ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪತ್ತಿನ ಸಹಕಾರಿ ಬ್ಯಾಂಕ್’ಗಳಲ್ಲಿನ ಎಲ್ಲ ರೀತಿಯ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಿರುವ ರಾಜ್ಯ ಸರ್ಕಾರವನ್ನು ಬಿಜೆಪಿ ರೈತ ಮೋರ್ಚಾ ಅಭಿನಂದಿಸಿದೆ.
ಈ ಕುರಿತಂತೆ ಮಾತನಾಡಿದ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್. ದತ್ತಾತ್ರಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಧನ್ಯವಾದ ಹೇಳಿದ್ದಾರೆ.
5831 ಜನರು ಪತ್ತಿನ ಸಹಕಾರಿ ಬ್ಯಾಂಕ್’ಗಳಲ್ಲಿ ತೆಗೆದುಕೊಂಡಿದ್ದ 22.20 ಕೋಟಿ ಹಣದ ಹಾಗೂ ಡಿಸಿಸಿ ಬ್ಯಾಂಕ್ ನಿಂದ 9.50 ಕೋಟಿ ಹಣ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡುತ್ತಿರುವುದು ಸ್ವಾಗತಾರ್ಹ ಎಂದರು.
Get in Touch With Us info@kalpa.news Whatsapp: 9481252093





Discussion about this post