No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಪೃಥ್ವಿಯ ರಕ್ಷಣೆ ಸಂಕಲ್ಪದೊಂದಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕಿರ್ಲೋಸ್ಕರ್ ಕಾಳಜಿಗೆ ವ್ಯಾಪಕ ಶ್ಲಾಘನೆ

ಪೃಥ್ವಿಯನ್ನು ರಕ್ಷಿಸಿ, ಸಂರಕ್ಷಿಸಿ, ಉಳಿಸಿ ಮುಂದಿನ ಪೀಳಿಗೆಗಾಗಿ : ಒಂದು ವೇಳೆ ಪ್ಲಾಸ್ಟಿಕ್ ಉಳಿದುಕೊಂಡರೆ ನಮ್ಮ ಉಳಿವಿಲ್ಲ !!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 21, 2019
in ಕೊಪ್ಪಳ
0
ಪೃಥ್ವಿಯ ರಕ್ಷಣೆ ಸಂಕಲ್ಪದೊಂದಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕಿರ್ಲೋಸ್ಕರ್ ಕಾಳಜಿಗೆ ವ್ಯಾಪಕ ಶ್ಲಾಘನೆ
Share on FacebookShare on TwitterShare on WhatsApp

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಈ ಕಾರ್ಖಾನೆಯು ಕರ್ನಾಟಕದ ಹಿಂದುಳಿದ ಪ್ರದೇಶದಲ್ಲಿ ಅಂದರೆ ಉತ್ತರ ಕರ್ನಾಟಕದ ಕೈಗಾರಿಕೆಯಲ್ಲಿ ಹಿಂದುಳಿದ ಪ್ರದೇಶವಾದ ಕೊಪ್ಪಳ ಜಿಲ್ಲೆಯ ಬೇವಿನಹಳ್ಳಿಯಲ್ಲಿ 1993 ರಲ್ಲಿ ಸ್ಥಾಪನೆಗೊಂಡಿದ್ದು, ಕಂಪನಿಯ ಪ್ರಮುಖವಾಗಿ ಬೀಡುಕಬ್ಬಿಣ ಮತ್ತು ಬೂದು ಕಬ್ಬಿಣದ ಎರಕಗಳನ್ನು ಉತ್ಪಾದಿಸುತ್ತಿದೆ. ಈ ಉತ್ಪಾದನೆಗಳು ಮುಖ್ಯವಾಗಿ ವಾಹನ ತಯಾರಿಕಾ ವಲಯಕ್ಕೆ ಬಿಡಿಭಾಗವಾಗಿ ಪೂರೈಸಲ್ಪಡುತ್ತವೆ.ಕಾರ್ಖಾನೆಯು ಸ್ಥಾಪನೆಯಾದಾಗಿನಿಂದಲೂ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಂಡು ಬಂದಿರುತ್ತಿದ್ದು, ಇದರ ಭಾಗವಾಗಿ ಕಿರ್ಲೋಸ್ಕರ್ ಫೆರಸ್ ಗ್ರಾಮೀಣಾಭಿವೃದ್ಧಿ ಟ್ರಸ್ಟ್‌’ನ ಮುಖಾಂತರ ಗ್ರಾಮದ ಮೂಲಭೂತ ಸೌಕರ್ಯ, ಶಿಕ್ಷಣ, ಆರೋಗ್ಯ ಮತ್ತು ನೈರ್ಮಲ್ಯ ಇವುಗಳಿಗೆ ಒತ್ತುಕೊಟ್ಟು ಅನೇಕ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿರುತ್ತದೆ. ಈ ಚಟುವಟಿಕೆಗಳಲ್ಲಿ ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವೂ ಒಂದಾಗಿದೆ.ಪರಿಸರ ಸಂರಕ್ಷಿಸುವ ಕುರಿತು ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ಪ್ರತಿ ವರ್ಷದಂತೆ ಈ ಬಾರಿಯೂ ಸಹ ‘‘ಒಂದು ವೇಳೆ ಪ್ಲಾಸ್ಟಿಕ್ ಉಳಿದುಕೊಂಡರೆ ನಮ್ಮ ಉಳಿವಿಲ್ಲ ! (‘‘No to Plastic, Yes to Earth’’’) ಎಂಬುವ ಈ ವರ್ಷದ ಮುಖ್ಯ ವಿಷಯದ ಮೇಲೆ ನವೆಂಬರ್ 18 ಹಾಗೂ 19ರ ಎರಡು ದಿನಗಳ ಕಾಲ ಕೊಪ್ಪಳ ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮುಖ್ಯ ಸಂದೇಶ – ಪೃಥ್ವಿಯನ್ನು ರಕ್ಷಿಸಿ, ಸಂರಕ್ಷಿಸಿ, ಉಳಿಸಿ ಮುಂದಿನ ಪೀಳಿಗೆಗಾಗಿ!

ಮೊದಲ ದಿನ ಬೆಳಿಗ್ಗೆ 10 ಗಂಟೆಗೆ ಕೊಪ್ಪಳದ ಭಾಗ್ಯನಗರ ಮುಖ್ಯ ರಸ್ತೆಯಿಂದ ಪಾನಘಂಟಿ ಮಂಗಳ ಭವನದ ತನಕ ಅವರಣದ ತನಕ ಕುಷ್ಟಗಿಯ ಮಹಿಳಾ ವೀರಗಾಸೆ ತಂಡದವರಿಂದ ಮತ್ತು ಪರಿಸರ ಪ್ರೇಮಿಗಳಿಂದ ಮೆರವಣಿಗೆ ಮೂಲಕ ‘‘ಪರಿಸರ ಜಾಥಾ’’ ನಡೆಸಲಾಯಿತು.

ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ -2019 ಧ್ವಜಾರೋಹಣ ಮತ್ತು ‘‘ಸಕಾಳ್ -ಪೋಟೋಗ್ರಫಿ’’ ವಸ್ತು ಪ್ರದರ್ಶನದಲ್ಲಿ ಪರಿಸರ, ವನ್ಯಜೀವಿ, ಶಕ್ತಿ, ಗಾಳಿ, ನೀರು ಕುರಿತು ಜಾಗೃತಿ ಮೂಡಿಸುವ ದೇಶೀಯ ಹಾಗೂ ವಿದೇಶೀಯ ಛಾಯಾಚಿತ್ರಗಾರರ ಚಿತ್ರಪಟಗಳನ್ನು ಪ್ರದರ್ಶಿಸಲಾಗಿತ್ತು. ಈ ಸಕಾಲ ಪೋಟೋಗ್ರಾಫಿ ಗ್ಯಾಲರಿಯನ್ನು ಶ್ರೀ ಸಂಜೀವ್ ವಿ ಕುಲಕರ್ಣಿ ಜಿಲ್ಲಾ ಹಿರಿಯ ಮತ್ತು ಸತ್ರ ನ್ಯಾಯಧೀಶರು ಕೊಪ್ಪಳ ಮತ್ತು ಶ್ರೀ ಆರ್.ವಿ. ಗುಮಾಸ್ತೆ ವ್ಯವಸ್ಥಾಪಕ ನಿರ್ದೇಶಕರು ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಇವರು ಉದ್ಘಾಟನೆ ಮಾಡಿದರು.

ನಂತರ ಕಾರ್ಯಕ್ರಮದ ಉದ್ಘಾಟನೆ ‘‘ಪಾನಘಂಟಿ ಮಂಗಳ ಭವನದ ಆವರಣದಲ್ಲಿ ಜೋತಿ ಬೆಳಗಿಸುವುದರ ಮೂಲಕ ಉದ್ಘಾಟಿಸಲಾಯಿತು.

ಕೊಪ್ಪಳ ಜಿಲ್ಲಾ ಹಿರಿಯ ಮತ್ತು ಸತ್ರ ನ್ಯಾಯಧೀಶರು ಶ್ರೀ ಸಂಜೀವ್ ವಿ ಕುಲಕರ್ಣಿ, ಕಿರ್ಲೋಸ್ಕರ್ ಪೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್.ವಿ. ಗುಮಾಸ್ತೆ, ಕೊಪ್ಪಳ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ಶ್ರೀ ಟಿ. ಶ್ರೀನಿವಾಸ , ಬೆಂಗಳೂರು ವಾಟರ್ ಲಿಟರರಿ ಫೌಂಡೇಶನ್ ಸಂಸ್ಥಾಪಕ ಶ್ರೀ ಅಯ್ಯಪ್ಪ ಎಂ ಮಸಗಿ, ಹಾಗೂ ಈ ಸಾಲಿನ ವಸುಂಧರ ಸನ್ಮಾನ್ ಪ್ರಶಸ್ತಿ ಪುರಸ್ಕೃತರು ಹಾಗೂ ಪುಣೆ ವಸುಂಧರಾ ಕ್ಲಬ್ ಚಿತ್ರೋತ್ಸವದ ನಿರ್ದೇಶಕರಾದ ಶ್ರೀ ವಿರೇಂದ್ರ ಚಿತ್ರವ್ ಈ ಸಂದರ್ಭದಲ್ಲಿದ್ದರು.

ಕೆಎಫ್’ಐಎಲ್ ಆಫೀಸರ್ಸ್‌ ಲೇಡಿಸ್ ಕ್ಲಬ್ ಸದಸ್ಯರು ಪರಿಸರ ಗೀತೆಯನ್ನು ಹಾಡುವುದರ ಮೂಲಕ ಪ್ರಾರ್ಥನೆ ನೆರವೇರಿಸಿದರೆ, ಹೊಸಪೇಟೆಯ ಸ್ವರಗಂಗಾ ಸುಗಮ ಸಂಗೀತ ಅಕಾಡಮಿಯ ಅಧ್ಯಕ್ಷರಾದ ಶ್ರೀ ಎಸ್.ಪಿ.ಟಿ ಅನೂಪ್ ಕುಮಾರ್ ರಾಗ ಸಂಯೋಜನೆ ಮಾಡಿ ಹಾರ್ಮಿನಿಯಂ ಸಾಥ್ ಮತ್ತು ಕುಮಾರ ಶ್ರೀ ಹನುಮಂತು ತಬಲದಲ್ಲಿ ಸಾಥ್ ನೀಡಿದರು.

ಪುಣೆ ವಸುಂಧರಾ ಕ್ಲಬ್ ಚಿತ್ರೋತ್ಸವದ ನಿರ್ದೇಶಕರಾದ ಶ್ರೀ ವಿರೇಂದ್ರ ಚಿತ್ರವ್ ಅವರು ವಸುಂಧರಾ ಕ್ಲಬ್ ಚಟುವಟಿಕೆ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕುರಿತಾಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕೊಪ್ಪಳ ಜಿಲ್ಲಾ ಹಿರಿಯ ಮತ್ತು ಸತ್ರ ನ್ಯಾಯಧೀಶರು ಶ್ರೀ ಸಂಜೀವ್ ವಿ ಕುಲಕರ್ಣಿ ಅವರು ಮಾತನಾಡಿ, ಕಿರ್ಲೋಸ್ಕರ್ ಕಾರ್ಖಾನೆ ಪರಿಸರ ಉಳಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ನಮ್ಮ ನ್ಯಾಯಾಂಗ ಇಲಾಖೆಯ ಆಯೋಜಿಸುವ ಪರಿಸರ ಉಳಿಸುವ ಜಾಗೃತಿ ಕಾರ್ಯಕ್ರಮಗಳಲ್ಲಿ ಕೈಜೋಡಿಸುತ್ತಿರುವುದು ಮತ್ತು ಪ್ಲಾಸ್ಟಿಕ್ ತೊಲಗಿಸಿ ಜೀವ ರಕ್ಷಣೆ ಮಾಡುವ ಜಾಗೃತಿ ಇದಾಗಿದ್ದು, ಇದಕ್ಕಾಗಿ ನಮ್ಮ ಸಹಕಾರ ಇರುತ್ತದೆ ಎಂದರು.

ಸಿವಿಲ್ ನ್ಯಾಯಾಧೀರಾದ ಟಿ. ಶ್ರೀನಿವಾಸ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ವಾತಾವರಣ ಹಾಗೂ ಹವಾಮಾನ ಕೆಟ್ಟು ಹೋಗಿದೆ. ಜನರಲ್ಲಿ ಜಾಗೃತಿ ಮೂಡಿಸುವ ಈ ಕಿರ್ಲೋಸ್ಕರ್ ಕಾರ್ಖಾನೆಯ ಕಾರ್ಯಕ್ರಮ ಮಹತ್ವ ಪೂರ್ಣ, ಈ ಭಾಗದಲ್ಲಿ ಇನ್ನೂ ಹೆಚ್ಚು ಹೆಚ್ಚು ಜಾಗೃತಿ ಮೂಡಿಸಲು ಶ್ರಮಿಸಬೇಕಾಗಿದೆ. ಮುಂದಿನ ಪೀಳಿಗೆಗಾಗಿ ಪರಿಸರ ರಕ್ಷಣೆಗೆ ಮುಂದಾಗಿ ಮಾದರಿಯಾಗಬೇಕಾಗಿದೆ ಹಾಗೂ ಸಾಲುಮರದ ತಿಮ್ಮಕ್ಕನ ಪರಿಸರ ಕಾಳಜಿ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿ, ಶ್ಲಾಘಿಸಿದರು.

ಶ್ರೀ ಆರ್.ವಿ. ಗುಮಾಸ್ತೆ ಅವರು ಮಾತನಾಡಿ, ವ್ಯವಸ್ಥಾಪಕ ನಿರ್ದೇಶಕರು ಕಿರ್ಲೋಸ್ಕರ್ ಪೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಇವರು ತಮ್ಮ ಭಾಷಣದಲ್ಲಿ ಕಂಪನಿಯು ಪರಿಸರ ಕಾಳಜಿಗೆ ಆಯೋಜಿಸದ ಯೋಜನೆಗಳ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮೀಣ, ನಗರ ಮತ್ತು ಕೈಗಾರಿಕಾ ಪ್ರದೇಶಗಳಿಗೆ ನೀರಿನ ಜಾಗೃತಿ ಮೂಡಿಸುವ ಅಭಿಯಾನಗಳು, ಕಾರ್ಯಾಗಾರಗಳು ಮತ್ತು ಪ್ರಾತ್ಯಕ್ಷಿಕೆಗಳನ್ನು ರೂಪಿಸಿ, ಇದುವರೆಗೆೆ 8,000 ಕ್ಕೂ ಹೆಚ್ಚು ನೀರಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, 189 ಕ್ಕೂ ಅಧಿಕ ಕೈಗಾರಿಕೆಗಳು, 321ಕ್ಕೂ ಅಧಿಕ ಅಪಾರ್ಟ್‌ಮೆಂಟ್’ಗಳಲ್ಲಿ, 43 ಐಷಾರಾಮಿ ಸಂಸ್ಥೆಗಳಲ್ಲಿ, 30,000 ಕ್ಕೂ ಹೆಚ್ಚು ಮನೆಗಳಲ್ಲಿ, 233 ಶಿಕ್ಷಣ ಸಂಸ್ಥೆಗಳು ಮತ್ತು ಗ್ರಾಮೀಣ ಪ್ರದೇಶಗಳು ಸೇರಿದಂತೆ 9,000ಕ್ಕೂ ಹೆಚ್ಚು ಸ್ಥಳಗಳಲ್ಲಿ ನೀರಿನ ಸಂರಕ್ಷಣೆ ಮತ್ತು ಸಂಸ್ಕರಣೆ ಯೋಜನೆ ಮಾಡಿ 40,000 ಹೆಕ್ಟೇರ್ ಒಣಭೂಮಿಯನ್ನು ಮಳೆ ನೀರು ಮತ್ತು ಬದು ನೀರು ಕೊಯ್ಲು ಮೂಲಕ ಹಸಿ ಭೂಮಿಯಾಗಿ ಪರಿವರ್ತಿಸಿದ ಮತ್ತು ಈ ಅಂಗವಾಗಿ, ಪರಿಸರ, ವನ್ಯಜೀವಿ, ಕೃಷಿ ಇತ್ಯಾದಿ ವಿಭಾಗಗಳಲ್ಲಿ ಸಾಧನೆ ಮಾಡಿದ ಶ್ರೀ ಅಯ್ಯಪ್ಪ ಎಂ ಮಸಗಿ, ವಾಟರ್ ಲಿಟರರಿ ಫೌಂಡೇಷನ್ ಸಂಸ್ಥಾಪಕರು, ಬೆಂಗಳೂರು, ಇವರಿಗೆ ವಸುಂಧರ ಸನ್ಮಾನ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಶ್ರೀ ಕಿರಣ್ ಶೇಜೆಕರ್ ಪ್ರಶಂಸಾ ಪತ್ರ ಓದಿದರು.

ಈ ಸಂದರ್ಭದಲ್ಲಿ ಕೊಪ್ಪಳದ ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿ ವಿದ್ಯಾರ್ಥಿನಿಯರು, ಸಾರ್ವಜನಿಕರು ಭಾಗವಹಿಸಿದ್ದರು. ಅಯ್ಯಪ್ಪ ಎಂ ಮಸಗಿಯವರು ತಮ್ಮ ಭಾಷಣದಲ್ಲಿ ಅನೇಕ ರಾಜ್ಯಗಳಲ್ಲಿ ಮತ್ತು ಕರ್ನಾಟಕದ ಹಲವಾರು ಭಾಗ ನೀರಿನ ಸಂರಕ್ಷಣೆಗಾಗಿ ಮಾಡಲಾದ ಸಮಗ್ರ ಚಿತ್ರಣವನ್ನು ಪರಿಚಯಿಸಿದರು.

ಸಮಾರೋಪ ಸಮಾರಂಭ
ಕಿರ್ಲೋಸ್ಕರ್ – ವಸುಂಧರಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭ ಅದ್ದೂರಿಯಾಗಿ ಜರುಗಿತು.

ಕೊಪ್ಪಳ ಜಿಲ್ಲಾ ಪಂಚಾಯತ್ ಸಿಇಒ ಶ್ರೀ ರಘುನಂದನ ಮೂರ್ತಿ ಮಾತನಾಡಿ, ಪರಿಸರ ಸಂರಕ್ಷಣೆಯ ಕುರಿತು ಕಿರ್ಲೋಸ್ಕರ್ ಸಂಸ್ಥೆಯು ವಸುಂಧರಾ ಕ್ಲಬ್ ಜೊತೆಗೂಡಿ ದೃಶ್ಯ ಮಾಧ್ಯಮದ ಮೂಲಕ ಮಾಡುತ್ತಿರುವ ಚಟುವಟಿಕೆಗಳು ತುಂಬಾ ಶ್ಲಾಘನೀಯವಾದುದು. ಕೊಪ್ಪಳ ನಗರದಲ್ಲಿ ತಮ್ಮ ಕಂಪನಿಯ ಸಹಕಾರದಿಂದ ಅನೇಕ ಹೊಸ ಹೊಸ ಪರಿಸರಕ್ಕೆ ಸಂಬಂಧಿಸಿದ ಕೆಲಸಕಾರ್ಯಗಳು ಆಗಬೇಕಾಗಿದೆ. ತಾವು ನಮ್ಮ ಆಡಳಿತದ ಜೊತೆ ಕೈ ಜೋಡಿಸಲು ಮನವಿ ಮಾಡಿದರು.

ಕೊಪ್ಪಳ ವೈದ್ಯಕೀಯ ಮಹಾವಿದ್ಯಾಲಯದ ನಿರ್ದೇಶಕ ಡಾ. ದತ್ತಾತ್ರೇಯ ಡಿ.ಬಂಟ್ ಮಾತನಾಡಿ, ನಾವೆಲ್ಲ ನಾಗರಿಕರಾಗಿ ಸೋಲುತ್ತಾ ಬಂದಿದ್ದೇವೆ. ಬರೀ ಕರ್ತವ್ಯದಲ್ಲಿ ಮುಂದುವರೆಯುತ್ತಾ ಬಂದಿದ್ದೇವೆ. ಎಲ್ಲರಿಗೂ ಪರಿಸರ ಸಂರಕ್ಷಣೆಯ ಬಗ್ಗೆ ಅರಿವಿದೆ. ಆದರೆ, ಗೊತ್ತಿದ್ದೂ, ಗೊತ್ತಿದ್ದೂ, ಅದನ್ನು ಹಾಳುಮಾಡುತ್ತಾ ಬಂದಿದ್ದೇವೆ. ಆರೋಗ್ಯ ಮತ್ತು ಪರಿಸರಕ್ಕೆ ಇರುವಂತಹ ಸಂಬಂಧಗಳ ಬಗ್ಗೆ ತಿಳಿಸಿದರು. ನಮ್ಮ ಗ್ರಾಮ -ನಗರಗಳ ಪಕ್ಕದಲ್ಲಿಯೇ ನದಿ-ಕಾಲುವೆಗಳು ಹರಿದು ಹೋದರೂ ನಮಗೆ ಕುಡಿಯುವ ನೀರಿನ ಬವಣೆ ತಪ್ಪಿದ್ದಲ್ಲ. ಎಂಬ ವಾಸ್ತವಾಂಶವನ್ನು ತಿಳಿಸಿಕೊಟ್ಟರು.

ಸಾವಯವ ಕೃಷಿಯಲ್ಲಿ ಅಮೋಘ ಸಾಧನೆ ಮಾಡಿ, ಕೃಷಿಕರ ಮನೆಗಳಲ್ಲಿ ವಾಸ್ತವ್ಯ ಹೂಡಿ ಬದುಕು, ಆಹಾರ ಸಂಸ್ಕೃತಿಯ ಅಧ್ಯಯನ ನಡೆಸುವುದರ ಮೂಲಕ, ಕೃಷಿ ವೀಕ್ಷಣೆ ಮಾಡಿ ಸುಮಾರು 700 ಕ್ಕೂ ಹೆಚ್ಚು ಕೃಷಿಕರನ್ನು ಸಂರ್ಪಕ ಮಾಡುವುದರ ಮೂಲಕ ಕೃಷಿಯ ಬಗ್ಗೆ ಅಮೂಲ್ಯ ಮಾಹಿತಿ ಮತ್ತು ಚಿತ್ರಗಳನ್ನು ದಾಖಲಿಸಿ ಅರಣ್ಯ ಇತಿಹಾಸ, ಪರಿಸರ ಸಂರಕ್ಷಣೆ, ಗ್ರಾಮೀಣ ಜನಜೀವನ ಕುರಿತು ಹಳ್ಳಿಯಿಂದ ವಿಶ್ವವಿದ್ಯಾಲಯದವರೆಗೆ ನೂರಾರು ಕಾರ್ಯಕ್ರಮನ್ನು ಮಾಡಿದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಶ್ರೀ ಶಿವಾನಂದ ಕಳವೆ ಅವರಿಗೆ ವಸುಂಧರಾ ಸನ್ಮಾನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಅವರು, ಕೊಳವೆ ಭಾವಿಗಳನ್ನು ಹಾಕಿ ಹಾಕಿ ವಸುಂಧರೆಯನ್ನು ಬರಿದು ಮಾಡಿದ್ದೇವೆ. ಯಾರು ಕಾರಣ? ನಾವೆಲ್ಲರೂ ಈ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ. ನಾವೆಲ್ಲರೂ ಬದುಕಲು ಹಾಗೂ ಮುಂದಿನ ಪೀಳಿಗೆಯನ್ನು ಬದುಕಿಸಲು ಕೈಜೋಡಿಸಿ ಪರಿಸರ ಸಂರಕ್ಷಣೆಯಲ್ಲಿ ತೊಡಗಬೇಕು. ಯಾರೋ ಬಂದು ಮಾಡುತ್ತಾರೆಂದು ಕಾಯುವುದು ಬೇಡ, ಈ ಕಾರ್ಯ ನನ್ನಿಂದಾಗಲಿ ಎಂಬ ದೃಢ ಸಂಕಲ್ಪದಿಂದ ಮುನ್ನುಗ್ಗಿದಲ್ಲಿ ಎಲ್ಲಾ ವಿಷಯಗಳಿಗೆ ಪರಿಹಾರ ಏರ್ಪಡುತ್ತದೆ. ಕೆರೆಗಳಲ್ಲಿ ಹೂಳುಗಳನ್ನು ತೆಗೆಯುವ ಮೂದಲು ನಮ್ಮ ತಲೆಯಲ್ಲಿ ಇರುವ ಹೂಳುಗಳನ್ನು ತೆಗೆದಾಗ ಮಾತ್ರ ಅತ್ಯುತ್ತಮವಾದುದು ಎಂದರು.

ಶ್ರೀ ರವಿಕುಮಾರ್ ಯಾದವ್ ಅವರು ಪ್ರಶಂಸಾ ಪತ್ರವನ್ನು ಓದಿದರು.

ಕಿರ್ಲೋಸ್ಕರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಆರ್.ವಿ. ಗುಮಾಸ್ತೆಯವರು ಮಾತನಾಡಿ, ಸುಮಾರು 30-40 ವರ್ಷದ ಕೆಳಗೆ ಕೃಷಿಯು ಇಷ್ಟು ದುಸ್ಥಿತಿಯಲ್ಲಿ ಇರಲಿಲ್ಲ. ಆಹಾರ ಪದ್ಧತಿಯಲ್ಲಿ ವ್ಯತ್ಯಾಸ ಇರಲಿಲ್ಲ. ಆದರೆ, ಮಾನವನ ಅತಿಯಾದ ದುರಾಸೆಯಿಂದಾಗಿ, ಆ ಭಾವಿಗಳಲ್ಲಿಯೇ ಬೋರ್ ಹೊಡೆದು ಹೆಚ್ಚು ನೀರನ್ನು ಬಳಸಿ, ಹಾಳುಮಾಡಿ ಈಗ ಭಾವಿಗಳು, ಕೊಳವೆ ಭಾವಿಗಳು ಬತ್ತಿ ಹೋಗುತ್ತಿದೆ. ಹಾಗೆ ಮಾಡಿರುತ್ತಾನೆ. ಮೊದಲು 30- 40 ಅಡಿ ಅಳ ತೊಡಿದರೆ ನೀರು ಸಿಗುತ್ತಿತ್ತು. ಇಂದು 900-1000 ಅಡಿ ತೋಡಿದರೂ ನೀರು ಸಿಗುತ್ತಿಲ್ಲ. ಮಾನವನ ದುರಾಸೆಯಿಂದ ಇಂದು ಪರಿಸರ ಹಾಳಾಗಿದೆ. ದೇಶದಲ್ಲಿ ಹೆಚ್ಚು ಹೆಚ್ಚು ಕೃಷಿ ಕಾಲೇಜುಗಳು, ವಿಶ್ವ ವಿದ್ಯಾಲಯಗಳು ಆಗಿವೆ. ಆದರೆ, ಅದರಲ್ಲಿ ಓದಿದವರಲ್ಲಿ ಹೆಚ್ಚು ಸರಕಾರಿ, ಖಾಸಗಿ ನೌಕರಿಗೆ ಹೋಗುತ್ತಿದ್ದು, ಕೃಷಿಗೆ ಯಾರೂ ಆದತ್ಯೆ ನೀಡಿರುವುದಿಲ್ಲ, ಗ್ರಾಮೀಣಾಭಿವೃದ್ಧಿ ಟ್ರಸ್ಟ್‌ನಿಂದ ಸಾಕಷ್ಟು ಕೆಲಸಗಳನ್ನು ಹಮ್ಮಿಕೊಂಡು ಬಂದಿದೆ. ಇದಕ್ಕೆ ಎಲ್ಲರೂ ಕೈಜೋಡಿಸಿ ಮುನ್ನುಗಿದಲ್ಲಿ ಮಾತ್ರ ಅಶಯವನ್ನು ಈಡೇರಿಸಬಹುದು ಎಂದು ಕರೆ ನೀಡಿದರು.

ಕಾರ್ಯಕ್ರಮದ ಮೊದಲಿಗೆ ಕಿರ್ಲೋಸ್ಕರ್ ಲೇಡೀಸ್ ಕ್ಲಬ್’ನ ಮಹಿಳೆಯರು ಹಾಡಿದ ಪರಿಸರ ಗೀತೆ ಸುಶ್ರಾವ್ಯವಾಗಿದ್ದು, ಎಲ್ಲರ ಮನಸೆಳೆಯುವಂತಿತ್ತು. ಕೊಪ್ಪಳದ ಭಾಗ್ಯನಗರದ ದೀಕ್ಷಾ ಭರತನಾಟ್ಯ ಸಮಿತಿಯ ಮಕ್ಕಳಿಂದ ಭರತನಾಟ್ಯದ ಮೂಲಕ ಇಂದಿನ ಸ್ಥಿತಿಗತಿ, ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸುವ ಭರತ ನಾಟ್ಯ ನೃತ್ಯ-ರೂಪಕ ಎಲ್ಲರ ಮನ ಸೆಳೆಯಿತು. ಹಾಗೂ ಎಲ್ಲರ ಪ್ರಶಂಸೆಗೆ ಒಳಗಾಯಿತು.

ಈ ಕಾರ್ಯಕ್ರದಲ್ಲಿ ಕಾರ್ಖಾನೆಯ ಕಾರ್ಮಿಕರು, ಗುತ್ತಿಗೆದಾರರು, ಪರಿಸರ ಪ್ರೇಮಿಗಳು, ಪ್ರಾಯೋಜಕರು, ವಿವಿಧ ಕಾರ್ಖಾನೆಗಳ ಹಿರಿಯ ಅಧಿಕಾರಿಗಳು ಹಾಗೂ ಕಿರ್ಲೋಸ್ಕರ್ ಲೇಡೀಸ್ ಕ್ಲಬ್’ನ ಸದಸ್ಯೆರು ಭಾಗವಹಿಸಿದ್ದರು.

ಶ್ರೀ ಬಿ. ಚಂದ್ರಶೇಖರ್, ಪ್ರಾಸ್ತಾವಿಕ ಭಾಷಣ ಮಾಡಿ ಈ ಚಲನಚಿತ್ರೋತ್ವವದ ಆಶಯಗಳನ್ನು ಹಾಗೂ ಈ 10 ವರ್ಷಗಳಲ್ಲಿ ಮಾಡಿದ ಸಾಧನೆಗಳನ್ನು ವಿವರಿಸಿದರು.

ಶ್ರೀ ಮೇಘರಾಜ್ ವಂದನಾರ್ಪಣೆ ಮಾಡಿದರು ಮತ್ತು ನಾಡಿಗೇರ್ ಅವರು ಕಾರ್ಯಕ್ರಮದ ನಿರೂಪಣೆ ಮಾಡಿದರು.

ವರದಿ: ಮುರಳೀಧರ ನಾಡಿಗೇರ್, ಕೊಪ್ಪಳ

Tags: Bayalu Seeme NewsEnvironmental protectionKannada Newskirloskar ferrous industries limitedKirloskar-Vasundhara International Film FestivalKoppalNo to PlasticOrganic farmingPune Vasundhara ClubYes to Earthಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕಿರ್ಲೋಸ್ಕರ್-ವಸುಂಧರಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕೊಪ್ಪಳ
Share205Tweet123Send
Previous Post

ನಾನೆಂದೂ ಮರೆಯದ ಆ ಶುಕ್ರವಾರದ ನೆನಪು… ಅವರಿಂದ ಕಲಿತ ಪಾಠ ಜೀವನವನ್ನೇ ಕಲಿಸಿತು

Next Post

ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

ರಕ್ಷಣಾ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಗೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL