ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶ್ರೀನಗರ: ಗಡಿ ಭಾಗದಲ್ಲಿ ಭಾರತೀಯ ಸೇನೆ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಮತ್ತೆ ಮೂವರು ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ.
ಜಮ್ಮು ಕಾಶ್ಮೀರ ಪೊಲೀಸ್, ಭಾರತೀಯ ಸೇನೆ, ಸಿಆರ್’ಪಿಎಫ್ ಜಂಟಿ ಕಾರ್ಯಾಚರಣೆಯ ಪರಿಣಾಮವಾಗಿ ಪುಲ್ವಾಮದಲ್ಲಿನ ಝಡೂರ ಪ್ರದೇಶದಲ್ಲಿ ಉಗ್ರರನ್ನು ಬಲಿ ಹಾಕಲಾಗಿದೆ.
ಎನ್’ಕೌಂಟರ್ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಉಗ್ರರು ಯಾವ ಸಂಘಟನೆಯವರೆಂದು ಇನ್ನಷ್ಟೇ ತಿಳಿಯಬೇಕಿದೆ.
ನಿಮ್ಮ ಮುಖ ಕಾಂತಿಯುತವಾಗಬೇಕೆ? ಡಯಾಬಿಟಿಸ್ ನಿಯಂತ್ರಿಸಬೇಕೆ? ಇಲ್ಲಿದೆ ಸರಳ ಪರಿಹಾರ | Ayurveda Tips in Kannada
ಆರೋಗ್ಯ ಸಲಹೆ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದ ಓರ್ವ ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.
ಈ ಎನ್’ಕೌಂಟರ್ ಮೂಲಕ ಜಮ್ಮು ಕಾಶ್ಮೀರದಲ್ಲಿ 24 ಗಂಟೆಗಳಲ್ಲಿ 7 ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವರ್ಷ ಹತರಾಗಿರುವ ಭಯೋತ್ಪಾದಕರ ಸಂಖ್ಯೆ 153 ಕ್ಕೆ ಏರಿಕೆಯಾಗಿದೆ.
Get In Touch With Us info@kalpa.news Whatsapp: 9481252093
Discussion about this post