No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಡೆಂಗ್ಯೂ ಜ್ವರ ನಿರ್ಲಕ್ಷಿಸಿದರೆ ಮರಣ ನಿಶ್ಚಿತ: ಮುಂಜಾಗ್ರತೆಗೆ ಈ ಅಂಶಗಳನ್ನು ತಿಳಿದಿರಿ

kalpa News by kalpa News
November 10, 2019
in Special Articles
0
ಡೆಂಗ್ಯೂ ಜ್ವರ ನಿರ್ಲಕ್ಷಿಸಿದರೆ ಮರಣ ನಿಶ್ಚಿತ: ಮುಂಜಾಗ್ರತೆಗೆ ಈ ಅಂಶಗಳನ್ನು ತಿಳಿದಿರಿ
Share on FacebookShare on TwitterShare on WhatsApp

ಆರೋಗ್ಯ ಲೇಖನ: ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಡೆಂಗ್ಯೂಜ್ವರ ಎಂಬುದು ಸೊಳ್ಳೆಗಳ ಕಡಿತದಿಂದ ಹರಡುವ ವೈರಾಣು ಜ್ವರ. ತೀವ್ರ ಸ್ವರೂಪದ ಡೆಂಗ್ಯೂ ಜ್ವರದಿಂದ ಬಳಲುವ ಐದು ರೋಗಿಗಳಲ್ಲಿ ಒಬ್ಬ ವ್ಯಕ್ತಿ ಮರಣ ಹೊಂದಬಹುದು. ಪ್ರಾಥಮಿಕ ಹಂತದಲ್ಲಿ ಡೆಂಗ್ಯೂ ಜ್ವರ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಿದರೆ ಮರಣದ ಪ್ರಮಾಣವನ್ನು ಇಪ್ಪತ್ತು ಪಟ್ಟು ಕಡಿಮೆಗೊಳಿಸಬಹುದು.

ಡೆಂಗ್ಯೂ ಜ್ವರ ಎಂದರೇನು?
ಡೆಂಗ್ಯೂ ಜ್ವರ ಎಂಬುದು ಸೊಳ್ಳೆಗಳ ಕಡಿತದಿಂದ ಹರಡುವ ವೈರಾಣು ಜ್ವರ. ತೀವ್ರ ಸ್ವರೂಪದ ಡೆಂಗ್ಯೂ ಜ್ವರದಿಂದ ಬಳಲುವ ಮೂವರು ರೋಗಿಗಳಲ್ಲಿ ಇಬ್ಬರು ವ್ಯಕ್ತಿ ಮರಣ ಹೊಂದಬಹುದು. ಪ್ರಾಥಮಿಕ ಹಂತದಲ್ಲಿ ಡೆಂಗ್ಯೂ ಜ್ವರ ಪತ್ತೆ ಮಾಡಿ ಸೂಕ್ತ ಚಿಕಿತ್ಸೆ ನೀಡಿದರೆ ಮರಣದ ಪ್ರಮಾಣವನ್ನು ಇಪ್ಪತ್ತು ಪಟ್ಟು ಕಡಿಮೆಗೊಳಿಸಬಹುದು.

ಡೆಂಗ್ಯೂ ಜ್ವರದ ಬಗ್ಗೆ ತಿಳಿಯುವ ಅಗತ್ಯವೇನು?
ಜಾಗತಿಕ ಮಟ್ಟದಲ್ಲಿ ಡೆಂಗ್ಯೂ ಸೋಂಕಿನ ಪ್ರಮಾಣ ಅಧಿಕವಾಗುತ್ತಿದೆ. ಅಭಿವೃದ್ಧಿಯ ಹೆಸರಿನಲ್ಲಿ ನಡೆಯುತ್ತಿರುವ ಕಾಮಗಾರಿಗಳಿಂದಾಗಿ ನೀರು ಅಲ್ಲಲ್ಲಿ ನಿಂತು ಸೊಳ್ಳೆಗಳ ವಂಶಾಭಿವೃದ್ಧಿ ಗಣನೀಯ ಮಟ್ಟದಲ್ಲಿ ಹೆಚ್ಚಲು ಪೂರಕವಾಗಿದೆ. ದುರಾದೃಷ್ಠವಶಾತ್ ಸೋಂಕಿತ ವ್ಯಕ್ತಿಗಳು ರೋಗದ ಕೊನೆಯ ಹಂತಗದಲ್ಲಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಈ ಹಂತದಲ್ಲಿ ರೋಗ ಗುಣಪಡಿಸುವುದು ಕಷ್ಟಕರ.

ಯಾವಾಗ ಯಾರಲ್ಲಿ ಈ ಸೋಂಕು ಕಂಡು ಬರುತ್ತದೆ?
ಮುಖ್ಯವಾಗಿ ಏಪ್ರಿಲ್’ನಿಂದ ಅಕ್ಟೋಬರ್ ತಿಂಗಳವರೆಗೆ ಎಲ್ಲಾ ವಯೋಮಿತಿಯ ವ್ಯಕ್ತಿಗಳಲ್ಲಿ ಈ ಸೋಂಕು ಕಂಡು ಬರುವ ಸಾಧ್ಯತೆ ಹೆಚ್ಚಿದೆ. ಆದರೆ, ಮಕ್ಕಳಲ್ಲಿ ಇದರ ತೀವ್ರತೆ ಹೆಚ್ಚು.

ಒಮ್ಮೆ ಸೋಂಕಿತ ವ್ಯಕ್ತಿಯು ಮತ್ತೊಮ್ಮೆ ಸೋಂಕಿಗೆ ಒಳಗಾಗುವ ಸಾಧ್ಯತೆಯಿದೆಯೇ?
ಹೌದು. ಒಮ್ಮೆ ಸೋಂಕಿತ ವ್ಯಕ್ತಿಯು ಮತ್ತೊಮ್ಮೆ ಸೋಂಕಿಗೆ ಒಳಗಾಗಬಹುದು. ಆದರೆ ಪದೇಪದೇ ಡೆಂಗ್ಯೂ ಜ್ವರ ಬರುವುದು ಅಪಾಯಕಾರಿ ಎಂಬುದನ್ನು ಮಾತ್ರ ಮರೆಯುವಂತಿಲ್ಲ.

ಡೆಂಗ್ಯೂ ಜ್ವರದ ಲಕ್ಷಣಗಳೇನು?
ಮಕ್ಕಳಲ್ಲಿ ಪ್ರಮುಖವಾಗಿ ಜ್ವರ, ಚರ್ಮದ ಮೇಲೆ ಕೆಂಪು ಮಚ್ಚೆಗಳು, ಸಣ್ಣ ಕೆಂಪು ಗುಳ್ಳೆಗಳು, ಮುಖ ಕೆಂಪೇರುವಿಕೆ, ವಯಸ್ಕರಲ್ಲಿ ಜ್ವರ, ತೀವ್ರ ತಲೆನೋವು, ಕಣ್ಣುಗಳ ಹಿಂಬದಿಯಲ್ಲಿ ನೋವು, ಮೈ-ಕೈ ನೋವು, ಚರ್ಮದ ಮೇಲೆ ಕೆಂಪು ಮಚ್ಚೆಗಳು, ಸಣ್ಣ ಕೆಂಪು ಗುಳ್ಳೆಗಳು ಇದರಲ್ಲಿ ಪ್ರಮುಖ ಲಕ್ಷಣಗಳು. ಸಾಮಾನ್ಯವಾಗಿ ಜ್ವರದ ಅವಧಿ 2 ರಿಂದ 7 ದಿನಗಳು ಇರುತ್ತವೆ.

ತೀವ್ರ ಸ್ವರೂಪದ ಡೆಂಗ್ಯೂ ಜ್ವರ ಎಂದರೇನು? ಅದು ಹೇಗೆ ಪ್ರಾಣಾಪಾಯಕ್ಕೆ ಕಾರಣವಾಗಬಹುದು?
ತೀವ್ರ ಸ್ವರೂಪದ ಡೆಂಗ್ಯೂ ಜ್ವರದಲ್ಲಿ ವಿಪರೀತ ಜ್ವರ, ದೇಹದ ಪ್ರಮುಖ ಅಂಗಗಳ ಕಾರ್ಯನಿರ್ವಹಣೆಯಲ್ಲಿ ತೊಡಕುಂಟಾಗುತ್ತದೆ. ರಕ್ತನಾಳಗಳಿಂದ ಸೋರುವಿಕೆ, ಮೈ-ಕೈ ಕಾಲು ಊತ, ಕಡಿಮೆ ರಕ್ತದ ಒತ್ತಡ ಕಾಣುತ್ತದೆ. ಪ್ಲೇಟ್’ಲೆಟ್ ರಕ್ತಕಣಗಳು ಕಡಿಮೆಯಾಗುವುದರಿಂದ ಶರೀರದ ಯಾವುದೇ ಭಾಗದಲ್ಲಾದರೂ ಅಪಾಯಕಾರಿ ರಕ್ತಸ್ರಾವವಾಗುವ ಸಂಭವವಿರುತ್ತದೆ.

ವ್ಯಕ್ತಿಯಿಂದ ವ್ಯಕ್ತಿಗೆ ಡೆಂಗ್ಯೂ ಜ್ವರ ಹರಡಬಹುದೇ?
ಸೊಳ್ಳೆ ಕಡಿತದ ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಡೆಂಗ್ಯೂ ಹರಡಬಹುದು.

ನಿಮ್ಮ ವೈದ್ಯರನ್ನು ಯಾವಾಗ ಕಾಣುವುದು ಸೂಕ್ತ?
ಆರಂಭಿಕ ಹಂತದಲ್ಲೇ ಖಾಯಿಲೆಯ ಒತ್ತೆ ಹಚ್ಚುವಿಕೆ ಅತ್ಯಂತ ಮುಖ್ಯವಾದ ಅಂಶ. ಡೆಂಗ್ಯೂ ಜ್ವರವನ್ನು ಇತರೆ ಸಾಧಾರಣ ಜ್ವರಗಳಿಂದ ಪ್ರತ್ಯೇಕಿಸುವುದು ಸುಲಭವಲ್ಲ. ಇದಕ್ಕೆ ವೈದ್ಯರ ಸಹಾಯ ಮತ್ತು ಸಹಕಾರ ಬೇಕು. ಪೋಷಕರು ಮತ್ತು ರೋಗಿಗಳು ಈ ಕೆಳಕಂಡ ಅಪಾಯಕಾರಿ ಲಕ್ಷಣಗಳು ಕಂಡುಬಂದಲ್ಲಿ ಅವಶ್ಯವಾಗಿ ವೈದ್ಯರನ್ನು ಕಾಣಬೇಕು. ತೀವ್ರ ಜ್ವರ, ಮೂರರಿಂದ ಐದು ದಿನಗಳಲ್ಲಿ ನಿಯಂತ್ರಣಕ್ಕೆ ಬಾರದ ಜ್ವರ, ರಕ್ತ ಸ್ರಾವ, ಮುಖದ ಊತ, ಕಣ್ಣುಗಳ ಸುತ್ತಳತೆಯಲ್ಲಿ ಊತ, ಕೈಕಾಲು ತಣ್ಣಗಿರುವುದು, ವಿಪರೀತ ಹೊಟ್ಟೆ ನೋವು, ಒಂದೇ ಸಮನೆ ವಾಂತಿ ಆಗುವಿಕೆ, ಆಲಸ್ಯ ಜಡತ್ವ, ಮಂಪರು, ಆಹಾರ ನಿರಾಕರಣೆ. ಈ ಮೇಲಿನ ಸೂಚನೆಗಳು ಇಲ್ಲದಿದ್ದರೂ ಡೆಂಗ್ಯೂ ಪಿಡುಗು ಸಮಯದಲ್ಲಿ ಎಲ್ಲಾ ಜ್ವರ ಪೀಡಿತ ಮಕ್ಕಳಲ್ಲಿ ಡೆಂಗ್ಯೂ ಸೋಂಕನ್ನು ಪರಿಶೀಲಿಸುವುದು ಉತ್ತಮ.

ಡೆಂಗ್ಯೂ ಜ್ವರವನ್ನು ಯಾವ ಪರೀಕ್ಷೆಗಳಿಂದ ಕಂಡು ಹಿಡಿಯಬಹುದು?
ಪ್ರಮುಖವಾಗಿ ರಕ್ತಪರೀಕ್ಷೆಗಳಿಂದ ಸೋಂಕನ್ನು ಕಂಡು ಹಿಡಿಯಬಹುದಾಗಿದೆ. ಕಾಯಿಲೆಯ ತೀವ್ರತೆಯನ್ನು ನಿಗಾ ಇಡಲು ರಕ್ತದ ಪರೀಕ್ಷೆಗಳು ಸಹಕಾರಿ, ಅವಶ್ಯವಿದ್ದಲ್ಲಿ ಎಕ್ಸ್‌’ರೇ ಸ್ಕ್ಯಾನಿಂಗ್ ಕೂಡಾ ಮಾಡಬಹುದು.

ಡೆಂಗ್ಯೂ ಜ್ವರ ತಡೆಗಟ್ಟಲು ಲಸಿಕೆಗಳು ಇವೆಯೇ?
ಡೆಂಗ್ಯೂ ಜ್ವರ ತಡೆಯಲು ಪ್ರಸ್ತುತ ಯಾವುದೇ ಲಸಿಕೆಗಳಿಲ್ಲ. ಕೇವಲ ಸೊಳ್ಳೆ ನಿಯಂತ್ರಣದಿಂದ ಮಾತ್ರ ಡೆಂಗ್ಯೂ ಸೋಂಕನ್ನು ತಡೆಗಟ್ಟಬಹುದು.

ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆಯೇನು?
ಇದಕ್ಕೆ ನಿರ್ದಿಷ್ಠ ಔಷಧವಿಲ್ಲ. ಆರಂಭಿಕ ಹಂತದಲ್ಲೇ ಕಾಯಿಲೆಯ ಗುರುತಿಸುವಿಕೆ ಮತ್ತು ಅನುಭವಿ ಮತ್ತು ನುರಿತ ವೈದ್ಯರಿಂದ ಸುಸಜ್ಜಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಬಹಳ ಮುಖ್ಯ. ಸಾಧಾರಣ ಡೆಂಗ್ಯೂ ಜ್ವರಕ್ಕೆ ಸಾಕಷ್ಟು ದ್ರವಾಹಾರ ಮತ್ತು ಜ್ವರ ನಿಯಂತ್ರಣ ಹಾಗೂ ರಕ್ತಕಣಗಳ ಮಾಪನ ಸಾಕಾಗುತ್ತದೆ. ಆದರೆ ತೀವ್ರ ಜ್ವರಕ್ಕೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಬೇಕಾಗುತ್ತದೆ.

ಹೀಗಿರಲಿ ಮುಂಜಾಗ್ರತಾ ಕ್ರಮಗಳು

  • ಕಾಯಿಲೆಯ ಬಗ್ಗೆ ಅರಿವು ಮೂಡಿಸುವುದು ಬಹಳ ಮುಖ್ಯ
  • ನಿಮ್ಮ ಸುತ್ತಮುತ್ತಲು ಗಲೀಜು ನೀರು ನಿಲ್ಲದಂತೆ ನೋಡಿಕೊಳ್ಳಿ
  • ಮುಚ್ಚಳವಿಲ್ಲದ ನೀರು ಶೇಖರಣೆ ತೊಟ್ಟಿಗಳನ್ನು ಬಳಸಬೇಡಿ
  • ನಿಮ್ಮ ಮನೆಯ ಕಸವನ್ನು ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡಿ
  • ರಾತ್ರಿ ಮಲಗುವಾಗ ಸೊಳ್ಳೆ ಪರದೆ, ಸೊಳ್ಳೆ ಬತ್ತಿಗಳನ್ನು ಬಳಸಿ
  • ಚಿಕ್ಕ ಮಕ್ಕಳಿಗೆ ಪೂರ್ಣ ತೋಳುಗಳ ಉಡುಪು ತೊಡಿಸಿ
  • ಜ್ವರ ಬಂದ ಕೂಡಲೇ ವೈದ್ಯರ ಬಳಿ ಪರೀಕ್ಷೆ ಮಾಡಿಸಿಕೊಳ್ಳಿ

Get In Touch With Us info@kalpa.news Whatsapp: 9481252093, 94487 22200

Tags: dengue feverDoctorDr Raghavendra VailayaEpidemicHealth ArticleMosquitoSubbaiah Medical College ShivamoggaViralಆರೋಗ್ಯ ಲೇಖನಕಾಯಿಲೆಡಾ. ರಾಘವೇಂದ್ರ ವೈಲಾಯಡೆಂಗ್ಯೂ ಜ್ವರಲಸಿಕೆವೈದ್ಯಕೀಯ ಲೇಖನವೈರಾಣುಸಾಂಕ್ರಾಮಿಕ ರೋಗಸೊಳ್ಳೆ
Share256Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನ.9ರ ಇಂದೇ ಅಯೋಧ್ಯಾ ತೀರ್ಪು ಪ್ರಕಟಿಸುತ್ತಿರುವುದು ಏಕೆ ಗೊತ್ತಾ? ಇಲ್ಲಿದೆ ರೋಚಕ ಮಾಹಿತಿ ತಪ್ಪದೇ ಓದಿ

Next Post

ಅಯೋಧ್ಯಾ ಅಂತಿಮ ತೀರ್ಪು: ಸಿಜೆಐ ಗೊಗೋಯ್ ಅವರಿಗೆ ನೀಡಿರುವ ವಿಶೇಷ ಭದ್ರತೆ ಹೇಗಿದೆ ಗೊತ್ತಾ?

kalpa News

kalpa News

Next Post
ಅಯೋಧ್ಯಾ ಅಂತಿಮ ತೀರ್ಪು: ಸಿಜೆಐ ಗೊಗೋಯ್ ಅವರಿಗೆ ನೀಡಿರುವ ವಿಶೇಷ ಭದ್ರತೆ ಹೇಗಿದೆ ಗೊತ್ತಾ?

ಅಯೋಧ್ಯಾ ಅಂತಿಮ ತೀರ್ಪು: ಸಿಜೆಐ ಗೊಗೋಯ್ ಅವರಿಗೆ ನೀಡಿರುವ ವಿಶೇಷ ಭದ್ರತೆ ಹೇಗಿದೆ ಗೊತ್ತಾ?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL