No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Editorial

ಸ್ವತಂತ್ರ್ಯ ಭಾರತದಲ್ಲಿ ಜನರ ಸ್ವಾತಂತ್ರ್ಯ ಕಸಿದಿದ್ದ ಸರ್ವಾಧಿಕಾರಿ ಮನಃಸ್ಥಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2018
in Editorial
0
Share on FacebookShare on TwitterShare on WhatsApp

ದೇಶದ ಇತಿಹಾಸದಲ್ಲೇ ಕರಾಳ ವರ್ಷಗಳಾದ ತುರ್ತು ಪರಿಸ್ಥಿತಿಗೆ ಈಗ 43 ವರ್ಷ

ಅದು ಸ್ವತಂತ್ರ ಭಾರತದ ಕರಾಳ ದಿನಗಳು… ದೇಶಕ್ಕೆ ಸ್ವತಂತ್ರ ತಂದೊಕೊಟ್ಟೆವು ಎಂದು ಹೆಮ್ಮೆಯಿಂದ ಬೀಗುವ ಕಾಂಗ್ರೆಸ್ ಪಕ್ಷ ಇಂದಿರಾಗಾಂಧಿಯೇ ದೇಶದ ಸ್ವಾತಂತ್ರ್ಯ ಕಸಿದಿದ್ದರು.

ಹೌದು, ಅದು 21 ತಿಂಗಳ ಕಾಲ ದೇಶವನ್ನು ಕಾಡಿದ್ದ ಸ್ವಾರ್ಥದ ನಿರ್ಧಾರ 1975ರ ಜೂನ್ 25ರ ಮಧ್ಯರಾತ್ರಿಗೂ ಕೆಲವು ನಿಮಷಗಳ ಮೊದಲು ಹೊರಬಿದ್ದಿತ್ತು. ಅಂದಿನ ಪ್ರಧಾನಿ ಇಂದಿರಾಗಾಂಧಿ ಕೈಗೊಂಡ ಕಠಿಣ ನಿರ್ಧಾರ ಸ್ವತಂತ್ರ ಭಾರತದಲ್ಲಿ ಜನರ ಹಲವು ರೀತಿಯ ಸ್ವಾತಂತ್ರ್ಯವನ್ನು ಕಸಿದಿತ್ತು.

ಇಂದಿರಾಗಾಂಧಿ ಕೈಗೊಂಡಿದ್ದ ಸರ್ವಾಧಿಕಾರಿಯಂತಹ ನಿರ್ಧಾರಗಳು ಹೇಗಿದ್ದವು ಗೊತ್ತಾ?

ಬಾಂಗ್ಲಾದೇಶದ ವಿಮೋಚನಾ ಯುದ್ದ ಇಂದಿರಾಗಾಂಧಿ ಪ್ರೊಫೈಲನ್ನು ಬೆಳೆಸಿತ್ತು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಗಣನೀಯ ರಾಜತಾಂತ್ರಿಕ, ಆರ್ಥಿಕ ಮತ್ತು ಮಿಲಿಟರಿ ಬೆಂಬಲವನ್ನು ಒದಗಿಸಲು ವಿಶ್ವದಾದ್ಯಂತ ಮಾನ್ಯತೆ ಪಡೆಯಿತು. ಪಾಕಿಸ್ಥಾನದ ವಿರುದ್ಧದ ವಿಜಯದ ಉತ್ಸಾಹದಲ್ಲಿ ಕಾಂಗ್ರೆಸ್ 1971 ರಲ್ಲಿ ಜಯಗಳಿಸಿತು. ಇಂದಿರಾಗಾಂಧಿ ಮರಳಿ ಅಧಿಕಾರಕ್ಕೆ ಬಂದು ಅಬ್ಬರಿಸಿದರು. ಆ ವೇಳೆ ಆಕೆಯನ್ನು ದೇವಿ ದುರ್ಗೆಗೆ ಹೋಲಿಕೆ ಮಾಡಿದ್ದೂ ಇದೆ.

ಅಂದು ಚುನಾವಣೆಯಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿದ್ದ ಲೋಕ ಬಂಧು ರಾಜ್ ನಾರಾಯಣ್ ಸೋತಿದ್ದೇ ಎಲ್ಲ ಅನಿಷ್ಠಗಳಿಗೂ ಕಾರಣವಾಗಿತ್ತು. ಅಂದು ನಿಜಕ್ಕೂ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಜಯಗಳಿಸಿದ್ದ ಇಂದಿರಾ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲಾಯಿತು. ರಾಜಮನೆತನಕ್ಕೆ ಸೇರಿದ್ದ ಸಭ್ಯ ರಾಜ್ ನಾರಾಯಣ್ ಅವರು, ಇಂದಿರಾ ವಿರುದ್ಧ ಅಲಹಾಬಾದ್ ಹೈಕೋರ್ಟಿನಲ್ಲಿ ಪ್ರಕರಣ ದಾಖಲಿಸಿದರು.

ಅಂದಿನ ಖಡಕ್ ನ್ಯಾಯಾಧೀಶ ಜಗಮೋಹನ್ ಸಿನ್ಹಾ ತೆಗೆದುಕೊಂಡ ನಿರ್ಧಾರ ಮಾತ್ರ ಐತಿಹಾಸಿಕ. ಜಯಗಳಿಸಿದ ಅಭ್ಯರ್ಥಿ ಇಂದಿರಾ ಗಾಂಧಿ ಚುನಾವಣೆ ಅಕ್ರಮವೆಸಗಿದ್ದು, ಅವರ ಆಯ್ಕೆ ಅಸಿಂಧು. ಬದಲಿಗೆ, ಚುನಾವಣೆ ಗೆದ್ದಿರುವುದು ರಾಜ್ ನಾರಾಯಣ್ ಅವರೇ ಎಂದು ಸಿನ್ಹಾ ತೀರ್ಪು ನೀಡಿಬಿಟ್ಟರು. ಅಷ್ಟೇ ಅಲ್ಲ ಇಂದಿರಾ ಇನ್ನು ಆರು ವರ್ಷ ಚುನಾವಣೆ ಕಣಕ್ಕಿಳಿಯುವಂತಿಲ್ಲ ಎಂದು 1974ರ ಜೂನ್ 25ರಂದು ಸಾರಿಬಿಟ್ಟಿತು ಇಂದಿರಾ ಅವರನ್ನು ಕೆರಳಿಸಿತ್ತು.

ಇದರಿಂದ ವ್ಯಘ್ರಗೊಂಡಿದ್ದ ಇಂದಿರಾ ಗಾಂಧಿ ಅದಾಗತಾನೆ ಮುಗಿದಿದ್ದ ಪಾಕಿಸ್ಥಾನ ವಿರುದ್ಧದ ಯುದ್ಧದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಅಪಾಯ ಇದೆ, ಭೀಕರ ಕ್ಷಾಮ ಇದೆ, 1973ರ ತೈಲ ಸಂಕಷ್ಟದ ಭೀಕರ ಪರಿಣಾಮ ಎದುರಾಗಿದೆ, ದೇಶದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ ಎಂಬ ನೆಪವನ್ನು ಮುಂದಿಟ್ಟುಕೊಂಡು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಬಿಟ್ಟರು. ಅಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗಾಗಿ ಅಧಿಕಾರಕ್ಕೆ ಬಂದ ಇಂದಿರಾಗಾಂಧಿಯ ಸರ್ವಾಧಿಕಾರಿ ಮನಃಸ್ಥಿತಿ ಬಯಲಾಗುತ್ತಾ ಹೋಯಿತು.

ಸರ್ಕಾರದ ಮಟ್ಟದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸಿದ್ಧಾರ್ಥ ಶಂಕರ ರಾಯ್ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆ ಪ್ರಸ್ತಾಪವನ್ನು ಪ್ರಧಾನಿ ಇಂದಿರಾ ಮುಂದೆ ಹಿಡಿದು ನಿಂತರು. ರಬ್ಬರ್ ಸ್ಟಾಂಪ್ ರಾಷ್ಟ್ರಪತಿಯೆನಿಸಿದ ಫಕ್ರುದ್ದೀನ್ ಅಲಿ ಅಹಮದ್ ಪ್ರಧಾನಿ ಪ್ರಸ್ತಾವನೆಗೆ ಅಂಕಿತ ಹಾಕಿದ್ದರು.

ಈ ನಡುವೇ ಸಂವಿಧಾನದ ಪರಿಚ್ಚೇದ 352ರ ಅನುಸಾರ ತಮಗೆ ವಿಶೇಷಾಧಿಕಾರಿ ದಕ್ಕಿಸಿಕೊಂಡ ಇಂದಿರಾ, ಪೌರಹಕ್ಕುಗಳನ್ನು ಕಸಿದುಕೊಂಡು ತಮ್ಮ ವಿರೋಧಿಪಾಳಯದ ನಾಯಕರ ಧ್ವನಿ ಅಡಗಿಸಲು ಇನ್ನಿಲ್ಲದ ಶ್ರಮ ಹಾಕಿದರು.

ಇನ್ನೊಂದೆಡೆ ಮಾಧ್ಯಮದ ಧ್ವನಿಯನ್ನು ಅಡಗಿಸಿದ ಇಂದಿರಾ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಅನೇಕ ಸಂಘಟನೆಗಳಿಗೆ ನಿಷೇಧ ಹೇರಿದರು. ಪ್ರಧಾನಿ ಇಂದಿರಾ ತಮಗೆ ನ್ಯಾಯಾಂಗದ ಸಂರಕ್ಷಣೆ ಕಲ್ಪಿಸಿಕೊಳ್ಳುವುದರ ಜತೆಗೆ ನಾಗರಿಕರು ಯಾವುದೇ ಕೋರ್ಟ್‌ಗಳಲ್ಲಿ ಸರ್ಕಾರವನ್ನು ಪ್ರಶ್ನಿಸುವಂತಿಲ್ಲ ಎಂದೂ ಸಂವಿಧಾನಕ್ಕೆ ತಿದ್ದುಪಡಿ ತಂದು, ಸ್ವಾತಂತ್ರ್ಯವನ್ನು ಕಸಿದರು.

ಮೀಸಾ ಕಾಯಿದೆಯನ್ನು ದುರುಪಯೋಗ ಮಾಡಿಕೊಂಡು ಪ್ರಮುಖ ಹೋರಾಟಗಾರರನ್ನು ಜೈಲಿಗೆ ಅಟ್ಟಲಾಯಿತು. ಇಂದಿರಾಗಾಂಧಿಯವರು ಆಟಾಟೋಪವನ್ನು ಕಂಡು ಕಿಡಿ ಕಾರಿದ ಸುಪ್ರೀಂ ಕೋರ್ಟ್ ಅಧಿಕಾರದಲ್ಲಿರುವ ರಾಜಕಾರಣಿಗಳ ಅನುಕೂಲಕ್ಕೆ ತಕ್ಕಂತೆ ಕೇವಲ ಸಂಸತ್ತಿನ ಅನುಮೋದನೆ ಪಡೆದು ಕರಾಳ ಶಾಸನಗಳನ್ನು ರೂಪಿಸುವಂತಿಲ್ಲ ಅಥವಾ ತಿದ್ದುಪಡಿ ತರುವಂತಿಲ್ಲ ಎಂದು ಆದೇಶಿಸಿದರು.

ಜನಸಂಖ್ಯೆ ದೇಶದಲ್ಲಿ ಮಿತಿಮೀರುತ್ತಿದೆ ಎಂದು ಬುದ್ದಿ ಇಲ್ಲದ ಸಂಜಯ್ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಟಾರ್ಗೆಟ್ ನೀಡುತ್ತಾ ಕೈಗೆ ಸಿಕ್ಕಿದವರಿಗೆಲ್ಲಾ ಬಲವಂತದ ಫ್ಯಾಮಿಲಿ ಪ್ಲಾನಿಂಗ್ ಆಪರೇಶನ್ ಮಾಡಿಸಿದ್ದು ದೇಶದ ಮತ್ತೊಂದು ದುರಂತ.

ಈ ಆದೇಶ ನೀಡಿದ್ದ ನ್ಯಾಯಮೂರ್ತಿ ಖನ್ನಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಬೇಕಿತ್ತು. ಆದರೆ, ಅವರ ಮೇಲಿನ ಸಿಟ್ಟಿಗೆ ಇಂದಿರಾ ಅವರ ಅವಕಾಶವನ್ನು ಕಿತ್ತುಕೊಂಡಿದ್ದರು.

ಇಷ್ಟೆಲ್ಲಾ ಆದ ನಂತರ ಜನವರಿ 23, 1977ದಂದು ಚುನಾವಣೆ ಪ್ರಸ್ತಾವನೆಯನ್ನು ರಾಷ್ಟ್ರದ ಮುಂದಿಟ್ಟ ಇಂದಿರಾ ಮಾರ್ಚ್ ತಿಂಗಳಿನಲ್ಲಿ ಚುನಾವಣೆ ನಡೆಸುವುದಾಗಿ ಘೋಷಿಸಿ, ಅದೇ ವೇಳೆ ಬಂಧಿತ ನಾಯಕರನ್ನು ಬಿಡುಗಡೆಗೊಳಿಸಿದರು. ಇದರ ಬೆನ್ನಲ್ಲೇ ಮಾರ್ಚ್ 23, 1977ರಂದು ತುರ್ತು ಪರಿಸ್ಥಿತಿ ಅಧಿಕೃತವಾಗಿ ಅಂತ್ಯವಾಯಿತು.

ಆನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾ ಪಕ್ಷ 298 ಸ್ಥಾನಗಳನ್ನು ಗಳಿಸಿ, ಮೊರಾರ್ಜಿ ದೇಸಾಯಿ ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಒಟ್ಟಿನಲ್ಲಿ ಸರ್ವಾಧಿಕಾರಿ ಮನಃಸ್ಥಿತಿಯ ಇಂದಿರಾ ಗಾಂಧಿ ತಮ್ಮ ಸ್ವಾರ್ಥಕ್ಕಾಗಿ ಕೈಗೊಂಡ ನಿರ್ಧಾರ ಇಡಿಯ ದೇಶಕ್ಕೇ ಒಂದು ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು.

-ಎಸ್.ಆರ್. ಅನಿರುದ್ಧ ವಸಿಷ್ಠ
  9008761663

Tags: Bharatiya Lok Dal PartyEmergency in IndiaIndira GandhiJustice Jagmohan SinhaRaj NarayanSupreme Court
Share196Tweet123Send
Previous Post

ಸೌದಿ ಮಹಿಳೆಯರಿಗೆ ಇಂದು ಲ್ಯಾಂಡ್ ಮಾರ್ಕ್ ಡೇ: ಯಾಕೆ ಗೊತ್ತಾ?

Next Post

ಮೈಸೂರು: ವಿದ್ಯಾಸ್ಪಂದನ ಸಂಸ್ಥೆಯ ಸಮಾಜ ಸೇವೆಗೆ 5 ವರ್ಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರು: ವಿದ್ಯಾಸ್ಪಂದನ ಸಂಸ್ಥೆಯ ಸಮಾಜ ಸೇವೆಗೆ 5 ವರ್ಷ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

“ನೂತನ ಗಣಿತದ ಸಂಪನ್ಮೂಲ ಪುಸ್ತಕ” ಲೋಕಾರ್ಪಣೆ | ವಿದ್ಯಾರ್ಥಿ ಸ್ನೇಹಿ ಗಣಿತ ಕಲಿಕೆಗೆ ನೂತನ ಪ್ರಯತ್ನ

May 27, 2026
ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದರೂ ಅದು ತಾತ್ಕಾಲಿಕ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭವಿಷ್ಯ

May 27, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL