ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಹೊರ ರಾಜ್ಯ ಅಥವಾ ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ಸಾರ್ವಜನಿಕರು, ಮನೆ ಮಾಲಿಕರು, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಪಿಎಸ್ಐ ಮಂಜುನಾಥ ಲಿಂಗಾರೆಡ್ಡಿ ಹೇಳಿದರು.
ನಗರದ ಸಾರ್ವಜನಿಕ ಸ್ಥಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಸಾರ್ವಜನಿಕ ಆಸ್ಪತ್ರೆ, ನೆಹರೂ ವೃತ್ತ, ಕಾಟಪ್ಪನಹಟ್ಟಿ ನಗರಸ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಕೊರೋನಾ ವಿಷಯವಾಗಿ ದ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಿದರು.
ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ ಹೆಚ್ಚುತ್ತಿದ್ದು ಹೊರ ರಾಜ್ಯ, ಹೊರ ಜಿಲ್ಲೆಯಿಂದ ಬಂದವರಲ್ಲೇ ಪಾಸಿಟಿವ್ ಕಾಣಿಸುತ್ತಿದ್ದು ನಗರದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಇಲಾಖೆಯು ಸಹ ಸಾಕಷ್ಟು ಹೊರಗಡೆಯಿಂದ ಬರುವವರ ಬಗ್ಗೆ ನಿಗಾ ವಹಿಸಿಲಾಗಿದೆ. ಆದರೂ ಹೊರಗಡೆಯಿಂದ ಬರುವವರ ಸಂಖ್ಯೆ ಹೆಚ್ಚುತ್ತಿದ್ದು, ಇಂತಹ ಸಮಯದಲ್ಲಿ ನಗರದ ನಾಗರಿಕರು ಬೇರೆ ರಾಜ್ಯಗಳಿಂದ ಬಂದವರ ಬಗ್ಗೆ ಇಲಾಖೆಗೆ ಮಾಹಿತಿ ನೀಡಬೇಕು. ಅನಾವಶ್ಯಕವಾಗಿ ಹೊರಗೆ ಹೋಗಬಾರದು, ಮನೆಯಲ್ಲಿ ಇದ್ದಾಗ ಅಥವಾ ಹೊರಬಂದಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಬ್ಯಾಂಕ್ ಅಥವಾ ಮಾರುಕಟ್ಟೆ ಬಸ್ ನಿಲ್ದಾಣಕ್ಕೆ ಬರುವಾಗ ಕೈಗೆ ಸ್ಯಾನಿಟೈಸರ್ ಸಿಂಪಡಿಸಿಕೊಂಡು ಬರಬೇಕು ಎಂದರು.
ಅಲ್ಲದೇ, ತಪ್ಪದೇ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು, ನಿಮ್ಮ ಆರೋಗ್ಯ ನಿಮ್ಮ ಕೈಯಲ್ಲಿದೆ. ಪೊಲೀಸ್ ಇಲಾಖೆ, ಡಾಕ್ಟರ್’ಗಳು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಕೊರೋನಾ ಹರಡುವುದನ್ನು ತಪ್ಪಿಸಲು ಹಗಲು ಇರುಳೆನ್ನದೇ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ನಮ್ಮ ನಿಮ್ಮೆಲ್ಲರಂತೆ ಮನುಷ್ಯರು, ನಿಮ್ಮ ಸುರಕ್ಷತೆಗಾಗಿ ಪ್ರತಿ ದಿನ ಕೊರೋನಾ ವೇಗವಾಗಿ ಹರಡುತ್ತಿದೆ. ಇದು ಸಂಪೂರ್ಣ ಹಬ್ಬದಂತೆ ತಡೆಯುವ ಉದ್ದೇಶದಿಂದ ಕಾರ್ಯ ನಿರ್ವಹಿಸುತ್ತಾರೆ. ನೀವೇ ಸ್ವಯಂ ಜಾಗೃತರಾಗಿ ಕೊರೋನಾ ಹರಡುವುದನ್ನು ತಪ್ಪಿಸಿ ಹೊರ ರಾಜ್ಯ ಹೊರ ಜಿಲ್ಲೆಯಿಂದ ಬರುವವರ, ಬಂದವರ ಬಗ್ಗೆ ಮಾಹಿತಿ ನೀಡಿ ಎಂದರು.
ಈ ಸಂದರ್ಭದಲ್ಲಿ ಪೊಲೀಸ್ ಪೇದೆಗಳಾದ ಅಣ್ಣಪ್ಪ ನಾಯಕ, ಮಂಜುನಾಥ ಮುಡಕಿ ನಗರದ ಸಾರ್ವಜನಿಕರು ಕೆಎಸ್ಆರ್ಟಿಸಿ ಬಸ್ ಚಾಲಕ ನಿರ್ವಾಹಕರು ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
Get In Touch With Us info@kalpa.news Whatsapp: 9481252093
Discussion about this post