ನವದೆಹಲಿ: 17ನೆಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು, ಈಗಿನಿಂದಲೇ ದೇಶದಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ.
ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಆದೇಶ ನೀಡಿರುವ ಆಯೋಗ, ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಲು ಸಾರ್ವಜನಿಕರಿಗೂ ಸಹ ಅವಕಾಶವನ್ನು ನೀಡಿದೆ.
ಇದಕ್ಕಾಗಿ ವಿಶೇಷ ಆ್ಯಪ್ ಒಂದನ್ನು ಸಿದ್ದಪಡಿಸಿದೆ. ಯಾವುದೇ ಸಾರ್ವಜನಿಕರಿಗೆ ನೀತಿ ಸಂಹಿತೆ ಉಲ್ಲಂಘನೆ ಅಥವಾ ಚುನಾವಣಾ ಅಕ್ರಮ ಗಮನಕ್ಕೆ ಬಂದರೆ ನೇರವಾಗಿ ಈ ಆ್ಯಪ್ ಮೂಲಕ ಆಯೋಗಕ್ಕೆ ದೂರು ನೀಡಬಹುದು.
ಈ ರೀತಿ ದೂರು ನೀಡುವವರ ವೈಯಕ್ತಿಕ ಮಾಹಿತಿಯನ್ನು ಗೌಪ್ಯವಾಗಿಡಲಿದ್ದು, ಯಾವುದೇ ಕಾರಣಕ್ಕೂ ಹೆದರುವ ಅಗತ್ಯವಿಲ್ಲ. ಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯಲ್ಲಿ ನಡೆಯಬಹುದಾದ ಅಕ್ರಮವನ್ನು ತಡೆಗಟ್ಟಲು ಸಾರ್ವಜನಿಕರು ಆಯೋಗದೊಂದಿಗೆ ಸಹಕಾರ ನೀಡಬೇಕು ಎಂದು ಕೋರಲಾಗಿದೆ.
Discussion about this post