ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಬೆಂಗಳೂರು ಗಲಭೆಗೆ ಕಾಂಗ್ರೆಸ್ ಆಂತರಿಕ ಸಮಸ್ಯೆಗಳೇ ಕಾರಣ ಎಂದು ಹೇಳಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತಂತೆ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಗಲಭೆಗೆ ಕಾಂಗ್ರೆಸ್ ಆಂತರಿಕ ಸಮಸ್ಯೆ ಕಾರಣ ಎಂದು ಹೇಳಲು ಅವನ್ಯಾರು? ಬಿಜೆಪಿ ಕಾರ್ಯಕರ್ತ ಟ್ವೀಟ್ ಮಾಡಿದ್ದರಿಂದಲೇ ಗಲಭೆ ನಡೆದಿದೆ. ನಮ್ಮ ಪಕ್ಷದ ವಿಚಾರ ಮಾತನಾಡಲು ಅವನ್ಯಾರು ಎಂದು ಗೃಹ ಸಚಿವರನ್ನು ಏಕವಚನದಲ್ಲಿ ಜರಿದಿದ್ದಾರೆ.
ಕಾಂಗ್ರೆಸ್ ಶಾಸಕರಿಗೆ ಹಾಗೂ ಮುಖಂಡರಿಗೆ ನೋಟೀಸ್ ನೀಡಿ, ತಪ್ಪು ಒಪ್ಪಿಕೊಳ್ಳುವಂತೆ ಬೆದರಿಕೆ ಹಾಕಲಾಗುತ್ತಿದೆ. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ನೋಡುತ್ತಿದ್ದೇವೆ. ನಾವು ಇದನ್ನು ಇಲ್ಲಿಗೆ ಬಿಡುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
Get In Touch With Us info@kalpa.news Whatsapp: 9481252093






Discussion about this post