No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಹಭಾಳ್ವೆಯ ಆಧಾರ ವೈಜ್ಞಾನಿಕ ಹಿನ್ನೆಲೆಯುಳ್ಳ ಭಾರತೀಯ ಹಬ್ಬಗಳು

ಯುಗಾದಿ ಹಬ್ಬದ ನಿಮಿತ್ತ ವಿಶೇಷ ಲೇಖನ

kalpa News by kalpa News
March 25, 2020
in Special Articles
0
ಸಹಭಾಳ್ವೆಯ ಆಧಾರ ವೈಜ್ಞಾನಿಕ ಹಿನ್ನೆಲೆಯುಳ್ಳ ಭಾರತೀಯ ಹಬ್ಬಗಳು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಯುಗಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ. ಹೊಸ ವರುಷಕೆ ಹೊಸ ಹರುಷವ, ಹೊಸತು ಹೊಸತು ತರುತಿದೆ. ಬೇಂದ್ರೆ ಅಜ್ಜನ ಈ ಸಾಲು ಕೇಳದವರು ಬಹುಷಃ ಯಾರೂ ಇಲ್ಲ ಎಂದು ಹೇಳಬಹುದು.

ವ್ಯಕ್ತಿ ತಾನು ಹುಟ್ಟಿದ ದಿನದ ಸಂಭ್ರಮದಲ್ಲಿ ಮಿಂದು ಹೋಗುವಂತೆಯೇ ಪ್ರಕೃತಿಯು ಮರ-ಗಿಡಗಳ ಎಲೆ ಉದುರಿಸಿ ನವ ಚಿಗುರಿನೊಂದಿಗೆ ಚೈತ್ರ ಮಾಸಕ್ಕೆ ಪದಾರ್ಪಣೆ ಮಾಡುತ್ತದೆ. ಹಳೇ ಬೇರಿನಿಂದ ಹೊಸ ಚಿಗುರು ನಳನಳಿಸುವಂತೆ ಪ್ರಕೃತಿಯು ಮಡಿಲು ಕುಡಿ ಚಿಗುರಿನಿಂದ ಹಸಿರು ಹಾಸಿಗೆಯಂತೆ ಕಂಗೊಳಿಸುವ ಕಾಲಮಾನವೇ ಯುಗಾದಿ.

ವಿಕಾರಿನಾಮ ಸಂವತ್ಸರದ ವಿದಾಯದೊಂದಿಗೆ ಶ್ರೀಶಾರ್ವರಿ ಸಂವತ್ಸರದ ಆಗಮನ ಹಲವು ಭರವಸೆಯೊಂದಿಗೆ ಸ್ವಾಗತಿಸಲು ಮನ ಕಾತುರದಲ್ಲಿ ಕಾಯುತಿದೆ. ಮನುಷ್ಯ ಹುಟ್ಟಿನಿಂದಲೂ ವರುಷ ಕಳೆದಂತೆ ಮನುಷ್ಯನ ಅನುಭವ ಮೂಟೆ ತುಂಬುತ್ತಲೇ ಹೋಗುತ್ತದೆ. ಕಳೆದ ದಿನದ ಸಿಂಹಾವಲೋಕನಕ್ಕೆ ಒಂದು ಯುಗಾದಿಯ ಅವಶ್ಯಕತೆ ಇದೆ. ಏನೆಲ್ಲಾ ಹೊಸ ಯೋಜನೆಗಳನ್ನು ರೂಪಿಸಿದ್ದೇವೆ. ಅಂದುಕೊಂಡಿದ್ದರಲ್ಲಿ ಎಷ್ಟು ಪ್ರಮಾಣದ ಕೆಲಸ ಕಾರ್ಯರೂಪಕ್ಕೆ ಬಂದಿದೆ, ಸರ್ಕಾರ ಸಮಾಜ, ಜಾಗತಿಕ ಮಾರುಕಟ್ಟೆ, ರಾಜ್ಯ, ಜಿಲ್ಲೆ, ಊರು, ವ್ಯಕ್ತಿಗತ ಸ್ಥಿತಿ ಎಲ್ಲಾ ಕಡೆಯಲ್ಲಿ ಆಗಿರುವ ವರ್ಷದ ಹಿನ್ನೋಟ ಜೊತೆಗೆ ಮುನ್ನೋಟದಲ್ಲಿ ಯಾವೆಲ್ಲಾ ಸಾಧ್ಯ ಎನ್ನುವ ಕಾರ್ಯಕಲ್ಪಗಳ ಅಗತ್ಯವಿದೆ.


90ರ ದಶಕದಿಂದ ಈಚೆಗಿನ ಭಾರತೀಯರ ಬದುಕಿನ ಶೈಲಿ ಹಲವಾರು ವೈವಿಧ್ಯಮಯಗಳನ್ನು ನಾಶಿಸಿವೆ. ಯುಗಾದಿಯ ಸಂಭ್ರಮದಲ್ಲಿದ್ದ ನಮಗೆ ಟಿ.ವಿ. ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಅವರು (ಎಲ್‌ಪಿಜಿ) ಜಾಗತಿಕರಣದ ಮುಕ್ತವೆನ್ನುವ ವ್ಯಾಪಾರ ವಹಿವಾಟಿಗೆ ರಹದಾರಿ ಕೊಟ್ಟರು. ಕೂಡಲೇ ಬೇಕಾದ ಅನಿವಾರ್ಯತೆ ದೇಶಕ್ಕೆ ಒಂದೊದಗಿದ್ದು ಸುಳ್ಳಲ್ಲ.

ಅಲ್ಲಿಯವರೆಗೂ ಯುಗಾದಿ ಹಬ್ಬ ಎಂದರೆ ತಿಂಗಳ ಮುಂಚಿನಿಂದಲೇ ತಯಾರಿ ಶುರುವಾಗುತ್ತಿತ್ತು. ಬಹುತೇಕರ ಮನೆಗಳು ಮಣ್ಣಿನ ಗೋಡೆಗಳಿಂದಲೇ ಕೂಡಿರುತ್ತಿದ್ದವು. ಸುಣ್ಣ ಮಾರುವವನ ಹತ್ತಿರ ಸೇರು ಸುಣ್ಣಕ್ಕೆ 50 ಪೈಸೆ ಕೊಟ್ಟು ಮನೆಯ ಮುಂದಿನ ಭಾಗಕ್ಕೆ ಗೃಹಿಣಿಯರೇ ಹಚ್ಚಿ ಅಟ್ಟದ ಮೇಲಿನ ಗೋಡೆಗೆ ಊರು ಮಂಜು ಅಥವಾ ಕೆರೆಯಲ್ಲಿ ಸಿಗುವ ಗೋಡನ್ನು ತಂದು ಬಟ್ಟೆಯಲ್ಲಿ ಬ್ರೆಷ್ ಆಗಿ ಮನೆ ರೂಪುಗೊಳ್ಳುತ್ತಿತ್ತು. ಇಷ್ಟರ ನಡುವೆ ಕರಿ ಹಂಚಿನ ಮನೆಯವರು ಹೋಳು ಹುಣ್ಣಿಮೆಯೊಳಗೆ ಒಂದು ಸುತ್ತು ಮನೆಯ ಹಂಚುಗಳನ್ನು ತಿರುವಿ ಹಾಸುತ್ತಿದ್ದರು.

ಜಮೀನಿನಲ್ಲಿ ಬೆಳೆದ ಬೆಳೆಯನ್ನೆಲ್ಲಾ ಒಕ್ಕಲು ಮಾಡಿ ದಾಸ್ತಾನು ಮಾಡೋರು ಹಗೆವುಗಳಲ್ಲಿರುತ್ತಿದ್ದರು. ಮಾರಾಟ ಮಾಡುವವರು ಮಾರಿ ಬಂದ ಹಣದಲ್ಲಿ ಏನನ್ನು ಮಾಡದಿದ್ದರೂ ಮನೆಯವರಿಗೆಲ್ಲಾ ಬಟ್ಟೆ ತರುವುದನ್ನು ಮರೆಯುವಂತಿರಲಿಲ್ಲ. ಆರ್ಥಿಕತೆಯಲ್ಲಿ ಅಶಕ್ತರಾಗಿದ್ದ ಮಹಿಳೆಯರು ಮಕ್ಕಳ ಯುಗಾದಿ ಹಬ್ಬದ ಬಟ್ಟೆಗಾಗಿ ಮೂರು ನಾಲ್ಕು ತಿಂಗಳಿನಿಂದ ಕನಸು ಕಟ್ಟಿಕೊಂಡಿರುತ್ತಿದ್ದ ಕಾಲವಿತ್ತು. ತೀರಾ ಬಡತನದಲ್ಲಿರುವ ಮನೆತನದವರು ದೀಪಾವಳಿಗೆ ಒಂದಿಷ್ಟು ಸದಸ್ಯರಿಗೆ ಯುಗಾದಿಗೊಂದಿಷ್ಟು ಜನರಿಗೆ ವಸ್ತ್ರ ಖರೀದಿ ಸಂಪ್ರದಾಯವನ್ನು ರೂಢಿಯಲ್ಲಿರಿಸಿದ್ದರು.

ಭಾರತದ ಬಹುಪಾಲು ಭೂಮಿ ಕೃಷಿ ಜಮೀನುಗಳಾಗಿದ್ದರಿಂದ ಮಳೆಯಾಶ್ರಿತ ಬೆಳೆಗಳು ಮಾತ್ರ ಸಾಧ್ಯವಾಗುತ್ತಿತ್ತು. ಯುಗಾದಿ ಎಡ-ಬಲದಲ್ಲಿ ದಪ್ಪನೇ ಮಳೆ ಬರುತ್ತಿತ್ತು. ಯುಗಾದಿಯ ಶುಕ್ಲ ಪಕ್ಷದ ಪಾಡ್ಯತಿಥಿಯ ಬ್ರಾಹ್ಮಿ ಮಹೂರ್ತದಲ್ಲಿ ರೈತಾಪಿ ವರ್ಗ ಮೊದಲ ಬೇಸಾಯವನ್ನು ಸಡಗರ ಸಂಭ್ರಮದಿಂದ ಆಚರಿಸುತ್ತಿದ್ದರು. ನೇಗಿಲನ್ನು ಉಳುವಾಗ ಎತ್ತುಗಳಿಗೆ ಅಲಂಕಾರ ಮಾಡಿ ಭೂಮಿಗೆ ನೇಗಿಲಿಡುವ ಸಂಪ್ರದಾಯದಲ್ಲಿ ಸಾಂಸ್ಕೃತಿಕ ಸೊಗಡು ತುಂಬಿರುತ್ತದೆ.

ಮೊದಲು ಬೇಸಾಯ ಮುಗಿಸಿ ಬಂದವರಿಗೆ ಬೇವು ಬೆಲ್ಲ ಕೊಟ್ಟು ಬರ ಮಾಡಿಕೊಳ್ಳುತ್ತಾರೆ. ಬೇವಿನಲ್ಲಿರುವ ರೋಗ ನಿರೋಧಕ ಶಕ್ತಿ, ತ್ವಚೆಯ ಕಾಂತಿಯನ್ನು ಕಾಪಾಡಿ ಚರ್ಮ ರೋಗಗಳಿಂದ ದೂರವಿರುವಂತೆ ಮಾಡುತ್ತದೆ. ಬೆಲ್ಲದಲ್ಲಿರುವ ಖನಿಜಾಂಶ ಹಾಗೂ ಉತ್ತಮ ಪ್ರೋಟೀನ್ ದೇಹಕ್ಕೆ ಅವಶ್ಯಕವಾಗಿರುವ ಪೋಷಕಾಂಶವನ್ನು ಒದಗಿಸುತ್ತದೆ. ಬೇವು ಬೆಲ್ಲದಿಂದ ಅನೇಕ ಅನಾರೋಗ್ಯ ಸಮಸ್ಯೆಗಳಿಂದ ಮುಕ್ತ ಹೊಂದಬಹುದು.

ಪ್ರತಿ ಹಬ್ಬಕ್ಕೂ ವೈಜ್ಞಾನಿಕ ಆಹಾರ ಪದ್ದತಿ, ಆಚರಣೆಗಳನ್ನು ಹೊಂದಿರುವ ಭಾರತೀಯ ಸಂಪ್ರದಾಯದಲ್ಲಿ ಅಂತರ್ಜಾಲ, ಸಾಮಾಜಿಕ ಜಾಲಗಳಿಲ್ಲದೇ ಆಚರಿಸಲಾಗುತ್ತಿತ್ತು. ಶರ ವೇಗದ ಸಂವಹನ ಸಂಪರ್ಕ ಸೌಲಭ್ಯ ಬಂದಿದೆ. ಆರೋಗ್ಯ, ಆಹಾರ ಕುರಿತು ಮಾಹಿತಿಗಳಿಗೆ ಅಂತರ್ಜಾಲ ತಾಣಗಳ ಲಭ್ಯತೆ ಇದೆ. ಇನ್ನೂ ಅನೇಕ ಸೌಕರ್ಯಗಳು ಆದ್ಯತೆಗಿಂತ ಹೆಚ್ಚಾಗಿ ದೊರೆಯುತ್ತಿವೆ. ಆದರೆ, ಸಾಮಾಜಿಕ ಸಂಬಂಧಗಳು ಸಡಿಲವಾಗಿದೆ. ಎಲ್ಲಾದನ್ನೂ ಪ್ರಶ್ನಿಸುವ ಹಕ್ಕಿದೆ ಎನ್ನುವ ಸ್ವೇಚ್ಛಾಚಾರ ಸರಿ ತಪ್ಪುಗಳ ಆಲೋಚನೆಗಳಿಲ್ಲದೇ ಕ್ರಾಂತಿಕಾರಿ ಮನೋಭಾವದ ಅಂಧಕಾರ ಬಹುತೇಕರಿಗೆ ಆವರಿಸಿದೆ.


ನಮ್ಮ ಪೂರ್ವಜರು ದಡ್ಡರಲ್ಲ. ಎಂಬುದಕ್ಕೆ ಹಬ್ಬ ಹರಿದಿನಗಳೇ ಸಾಕ್ಷಿ. ಗೆಟ್ ಟುಗೆದರ್ ಪಾರ್ಟಿಯ ಕಾನ್ಸೆಪ್ಟ್‌ ನಮ್ಮವರ ಹಬ್ಬಗಳೇ ಆಗಿದೆ. ಭಾರತೀಯರೆಲ್ಲರೂ ನಾಮಕರಣ, ತಿಥಿ, ಮದುವೆ, ಹಬ್ಬಗಳಲ್ಲಿ ನೀಡುವ ಅನ್ನದಾಣ, ಗೋದಾನ, ಫಲದಾನ, ವಸ್ತ್ರದಾನ ಹೀಗೆ ವಿಭಿನ್ನ ರೀತಿಯಲ್ಲಿ ಸಮಾರಂಭಗಳನ್ನೂ ಆಯೋಜಿಸಿ ದುಡಿಮೆ ಪಾಲಿನಲ್ಲಿ ಒಂದಿಷ್ಟನ್ನು ದಾನ ಮಾಡುವುದು ಭಾರತೀಯರಲ್ಲಿ ಪಾರಂಪರಿಕವಾಗಿ ಅಂಟಿಕೊಂಡಿದೆ.

ಊರುಗಳಲ್ಲಿ ಜಗ್ಗಳಿ ಹಿಂಡುಗಳನ್ನು ಅಂದರೆ ಧನ, ಎಮ್ಮೆ, ಕುರಿ, ಮೇಕೆಗಳನ್ನು ಕಾಯುವ ಗಾಹಿಗಳಿಗೆ ಯುಗಾದಿಯಿಂದ ಸಂಬಳ ನಿಗದಿಯಾಗುತ್ತಿತ್ತು. ಊರು ಕಾಯುವ ಪಾಳೆಗಾರರಿಗೆ, ಚೌರ ಮಾಡುವವರಿಗೆ, ದೇವಸ್ಥಾನದಲ್ಲಿ ಪೂಜೆ ಮಾಡುವವರಿಗೆ, ಕರಕುಶಲ ಕರ್ಮಿಗಳಿಗೆ ಊರಿನವರು ಆಯಾ ಕೊಡವುದೆಂದು ಬೆಳೆ ಬಂದಾಗ ಕೊಟ್ಟರು ವರ್ಷದಿಂದ ವರ್ಷಕ್ಕೆ ಬಾಕಿ ಉಳಿಸದೇ ಯುಗಾದಿಯಿಂದ ಯುಗಾದಿಗೆ ಕೊಡು-ಕೊಳ್ಳುವಿಕೆ ಮಾಡಲಾಗುತ್ತಿತ್ತು.

ಬಹುಷಃ ಈಗ ಚಾಲ್ತಿಯಲ್ಲಿರುವ ಸಿಟಿಸಿ, ಪ್ಯಾಕೇಜ್ ಸ್ಯಾಲರಿ ಈ ಪದಗಳೇ ಆಗ ವಿಭಿನ್ನ ರೀತಿಯಲ್ಲಿತ್ತು. ಅಂದರೆ ಯುವ ಪೀಳಿಗೆ ನಾವೇನೂ ಹೊಸ ತಲೆ ಮಾರಿನವರು ಅದ್ಭುತ ಜ್ಞಾನ ಸಂಪಾದಿಸಿ ತಂತ್ರಜ್ಞಾನ ಭಂಡಾರವನ್ನು ಅನ್ವೇಷಿಸಿ ಮನುಕುಲದ ಆದಿಯಿಂದ ಇಲ್ಲಿಯವರೆಗೆ ನಾವೇ ಅಗ್ರಕುಲದವರೆಂದು ಭ್ರಮೆಯಲ್ಲಿರುವುದು ಬೇಡ. ಪೂರ್ವಜನರಲ್ಲಿ ಇದ್ದ ಜ್ಞಾನ, ಜೀವನ ಶೈಲಿ, ಸಾಮಾಜಿಕ, ಧಾರ್ಮಿಕ ಸಹಿಷ್ಣುತೆ ಸದ್ಯದ ಅವಶ್ಯ ಮಾದರಿಯಾಗಿದೆ. ದಯಮಾಡಿ ಇತಿಹಾಸವನ್ನು ಮರೆಯುವುದು ಬೇಡ. ಇತಿಹಾಸ, ಭವಿಷ್ಯದ ಬದುಕಿನ ನಕ್ಷೆಯಾಗಿದೆ. ಇತಿಹಾಸವಿಲ್ಲದ ದೇಶಕ್ಕೆ ಭವಿಷ್ಯವಿಲ್ಲ ಎನ್ನುವ ಮಾತಿನಂತೆ, ಹಿರಿಯರ ಮಾರ್ಗದರ್ಶನವಿಲ್ಲದೇ ಹಳೆ ಬೇರುಗಳಿಲ್ಲದ ಹೊಸ ಚಿಗುರು ಬರಲು ಅಸಾಧ್ಯ.

ವೈರಲ್ ಆಗುತ್ತಿರುವ ಕೊರೋನಾ ಕೋವಿಡ್ -19 ಸಹ ಭೂತಕಾಲದ ನಡೆ-ನುಡಿಗಳ ಅಡಿಗಲ್ಲನ್ನು ತಾತ್ಸಾರ ಮಾಡಿದ್ದರ ಫಲವೇ ಆಗಿದೆ. ನಿದ್ದೆಗೊಮ್ಮೆ ನಿತ್ಯ ಮರಣ ಎಂದ್ದ ಸಲ ನಬೀನ ಜನರ ನಮಗೆ ಏಕೆ ಬಾರದೋ? ಎಲೆ ಸನತು ಮಾರದೇವ! ಸಲೆ ಸಾಹಸಿ ಚಿರಂಜೀವ ನಿನಗೆ ಲೀಲೆ ಸೇರದೋ? ಎಂಬುದನ್ನು ಇನ್ನಾದರೂ ಮನದಟ್ಟು ಮಾಡಿಕೊಂಡು ಸಂತೃಪ್ತಿಯಿಂದ ಸಹಬಾಳ್ವೆಯೊಂದಿಗೆ ಆರೋಗ್ಯಕರ ಜೀವನ ನಡೆಸೋಣ.


Get in Touch With Us info@kalpa.news Whatsapp: 9481252093

Tags: FestivalKannadaNewsWebsiteUgadiಆಹಾರ ಪದ್ದತಿಬ್ರಾಹ್ಮಿ ಮಹೂರ್ತಭಾರತೀಯ ಹಬ್ಬಮದುವೆಯುಗಾದಿಶ್ರೀಶಾರ್ವರಿ ಸಂವತ್ಸರಹಬ್ಬ
Share231Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಾಕ್’ಡೌನ್ ಆದೇಶ ಉಲ್ಲಂಘಿಸಿ ರಸ್ತೆಯಲ್ಲಿ ಅಲೆದವರಿಗೆ ಶಿವಮೊಗ್ಗ ಪೊಲೀಸರಿಂದ ಬಿಸಿಬಿಸಿ ಕಜ್ಜಾಯ

Next Post

ಇಟಲಿ ಚರ್ಚ್‌ಗಳಲ್ಲಿ ಇಟ್ಟಿರುವ ಶವ ಪೆಟ್ಟಿಗೆಗಳ ಸಾಲು ಒಮ್ಮೆ ನೋಡಿ, ಮೋದಿ ಯಾಕೆ ಲಾಕ್’ಡೌನ್ ಮಾಡಿದ್ದಾರೆ ಎಂದು ಅರಿಯಿರಿ

kalpa News

kalpa News

Next Post

ಇಟಲಿ ಚರ್ಚ್‌ಗಳಲ್ಲಿ ಇಟ್ಟಿರುವ ಶವ ಪೆಟ್ಟಿಗೆಗಳ ಸಾಲು ಒಮ್ಮೆ ನೋಡಿ, ಮೋದಿ ಯಾಕೆ ಲಾಕ್’ಡೌನ್ ಮಾಡಿದ್ದಾರೆ ಎಂದು ಅರಿಯಿರಿ

Leave a Reply Cancel reply

Your email address will not be published. Required fields are marked *

No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL