ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಯಾಣಿಕರ ಹೆಚ್ಚುತ್ತಿರುವ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ದಕ್ಷಿಣ ಕರಾವಳಿ ರೈಲ್ವೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿಶಾಖಪಟ್ಟಣಂ–ಎಸ್ಎಂವಿಟಿ ಬೆಂಗಳೂರು ನಡುವೆ ಸಂಚರಿಸುವ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲುಗಳ ಸೇವಾ ಅವಧಿಯನ್ನು ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 08581/08582 ವಿಶಾಖಪಟ್ಟಣಂ–ಎಸ್ಎಂವಿಟಿ ಬೆಂಗಳೂರು–ವಿಶಾಖಪಟ್ಟಣಂ ವಿಶೇಷ ರೈಲುಗಳು ಈಗಿರುವ ನಿಲುಗಡೆಗಳು, ವೇಳಾಪಟ್ಟಿ ಮತ್ತು ಸಂಯೋಜನೆಗಳೊಂದಿಗೆ ಮುಂದುವರಿಯಲಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಇದನ್ವಯ, ಪ್ರತಿ ಶುಕ್ರವಾರ ವಿಶಾಖಪಟ್ಟಣಂನಿಂದ ಹೊರಡುವ ರೈಲು ಸಂಖ್ಯೆ 08581 ಈ ಹಿಂದೆ ಜುಲೈ 31, 2026ರವರೆಗೆ ಮಾತ್ರ ಸಂಚರಿಸಲಿದೆ ಎಂದು ಘೋಷಿಸಲಾಗಿತ್ತು. ಇದೀಗ ಈ ಸೇವೆಯನ್ನು ಆಗಸ್ಟ್ 07, 2026ರಿಂದ ಸೆಪ್ಟೆಂಬರ್ 25, 2026ರವರೆಗೆ ವಿಸ್ತರಿಸಲಾಗಿದೆ.
Also read: Indian Railway | ಬೆಂಗಳೂರು-ಬೆಳಗಾವಿ-ಲೊಂಡಾ ರೈಲುಗಳ ಬಿಗ್ ಅಪ್ಡೇಟ್
ಅದೇ ರೀತಿ, ಪ್ರತಿ ಶನಿವಾರ ಎಸ್ಎಂವಿಟಿ ಬೆಂಗಳೂರಿನಿಂದ ಹೊರಡುವ ರೈಲು ಸಂಖ್ಯೆ 08582 ಈ ಹಿಂದೆ ಆಗಸ್ಟ್ 01, 2026ರವರೆಗೆ ಮಾತ್ರ ಸಂಚರಿಸಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಸೇವೆಯನ್ನು ಆಗಸ್ಟ್ 08, 2026ರಿಂದ ಸೆಪ್ಟೆಂಬರ್ 26, 2026ರವರೆಗೆ ವಿಸ್ತರಿಸಲಾಗಿದೆ.
ಈ ವಿಸ್ತರಿತ ಅವಧಿಯಲ್ಲಿ, ವಿಶೇಷ ರೈಲುಗಳು ಪ್ರತಿ ದಿಕ್ಕಿನಲ್ಲಿ ತಲಾ 08 ಪ್ರಯಾಣಗಳನ್ನು ನಡೆಸಲಿದ್ದು, ವಿಶಾಖಪಟ್ಟಣಂ ಮತ್ತು ಎಸ್ಎಂವಿಟಿ ಬೆಂಗಳೂರು ನಡುವಿನ ಪ್ರಯಾಣಿಕರಿಗೆ ಹೆಚ್ಚುವರಿ ಅನುಕೂಲ ಒದಗಿಸಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








