾಡಿದರು. ಹೀಗೆ ದೇವರತಿಯು ನ್ಯಾಯ ನೀತಿ ನಿಷ್ಠೆಯಿಂದ ರಾಜ್ಯಭಾರವನ್ನು ಮಾಡುತ್ತಾಳೆ. ಹೆಣ್ಣುಮಕ್ಕಳು ಗಂಡುಮಕ್ಕಳಿಗೆ ಕಡಿಮೆಯಿಲ್ಲ ಎನ್ನುವ ಮಟ್ಟಿಗೆ ಇವರ ಅಧಿಕಾರ ಅವಧಿಯಲ್ಲಿ ಪ್ರಸಿದ್ದಿಯನ್ನು ಗಳಿಸಿದ್ದರು. ಐದುಮಂದಿ ಅಕ್ಕ-ತಂಗಿಯರ ದೇಹ ಬೇರೆ-ಬೇರೆಯಾದರು ಒಂದೇ ಹೂವಿನ ಐದು ದಳದಂತೆ ಇದ್ದರು. ಒಬ್ಬರನೊಬ್ಬರು ಒಂದು ಕ್ಷಣವೂ ಆಗಲಿರಲಾರದಷ್ಟು ಹಚ್ಚಿಕೊಂಡಿದ್ದರು. ಸೂಕ್ತ ಪ್ರಾಯಕ್ಕೆ ಬಂದಾಗ ತಂದೆಯ ಆಸೆಯಂತೆ ಶಿವಸುತ ಸುಬ್ರಹ್ಮಣ್ಯ ಸ್ವಾಮಿಯನ್ನು ಮದುವೆಯಾಗಬೇಕು ಪಂಚ ಸತಿಯರಿಗೆ ಒಬ್ಬನೇ ಪತಿ ಇರಬೇಕು, ನಾವೆಲ್ಲರೂ ಒಂದೇ ಮನೆಯಲ್ಲಿ ಜೊತೆಯಾಗಿ ಇರಬೇಕು ಎಂದು ನಿರ್ಧರಿಸಿದರು. ತಮ್ಮ ಮನದ ಅಂಬೋಣವನ್ನು ತಿಳಿಸುವುದಕ್ಕಾಗಿ ಕೈಲಾಸವಾಸಿ ಶಿವನಿದ್ದಲ್ಲಿಗೆ ನಾಗಕನ್ನಿಕೆಯರು ಹೊರಡುತ್ತಾರೆ.

ಕೈಲಾಸದ ಮಹಾದ್ವಾರದಲ್ಲಿ ಶಿವನ ದ್ವಾರಪಾಲಕ ನಂದಿಕೇಶ ಎದುರಾಗುತ್ತಾನೆ. ನಾಗಕನ್ನೆಯರಿಗೂ ಶಿವಬಂಟ ನಂದಿಯ ನಡುವೆ ವಾಕ್ಸಮರ ಅತಿರೇಕಕ್ಕೆ ಹೋಗಿ ಕುಪಿತನಾದ ನಂದಿ ಕೋಪದ ಭರದಲ್ಲಿ ನಾಗಕನ್ನೆಯರಿಗೆ ನಿಮ್ಮ ಮನದ ಅಭಿಷ್ಟ ಈಡೇರದೆ ಹೋಗಲಿ, ಕುಮಾರ ಸ್ವಾಮಿಯನ್ನು ವರಿಸುವ ಭಾಗ್ಯ ನಿಮಗೆ ಲಭಿಸದೆ ಹೋಗಲಿ, ನೀವು ಐದುಜನ ಭೂಲೋಕದಲ್ಲಿ ಬೇರೆ-ಬೇರೆಯಾಗಿ ಬಿದ್ದಿರಿ ಎಂದು ಘನ-ಘೋರವಾದ ಶಾಪವನ್ನು ನೀಡುತ್ತಾನೆ. ನಂದಿಯ ಕೋಪಕ್ಕೆ ತುತ್ತಾಗಿ ಶಾಪಗ್ರಸ್ತರಾದ ಕನ್ನೆಯರಿಗೆ ಶಿವ ಪ್ರತ್ಯಕ್ಷನಾಗಿ ಚಿಂತಿಸದಿರಿ ಭೂಲೋಕದಲ್ಲಿ ಯಾವ-ಯಾವ ಸ್ಥಳದಲ್ಲಿ ನೀವು ನೆಲೆಸುತ್ತಿರೋ ಅದೇ ಸ್ಥಳದಲ್ಲಿ ನಿಮ್ಮ ಜೊತೆಗೆ ಸುಬ್ರಹ್ಮಣ್ಯ ಸ್ವಾಮಿಯೂ ನೆಲೆಸುತ್ತಾನೆ ಎಂದು ಅಭಯ ನೀಡುತ್ತಾನೆ.


ನಂದಿಯ ಶಾಪದಿಂದ ಸಹ್ಯಾದ್ರಿಯ ಮಡಿಲಿನಲ್ಲಿ ಐದು ಸರ್ಪಗಳು ಹಸುವೆ ಬಾಯಾರಿಕಿಯಿಂದ ಬಾಳಲಿ ಹೋಗುತ್ತವೆ. ನೋವಿನ ಮೇಲೆ ನಂಜಿನ ಬರೇ ಎನ್ನುವಂತೆ ಸಹ್ಯಾದ್ರಿಯಲ್ಲಿ ತಪೋನಿರತನಾದ ಮುನಿಯಿಂದ ಮತ್ತೆ ನಾಗಕನ್ನೆಯರು ಶಾಪಕ್ಕೆ ಗುರಿಯಾಗುತ್ತಾರೆ. ಆದರೆ ದೇವವರ್ಮ ಎನ್ನುವ ರಾಜನ ಕರಸ್ಪರ್ಶದಿಂದ ನಿಮ್ಮ ಶಾಪ ವಿಮೋಚನೆ ಆಗುತ್ತದೆ ಎನ್ನುವ ಪರಿಹಾರವನ್ನು ಮುನಿಯಿಂದಲೇ ಕಂಡುಕೊಳ್ಳುತ್ತಾರೆ.

ವೈರಿರಾಜರ ದಾಳಿಗೆ ತುತ್ತಾಗಿ ರಾಜ್ಯ, ಕೋಶ, ಅಧಿಕಾರವನ್ನು ಕಳೆದುಕೊಂಡ ದೇವವರ್ಮನು ಸಹ್ಯಾದ್ರಿಯ ಕಾಡಿನಲ್ಲಿ ಸಂಚರಿಸುತ್ತಿರುತ್ತಾನೆ. ದಟ್ಟ ಅರಣ್ಯದಲ್ಲಿ ಕಾಡ್ಗಿಚ್ಚು ಆವರಿಸಿತ್ತು. ಅರಣ್ಯದ ಮಧ್ಯದಲ್ಲಿ ಬೆಂಕಿಯ ಕೆನ್ನಾಲಿಗೆ ಸಿಕ್ಕಿ ನರಳುತ್ತಿರುವ ನಾಗಕನ್ನೆಯರ ಅರಣ್ಯ ರೋದನ ದೇವವರ್ಮನಿಗೆ ಕೇಳಿಸುತ್ತದೆ. ಹತ್ತಿರ ಬಂದು ನೋಡಿದಾಗ ನಾಗಕನ್ನಿಕೆಯರು ಬೆಂಕಿಯ ಬೇಗುದಿಗೆ ಸಿಕ್ಕಿ ಬಳಲಿ ಹೋಗಿದ್ದರು. ಕಾಪಾಡು ನಮ್ಮನ್ನು ಎಂದು ಎಷ್ಟೇ ಬೇಡಿಕೊಂಡರು ದೇವವರ್ಮ ನಾಗಗಳ ಭಯದಿಂದ ಅಸಹಾಯಕನಾಗಿ ನಿಂತುಬಿಡುತ್ತಾನೆ. ನಾಗಕನ್ನಿಕೆಯರು ದೇವವರ್ಮನಲ್ಲಿ ಈ ಸಂಕಷ್ಟದಿಂದ ನಮ್ಮನ್ನು ಕಾಪಾಡಿದರೆ ಮುಂದೆ ಸಹಾಯ ಮಾಡುದಾಗಿ ವಚನವನ್ನು ಕೊಡುತ್ತಾರೆ. ತನ್ನ ಸೆರಗು ಚಾಚಿ ಪಂಚ ನಾಗಕನ್ನಿಕೆಯರನ್ನು ಅಗ್ನಿಯಿಂದ ಕಾಪಾಡಿ ಮುಂದೆ ಸಾಗುತ್ತಾನೆ. ದೇವವರ್ಮನ ಸೆರಗಲ್ಲಿದ್ದ ನಾಗಕನ್ನೆಯರು ಅವರವರಿಗೆ ಮೆಚ್ಚುಗೆಯಾದ ಸ್ಥಳವನ್ನು ಆಯ್ದುಕೊಂಡು ಹುತ್ತವನ್ನು ಸೇರುತ್ತಾರೆ.

ದೇವವರ್ಮನ ಸೆರಗಲ್ಲಿದ್ದ ದೇವರತಿಯು ಮೊದಲನೆಯಾಗಿ ಹೊರ ಬರುತ್ತಾಳೆ. ಶೇಡಿಮನೆ ಗ್ರಾಮದಲ್ಲಿ ಇರುವ ಹುತ್ತವನ್ನು ಸೇರುತ್ತಾಳೆ. ಶಂಖಚೂಡನ ನಂತರ ಅರಸಿಯಾಗಿ ರಾಜ್ಯಭಾರವನ್ನು ಮಾಡಿದ್ದರಿಂದ ಎಲ್ಲರೂ ದೇವರತಿಯನ್ನು ಪ್ರೀತಿಯಿಂದ ಅರಸಮ್ಮನೆಂದು ಕರೆಯುತ್ತಿದ್ದರು. ಅರಸಮ್ಮ ನೆಲೆಸಿದ ಪುಣ್ಯಕ್ಷೇತ್ರ ಅರಸಮ್ಮನಖಾನು ಎಂದು ಪ್ರಸಿದ್ದಿಯನ್ನು ಗಳಿಸಿತು. ಈ ಕ್ಷೇತ್ರದಲ್ಲಿ ದೇವರತಿ ನೆಲೆನಿಂತು ಭಕ್ತರ ಇಷ್ಟಾರ್ಥ ಸಿದ್ಧಿಯನ್ನು ಇಡೇರಿಸುತ್ತ ಕಲಿಯುಗದಲ್ಲಿ ಪ್ರಸಿದ್ಧಿಯನ್ನು ಗಳಿಸುತ್ತಾಳೆ.


ಹಿಲಿಯಾಣ ಗ್ರಾಮದ ದಟ್ಟಾರಣ್ಯದಲ್ಲಿ ದೇವವರ್ಮನು ಸಾಗುತ್ತಿರುವಾಗ ಸೆರಗಿನಲ್ಲಿದ್ದ ನಾಗರತಿಯುವು ಹೊರಗೆ ಬಂದು ಸಮೀಪವೆ ಇರುವ ಹುತ್ತವನ್ನು ಸೇರುತ್ತಾಳೆ. ನಾಗರತಿ ತಾಯಿಯೂ ನೆಲೆನಿಂತ ಪುಣ್ಯ ಕ್ಷೇತ್ರ ನಾಗೇರ್ತಿಖಾನು ಎಂದು ಹೆಸರಾಗುತ್ತದೆ. ನಾಗತೀರ್ಥ ತಟದಲ್ಲಿ ನಾಗರತಿ ತಾಯಿಯು ಉದ್ಭವ ಸುವರ್ಣ ರೇಖಾಂಕಿತ ಲಿಂಗದ ರೂಪದಲ್ಲಿ ನೆಲೆನಿಲ್ಲುತಾಳೆ. ನಾಗೇರ್ತಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರನ್ನು ಇಷ್ಟಾರ್ಥ ಸಿದ್ದಿ ಇಡೇರಿಕೆಗಾಗಿ ಅಪಾರ ಜನರು ಭಕ್ತಿಯಿಂದ ಭಜಿಸಲು ಆರಂಭಿಸುತ್ತಾರೆ. ಪ್ರತಿವರ್ಷ ಜನವರಿ ತಿಂಗಳ ಮಕರ ಸಂಕ್ರಮಣದ ದಿನದಂದು ಶ್ರೀ ಸನ್ನಿಧಿಯಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತದೆ.

ಆವರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಚೋರಾಡಿ ಎಂಬಲ್ಲಿ ದೇವವರ್ಮನ ಸೆರಗಿನಿಂದ ಹೊರಬಂದ ಚಾರುರತಿ ಸಮೀಪವೆ ಇರುವ ಹುತ್ತವನ್ನು ಸೇರುತ್ತಾಳೆ. ಚಾರುರತಿ ನೆಲೆನಿಂತ ಈ ಪುಣ್ಯ ಕ್ಷೇತ್ರ ಮುಂದೆ ಚೋರಾಡಿ ಎಂದು ಪ್ರಸಿದ್ದಿಯನ್ನು ಗಳಿಸುತ್ತದೆ. ಚಾರುರತಿ ತಾಯಿಗೆ ಚಿಕ್ಕದೊಂದು ಗುಡಿಯನ್ನು ನಿರ್ಮಿಸಿ ಪೂಜಿಸಲಾಗುತ್ತಿದೆ.

ಉಡುಪಿ ತಾಲೂಕಿನ ಹೇಗುಂಜೆ ಗ್ರಾಮದಲ್ಲಿ ದೇವವರ್ಮನ ಸೆರಗಿಂದ ಹೊರಬಂದ ಮಂದರತಿ ಮಂದವಾಗಿ ಚಲಿಸುತ್ತ ಸಮೀಪದ ಹುತ್ತವನ್ನು ಸೇರುತ್ತಾಳೆ. ಮಂದರತಿ ನೆಲೆನಿಂತ ಪುಣ್ಯ ಕ್ಷೇತ್ರ ಮಂದಾರ್ತಿ ಎಂದು ಪ್ರಸಿದ್ದಿಯನ್ನು ಗಳಿಸುತ್ತದೆ. ಮಂದಾರ್ತಿ ದುರ್ಗಾಪರಮೇಶ್ವರಿ ಅಮ್ಮನವರು ಅಪಾರವಾದ ದಿವ್ಯ ಶಕ್ತಿಯಿಂದ ಅನೇಕ ಭಕ್ತರು ಆಕರ್ಷಿತರಾಗುತ್ತಾರೆ. ದುರ್ಗೆಯ ಸನ್ನಿಧಾನಕ್ಕೆ ವರ್ಷಪೂರ್ತಿ ಲಕ್ಷ ಲಕ್ಷ ಭಕ್ತಭಿಮಾನಿಗಳು ಆಗಮಿಸುತ್ತಾರೆ. ಮಂದಾರ್ತಿ ಶ್ರೀ ದುರ್ಗೆಯ ಕ್ಷೇತ್ರ ಕಲಿಯುಗದ ಕಾರಣಿಕ ಕ್ಷೇತ್ರವಾಗಿ ಬದಲಾಯಿತು. ಪ್ರತಿವರ್ಷ ಫೆಬ್ರವರಿ ತಿಂಗಳ ಸಂಕ್ರಮಣದಂದು ತಾಯಿಯ ಸನ್ನಿಧಾನದಲ್ಲಿ ಜಾತ್ರೆ ನಡೆಯುತ್ತಿದ್ದು ಲಕ್ಷಾಂತರ ಮಂದಿ ಆಗಮಿಸುತ್ತಾರೆ.

ದೇವವರ್ಮನು ಮುಂದೆ ಸಾಗುತ್ತಿರುವಾಗ ನೀಲರತಿ ಸೆರಗಿನಿಂದ ಹೊರಬಂದು ಹುತ್ತವನ್ನು ಸೇರುತ್ತಾಳೆ. ನೀಲರತಿ ನೆಲೆನಿಂತ ಪುಣ್ಯ ಕ್ಷೇತ್ರ ನಿಲವಾರವೆಂದು ಪ್ರಸಿದ್ದಿ ಗಳಿಸಿತು. ಸುಂದರ ದೇವಾಲಯವನ್ನು ನಿರ್ಮಿಸಿ ಶ್ರೀ ನೀಲರತಿ ಅಮ್ಮನವರನ್ನು ಅನುದಿನವೂ ಆರಾಧಿಸುವುದಕ್ಕೆ ಅವಕಾಶ ಮಾಡಿಕೊಡಲಾಯಿತು.

ಈ ಐದುಜನ ನಾಗಕನ್ನೆಯರು ನೆಲೆನಿಂತ ಐದು ಕ್ಷೇತ್ರಗಳು ಅಪರೂಪದ, ಅಪರಿಮಿತ ಕಾರಣಿಕ ಕ್ಷೇತ್ರಗಳು ಎಂದು ಗುರುತಿಸಲ್ಪಟ್ಟಿವೆ. ಉಡುಪಿ ಜಿಲ್ಲೆಯಲ್ಲಿ ಪಂಚ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಗಳಿವೆ. ಯಾವುದೇ ರೀತಿಯ ನಾಗದೋಷವಿದ್ದರೆ ಈ ಕ್ಷೇತ್ರಗಳನ್ನು ಸಂದರ್ಶಿಸುವುದರಿಂದ ದೋಷ ನಿವಾರಣೆ ಆಗುತ್ತದೆ ಎನ್ನುವ ನಂಬಿಕೆ ಇದೆ. ದುರ್ಗೆಯರು ನೆಲೆಸಿರುವ ಸ್ಥಳಗಳು ಶಕ್ತಿ ಕೇಂದ್ರವಾಗಿ ಮಾರ್ಪಟ್ಟಿವೆ. ಒಮ್ಮೆ ಬಿಡುವು ಮಾಡಿಕೊಂಡು ಈ ಐದು ಪುಣ್ಯ ಕ್ಷೇತ್ರಗಳ ದರ್ಶನ ಮಾಡಬನ್ನಿ.

ಲೇಖನ: ಗೌರೀಶ್ ಆವರ್ಸೆ

Tags: ForestKannada ArticleNaga LokaSnakeSpecial ArticleSri Durga PrameshwariUdupiಅರಣ್ಯಉಡುಪಿದೇವಾಲಯನಾಗಕನ್ನಿಕೆನಾಗಲೋಕಮಂದಾರ್ತಿಶ್ರೀ ದುರ್ಗಾಪರಮೇಶ್ವರಿಸಹ್ಯಾದ್ರಿ
Share198Tweet124Send
Previous Post

ಭದ್ರಾವತಿ: ಮೋದಿ ಅಭಿಮಾನಿ ಬಳಗದಿಂದ ಕೇಸರಿ ಲಾಡು ಹಂಚಿಕೆ

Next Post

ಸೊರಬ: ಸರ್ಕಾರಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರ ಆಪ್ತ: ತೀವ್ರ ಆಕ್ರೋಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೊರಬ: ಸರ್ಕಾರಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರ ಆಪ್ತ: ತೀವ್ರ ಆಕ್ರೋಶ

ಸೊರಬ: ಸರ್ಕಾರಿ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿದ ಶಾಸಕರ ಆಪ್ತ: ತೀವ್ರ ಆಕ್ರೋಶ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಅಸ್ಸಾಂ | ಮುನ್ನಡೆಯಲ್ಲಿ ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿ | ಹಿಮಂತ್ ಬಿಸ್ವಾಸ್ ಕಮಾಲ್

ಮಮತಾ ರಾಜೀನಾಮೆ ನೀಡದಿದ್ದರೆ ವಜಾಗೊಳಿಸಿ | ಹಿಮಂತ್ ಬಿಸ್ವಾ ಶರ್ಮಾ ಆಕ್ರೋಶ

May 6, 2026
ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

ಅಗ್ನಿವೀರ್, ಪ್ಯಾರಾ ಮಿಲಿಟರಿ, ಪೊಲೀಸ್ ನೇಮಕಾತಿ | ಸಿಗಂಧೂರಿನಲ್ಲಿ ಉಚಿತ ತರಬೇತಿ | ಎಲ್ಲರಿಗೂ ಅವಕಾಶ

May 6, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL